Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾಂಗ್ರೆಸ್ ಬೆಂಗಳೂರು ನಿರ್ಣಯ ಅಂಗೀಕಾರ
    ಸುದ್ದಿ

    ಕಾಂಗ್ರೆಸ್ ಬೆಂಗಳೂರು ನಿರ್ಣಯ ಅಂಗೀಕಾರ

    vartha chakraBy vartha chakraಜುಲೈ 16, 2025Updated:ಜುಲೈ 17, 2025ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.16:
    ಅವಕಾಶ ವಂಚಿತ ಸಮುದಾಯಗಳಿಗೆ ಸಮಾನ ಅವಕಾಶ ಕಲ್ಪಿಸುವ ದೃಷ್ಟಿಯಿಂದ ಸದ್ಯ ನೀಡಲಾಗುತ್ತಿರುವ ಮೀಸಲಾತಿ ಪ್ರಮಾಣ ಶೇ 50ರ ಮಿತಿಯನ್ನು ಮೀರಿ ಶಿಕ್ಷಣ, ಉದ್ಯೋಗ, ರಾಜಕೀಯ ಮತ್ತು ಇತರ ಕ್ಷೇತ್ರಗಳಲ್ಲಿ ಇತರ ಹಿಂದುಳಿದ ವರ್ಗಗಳಿಗೆ ಸೂಕ್ತವಾದ ಮೀಸಲಾತಿ ಖಚಿತಪಡಿಸಿಕೊಳ್ಳಬೇಕು.
    ಸಂವಿಧಾನದ 15(5) ನೇ ವಿಧಿಯ ಪ್ರಕಾರ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿಯೂ ಮೀಸಲಾತಿ ಸಿಗುವಂತಾಗಬೇಕು.
    ನಮ್ಮ ಸಂವಿಧಾನದಲ್ಲಿ ಕಲ್ಪಿಸಿರುವಂತೆ ಸಾಮಾಜಿಕ ನ್ಯಾಯವನ್ನು ಖಚಿತಪಡಿಸಿಕೊಳ್ಳುವ ನಿಟ್ಟಿನಲ್ಲಿ ಜಾತಿ ಜನಗಣತಿಯು ಒಂದು ಸಣ್ಣ ಹೆಜ್ಜೆ.ತೆಲಂಗಾಣ ರಾಜ್ಯದಲ್ಲಿ ನಡೆದ ಜಾತಿ ಜನಗಣತಿಯನ್ನು ಇದಕ್ಕೆ ಮಾದರಿಯಾಗಿ ಇಟ್ಟುಕೊಳ್ಳಬೇಕು ಎಂದು
    ಎಐಸಿಸಿ ಹಿಂದುಳಿದ ವರ್ಗಗಳ ವಿಭಾಗದ ‘ಇತರ ಹಿಂದುಳಿದ ವರ್ಗಗಳ ಸಲಹಾ ಸಮಿತಿ’ ಸಭೆಯು ಸರ್ವಾನುಮತದಿಂದ ನಿರ್ಣಯ ಅಂಗೀಕರಿಸಿದೆ.
    ಸಲಹಾ ಸಮಿತಿಯ ಮೊದಲ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ,ಸಮಾಜದ ಅಂಚಿನಲ್ಲಿರುವ ವರ್ಗಗಳಿಗೆ ಸಾಮಾಜಿಕ ನ್ಯಾಯ ಒದಗಿಸಲು ಧೈರ್ಯದಿಂದ ಹೋರಾಡಿದ ಮತ್ತು ವಿಶೇಷವಾಗಿ ಹಿಂದುಳಿದ ವರ್ಗಗಳ ಪರ ನಿಂತಿರುವುದಕ್ಕಾಗಿ ‘ನ್ಯಾಯ ಯೋಧ’ ರಾಹುಲ್ ಗಾಂಧಿ ಅವರಿಗೆ ಧನ್ಯವಾದಗಳು’ ಸೇರಿದಂತೆ ಮೂರು ಪ್ರಮುಖ ನಿರ್ಣಯಗಳನ್ನು ‘ಬೆಂಗಳೂರು ಘೋಷಣೆ’ ಹೆಸರಿನಲ್ಲಿ ಅಂಗೀಕರಿಸಲಾಗಿದೆ ಎಂದು ಹೇಳಿದರು.
    ನಮ್ಮ ನಾಯಕ ರಾಹುಲ್ ಗಾಂಧಿ ಅವರ ದೃಢ ಸಂಕಲ್ಪವು ಮನುವಾದಿ ಮೋದಿ ಸರ್ಕಾರವನ್ನು ಭಾರತದಲ್ಲಿ ಜಾತಿ ಜನಗಣತಿಯ ನ್ಯಾಯಯುತ ಮತ್ತು ಸಾಂವಿಧಾನಿಕ ಬೇಡಿಕೆಗೆ ಶರಣಾಗುವಂತೆ ಮಾಡಿದೆ. ಈ ಐತಿಹಾಸಿಕ ಸಾಧನೆಗೆ ರಾಹುಲ್ ಗಾಂಧಿ ಅವರಿಗೆ ಭಾರತದ ಎಲ್ಲ ಹಿಂದುಳಿದ ವರ್ಗಗಳ ಪರವಾಗಿ ಸಮಿತಿಯು ಮೆಚ್ಚುಗೆ ಮತ್ತು ಕೃತಜ್ಞತೆ ವ್ಯಕ್ತಪಡಿಸಿದೆ’ ಎಂದು ಹೇಳಿದರು.
    ನಮ್ಮ ಸಂವಿಧಾನದಲ್ಲಿ ಕಲ್ಪಿಸಿರುವಂತೆ ಸಾಮಾಜಿಕ ನ್ಯಾಯವನ್ನು ಖಚಿತಪಡಿಸಿಕೊಳ್ಳುವ ನಿಟ್ಟಿನಲ್ಲಿ ಜಾತಿ ಜನಗಣತಿಯು ಒಂದು ಸಣ್ಣ ಹೆಜ್ಜೆ. ನಮ್ಮ ನ್ಯಾಯ ಯೋಧ ರಾಹುಲ್ ಗಾಂಧಿ ಅವರ ನಾಯಕತ್ವದಲ್ಲಿ ಸಮಾನತೆ ಮತ್ತು ಸಮಾನ ಸಮಾಜಕ್ಕೆ ಕಾರಣವಾಗುವ ಸಾಮಾಜಿಕ ಪರಿವರ್ತನೆಯ ಸಾಂವಿಧಾನಿಕ ಉದ್ದೇಶಗಳನ್ನು ಈಡೇರಿಸಿಕೊಳ್ಳಲು ನಿರ್ಧರಿಸಲಾಗಿದೆ’ ಎಂದು ವಿವರಿಸಿದರು.
    ನ್ಯಾಯ ಯೋಧ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ಧ್ವಜವನ್ನು ಕೈಯಲ್ಲಿ ಹಿಡಿದುಕೊಂಡು ಎಲ್ಲರಿಗೂ ನ್ಯಾಯ ಒದಗಿಸಲು ಹೋರಾಟ ಮುಂದುವರಿಸಲು ನಾವು ಸಂಕಲ್ಪ ಮಾಡಿದ್ದೇವೆ’ ಎಂದು ಹೇಳಿದರು.
    ಈ ವೇಳೆ ಸಲಹಾ ಸಮಿತಿ ಸಂಚಾಲಕ ಅನಿಲ್ ಜೈ ಹಿಂದ್, ಎಂ. ವೀರಪ್ಪ ಮೊಯಿಲಿ, ಬಿ.ಕೆ. ಹರಿಪ್ರಸಾದ್‌ ಮತ್ತಿತರರು ಇದ್ದರು.

    Verbattle
    Verbattle
    Verbattle
    ಕಾಂಗ್ರೆಸ್ ತೆಲಂಗಾಣ ನ್ಯಾಯ ಬೆಂಗಳೂರು ರಾಜಕೀಯ ರಾಹುಲ್ ಗಾಂಧಿ ಶಿಕ್ಷಣ ಸರ್ಕಾರ ಸಿದ್ದರಾಮಯ್ಯ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಕೊಲೆ ಆರೋಪದಲ್ಲಿ ಬಿಜೆಪಿಯ‌ ಮಾಜಿ ಮಂತ್ರಿ !
    Next Article ಬೆಂಗಳೂರಲ್ಲಿ ಮನೆ ಮನೆಗೆ ಪೊಲೀಸ್
    vartha chakra
    • Website

    Related Posts

    IPS ಅಧಿಕಾರಿ ತಲೆದಂಡ

    ಜನವರಿ 20, 2026

    ರಿಯಾಲಿಟಿ ಶೋ ಅಲ್ಲ, ಇದು ಪಕ್ಕಾ ‘ಸ್ಕ್ರಿಪ್ಟೆಡ್’ ಡ್ರಾಮಾ: ಬಿಗ್ ಬಾಸ್ ಮನೆಯ ಕರಾಳ ಸತ್ಯ ಬಯಲು?!

    ಜನವರಿ 19, 2026

    AI ಯುಗದಲ್ಲಿ ಅನಲಾಗ್ ಬದುಕಿನತ್ತ ಜನರ ಒಲವು

    ಜನವರಿ 19, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    IPS ಅಧಿಕಾರಿ ತಲೆದಂಡ

    ರಿಯಾಲಿಟಿ ಶೋ ಅಲ್ಲ, ಇದು ಪಕ್ಕಾ ‘ಸ್ಕ್ರಿಪ್ಟೆಡ್’ ಡ್ರಾಮಾ: ಬಿಗ್ ಬಾಸ್ ಮನೆಯ ಕರಾಳ ಸತ್ಯ ಬಯಲು?!

    AI ಯುಗದಲ್ಲಿ ಅನಲಾಗ್ ಬದುಕಿನತ್ತ ಜನರ ಒಲವು

    ಪರಪ್ಪನ ಅಗ್ರಹಾರದಲ್ಲಿ ಜೈಲರ್ ಮೇಲೆ ಹಲ್ಲೆ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • mostbet_fdKn ರಲ್ಲಿ ಬೆಂಗಳೂರಿನ ಚಿರತೆ ಪಡೆ ಕಾರ್ಯಾರಂಭ | Leopard Task Force
    • JamesCOw ರಲ್ಲಿ ಸಿಎಂ ಹುದ್ದೆ ಬಗ್ಗೆ ಕೋಡಿಮಠದ ಭವಿಷ್ಯ!
    • JamesCOw ರಲ್ಲಿ CM ಮತ್ತು DCM ಬದಲಾವಣೆ ಚರ್ಚೆಯಲ್ಲಿ ಇವರಿಲ್ಲವಂತೆ.
    Latest Kannada News

    IPS ಅಧಿಕಾರಿ ತಲೆದಂಡ

    ಜನವರಿ 20, 2026

    ರಿಯಾಲಿಟಿ ಶೋ ಅಲ್ಲ, ಇದು ಪಕ್ಕಾ ‘ಸ್ಕ್ರಿಪ್ಟೆಡ್’ ಡ್ರಾಮಾ: ಬಿಗ್ ಬಾಸ್ ಮನೆಯ ಕರಾಳ ಸತ್ಯ ಬಯಲು?!

    ಜನವರಿ 19, 2026

    AI ಯುಗದಲ್ಲಿ ಅನಲಾಗ್ ಬದುಕಿನತ್ತ ಜನರ ಒಲವು

    ಜನವರಿ 19, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.