Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾಂಗ್ರೆಸ್‌ ಹಗಲು ರಾತ್ರಿ ಧರಣಿ
    ಸುದ್ದಿ

    ಕಾಂಗ್ರೆಸ್‌ ಹಗಲು ರಾತ್ರಿ ಧರಣಿ

    vartha chakraBy vartha chakraಏಪ್ರಿಲ್ 14, 2022Updated:ಏಪ್ರಿಲ್ 14, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದ ಆರೋಪಕ್ಕೆ ಸಿಲುಕಿರುವ ಸಚಿವ ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ಮತ್ತು ಶಾಸಕರು ವಿಧಾನಸೌಧ ಮತ್ತು ಹೈಕೋರ್ಟ್ ಮುಂಭಾಗದಲ್ಲಿ 24 ತಾಸುಗಳ ಕಾಲ ಅಹೋರಾತ್ರಿ ಧರಣಿ ನಡೆಸಲು ತೀರ್ಮಾನಿಸಿದ್ದಾರೆ.
    ಸಿಎಂ ನಿವಾಸಕ್ಕೆ ಘೇರಾವ್ ಗೆ ಯತ್ನಿಸಿ, ಪೊಲೀಸರಿಂದ ಬಂಧನಕ್ಕೊಳಗಾಗಿ ಬಿಡುಗಡೆಯಾದ ನಂತರ ಕಾಂಗ್ರೆಸ್ ನಾಯಕರು ವಿಧಾನಸೌಧದ ಮುಂದೆ ಪ್ರತಿಭಟನೆ ಆರಂಭಿಸಿದರು. ಈ ವೇಳೆ ತಮ್ಮ ಹೋರಾಟದ ಬಗ್ಗೆ ಮಾಧ್ಯಮಗಳಿಗೆ ತಿಳಿಸಿದ ಶಿವಕುಮಾರ್ ಈ ಪ್ರಕರಣ ತಾರ್ಕಿಕ ಅಂತ್ಯಕ್ಕೆ ಕೊಂಡೋಯ್ಯುತ್ತೇವೆ ಎಂದು ಹೇಳಿದರು.
    ಅಹೋರಾತ್ರಿ ಧರಣಿ ಹಿನ್ನೆಲೆಯಲ್ಲಿ ನಾಳೆಯಿಂದ ಆರಂಭವಾಗಬೇಕಿದ್ದ ಜಿಲ್ಲಾವಾರು ಪ್ರತಿಭಟನೆ ಒಂದು ದಿನ ಮುಂದೂಡಲಾಗಿದ್ದು, ಏಪ್ರಿಲ್ 16ರ ಶನಿವಾರದಿಂದ ಆರಂಭವಾಗಲಿದೆ ಎಂದು ತಿಳಿಸಿದರು.
    ‘ನಾವು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಅನುಯಾಯಿಗಳು. ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಬಿಜೆಪಿಯವರು ಈ ಭ್ರಷ್ಟಾಚಾರ ಮುಚ್ಚಿಹಾಕಲು ಹುನ್ನಾರ ಮಾಡುತ್ತಿದ್ದು,ಈ ಹೋರಾಟ ಇಲ್ಲಿಗೆ ಮುಗಿಯುವುದಿಲ್ಲ’ ಎಂದರು.


    ನಾವು 24 ಗಂಟೆಗಳ ಹಗಲು-ರಾತ್ರಿ ಧರಣಿ ಹಮ್ಮಿಕೊಂಡಿದ್ದು, ಶಾಸಕಾಂಗ ಹಾಗು ನ್ಯಾಯಾಂಗದ ಬಾಗಿಲಲ್ಲಿ ನಿಂತು ನ್ಯಾಯ ಕೇಳುತ್ತಿದ್ದೇವೆ. ನ್ಯಾಯ ಸಿಗಬೇಕು. ಈ ಸರ್ಕಾರ ಭ್ರಷ್ಟ ಸರ್ಕಾರ. ಸಂತೋಷ್ ಪಾಟೀಲ್ ಬಿಜೆಪಿ ಕಾರ್ಯಕರ್ತ. ಅವನಿಂದಲೇ 40% ಕಮಿಷನ್ ಸುಲಿಗೆ ಮಾಡುತ್ತಿರುವಾಗ ಬೇರೆಯವರಿಂದ ಹೇಗೆ ಸುಲಿಗೆ ಮಾಡುತ್ತಿರಬಹುದು. ಸಂತೋಷ್ ಪಾಟೀಲ್ ಅವರ ಪತ್ನಿ ಹಾಗು ತಾಯಿ ನಮಗೆ ಎಲ್ಲ ವಿಚಾರ ತಿಳಿಸಿದ್ದಾರೆ. ಮಾಧ್ಯಮಗಳ ಮುಂದೆ ಸತ್ಯಾಂಶ ಬಿಚ್ಚಿಟ್ಟಿದ್ದಾರೆ. ಅವರ ಮೇಲೆ ಸರ್ಕಾರ ಒತ್ತಡ ಹೇರುತ್ತಿದೆ. ಅವರಿಗೆ ಕಪ್ಪು ಮಸಿ ಬಳಿಯಲು ಪ್ರಯತ್ನಿಸುತ್ತಿದೆ ಎಂದು ದೂರಿದರು.
    ಈಶ್ವರಪ್ಪ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಬೇಕು. ಬಿಜೆಪಿ ಬೇಕಾದರೆ ಅವರಂತಹ ಮುತ್ತುರತ್ನಗಳನ್ನು ತಮ್ಮ ಕಚೇರಿಯಲ್ಲಿ ಇಟ್ಟುಕೊಳ್ಳಲಿ. ಇಂತಹ ಮುತ್ತುರತ್ನಗಳು ನಿಮ್ಮಲ್ಲಿದ್ದರೆನೇ ಒಳ್ಳೆಯದು. ಮಹಿಳೆಯರು ಮೂಗುತಿ ಹಾಗೂ ಓಲೆಯಲ್ಲಿ ಮುತ್ತುರತ್ನಗಳನ್ನು ಇಟ್ಟುಕೊಂಡಂತೆ ಬಿಜೆಪಿ ಲಂಚ ಹಾಗು ಮಂಚದವರನ್ನು ಪಕ್ಕದಲ್ಲಿ ಇಟ್ಟುಕೊಳ್ಳಲಿ ಎಂದು ಹೇಳಿದರು.

    #Congress #eshwarappa Politics
    Share. Facebook Twitter Pinterest LinkedIn Tumblr Email WhatsApp
    Previous Articleರಾಕಿಬಾಯ್ ಆರ್ಭಟ
    Next Article ಕೆ.ಎಸ್.ಈಶ್ವರಪ್ಪ ಬಂಡತನ ಪ್ರದರ್ಶನ ಮಾಡದೇ ರಾಜೀನಾಮೆ ನೀಡಬೇಕು: ಶಾಸಕ ಅಬ್ಬಯ್ಯ
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Michaelodoky ರಲ್ಲಿ ಜಾರಕಿಹೊಳಿ ಭೇಟಿಯಾದ ಶಿವಕುಮಾರ್ | Satish Jarkiholi
    • EdwardNor ರಲ್ಲಿ ಮೋಹಕ ತಾರೆ ರಮ್ಯಾಗೆ ಮದುವೆಯಂತೆ.. ನಿಜಾನಾ?
    • Michaelrop ರಲ್ಲಿ ಚುನಾವಣೆ ನಂತರ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ | DK Shivakumar
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe