ಬೆಂಗಳೂರು, ಮಾ. 12:
ತಂದೆ-ತಾಯಿ ಹಾಗೂ ಹಿರಿಯರನ್ನು ಆರೈಕೆ ಮಾಡದಿದ್ದರೆ, ತನ್ನ ಮಕ್ಕಳಿಗೆ ಅಥವಾ ಸಂಬಂಧಿಕರಿಗೆ ಅವರು ನೀಡಿದ ವಿಲ್-ಧಾನಪತ್ರವನ್ನು ರದ್ದು ಮಾಡಲಾಗುವುದು ಎಂದು ಕಂದಾಯ ಮಂತ್ರಿ ಕೃಷ್ಣ ಬೈರೇಗೌಡ ವಿಧಾನಪರಿಷತ್ ನಲ್ಲಿ ತಿಳಿಸಿದ್ದಾರೆ.
ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ನ ಬಲ್ಕೀಸ್ ಬಾನು ಅವರ ಪ್ರಶ್ನೆಗೆ ಉತ್ತರ ನೀಡಿದ ಅವರು ಇಂತಹ ಅವಕಾಶವನ್ನು ಕೇಂದ್ರ ಸರ್ಕಾರದ “ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆ 2007” ನೀಡಿದೆ ಎಂದು ಮಾಹಿತಿ ನೀಡಿದರು.
ಇತ್ತೀಚಿನ ದಿನಗಳಲ್ಲಿ ಮಕ್ಕಳು ತಮ್ಮ ತಂದೆ-ತಾಯಿಯನ್ನೇ ಆರೈಕೆ ಮಾಡದಂತಹ ಹಲವರು ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಒಂದು ವೇಳೆ ಮಕ್ಕಳು ಅಥವಾ ಸಂಬಂಧಿಕರು ತಮ್ಮನ್ನು ಆರೈಕೆ ಮಾಡದಿದ್ದರೆ ಅವರ ಹೆಸರಿಗೆ ಮಾಡಿರುವ ವಿಲ್ ಅಥವಾ ಧಾನಪತ್ರವನ್ನು ರದ್ದು ಮಾಡುವ ಅಧಿಕಾರ ಹಿರಿಯ ನಾಗರೀಕರಿಗೆ ಇದೆ” ಎಂದು ಮಾಹಿತಿ ನೀಡಿದರು.
ಕೇಂದ್ರ ಸರ್ಕಾರ 2007 ರಲ್ಲೇ ʼಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆʼ ಯನ್ನು ಜಾರಿಗೆ ತಂದಿದೆ. ಆದರೆ, ಈ ಬಗ್ಗೆ ಹಲವರಿಗೆ ಮಾಹಿತಿಯೇ ಇಲ್ಲ. ಈ ಮಾಹಿತಿಯನ್ನು ಪರಿಣಾಮಕಾರಿಯಾಗಿ ಎಲ್ಲರಿಗೂ ತಲುಪಿಸಬೇಕು ಎಂಬ ಉದ್ದೇಶದಿಂದಲೇ ಈ ಕಾಯ್ದೆಯ ಬಗ್ಗೆ ಉಲ್ಲೇಖಿಸುತ್ತಿದ್ದೇನೆ. ಈ ಕಾಯ್ದೆಯ ಪ್ರಕಾರ ಮಕ್ಕಳು ಅಥವಾ ಸಂಬಂಧಿಕರು ಹಿರಿಯ ನಾಗರೀಕರನ್ನು ಆರೈಕೆ ಮಾಡಬೇಕು. ಔಷಧಿ ಸೇರಿದಂತೆ ಅವರ ಮಾಸಿಕ ಖರ್ಚಿಗೆ ಹಣ ನೀಡಬೇಕು. ಒಂದು ವೇಳೆ ಹಣ ನೀಡದಿದ್ದರೆ ಅಥವಾ ಆರೈಕೆ ಮಾಡಲು ನಿರ್ಲಕ್ಷಿಸಿದರೆ ಹಿರಿಯ ನಾಗರೀಕರು ಸೆಕ್ಷನ್ 09ರ ಅಡಿಯಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಬಳಿ ದೂರು ಸಲ್ಲಿಸಬಹುದು” ಎಂದು ತಿಳಿಸಿದರು.
Previous ArticleKSRTC ಲಾಸ್ ಎಷ್ಟು ಗೊತ್ತೆ ?
Next Article ನಟಿ ರನ್ಯಾ ಚಿನ್ನ ಸಾಗಿಸೋದು ಹೇಗೆ ಗೊತ್ತಾ..


1 ಟಿಪ್ಪಣಿ
Betano Casino https://betanogame.org/fr/ offre une excitation pure. Inscrivez-vous pour 100 % jusqu’Г 500 € plus 150 tours gratuits. Jouez de maniГЁre responsable et gagnez avec les retraits les plus rapides en ligne. Votre aventure commence maintenant.