ಚಾಮರಾಜನಗರ,ಜೂ.1- ಜಿಲ್ಲೆಯ ಪ್ರಸಿದ್ಧ ಯಾತ್ರಸ್ಥಳ ಕೊಳ್ಳೇಗಾಲ ತಾಲೂಕಿನ ಚಿಕ್ಕಲ್ಲೂರು ಸಿದ್ದಪ್ಪಾಜಿ ದೇವಸ್ಥಾನದಲ್ಲಿ ಪೂಜೆ ವಿಚಾರಕ್ಕೆ ಉಂಟಾದ ಜಗಳ ವಿಕೋಪಕ್ಕೆ ತಿರುಗಿ ತ್ರಿಶೂಲಗಳಲ್ಲಿ ಹೊಡೆದಾಡಿಕೊಂಡು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಹೊಡೆದಾಟದಲ್ಲಿ ಗಾಯಗೊಂಡಿರುವ ಚಿಕ್ಕಲೂರು ದೇವಸ್ಥಾನದ ಅರ್ಚಕರಾದ ಶಂಕರಪ್ಪ (65), ಶಿವಕುಮಾರಸ್ವಾಮಿ (40) ಹಾಗೂ ನಂಜುಂಡಸ್ವಾಮಿ (32) ಕೊಳ್ಳೆಗಾಲದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು,ಅವರ ಸ್ಥಿತಿ ಗಂಭೀರವಾಗಿದೆ.
ಪೂಜೆ ಹಾಗೂ ದೀಕ್ಷೆ ಕೊಡುವ ವಿಚಾರಕ್ಕೆ ಅರ್ಚಕರ ಗುಂಪಿನಲ್ಲಿ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಗಲಾಟೆ ವಿಕೋಪಕ್ಕೆ ಹೋಗಿ, ಸಿದ್ದಪ್ಪಾಜಿ ದೇವಸ್ಥಾನದ ಬೆತ್ತ ಮತ್ತು ತ್ರಿಶೂಲಗಳನ್ನು ಹಿಡಿದುಕೊಂಡು ಪರಸ್ಪರ ಗಲಾಟೆ ಮಾಡಿಕೊಂಡಿದ್ದಾರೆ.
ಸಿದ್ದಪ್ಪಾಜಿ ದೇವರ ಗುಡ್ಡ ದೀಕ್ಷೆ ನೀಡುವ ವಿಚಾರಕ್ಕೆ ಅರ್ಚಕರ ಗುಂಪಿನ ನಡುವೆ ಗಲಾಟೆ ನಡೆದಿದೆ. ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
Previous Articleಸತತ ಪ್ರಶ್ನೆಗಳ ಮೂಲಕ ಪ್ರಜ್ವಲ್ ಗೆ ಬೆಂಡೆತ್ತಿದ ಎಸ್ಐಟಿ ತಂಡ.
Next Article ವಾಲ್ಮೀಕಿ ನಿಗಮದ ಅಕ್ರಮದ ಬೆನ್ನು ಹತ್ತಿದ ಎಸ್ಐಟಿ.


1 ಟಿಪ್ಪಣಿ
Din vinnarhistoria börjar på Betano https://betanogame.org/sv/mobile-app/. Ta upp till €500 välkomstbonus och snurra lyckans hjul. Snabbt, rättvist och otroligt roligt.