Facebook Twitter Instagram
    Vartha Chakra
    • ಸುದ್ದಿ
    • ಬೆಂಗಳೂರು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ರಾಜಕೀಯ
      • ಚುನಾವಣೆ 2023
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • ಅಪರಾಧ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪಾರಂಪರಿಕ ಕಟ್ಟಡಗಳ ಉಳಿವಿಗೆ ಬೀದಿಗಿಳಿದ ಯದುವೀರ್
    ಸುದ್ದಿ

    ಪಾರಂಪರಿಕ ಕಟ್ಟಡಗಳ ಉಳಿವಿಗೆ ಬೀದಿಗಿಳಿದ ಯದುವೀರ್

    vartha chakraBy vartha chakraಏಪ್ರಿಲ್ 20, 2022Updated:ಏಪ್ರಿಲ್ 21, 2022ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter Pinterest LinkedIn Tumblr Email
    Share
    Facebook Twitter LinkedIn Pinterest Email

    ಮೈಸೂರಿನ ಪಾರಂಪರಿಕ ಕಟ್ಟಡಗಳಾದ ದೇವರಾಜ ಮಾರುಕಟ್ಟೆ ಹಾಗೂ ಲ್ಯಾನ್ ಸ್ಟೋನ್ ಕಟ್ಟಡ ನೆಲಸಮಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರ ವಿರೋಧಿಸಿ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಬೀದಿಗಿಳಿದು ಪ್ರತಿಭಟನೆ ನಡೆಸಿದರು.
    ಮೈಸೂರಿನ ಹೃದಯ ಭಾಗದಲ್ಲಿರುವ ಪಾರಂಪರಿಕ ಕಟ್ಟಡ ದೇವರಾಜ ಮಾರುಕಟ್ಟೆ,ಲ್ಯಾನ್ ಸ್ಟೋನ್ ಕಟ್ಟಡ ನೆಲಸಮ ಮಾಡಿ ಪುನರ್ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದೆ. ಇದಕ್ಕೆ ವರ್ತಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಮಧ್ಯೆ ಇವರ ಬೆಂಬಲಕ್ಕೆ ನಿಂತ ರಾಜವಂಶಸ್ಥ ಯದುವೀರ್, ಅಭಿವೃದ್ಧಿ ನೆಪದಲ್ಲಿ ಐತಿಹಾಸಿಕ ಕಟ್ಟಡಗಳ ನೆಲಸಮ ಬೇಡ ಎಂದು ಆಗ್ರಹಿಸಿದ್ದಾರೆ.

    ಪ್ರತಿಭಟನೆ ವೇಳೆ ಮಾತನಾಡಿದ ಯದುವೀರ್ ಒಡೆಯರ್, ಮೈಸೂರಿನ ಪ್ರತಿಯೊಬ್ಬರ ಹೃದಯಕ್ಕೂ ಹತ್ತಿರವಾಗಿದೆ ಈ ದೇವರಾಜ ಮಾರುಕಟ್ಟೆ. ತಜ್ಞರೇ ಹೇಳಿದ್ದಾರೆ ದೇವರಾಜ ಮಾರುಕಟ್ಟೆಯನ್ನ ಸಂರಕ್ಷಿಸಬಹುದು ಅಂತ. ನಮ್ಮ ಪೂರ್ವಜರು ಕಟ್ಟಿದ ಪಾರಂಪರಿಕ ಕಟ್ಟಡಗಳನ್ನ ನೋಡಿ ನಾವು ಬೆಳೆದಿದ್ದೇವೆ. ಇದೇ ನಮ್ಮ ಮೈಸೂರಿನ‌ ಕಲೆ, ಇದನ್ನೇ ನಮ್ಮ‌ ಮುಂದಿನ ಪೀಳಿಗೆಗೆ ಕೊಡಬೇಕಿದೆ. ಈ ಪರಂಪರೆಯನ್ನ ಕಾಪಾಡದಿದ್ರೆ ಮೈಸೂರಿನ ಐಡೆಂಟಿಟಿ ಉಳಿಯಲ್ಲ‌. ಮೈಸೂರಿನ ನಾಗರೀಕ ಸಮುದಾಯ ಆರಂಭವಾಗಿದ್ದು ದೇವರಾಜ ಮಾರುಕಟ್ಟೆಯಿಂದ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಈ ಬಗ್ಗೆ ಸರಿಯಾದ ಕ್ರಮ‌ ಕೈಗೊಳ್ಳುತ್ತೆ ಅನ್ನೋ ವಿಶ್ವಾಸವಿದೆ. ಪಾರಂಪರಿಕ ಸಮಿತಿಯಲ್ಲಿ ಯಾರು ಇರಬೇಕಿತ್ತೋ ಅವರ ಅನುಪಸ್ಥಿತಿಯಲ್ಲಿ ಸಭೆ ನಡೆಸಿ ಅನುಮೋದನೆ ಪಡೆಯಲಾಗಿದೆ. ಪಾರಂಪರಿಕ ಕಟ್ಟಡಗಳ ಉಳಿವಿಗೆ ಸದಾ ನನ್ನ ಬೆಂಬಲ ಇರುತ್ತೆ. ನೂರಕ್ಕೆ‌ನೂರು ನಾನು ನಿಮ್ಮ ಜೊತೆ ಇರ್ತೀನಿ ಎಂದು ಭರವಸೆ ನೀಡಿದರು.

    ಹಾಗೆಯೇ ಮಾತು ಮುಂದುರೆಸಿದ ಯುದುವೀರ್, ಮೈಸೂರು ಅರಮನೆ ಕಟ್ಟಿ 100 ವರ್ಷದ ಮೇಲಾಗಿದೆ ಎಂದು ಅರಮನೆ ಕೆಡವಿ ಬೇರೆ ಕಟ್ಟಲು ಆಗುತ್ತಾ.? ಮೈಸೂರಿನ ಸಂಸ್ಕೃತಿ ಪಾರಂಪರಿಕ ಕಟ್ಟಡಗಳ ಜೊತೆ ಬೆರೆತಿದೆ. ನೂರು ವರ್ಷ ಆಗಿದೆ ಎಂದು ಕಟ್ಟಡಗಳನ್ನು ಹೊಡೆಯುತ್ತಾ ಹೋದರೆ ಪಾರಂಪರಿಕತೆ ಉಳಿಯುತ್ತಾ? ಒಂದು ಪಾರಂಪರಿಕ ಕಟ್ಟಡ ಕೆಡವಿದ ಮೇಲೆ ಅದೇ ಮಾದರಿಯಲ್ಲಿ ಕಟ್ಟಿದರೂ ಕೂಡಾ ಆ ಕಟ್ಟಡಕ್ಕೆ ಹಳೇ ಇತಿಹಾಸ ಬರುವುದಿಲ್ಲ. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಪಾರಂಪರಿಕ ಕಟ್ಟಡ ಉಳಿಸುವ ಹೊಸ ತಜ್ಞರ ಸಮಿತಿ ರಚನೆ ಮಾಡಬೇಕು. ಜನರ ಅಭಿಪ್ರಾಯಗಳಿಗೆ, ಭಾವನಗಳಿಗೆ ಸ್ಪಂದಿಸುವುದು ಸರ್ಕಾರದ ಜವಾಬ್ದಾರಿ ಎಂದರು.

    ನಮ್ಮ ವಂಶದ ಖಾಸಗಿ ಆಸ್ತಿಗಳ ನವೀಕರಣ ಅದು ಬೇರೆ ವಿಚಾರ. ಆದರೆ ಸಾರ್ವಜನಿಕರ ಸ್ವತ್ತಿನ ಕಟ್ಟಡಗಳದ್ದು ಬೇರೆಯ ವಿಚಾರ. ಅರಮನೆಯ ಆಸ್ತಿಯ ವಿಚಾರಕ್ಕೂ ಸಾರ್ವಜನಿಕರ ಸ್ವತ್ತಿನ ಪಾರಂಪರಿಕ ಕಟ್ಟಡಗಳಿಗೂ ಸಂಬಂಧ ಕಲ್ಪಿಸಬೇಡಿ. ದೇವರಾಜ ಮಾರುಕಟ್ಟೆ ನಮ್ನ ವ್ಯಾಪ್ತಿಗೆ ಕೊಟ್ಟರೇ ನಾವೇ ಪುನಶ್ಚೇತನ ಮಾಡುತ್ತೇವೆಂಬ ಪ್ರಮೋದಾದೇವಿ ಒಡೆಯರ್ ಹೇಳಿಕೆ ವಿಚಾರ. ಅದಕ್ಕೆ ನಾನು ಪ್ರತಿಕ್ರಿಯೆ ನೀಡಲ್ಲ. ಅದನ್ನ ಅವರ ಬಳಿಯೇ ಕೇಳಿ. ನಾನು ಅದಕ್ಕೆ ಪ್ರತಿಕ್ರಿಯಿಸಲ್ಲ ಎಂದು ಯದುವೀರ್ ತಿಳಿಸಿದರು.

    ರಾಜ್ಯದಲ್ಲಿ ಕೋಮುಸಂಘರ್ಷ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಯಿಕ್ರಿಯಿಸಿದ ಯದುವೀರ್ ಅವರು, ಎಲ್ಲರಿಗೂ ಕೈಮುಗಿದು ಬೇಡುತ್ತೇನೆ ಶಾಂತಿಯಿಂದ ಹೋಗಿ ಎಂದು ಮನವಿ ಮಾಡಿದರು.

    #Mysore #Strike #yaduveer
    Share. Facebook Twitter Pinterest LinkedIn Tumblr Email
    Previous Articleಮತ್ತೆ ಬಂತು‌ ಹುಷಾರ್..
    Next Article ಶಾಸಕ ಯತ್ನಾಳರಿಗೆ ಪರಿಜ್ಞಾನವಿರಬೇಕಿತ್ತಂತೆ!
    vartha chakra
    • Website

    Related Posts

    ಅಖಾಡದಲ್ಲಿ ಝಣ ಝಣ ಕಾಂಚಾಣ! #karnatakaelections2023 #bangalore

    ಮಾರ್ಚ್ 23, 2023

    Electionಗೆ ಮುನ್ನವೇ DK ವ್ಯೂಹ ಛಿದ್ರ

    ಮಾರ್ಚ್ 21, 2023

    Facebookನಿಂದ ಮನೆಗೆ ಹೊರಟ10000 ಮಂದಿ #meta #jobs

    ಮಾರ್ಚ್ 15, 2023

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕ್ರೀಡೆ
    • ಚುನಾವಣೆ
    • ಚುನಾವಣೆ 2023
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬೆಂಗಳೂರು
    • ಮನರಂಜನೆ
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಮಾಜ
    • ಸಮೂಹ ಶಕ್ತಿ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    Kabza ಸಿನೆಮ ನಿಜವಾದ Collection ಎಷ್ಟು ಗೊತ್ತಾ? #kabza #shriyasaran #kiccha

    Ultraviolet ಕಿರಣಗಳಿವೆ ಎಚ್ಚರ! #bangalore #skincancer

    ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಮೃತಪಟ್ಟಿದ್ದು ಹೃದಯಾಘಾತದಿಂದಲ್ಲ!

    ರಾಹುಲ್ ಗಾಂಧಿ Disqualified

    About
    About

    We're social, connect with us:

    Facebook Twitter YouTube
    Software Training
    Recent Posts
    • Kabza ಸಿನೆಮ ನಿಜವಾದ Collection ಎಷ್ಟು ಗೊತ್ತಾ? #kabza #shriyasaran #kiccha ಮಾರ್ಚ್ 26, 2023
    • Ultraviolet ಕಿರಣಗಳಿವೆ ಎಚ್ಚರ! #bangalore #skincancer ಮಾರ್ಚ್ 25, 2023
    • ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಮೃತಪಟ್ಟಿದ್ದು ಹೃದಯಾಘಾತದಿಂದಲ್ಲ! ಮಾರ್ಚ್ 24, 2023
    • ರಾಹುಲ್ ಗಾಂಧಿ Disqualified ಮಾರ್ಚ್ 24, 2023
    • ಅಖಾಡದಲ್ಲಿ ಝಣ ಝಣ ಕಾಂಚಾಣ! #karnatakaelections2023 #bangalore ಮಾರ್ಚ್ 23, 2023
    • ಉಮೇಶ್ ಕತ್ತಿ ಸೋದರನಿಗೆ Congress ಗಾಳ ಮಾರ್ಚ್ 23, 2023
    • Kumaraswamy ಸೇರು- Bhavani Revanna ಸವ್ವಾ ಸೇರು! ಮಾರ್ಚ್ 22, 2023
    • BJP ಸೇರಿದ ರೋಷನ್ ಬೇಗ್! #bjp #karnataka #congressparty #elections ಮಾರ್ಚ್ 21, 2023
    • ರಸ್ತೆಯಲ್ಲಿ ಬೆತ್ತಲಾಗಿ ಓಡಿದ ಸಿನಿಮಾ ನಟಿ ಮಾರ್ಚ್ 21, 2023
    • Electionಗೆ ಮುನ್ನವೇ DK ವ್ಯೂಹ ಛಿದ್ರ ಮಾರ್ಚ್ 21, 2023
    Popular Posts

    Kabza ಸಿನೆಮ ನಿಜವಾದ Collection ಎಷ್ಟು ಗೊತ್ತಾ? #kabza #shriyasaran #kiccha

    ಮಾರ್ಚ್ 26, 2023

    Ultraviolet ಕಿರಣಗಳಿವೆ ಎಚ್ಚರ! #bangalore #skincancer

    ಮಾರ್ಚ್ 25, 2023

    ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಮೃತಪಟ್ಟಿದ್ದು ಹೃದಯಾಘಾತದಿಂದಲ್ಲ!

    ಮಾರ್ಚ್ 24, 2023
    Copyright © 2023 Vartha Chakra
    • ಸುದ್ದಿ
    • ಬೆಂಗಳೂರು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ರಾಜಕೀಯ
      • ಚುನಾವಣೆ 2023
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • ಅಪರಾಧ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    DK ಮಾಡಿದ ಪ್ರತಿಜ್ಞೆ #dk #dkshivakumar #ramanagara #jds #mysore #congressparty #belgaum #sandalwood
    Subscribe