Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪೊಲೀಸ್ ಕಮಿಷನರ್ ಕಚೇರಿಯಲ್ಲೇ ಹಣ ಕದ್ದ
    ಅಪರಾಧ

    ಪೊಲೀಸ್ ಕಮಿಷನರ್ ಕಚೇರಿಯಲ್ಲೇ ಹಣ ಕದ್ದ

    vartha chakraBy vartha chakraಡಿಸೆಂಬರ್ 4, 20251 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಡಿ.4 – ಪೊಲೀಸರು ಇತ್ತೀಚೆಗೆ ಕಳ್ಳತನ ದರೋಡೆ ಸೇರಿದಂತೆ ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುತ್ತಿರುವ ವರದಿಗಳು ಹೆಚ್ಚಾಗುತ್ತಿವೆ. ಯಾವುದಾದರೂ ಪೊಲೀಸ್ ಸಿಬ್ಬಂದಿ ಅಪರಾಧ ಚಟುವಟಿಕೆಗಳಲ್ಲಿ ಶಾಮಿಲಾದರೆ ಅಂತವರನ್ನು ಮುಲಾಜಿಲ್ಲದೆ ಸೇವೆಯಿಂದ ವಜಾ ಗೊಳಿಸಲಾಗುವುದು ಎಂದು ಸರ್ಕಾರ ಎಚ್ಚರಿಕೆ ನೀಡಿದರೂ ಕೂಡ ಈ ಪ್ರಕರಣಗಳು ಕಡಿಮೆಯಾಗುತ್ತಿಲ್ಲ.
    ಇದರ ಸಾಲಿಗೆ ಈಗ ಮತ್ತೊಂದು ಪ್ರಕರಣ ಸೇರ್ಪಡೆಯಾಗಿದೆ ಅದು ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿ ಪಕ್ಕದಲ್ಲಿ ನಡೆದಿರುವ ಘಟನೆಯಾಗಿದೆ.
    ಸೈಬರ್ ಅಪರಾಧ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ವ್ಯಕ್ತಿ ಒಬ್ಬನನ್ನು ಬಂಧಿಸಿ ಕರೆ ತಂದಿದ್ದ ಪೊಲೀಸರು ನಗರ ಪೊಲೀಸ್ ಆಯುಕ್ತರ ಕಚೇರಿಯ ಆವರಣದಲ್ಲಿರುವ ಸೈಬರ್ ವಿಭಾಗದಲ್ಲಿ ವಿಚಾರಣೆಗೆ ಒಳಪಡಿಸಿ ಜೈಲಿಗೆ ಕಳುಹಿಸಿದ್ದರು.
    ಸೈಬರ್ ಅಪರಾಧದ ಆರೋಪಿ ತನ್ನ ಕಾರಿನಲ್ಲಿ ಬೆಂಗಳೂರು ನಗರ ಪೊಲೀಸ್ ಕಚೇರಿಗೆ ಆಗಮಿಸಿದ್ದರು.ಕಚೇರಿಯ ಆವರಣದಲ್ಲಿಯೇ ತಮ್ಮ ಕಾರು ನಿಲುಗಡೆ ಮಾಡಿದ್ದರು.
    ವಿಚಾರಣೆಯ ನಂತರ ಈ ವ್ಯಕ್ತಿಯನ್ನು ಪೊಲೀಸರು ಜೈಲಿಗೆ ತಳ್ಳಿದರು ಆನಂತರ ಆತ ಜಾಮೀನು ಪಡೆದು ಹೊರಗೆ ಬಂದಿದ್ದ ಬಳಿಕ ಪೊಲೀಸ್ ಆಯುಕ್ತರ ಕಚೇರಿ ಆವರಣದಲ್ಲಿ ನಿಲ್ಲಿಸಿದ್ದ ತನ್ನ ಕಾರನ್ನು ತೆಗೆದುಕೊಳ್ಳಲು ಬಂದಿದ್ದ ಈ ವೇಳೆ ಕಾರಿನಲ್ಲಿ ತಾನು 11 ಲಕ್ಷ ರೂಪಾಯಿ ಇರುವ ಹಣದ ಚೀಲ ಇಟ್ಟಿದ್ದೆ ಅದು ನಾಪತ್ತೆಯಾಗಿದೆ ಎಂದು ಹೇಳಿ ದೂರು ಸಲ್ಲಿಸಿದ್ಧ
    ಪೊಲೀಸ್ ಆಯುಕ್ತರ ಕಚೇರಿಯ ಆವರಣದಲ್ಲಿ ಹಣ ಕಳ್ಳತನವಾಗಿದೆ ಎಂಬ ದೂರನ್ನು ಗಂಭೀರವಾಗಿ ಪರಿಗಣಿಸಿದ ಸಿಸಿಬಿ ಡಿಸಿಪಿ ರಾಜಾ ಇಮಾಮ್ ಖಾಸಿಂ ಈ ಬಗ್ಗೆ ತನಿಖೆ ನಡೆಸಲು ವಿಶೇಷ ತಂಡ ರಚಿಸಿದ್ದರು.
    ಈ ತಂಡ ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಿ ಪೊಲೀಸ್ ಆಯುಕ್ತರ ಕಚೇರಿ ಆವರಣದಲ್ಲಿ ಹಾಕಲಾಗಿರುವ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಿತು.ಈ ವೇಳೆ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿ ಕೆಲಸ ಮಾಡುತ್ತಿರುವ ಜಬೀವುಲ್ಲಾ ಹಣದ ಬ್ಯಾಗ್ ತೆಗೆದುಕೊಂಡು ಹೋಗುತ್ತಿರುವುದು ಸಿಸಿಟಿವಿ ಕ್ಯಾಮೆರಾದಲ್ಲಿ ಸರಿಯಾಗಿದೆ. ಈ ಮೂಲಕ ಪೊಲೀಸಪ್ಪನೇ ಕಳ್ಳತನ ಮಾಡಿರುವುದು ಗೊತ್ತಾಗಿದೆ.
    ಇನ್ನು ಕಳ್ಳತನ ಮಾಡಿದ ಹೆಡ್ ಕಾನ್‌ಸ್ಟೇಬಲ್‌ ಜಬಿವುಲ್ಲಾ ತಮಗೇನು ಗೊತ್ತೇ ಇಲ್ಲ ಎಂಬಂತೆ ನಟಿಸುತ್ತಾ ಆರಾಮಾಗಿ ಓಡಾಡಿಕೊಂಡಿದ್ದ.
    ಘಟನೆಯ ಬಗ್ಗೆ ತನಿಖೆಗೆ ರಚಿಸಲಾಗಿದ ವಿಶೇಷ ತಂಡ ಹೆಡ್ ಕಾನ್ಸ್‌ಟೇಬಲ್‌ ಜಬೀವುಲ್ಲಾ ಮನೆ ಸರ್ಚ್ ಮಾಡಲು ತೆರಳಿದಾಗ ಮನೆಯ ಬಳಿ ಜಬೀವುಲ್ಲಾ ಹೈಡ್ರಾಮಾ ಮಾಡಿದ್ದಾನೆ. ಮನೆಯ ಒಳಗೆ ಸೈಬರ್ ಪೊಲೀಸರನ್ನ ಬಿಡದೆ ಗಲಾಟೆ ಮಾಡಿದ್ದಾನೆ. ಕೊನೆಗೆ ಜಬೀವುಲ್ಲಾನನ್ನ ತಡೆದು ಮನೆ ಸರ್ಚ್‌ ಮಾಡಿದಾಗ ತನ್ನ ಕೋಣೆಯ ಬೆಡ್ ಕೆಳಗೆ ಲಕ್ಷ ಲಕ್ಷ‌ ಹಣ ಜೋಡಿಸಿಟ್ಟಿದ್ದು ಬಯಲಾಗಿದೆ. ಅಲ್ಲದೇ ಕದ್ದ ಹಣದಿಂದಲೇ ಪತ್ನಿಗೆ ಒಡೆವೆಗಳನ್ನೂ ಕೊಡಿಸಿದ್ದ ಅಂಶ ಕೂಡ ಬೆಳಕಿಗೆ ಬಂದಿದ್ದು ಈ ಬಗ್ಗೆ ತನಿಕಾ ವರದಿಯನ್ನು ನಗರ ಪೊಲೀಸ್ ಆಯುಕ್ತರಿಗೆ ಸಲ್ಲಿಸಲಾಗಿದೆ.

    Verbattle
    Verbattle
    Verbattle
    ಕಳ್ಳತನ ಕಾರು ಬೆಂಗಳೂರು ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಶಿಕ್ಷಣ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ
    Next Article ಸಫಾರಿ ಸ್ಥಗಿತ – ಮುಂದೇನು?
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026

    1 ಟಿಪ್ಪಣಿ

    1. Philippriog on ಜನವರಿ 23, 2026 6:55 ಫೂರ್ವಾಹ್ನ

      Нужен проектор? https://projector24.ru большой выбор моделей для дома, офиса и бизнеса. Проекторы для кино, презентаций и обучения, официальная гарантия, консультации специалистов, гарантия качества и удобные условия покупки.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Daviddek ರಲ್ಲಿ ಡಿ.ಕೆ ಶಿವಕುಮಾರ್ ಅವರನ್ನು ರಾಹುಲ್ ಗಾಂಧಿ ಯಾಕೆ ಭೇಟಿ ಮಾಡುತ್ತಿಲ್ಲ ಗೊತ್ತಾ?
    • Daviddek ರಲ್ಲಿ ವಿಬಿಜಿ ರಾಮ್ ಜಿ ಗೆ ವಿಶೇಷ ಅಧಿವೇಶನ
    • RicardoCor ರಲ್ಲಿ ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.