Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಳ್ಳಾರಿ ಜೈಲಿನಲ್ಲಿ ಚಾಲೆಂಜಿಂಗ್ ಸ್ಟಾರ್ ಹೇಗಿದ್ದಾರೆ ಗೊತ್ತಾ.
    Trending

    ಬಳ್ಳಾರಿ ಜೈಲಿನಲ್ಲಿ ಚಾಲೆಂಜಿಂಗ್ ಸ್ಟಾರ್ ಹೇಗಿದ್ದಾರೆ ಗೊತ್ತಾ.

    vartha chakraBy vartha chakraಸೆಪ್ಟೆಂಬರ್ 11, 202492 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬಳ್ಳಾರಿ,ಸೆ.11:
    ತಮ್ಮ ಗೆಳತಿಗೆ ಅಶ್ಲೀಲ ಮೆಸೇಜ್ ಕಳುಹಿಸಿದರು ಎಂಬ ಕಾರಣಕ್ಕೆ ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬುವರನ್ನು ಅಮಾನುಷವಾಗಿ ಹತ್ಯೆ ಮಾಡಿದ ಆರೋಪದಲ್ಲಿ ಜೈಲು ಪಾಲಾಗಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಇದೀಗ ಬಳ್ಳಾರಿ ಜೈಲಿನಲ್ಲಿ ಸಾಮಾನ್ಯ ಖೈದಿಯಂತೆ ದಿನ ದೂಡುತ್ತಿದ್ದಾರೆ.
    ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದ ವೇಳೆ ಐಷಾರಾಮಿ ಸೌಲಭ್ಯ ಪಡೆದ ಆರೋಪದಲ್ಲಿ ಅವರನ್ನು ಇದೀಗ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ವರ್ಗಾವಣೆ ಮಾಡಲಾಗಿದೆ.
    ಆರಂಭದಲ್ಲಿ ಇಲ್ಲಿನ ಸೌಲಭ್ಯಗಳಿಗೆ ಹೊಂದಿಕೊಳ್ಳಲಾಗದೆ ಪರದಾಡಿದ ದರ್ಶನ್ ಇದೀಗ ನಿಧಾನವಾಗಿ ಬಳ್ಳಾರಿ ಜೈಲಿನ ನಿಯಮಗಳಿಗೆ ಹೊಂದಿಕೊಳ್ಳುತ್ತಿದ್ದಾರೆ.
    ದರ್ಶನ್ ಕುಟುಂಬ ಸದಸ್ಯರ ಜೊತೆ ಮಾತನಾಡಲು ಅವರ ಸೆಲ್ ಗೆ ಸ್ಥಿರ ದೂರವಾಣಿ ವ್ಯವಸ್ಥೆ ಕಲ್ಪಿಸಲಾಗಿದ್ದು, ಪತ್ನಿ ವಿಜಯಲಕ್ಷ್ಮೀ ಜೊತೆ ದರ್ಶನ್ ಕೆಲ ಹೊತ್ತು ಮಾತನಾಡಿದ್ದಾರೆ.
    ಈ ಹಿಂದೆ ಜೈಲು ಸಭಾಂಗಣಕ್ಕೆ ನಟ ದರ್ಶನ್ ಆಗಮಿಸಿ ಕರೆ ಮಾಡಬೇಕಿತ್ತು. ಸಾಮಾನ್ಯ ಕೈದಿಗಳು ಇರುವ ಬ್ಯಾರಕ್ ಪಕ್ಕದಲ್ಲಿಯೇ ಫೋನ್ ವ್ಯವಸ್ಥೆಯಿತ್ತು. ಇತರೆ ಕೈದಿಗಳನ್ನು ಭೇಟಿಯಾಗಲು ಆಗಮಿಸುವವರ ಸಂಖ್ಯೆ ಹೆಚ್ಚಾಗಿರುವುದರಿಂದ ಕಿರಿಕಿರಿಯಾಗುತ್ತಿದೆ ಎಂಬ ಕಾರಣಕ್ಕೆ ಫೋನ್ ವ್ಯವಸ್ಥೆ ಹೈಸೆಕ್ಯೂರಿಟಿ ಸೆಲ್‌ನಲ್ಲಿಯೇ ಕಲ್ಪಿಸಲಾಗಿದೆ.
    ಜಾಮೀನು ಕುರಿತು ವಕೀಲರ ಜೊತೆ ಚರ್ಚಿಸಲು ಹಾಗೂ ಕುಟುಂಬ ಸದಸ್ಯರ ಜೊತೆ ಮಾತನಾಡಲು ಅನುಕೂಲ ವಾದಂತಾಗಿದೆ. ಜೈಲು ಸೇರಿದ ಕೆಲ ದಿನ ಊಟ ಹಾಗೂ ಉಪಹಾರ ಸರಿಯಾಗಿ ಸೇವಿಸದೆ ಮಂಕಾಗಿದ್ದ ದರ್ಶನ್ ಇದೀಗ ಸಾಮಾನ್ಯ ಕೈದಿ ಗಳಂತೆಯೇ ಊಟ ಹಾಗೂ ಉಪಹಾರ ಸೇವಿಸುತ್ತಿದ್ದಾರೆ.
    ದರ್ಶನ್ ಬಳ್ಳಾರಿ ಸೆಂಟ್ರಲ್ ಜೈಲಿಗೆ ಸ್ಥಳಾಂತರಗೊಂಡು 14 ದಿನಗಳಾಗಿದೆ.
    ಜೈಲಿನಲ್ಲಿ ತಮಗೆ ಬೇಜಾರಾಗುತ್ತಿದೆ ಹೀಗಾಗಿ ನೋಡಲು ಟಿವಿ ನೀಡುವಂತೆ ಮನವೀ ಮಾಡಿದ್ದರು. ಜೈಲಿನಲ್ಲಿ ಖೈದಿಗಳಿಗೆ ವೀಕ್ಷಿಸಲು ಟಿವಿ ವ್ಯವಸ್ಥೆ ಇದೆ ಆದರೆ ಅಲ್ಲಿ ಇತರೆ ಎಲ್ಲಾ ಖೈದಿಗಳು ಸೇರುವ ಹಿನ್ನೆಲೆಯಲ್ಲಿ ದರ್ಶನ್ ಅಲ್ಲಿಗೆ ಹೋಗಿ ನೋಡಲು ಸಾಧ್ಯವಿರಲಿಲ್ಲ ಹೀಗಾಗಿ ಅವರು ಪ್ರತ್ಯೇಕ ಟಿವಿಗಾಗಿ ಮನವಿ ಮಾಡಿದ್ದರು.
    ಅವರು ಮಾಡಿದ ಮನವಿಯಂತೆ ಜೈಲಿನ ನಿಯಮಗಳ ಪ್ರಕಾರ ದರ್ಶನ್‌ಗೆ ಟಿವಿ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿತ್ತು. ಆದರೆ ನೀಡಿದ್ದ ಟಿವಿಯಲ್ಲಿ ತಾಂತ್ರಿಕ ದೋಷ ಕಂಡು ಬಂದ ಕಾರಣ ಪದೇ ಪದೇ ಸ್ವಿಚ್‌ ಆಫ್‌ ಆಗುತ್ತಿತ್ತು ಮತ್ತು ಬ್ಲರ್‌ ಆಗಿ ಚಿತ್ರಗಳು ಕಾಣುತ್ತಿದ್ದವು.
    ಇದನ್ನು ರಿಪೇರಿ ಮಾಡಿ ಕೊಡಿ ಎಂದು ದರ್ಶನ್‌ ಮನವಿ ಮಾಡಿದ್ದರು. ಆದರೆ ನಮ್ಮಲ್ಲಿ ಇರುವುದು ಇದೇ ಟಿವಿ ಎಂದು ಜೈಲಾಧಿಕಾರಿಗಳು ಹೇಳಿದ್ದಾರೆ. ಇದಕ್ಕೆ ದರ್ಶನ್‌ ಬೇರೆ ಟಿವಿ ಇದ್ದರೆ ನೀಡಿ ಎಂದು ಕೇಳಿಕೊಂಡಿದ್ದಾರೆ. ಈ ಮನವಿಗೆ ಜೈಲಾಧಿಕಾರಿಗಳು ಬೇರೆ ಟಿವಿ ಇಲ್ಲ ಎಂದು ಉತ್ತರಿಸಿದಾಗ ನನಗೆ ಟಿವಿಯೇ ಬೇಡ  ತೆಗೆದುಕೊಂಡು ಹೋಗಿ ಎಂದು ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

    Bangalore Karnataka News Trending Varthachakra ಚಿತ್ರದುರ್ಗ ದರ್ಶನ್
    Share. Facebook Twitter Pinterest LinkedIn Tumblr Email WhatsApp
    Previous Articleಜೈಲಿನಲ್ಲಿ ಖೈದಿ ಉಪವಾಸ ಸತ್ಯಾಗ್ರಹ.
    Next Article ಸಿಎಂ ಬೆಂಬಲಕ್ಕೆ ನಿಂತ ಪ್ರತಾಪ ಸಿಂಹ.
    vartha chakra
    • Website

    Related Posts

    ದರ್ಶನ್‌ಗೆ ದುಡ್ಡು ಎಲ್ಲಿಂದ ಬಂತು?

    ಡಿಸೆಂಬರ್ 5, 2025

    ಪೊಲೀಸ್ ಕಮಿಷನರ್ ಕಚೇರಿಯಲ್ಲೇ ಹಣ ಕದ್ದ

    ಡಿಸೆಂಬರ್ 4, 2025

    ಅಧಿಕಾರ ಹಂಚಿಕೆ ಒಪ್ಪಂದ ಆಗಿಲ್ಲವೇ..?

    ಡಿಸೆಂಬರ್ 4, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೆ.ಎನ್ ಶಾಂತಕುಮಾರ್ ಯಾಕೆ ಗೆಲ್ಲಬೇಕು ಗೊತ್ತಾ?

    ಶನಿವಾರವೂ 400ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು

    ಬೇಸ್ತು ಬಿದ್ದು ಪರಾರಿಯಾದ ಪತಿರಾಯ!

    ದರ್ಶನ್‌ಗೆ ದುಡ್ಡು ಎಲ್ಲಿಂದ ಬಂತು?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • tr88 đăng nhập ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • Donaldscaby ರಲ್ಲಿ 21 ದಿನಗಳು ಅರವಿಂದ ಕೇಜ್ರಿವಾಲ್ ಜೈಲಿನಿಂದ OUT!
    • Scotthem ರಲ್ಲಿ JDS ಕಚೇರಿಗೆ ಕರೆಂಟ್ ಕಳ್ಳತನದ ಪೋಸ್ಟರ್ | HD Kumaraswamy
    Latest Kannada News

    ಕೆ.ಎನ್ ಶಾಂತಕುಮಾರ್ ಯಾಕೆ ಗೆಲ್ಲಬೇಕು ಗೊತ್ತಾ?

    ಡಿಸೆಂಬರ್ 6, 2025

    ಶನಿವಾರವೂ 400ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು

    ಡಿಸೆಂಬರ್ 6, 2025

    ಬೇಸ್ತು ಬಿದ್ದು ಪರಾರಿಯಾದ ಪತಿರಾಯ!

    ಡಿಸೆಂಬರ್ 6, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಬೆಂಗಳೂರಲ್ಲಿ ಮನೆ ಕಟ್ಟೋಕೆ ಏನೇನ್ ರೂಲ್ಸ್ #varthachakra #buildingahouse #gba #bbmp #bangalorerealestate
    Subscribe