Facebook Twitter Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2023
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home»ರಾಜಕೀಯ»ಬೆಸ್ಕಾಂ ಅಧಿಕಾರಿಗಳ ಮೈಚಳಿ ಬಿಡಿಸಿದ ಕೆ.ಜೆ. ಜಾರ್ಜ್ | KJ George
    ರಾಜಕೀಯ

    ಬೆಸ್ಕಾಂ ಅಧಿಕಾರಿಗಳ ಮೈಚಳಿ ಬಿಡಿಸಿದ ಕೆ.ಜೆ. ಜಾರ್ಜ್ | KJ George

    vartha chakraBy vartha chakraಜೂನ್ 1, 2023Updated:ಜೂನ್ 2, 2023ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter Pinterest LinkedIn Tumblr Email
    Share
    Facebook Twitter LinkedIn Pinterest Email

    ಬೆಂಗಳೂರು, ಜೂ. 1-
    ಇಂಧನ ಇಲಾಖೆಯ ನೂತನ ಸಚಿವರಾಗಿ ಕಾರ್ಯಾರಂಭ ಮಾಡಿರುವ ಕೆಜೆ ಜಾರ್ಜ್ ಇಲಾಖೆಗೆ ಹೊಸ ರೂಪ ನೀಡಲು ಮುಂದಾಗಿದ್ದಾರೆ ಈ ನಿಟ್ಟಿನಲ್ಲಿ ಅತಿ ಹೆಚ್ಚು ಗ್ರಾಹಕರನ್ನು ಹೊಂದಿರುವ ಬೆಸ್ಕಾಂನ ಜಡ್ಡುಗಟ್ಟಿದ ಆಡಳಿತ ವ್ಯವಸ್ಥೆಗೆ ಸಾಣೆ ಹಿಡಿಯಲು ತೀರ್ಮಾನಿಸಿದ್ದಾರೆ.
    ಸಚಿವರಾಗಿ ಅಧಿಕಾರ ಸ್ವೀಕರಿಸಿದ ನಂತರ ಕೆಜೆ ಜಾರ್ಜ್ ಅವರು ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸಮಗ್ರ ಮಾಹಿತಿ ಪಡೆದುಕೊಂಡರು ಆನಂತರ ನಿವೃತ್ತ ಅಧಿಕಾರಿಗಳು ಇಂಧನ ದಕ್ಷತೆಯುಳ್ಳ ವ್ಯಕ್ತಿಗಳ ಜೊತೆ ಮಾತುಕತೆ ನಡೆಸಿ ಇಲಾಖೆಗೆ ಹೊಸ ರೂಪ ನೀಡುವ ಕುರಿತಂತೆ ಮಾಹಿತಿ ಪಡೆದುಕೊಂಡರು.
    ಈ ಎಲ್ಲಾ ಮಾಹಿತಿಗಳ ಆಧಾರದಲ್ಲಿ ಇಂದು ದಿಡೀರ್ ಬೆಸ್ಕಾಂ ಕೇಂದ್ರ ಕಚೇರಿಗೆ ಭೇಟಿ ನೀಡಿದರು. ಕಚೇರಿಯ ಎಲ್ಲಾ ವಿಭಾಗಗಳಿಗೆ ತೆರಳಿ ಸಿಬ್ಬಂದಿಯ ಹಾಜರಾತಿ ಕಾರ್ಯಕ್ಷಮತೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಮಾಹಿತಿ ಪಡೆದುಕೊಂಡು ಅನಧಿಕೃತ ಗೈರು ಹಾಜರಾದವರಿಗೆ ಎಚ್ಚರಿಕೆ ನೀಡುವಂತೆ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚಿಸಿದರು.
    ಮಂತ್ರಿಯಾದ ನಂತರ ಕಚೇರಿಗೆ ಇದು ತಮ್ಮ ಮೊದಲ ಭೇಟಿಯಾಗಿದೆ ಹೀಗಾಗಿ ಯಾರ ಬಗ್ಗೆಯೂ ಕಠೋರವಾಗಿ ಮಾತನಾಡುವುದಿಲ್ಲ ಇನ್ನು ಮುಂದೆ ಇಂತಹ ದಿಡೀರ್ ಭೇಟಿ ಹೆಚ್ಚಳವಾಗಲಿದೆ ಕಚೇರಿಯ ಸಿಬ್ಬಂದಿ ತಮ್ಮ ಕಾರ್ಯವೈಖರಿಯನ್ನು ಸುಧಾರಿಸಿಕೊಳ್ಳಬೇಕು. ಕೆಲಸದ ಅವಧಿಯಲ್ಲಿ ತಮ್ಮ ಸ್ಥಳ ಬಿಟ್ಟು ಬೇರೆ ಕಡೆ ಹೋಗಬಾರದು ಅನಧಿಕೃತ ಗೈರು ಹಾಜರಿಯನ್ನು ಆಶಿಸ್ತು ಎಂದು ಪರಿಗಣಿಸಿ ಶಿಸ್ತು ಕ್ರಮ ಜರುಗಿಸಲಾಗುವುದು ಇದಕ್ಕೆ ಅವಕಾಶ ನೀಡಬಾರದು ಎಂದು ಹೇಳಿದರು.

    ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ್ ಬೀಳಗಿ ತಾಂತ್ರಿಕ ವಿಭಾಗದ ನಿರ್ದೇಶಕ ಆಡಳಿತ ವಿಭಾಗದ ನಿರ್ದೇಶಕ ಮಾನವ ಸಂಪನ್ಮೂಲ ವಿಭಾಗದ ನಿರ್ದೇಶಕರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.
    ಈ ವೇಳೆ ಬೆಸ್ಕಾಂ ವ್ಯಾಪ್ತಿಯಲ್ಲಿನ ವಿದ್ಯುತ್ ಗ್ರಾಹಕರ ಸಂಖ್ಯೆ ವಿದ್ಯುತ್ ಬಳಕೆಯ ಪ್ರಮಾಣ ಬಿಲ್ ಪಾವತಿಯ ವೈಖರಿ ಸೇರಿದಂತೆ ಹಲವು ಮಾಹಿತಿಗಳನ್ನು ಕೇಳಿದರು ಈ ಪ್ರಶ್ನೆಗಳಿಗೆ ಉತ್ತರ ಹೇಳಲು ಉನ್ನತ ಅಧಿಕಾರಿಗಳು ತಡಬಡಾಯಿಸಿದಾಗ ಅವರನ್ನು ಲಘುವಾಗಿ ತರಾಟೆಗೆ ತೆಗೆದುಕೊಂಡ ಸಚಿವ ಜಾರ್ಜ್ ತಾವು ಉನ್ನತ ಅಧಿಕಾರಿ ತಮ್ಮ ಬಳಿ ಎಲ್ಲ ಮಾಹಿತಿ ಇರಬೇಕು ಇದು ನನ್ನ ಮೊದಲ ಭೇಟಿ ಇನ್ನು ಮುಂದೆ ಇಂತಹ ಆಲಕ್ಷ್ಯ ಧೋರಣೆಯನ್ನು ಸಹಿಸುವುದಿಲ್ಲ ನಾನು ಕೇಳಿದಾಗ ನೀವು ಎಲ್ಲ ಮಾಹಿತಿಯನ್ನು ನೀಡಬೇಕು ಎಂದು ತಾಕೀತು ಮಾಡಿದರು.
    ಇದಾದ ಬಳಿಕ ಇಂಧನ ಇಲಾಖೆಯ ಹಿರಿಯ ಅಧಿಕಾರಿಗಳು ಸಭೆ ನಡೆಸಿ ಗೃಹ ಜ್ಯೋತಿ ಯೋಜನೆಯ ಅನುಷ್ಠಾನದ ಬಗ್ಗೆ ವಿವರವಾದ ಮಾಹಿತಿ ಪಡೆದುಕೊಂಡರು.

    ರಾಜ್ಯದಲ್ಲಿ ಗೃಹ ಬಳಕೆ ವಿದ್ಯುತ್ ಬಳಕೆದಾರರು ಪ್ರತಿ ತಿಂಗಳು ಸರಾಸರಿ 53 ಯೂನಿಟ್ ಮಾತ್ರ ಉಪಯೋಗಿಸುತ್ತಿದ್ದಾರೆ. ಹೆಚ್ಚುವರಿ 147 ಯುನಿಟ್ ಅನ್ನ ಘೋಷಣೆ ಮಾಡಿದರೆ ಅದರ ಬಳಕೆ ಸ್ವರೂಪದ ಬಗ್ಗೆಯೂ ಚರ್ಚಿಸಬೇಕಿದೆ. ಮನೆ ಮಾಲೀಕರು ಹೆಚ್ಚವರಿ ಎಲೆಕ್ಟ್ರಾನಿಕ್ ಉಪಕರಣ ಬಳಸಿದರೇ ಶೇಕಡ 15 ರಿಂದ 20ರಷ್ಟು ಹೆಚ್ಚು ಬಳಕೆ ಮಾಡಬಹುದು. ಹೀಗಾಗಿ 200 ಯೂನಿಟ್ ಬಳಕೆ ವಿಚಾರಕ್ಕೆ ಅರ್ಜಿ ಆಹ್ವಾನ ಹಾಗೂ ಬಿಲ್ ಕಟ್ಟುವ ಮಾದರಿ ಜಾರಿಗೆ ತರಬಹುದು. ಈಗಾಗಲೇ ಇರುವ ದೆಹಲಿ ಮಾಡಲ್ ನಂತೆ ಕಾರ್ಯನಿರ್ವಹಿಸುವುದು ಸಹ ಒಂದು ಆಯ್ಕೆಯಾಗಿ ಪರಿಗಣಿಸಬಹುದು. ವಿದ್ಯುತ್ ಸಬ್ಸಿಡಿ ಬೇಡ ಎಂದು ಸ್ವಯಂ ಪ್ರೇರಿತವಾಗಿ ಕೈ ಬಿಡುವವರನ್ನ ಸಹ ಗುರುತಿಸಬಹುದು. ಈ ರೀತಿ ಸಬ್ಸಿಡಿ ನಿರಾಕರಿಸುವವರು ರಾಜ್ಯದಲ್ಲಿ ಅಂದಾಜು 5 ಲಕ್ಷ ಮಂದಿ ಎಂದು ಗುರುತಿಸಬಹುದಾಗಿದೆ ಎಂದು ಅಧಿಕಾರಿಗಳು ಸುದೀರ್ಘ ವಿವರಣೆ ನೀಡಿದರು

    bescom keb kj george
    Share. Facebook Twitter Pinterest LinkedIn Tumblr Email
    Previous Articleಜನರ ನಡುವೆ ಕೆಲಸ ಮಾಡಲು ‘ಸಮೂಹಶಕ್ತಿ’ ಸಂಕಲ್ಪ | Samooha Shakti
    Next Article ವೇದಿಕೆಯ ಮೇಲೆ ಮುಗ್ಗರಿಸಿ ಬಿದ್ದ ಅಮೇರಿಕಾ ಅಧ್ಯಕ್ಷ
    vartha chakra
    • Website

    Related Posts

    NDA ಮೈತ್ರಿ ಕೂಟ ಸೇರಿದ ಜೆಡಿ ಎಸ್ | JDS

    ಸೆಪ್ಟೆಂಬರ್ 22, 2023

    ವಿದ್ಯುತ್ ಉತ್ಪಾದನೆ ಕುಸಿತ – ಸಿ.ಎಂ. ಅಸಮಾಧಾನ | Bengaluru

    ಸೆಪ್ಟೆಂಬರ್ 22, 2023

    ಕಾವೇರಿ ಕಣ್ಣೀರಿನ ಕತೆ, ಕರ್ನಾಟಕದ ವ್ಯಥೆ! | Cauvery

    ಸೆಪ್ಟೆಂಬರ್ 22, 2023

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕ್ರೀಡೆ
    • ಚುನಾವಣೆ
    • ಚುನಾವಣೆ 2023
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬೆಂಗಳೂರು
    • ಮನರಂಜನೆ
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    NDA ಮೈತ್ರಿ ಕೂಟ ಸೇರಿದ ಜೆಡಿ ಎಸ್ | JDS

    KS&DL ಗೆ ಕಾರ್ಪೊರೇಟ್ ರೂಪ

    ಉದ್ಯೋಗ ಖಾತ್ರಿ‌ ಅವಧಿ ಹೆಚ್ಚಳ ಮಾಡಿ | Employment

    ವಿದ್ಯುತ್ ಉತ್ಪಾದನೆ ಕುಸಿತ – ಸಿ.ಎಂ. ಅಸಮಾಧಾನ | Bengaluru

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • scholding ರಲ್ಲಿ ಇವರೆಲ್ಲ ರಷ್ಯಾಕ್ಕೆ ಬರುವಂತಿಲ್ಲ!
    • mail order prescription drugs from canada ರಲ್ಲಿ Modi ಯನ್ನು ಟೀಕಿಸಿದ ಈ George Soros ಯಾರು?
    • buy instagram followers uk ರಲ್ಲಿ ಅಣ್ಣಾಮಲೈ ಹತ್ತಿರ ಸಿಕ್ಕಿದ್ದು 2 ಜೊತೆ ಬಟ್ಟೆ 2 ಲೀಟರ್ ನೀರು | K Annamalai | BJP
    Latest Kannada News

    NDA ಮೈತ್ರಿ ಕೂಟ ಸೇರಿದ ಜೆಡಿ ಎಸ್ | JDS

    ಸೆಪ್ಟೆಂಬರ್ 22, 2023

    KS&DL ಗೆ ಕಾರ್ಪೊರೇಟ್ ರೂಪ

    ಸೆಪ್ಟೆಂಬರ್ 22, 2023

    ಉದ್ಯೋಗ ಖಾತ್ರಿ‌ ಅವಧಿ ಹೆಚ್ಚಳ ಮಾಡಿ | Employment

    ಸೆಪ್ಟೆಂಬರ್ 22, 2023
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2023
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    ಹಾಲಶ್ರೀ ಪೊಲೀಸರ ಬಲೆಗೆ ಬಿದ್ದಿದ್ದು ಹೇಗೆ ಗೊತ್ತಾ?
    Subscribe