Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೇಸಿಗೆಗೆ ಇಂಧನ ಮಂತ್ರಿ ಜಾರ್ಜ್ ಪ್ಲಾನ್ ಗೊತ್ತಾ
    Viral

    ಬೇಸಿಗೆಗೆ ಇಂಧನ ಮಂತ್ರಿ ಜಾರ್ಜ್ ಪ್ಲಾನ್ ಗೊತ್ತಾ

    vartha chakraBy vartha chakraಫೆಬ್ರವರಿ 18, 20251 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.18:
    ಮುಂಬರುವ ಬೇಸಿಗೆಯಲ್ಲಿ ರಾಜ್ಯದಲ್ಲಿ ವಿದ್ಯುತ್ತಿಗೆ ಯಾವುದೇ ರೀತಿಯ ವ್ಯತ್ಯಯ ಉಂಟಾಗದಂತೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಇಂಧನ ಸಚಿವ ಕೆಜೆ ಜಾರ್ಜ್ ತಿಳಿಸಿದ್ದಾರೆ.
    ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬೇಸಿಗೆಯಲ್ಲಿ ವಿದ್ಯುತ್‌ಗೆ ಶೇ 5ರಿಂದ 10 ರಷ್ಟು ಬೇಡಿಕೆ ಹೆಚ್ಚಾಗಿದೆ. ವಿದ್ಯುತ್ ಕೊರತೆ ನೀಗಿಸಲು ಉತ್ತರಪ್ರದೇಶ ಹಾಗೂ ಪಂಜಾಬ್‌ಗಳಿಂದ‌ ವಿನಿಮಯ ಯೋಜನೆಯಡಿ ಖರೀದಿಗೆ ನಿರ್ಧರಿಸಲಾಗಿದೆ ಎಂದು ಹೇಳಿದರು.
    ಬೇಸಿಗೆಯಲ್ಲಿ ಉತ್ತರಪ್ರದೇಶ ಹಾಗೂ ಪಂಜಾಬ್ ರಾಜ್ಯದಿಂದ ಪಡೆದ ವಿದ್ಯುತ್‌ ಅನ್ನು ಜೂನ್‌ ಬಳಿಕ ಮರಳಿ ನೀಡಲಾಗುತ್ತದೆ. ಈ ಕುರಿತು ಹಲವು ಸುತ್ತಿನ ಚರ್ಚೆಗಳು ನಡೆದಿವೆ. ಕಳೆದ ವರ್ಷ ಬರ ಪರಿಸ್ಥಿತಿ ತಲೆದೋರಿದಾಗಲೂ ಕೃಷಿ ಪಂಪ್‌ಸೆಟ್‌ಗಳಿಗೆ ಒಂದು ಗಂಟೆ ಮಾತ್ರ ವಿದ್ಯುತ್ ಕಡಿತ ಮಾಡಲಾಗಿತ್ತು. ಪ್ರಸಕ್ತ ವರ್ಷ ರಾಜ್ಯದ ಯಾವ ಭಾಗದಲ್ಲಿ ಕೂಡ ಲೋಡ್‌ಶಡ್ಡಿಂಗ್ ಇಲ್ಲ. ಕೃಷಿ ಪಂಪ್‌ ಸೆಟ್‌ಗಳಿಗೆ 7 ಗಂಟೆ ಗುಣಮಟ್ಟದ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ’ ಎಂದು ವಿವರಿಸಿದರು.
    ವಿದ್ಯುತ್ ದರ ಏರಿಕೆ ಗೆ ಸಂಬಂಧಿಸಿದಂತೆ ಎಲ್ಲ ‘ಎಸ್ಕಾಂ’ಗಳು ಪ್ರತಿ ವರ್ಷ ಪ್ರಸ್ತಾವ ಸಲ್ಲಿಕೆ ಮಾಡುತ್ತವೆ.‌ ಕೆಇಆರ್‌ಸಿ ಸಾರ್ವಜನಿಕ ಅಹವಾಲು ಆಲಿಸಿ ನಿರ್ಧಾರ ಕೈಗೊಳ್ಳುತ್ತದೆ. ಕಳೆದ ವರ್ಷ ವಿದ್ಯುತ್ ದರ ಏರಿಕೆ ಮಾಡಿಲ್ಲ. ಕೆಇಆರ್‌ಸಿ ಸೂಚನೆ ಮೇರೆಗೆ ಸರ್ಕಾರದ ನಿರ್ಧಾರ ಹೊರಬೀಳಲಿದೆ‌ ಎಂದರು.
    ಟೆಂಡರ್ ರದ್ದು:
    ಕೃಷಿ ಪಂಪ್‌ಸೆಟ್‌ಗಳಿಗೆ ನಿರಂತರ ವಿದ್ಯುತ್‌ ಪೂರೈಸಲು ಫೀಡರ್‌ ಹಂತದ ಸೌರ ವಿದ್ಯುತ್‌ ಘಟಕ ನಿರ್ಮಿಸುವ ಉದ್ದೇಶದಿಂದ ರೂಪಿಸಿದ ‘ಕುಸುಮ್‌-ಸಿ’ ಯೋಜನೆಯನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು. ಇಲ್ಲವಾದರೆ ಟೆಂಡರ್‌ ರದ್ದುಪಡಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
    ಕುಸುಮ್‌-ಸಿ’ ಯೋಜನೆಯಡಿ ರಾಜ್ಯದಲ್ಲಿ 3 ಸಾವಿರ ಮೆಗಾವ್ಯಾಟ್‌ ವಿದ್ಯುತ್‌ ಉತ್ಪಾದಿಸುವ ಗುರಿ ಹೊಂದಲಾಗಿದೆ. ಪ್ರತಿ ಯೂನಿಟ್‌ ವಿದ್ಯುತ್‌ಗೆ 7 ವೆಚ್ಚವಾಗುತ್ತಿದೆ. ಸೌರ ಶಕ್ತಿ ಬಳಕೆಯಿಂದ ವಿದ್ಯುತ್‌ ಉತ್ಪಾದನಾ ವೆಚ್ಚ ಅರ್ಧದಷ್ಟು ಕಡಿಮೆಯಾಗಲಿದೆ. ಕೃಷಿ ಉದ್ದೇಶಕ್ಕೆ ರೈತರಿಗೆ ನಿರಂತರವಾಗಿ ವಿದ್ಯುತ್ ಪೂರೈಕೆ ಆಗಲಿದೆ. ಇಂತಹ ಯೋಜನೆಯ ಪ್ರಗತಿ ನಿರೀಕ್ಷಿತ ಮಟ್ಟದಲ್ಲಿ ಆಗಿಲ್ಲ’ ಎಂದು ಅಸಮಾಧಾನ ಹೊರಹಾಕಿದರು.
    ‘ಕುಸುಮ್‌-ಸಿ ಯೋಜನೆಗೆ ರಾಜ್ಯದಲ್ಲಿ 774 ಎಕೆರೆ ಭೂಮಿಯ ಅಗತ್ಯವಿದೆ. ಇದರಲ್ಲಿ 320 ಎಕರೆ ಸರ್ಕಾರಿ ಹಾಗೂ 380 ಎಕರೆ ಖಾಸಗಿ ಭೂಮಿ ಗುರುತಿಸಲಾಗಿದೆ. ಘಟಕ ನಿರ್ಮಾಣದ ಹೊಣೆ ಹೊತ್ತಿರುವ ಕಂಪೆನಿಗಳು ಆಸಕ್ತಿ ವಹಿಸಿ ಭೂಮಿ ಪಡೆದುಕೊಳ್ಳಬೇಕು ಎಂದು ತಾಕೀತು ಮಾಡಿದರು.

    Verbattle
    Verbattle
    Verbattle
    ಬೆಂಗಳೂರು ಸರ್ಕಾರ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಹೈಕಮಾಂಡ್ ಗೆ ಯತ್ನಾಳ್ ಹೇಳಿದ್ದೇನು ಗೊತ್ತೆ..
    Next Article ಅಂಗನವಾಡಿ ಮಕ್ಕಳ ಆಹಾರಕ್ಕೆ ಕನ್ನ
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026

    1 ಟಿಪ್ಪಣಿ

    1. Ykypop on ಫೆಬ್ರವರಿ 12, 2026 12:15 ಅಪರಾಹ್ನ

      mgm sportsbook promos betmgm-play betmgm DC

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn ರಲ್ಲಿ ರಾಜ್ಯಪಾಲರಾಗಲಿರುವ ಈಶ್ವರಪ್ಪ | Eshwarappa
    • Qqffll ರಲ್ಲಿ ಶೆಟ್ಟರ್ ಪಕ್ಷ ಬಿಟ್ಟಿದ್ದರಿಂದ ಕಾಂಗ್ರೆಸ್ ಗೆ ಒಳ್ಳೆಯದಾಯಿತಂತೆ | Jagadish Shettar
    • Wyzeev ರಲ್ಲಿ ಬೆಂಗಳೂರಿಗೆ ಯಾಕೆ ಇಂತಹ ಸ್ಥಿತಿ.
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.