Facebook Twitter Instagram
    Vartha Chakra
    • ಸುದ್ದಿ
    • ಬೆಂಗಳೂರು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ರಾಜಕೀಯ
      • ಚುನಾವಣೆ 2023
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • ಅಪರಾಧ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೊಮ್ಮಾಯಿ ಗೇಮ್ ಪ್ಲಾನ್..!!
    ಸುದ್ದಿ

    ಬೊಮ್ಮಾಯಿ ಗೇಮ್ ಪ್ಲಾನ್..!!

    vartha chakraBy vartha chakraಮೇ 12, 2022ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter Pinterest LinkedIn Tumblr Email
    Share
    Facebook Twitter LinkedIn Pinterest Email

    ರಾಜ್ಯ ಬಿಜೆಪಿಯಲ್ಲಿನ ವಿದ್ಯಮಾನಗಳು ಕುತೂಹಲದ ಘಟ್ಟ ತಲುಪಿವೆ. ಸಂಪುಟ ವಿಸ್ತರಣೆ ಕುರಿತಂತೆ ಬಿಕ್ಕಟ್ಟು ಉಂಟಾಗಿರುವ ಬೆನ್ನಲ್ಲೆ ನಾಯಕತ್ವ ಬದಲಾವಣೆ ಪ್ರಸ್ತಾಪವೂ ಕೇಳಿಬಂದಿದ್ದು ಒತ್ತಡಕ್ಕೆ ಸಿಲುಕಿರುವ ಮುಖ್ಯಮಂತ್ರಿ ಬೊಮ್ಮಾಯಿ ಚಾಣಾಕ್ಷ ರಾಜಕೀಯ ನಡೆ ಇಡಲು ಮುಂದಾಗಿದ್ದಾರೆ. ಸಿಎಂ ತಮ್ಮ ಎರಡು ದಿನದ ದೆಹಲಿ ಭೇಟಿಯ ವೇಳೆ ಛಲದಂಕ ಮಲ್ಲನಂತೆ ಕಾದು ಕೇಂದ್ರ ಸಚಿವ ಅಮಿತ್ ಶಾ‌ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿದ್ದಾರೆ. ಇವರಿಬ್ಬರ ಭೇಟಿಗೂ ಮುನ್ನ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ್ದರು
    ಈ ವೇಳೆ ಅವರು ಮುಖ್ಯಮಂತ್ರಿಗಳಿಗೆ ಕಹಿ ಸುದ್ದಿಯೊಂದನ್ನು ಹೇಳಿದ್ದು, ಇದರಿಂದ ವಿಚಲಿತರಾದ ಬೊಮ್ಮಾಯಿ ನಂತರ ಅಮಿತ್ ಶಾ ಅವರನ್ನು ಭೇಟಿ ಮಾಡಿದರು.
    ಹತ್ತು ನಿಮಿಷದ ಈ ಭೇಟಿಯಲ್ಲಿ ಅಮಿತ್ ಶಾ‌ ಅವರಿಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ಕುರಿತ ಕೋರ್ಟ್ ಆದೇಶ ವಿವರಿಸಿ ಸಂಪುಟ ವಿಸ್ತರಣೆಗೆ ಅನುಮತಿ ಕೋರಿದರು.ಆದರೆ ಅಮಿತ್ ಶಾ ಇದಕ್ಕೆ ಯಾವುದೇ ಸ್ಪಷ್ಟ ಪ್ರತಿಕ್ರಿಯೆ ನೀಡದೆ ಸದ್ಯದಲ್ಲೇ ರಾಜಕೀಯ ನಿರ್ಧಾರ ಕೈಗೊಳ್ಳಲಿದ್ದೇವೆ ಎಂದು ಹೇಳಿ ಪಕ್ಷದ ಅಧ್ಯಕ್ಷ ನಡ್ಡಾ ಅವರನ್ನು ಭೇಟಿ ಮಾಡಲು ಸೂಚಿಸಿದರು.
    ಅದರಂತೆ ಸಿಎಂ ಬೊಮ್ಮಾಯಿ ಪಕ್ಷದ ಅಧ್ಯಕ್ಷ ನಡ್ಡಾ ಅವರನ್ನು ಭೇಟಿ ಮಾಡಿದರು. ಈ ವೇಳೆ ನಡ್ಡಾ ಕೂಡಾ ಸಂಪುಟ ವಿಸ್ತರಣೆಯ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇದರಿಂದ ವಿಚಲಿತರಾದ ಸಿಎಂ ಬೇಸರದಿಂದಲೇ ಹೊರ ಬಂದಿದ್ದಾರೆ. ನಂತರದಲ್ಲಿ ಸಂಪುಟ ಸರ್ಜರಿ ಸದ್ಯಕ್ಕಿಲ್ಲ ಎಂದವರು ಇದೀಗ ರಾಜಕೀಯ ದಾಳ ಪ್ರಯೋಗಿಸಲು ಮುಂದಾಗಿದ್ದಾರೆ.
    ಇವರಿಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ವರದಾನವಾಗಿ ಬಂದಿದೆ. ಇದನ್ನಿಟ್ಟುಕೊಂಡ ಈಗ ಸಿಎಂ ಬೊಮ್ಮಾಯಿ ಬಾಕಿಯಿರುವ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸೇರಿದಂತೆ ಹಲವು ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಮುಂದಾಗಿದ್ದಾರೆ.
    ಇದರೊಂದಿಗೆ ವಿಧಾನ ಪರಿಷತ್ ಹಾಗು ರಾಜ್ಯಸಭೆ ಚುನಾವಣೆ ಸಹ ನಡೆಯುತ್ತಿದ್ದು ಈ ಎಲ್ಲಾ ಪ್ರಕ್ರಿಯೆ ಪೂರ್ಣಗೊಳ್ಳಲು ಕನಿಷ್ಟ ಎರಡು ತಿಂಗಳಾದರೂ ಬೇಕು, ಅಲ್ಲಿಯವರೆಗೆ ಪಕ್ಷ ಸಂಪುಟ ವಿಸ್ತರಣೆಯೂ ಸೇರಿದಂತೆ ಯಾವುದೇ ರಾಜಕೀಯ ತೀರ್ಮಾನ ಕೈಗೊಳ್ಳುವುದಿಲ್ಲ ಎನ್ನುವುದು ಸಿಎಂ ಬೊಮ್ಮಾಯಿ ಅವರ ಲೆಕ್ಕಾಚಾರವಾಗಿದೆ.
    ಇದಕ್ಕೆ ಪೂರಕವೆಂಬಂತೆ ದೆಹಲಿಯಿಂದ ಬರುತ್ತಿದ್ದಂತೆ ಸಿಎಂ ಬೊಮ್ಮಾಯಿ ಸ್ಥಳೀಯ ಸಂಸ್ಥೆ ಚುನಾವಣೆ ಕುರಿತಂತೆ ಕೋರ್ಟ್ ನೀಡಿರುವ ಆದೇಶದ ಬಗ್ಗೆ ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವಡಗಿ ಜೊತೆ ಚರ್ಚೆ ನಡೆಸಿದರು.
    ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ, ಸ್ಥಳೀಯ ಸಂಸ್ಥೆ ಚುನಾವಣೆ ಸಂಬಂಧ ಸಚಿವರು ಹಾಗು ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸುತ್ತೇವೆ. ಸುಪ್ರೀಂ ಕೋರ್ಟ್ ನ ಎರಡೂ ತೀರ್ಪುಗಳ ಬಗ್ಗೆಯೂ ಚರ್ಚಿಸುತ್ತೇವೆ. ಒಬಿಸಿ ಮೀಸಲಾತಿ ಇಟ್ಟುಕೊಂಡೇ ಚುನಾವಣೆ ಮಾಡಬೇಕು ಎಂಬ ಬಗ್ಗೆ ಸುಪ್ರೀಂ ಕೋರ್ಟ್‌ನ ಎರಡು ತೀರ್ಪಿನ ಬಗ್ಗೆ ವಿಶ್ಲೇಷಣೆ ಮಾಡುತ್ತೇವೆ ಎಂದರು.
    ಹಿಂದುಳಿದ ವರ್ಗಗಳಿಗೆ ಮೀಸಲಾತಿ ಸಂಬಂಧ ಈಗಾಗಲೇ ಸಮಿತಿ ಕೂಡ ನೇಮಿಸಿದ್ದೇವೆ. ಅದರ ಬಗ್ಗೆಯೂ ಹಾಗು ವಿಪಕ್ಷ ನಾಯಕರ ಪತ್ರದ ಬಗ್ಗೆ ಚರ್ಚೆ ಮಾಡುತ್ತೇವೆ. ಮುಂದೆ ಯಾವ ನಿಲುವನ್ನು ತೆಗೆದುಕೊಳ್ಳಬೇಕು ಎಂದು ಕಾನೂನು ತಜ್ಞರ ಜೊತೆ ಚರ್ಚಿಸಿ ತೀರ್ಮಾನ ಮಾಡುತ್ತೇವೆ ಎಂದರು.
    ಇದುವರೆಗಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಸಂವಿಧಾನದ ಪ್ರಕಾರವೇ ಓಬಿಸಿಯವರಿಗೆ ಪ್ರಾತಿನಿಧ್ಯ ಕೊಡುತ್ತಾ ಬಂದಿದ್ದೇವೆ. ಈಗ ಒಬಿಸಿ ಇಟ್ಟುಕೊಂಡೇ ಚುನಾವಣೆ ಮಾಡಬೇಕೆಂಬುದು ನಮ್ಮ ಉದ್ದೇಶ ಆಗಿದೆ. ಹೀಗಾಗಿ ಒಬಿಸಿ ಇಟ್ಟುಕೊಂಡು ಯಾವ ರೀತಿ ಚುನಾವಣಾ ಪ್ರಕ್ರಿಯೆ ಮಾಡಬಹುದು ಎಂಬುದರ ಬಗ್ಗೆ ಚಿಂತನೆ ನಡೆದಿದೆ ಎಂದು ಹೇಳಿದರು.

    bommayi
    Share. Facebook Twitter Pinterest LinkedIn Tumblr Email
    Previous Articleರಾಜ್ಯಸಭೆ ಚುನಾವಣೆ
    Next Article ಲಿಪ್ ಸ್ಟಿಕ್ ಗೆ ಹೋಯ್ತು 3ಲಕ್ಷ
    vartha chakra
    • Website

    Related Posts

    Electionಗೆ ಮುನ್ನವೇ DK ವ್ಯೂಹ ಛಿದ್ರ

    ಮಾರ್ಚ್ 21, 2023

    Facebookನಿಂದ ಮನೆಗೆ ಹೊರಟ10000 ಮಂದಿ #meta #jobs

    ಮಾರ್ಚ್ 15, 2023

    ರಾಮನಗರದಲ್ಲಿ ನಿಖಿಲ್ ಸ್ಪರ್ಧೆ Doubt! #jds #kumaraswamy #ramanagara

    ಮಾರ್ಚ್ 15, 2023

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕ್ರೀಡೆ
    • ಚುನಾವಣೆ
    • ಚುನಾವಣೆ 2023
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬೆಂಗಳೂರು
    • ಮನರಂಜನೆ
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಮಾಜ
    • ಸಮೂಹ ಶಕ್ತಿ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    BJP ಸೇರಿದ ರೋಷನ್ ಬೇಗ್! #bjp #karnataka #congressparty #elections

    ರಸ್ತೆಯಲ್ಲಿ ಬೆತ್ತಲಾಗಿ ಓಡಿದ ಸಿನಿಮಾ ನಟಿ

    Electionಗೆ ಮುನ್ನವೇ DK ವ್ಯೂಹ ಛಿದ್ರ

    BJP ಸಿಎಂ ಅಭ್ಯರ್ಥಿ ಯಾರು?

    About
    About

    We're social, connect with us:

    Facebook Twitter YouTube
    Software Training
    Recent Posts
    • BJP ಸೇರಿದ ರೋಷನ್ ಬೇಗ್! #bjp #karnataka #congressparty #elections ಮಾರ್ಚ್ 21, 2023
    • ರಸ್ತೆಯಲ್ಲಿ ಬೆತ್ತಲಾಗಿ ಓಡಿದ ಸಿನಿಮಾ ನಟಿ ಮಾರ್ಚ್ 21, 2023
    • Electionಗೆ ಮುನ್ನವೇ DK ವ್ಯೂಹ ಛಿದ್ರ ಮಾರ್ಚ್ 21, 2023
    • BJP ಸಿಎಂ ಅಭ್ಯರ್ಥಿ ಯಾರು? ಮಾರ್ಚ್ 20, 2023
    • ರಮೇಶ್ ಜಾರಕಿಹೊಳಿಗೆ BJP ಗೇಟ್ ಪಾಸ್? ಮಾರ್ಚ್ 19, 2023
    • ಆರೋಗ್ಯ ನೌಕರರ ಮೇಲೆ ESMA ಬ್ರಹ್ಮಾಸ್ರ್ತ ಮಾರ್ಚ್ 19, 2023
    • ಹಿರಿಯೂರಿನಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪೂರ್ಣಿಮಾ ಶ್ರೀನಿವಾಸ್ ಕಣಕ್ಕಿಳಿಯಲಿದ್ದಾರೆ ಮಾರ್ಚ್ 18, 2023
    • ದಾರಿ ಕಾಣದಾದ ಸಿದ್ದರಾಮಯ್ಯ #siddaramaiah #congress #kharge ಮಾರ್ಚ್ 18, 2023
    • Ola ಮತ್ತು Uber ಗೆ ಸೆಡ್ಡು ಹೊಡೆದ ನಮ್ಮ ಯಾತ್ರಿ ಮಾರ್ಚ್ 18, 2023
    • ಬಯಲಾಯ್ತು Express ಹೆದ್ದಾರಿ ‌ಬಣ್ಣ! ಮಾರ್ಚ್ 18, 2023
    Popular Posts

    BJP ಸೇರಿದ ರೋಷನ್ ಬೇಗ್! #bjp #karnataka #congressparty #elections

    ಮಾರ್ಚ್ 21, 2023

    ರಸ್ತೆಯಲ್ಲಿ ಬೆತ್ತಲಾಗಿ ಓಡಿದ ಸಿನಿಮಾ ನಟಿ

    ಮಾರ್ಚ್ 21, 2023

    Electionಗೆ ಮುನ್ನವೇ DK ವ್ಯೂಹ ಛಿದ್ರ

    ಮಾರ್ಚ್ 21, 2023
    Copyright © 2023 Vartha Chakra
    • ಸುದ್ದಿ
    • ಬೆಂಗಳೂರು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ರಾಜಕೀಯ
      • ಚುನಾವಣೆ 2023
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • ಅಪರಾಧ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    A free roll of viewpoints in a political interview.
    H Vishwanath in Bicchu Maatu #jds #congressparty #kpcc #dkshivakumar #mysore #mysuru #siddaramaiah
    Subscribe