Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಕ್ಕಳ ಮಾರಾಟ ಜಾಲ ಪತ್ತೆ.
    Trending

    ಮಕ್ಕಳ ಮಾರಾಟ ಜಾಲ ಪತ್ತೆ.

    vartha chakraBy vartha chakraಜೂನ್ 10, 2024ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಳಗಾವಿ,ಜೂ.10-
    ಮಕ್ಕಳ ಮಾರಾಟ ಜಾಲವನ್ನು ಬೇಧಿಸಿರುವ ಬೆಳಗಾವಿಯ ಮಾಳಮಾರುತಿ ಠಾಣೆ ಪೊಲೀಸರು ಆರ್‌ಎಂಪಿ ವೈದ್ಯ ಸೇರಿ ಐವರನ್ನು ಬಂಧಿಸುವಲ್ಲಿ
    ಯಶಸ್ವಿಯಾಗಿದ್ದಾರೆ.
    ಜಾಲದ ಕಿಂಗ್ ಪಿನ್ ಕಿತ್ತೂರಿ‌ನ ಡಾ.ಅಬ್ದುಲ್ ಗಫಾರ್ ಲಾಡಖಾನ್, ನೇಗಿನಹಾಳದ ಮಹಾದೇವಿ ಜೈನ್, ಚಂದನ ಸುಬೇದಾರ್, ಪವಿತ್ರಾ ಹಾಗೂ ಪ್ರವೀಣ್ ಬಂಧಿತ ಆರೋಪಿಗಳಾಗಿದ್ದಾರೆ.
    ಆರೋಪಿಗಳು ಮದುವೆಗೂ ಮುನ್ನ ಗರ್ಭಿಣಿಯಾಗಿ ಗರ್ಭಪಾತ ಮಾಡಿಸಿಕೊಳ್ಳಬೇಕು ಎನ್ನುವ ಯುವತಿಯರನ್ನು ಹಾಗೂ ಬಡತನದ ಕಾರಣಕ್ಕೆ ಗರ್ಭಪಾತ ಮಾಡಿಸಿಕೊಳ್ಳಲು ಬರುತ್ತಿದ್ದವರನ್ನು ಗುರಿಯಾಗಿಸಿಕೊಂಡು ಅವರ ಮನವೊಲಿಸಿ ಕೃತ್ಯ ನಡೆಸುತ್ತಿದ್ದರು.
    ಏಳು, ಎಂಟು ತಿಂಗಳ ಅವಿವಾಹಿತ ಗರ್ಭಿಣಿಯರ ಆಪರೇಷನ್ ಮಾಡಿ ಮಗು ರಕ್ಷಣೆ ಮಾಡಿ ತಾವೇ ಸಾಕುವುದಾಗಿ ಹೇಳಿ ಮಗುವನ್ನು ತಮ್ಮ ಬಳಿಯೇ ಉಳಿಸಿಕೊಳ್ಳುತ್ತಿದ್ದರು.ಆನಂತರ ಮಗುವನ್ನು ಮಕ್ಕಳಿಲ್ಲದವರಿಗೆ ಮಾರಾಟ ಮಾಡಿ ಹಣ ಮಾಡುತ್ತಿದ್ದರು. ಈ ಬಗ್ಗೆ ಖಚಿತವಾದ ಮಾಹಿತಿಯನ್ನು ಆಧರಿಸಿ ಮಕ್ಕಳ ಮಾರಾಟ ಜಾಲವನ್ನು ಪತ್ತೆ ಮಾಡಿ ಆರೋಪಿಗಳನ್ನು ಬಂಧಿಸಿದ್ದಾರೆ.
    ಇದಲ್ಲದೆ ಗರ್ಭಿಣಿಯಾಗಿ ಮಗುವನ್ನು ಸಾಕಲಾಗದೆ ನರಳಾಡುವ ಅಸಹಾಯಕ ಬಡ ಹೆಣ್ಣು ಮಕ್ಕಳನ್ನು ಗುರಿಯಾಗಿಸಿಕೊಂಡು ಆರ್‌ಎಂಪಿ ವೈದ್ಯ ಅಬ್ದುಲ್ ಆಪರೇಷನ್ ಮಾಡಿ ಮಗುವನ್ನು ತಾವೇ ಸಾಕುವುದಾಗಿ ಹೇಳಿ ಮಗುವನ್ನು ರಕ್ಷಿಸುತ್ತಿದ್ದರು. ಬಳಿಕ ಎರಡ್ಮೂರು ತಿಂಗಳು ಮಗು ಆರೈಕೆ ಮಾಡಿ ಮಗುವನ್ನು ಅಕ್ರಮವಾಗಿ ಮಾರಾಟ ಮಾಡಲಾಗುತ್ತಿತ್ತು. ಮಕ್ಕಳಿಲ್ಲದವರಿಗೆ ಅರವತ್ತು ಸಾವಿರದಿಂದ ಒಂದೂವರೆ ಲಕ್ಷ ಹಣಕ್ಕೆ ಮಾರಾಟ ಮಾಡಲಾಗುತ್ತಿತ್ತು ಎಂದು ಪೊಲೀಸರು ಹೇಳಿದ್ದಾರೆ.
    ಮಕ್ಕಳ ಮಾರಾಟ ಜಾಲದ ವಿಚಾರ ತಿಳಿದು ಮಕ್ಕಳ ಮಾರಾಟ ಗ್ಯಾಂಗ್ ಹಿಂದೆ ಬಿದ್ದಿದ್ದ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸರ್ಕಾರಿ ಮತ್ತು ಕೇಂದ್ರ ಸಂಯೋಜಕರ ತಂಡವು ಪೊಲೀಸರ ನೆರವಿನೊಂದಿಗೆ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸರ್ಕಾರಿ ಮತ್ತು ಕೇಂದ್ರ ಸಂಯೋಜಕರ ತಂಡ ಈ ಜಾಲವನ್ನು ಭೇದಿಸಲು ಮುಂದಾದ ತಂಡ ತಾವು ಮಗು ಖರೀದಿ ಮಾಡಲು ಬಂದಿರುವಂತೆ ತಂತ್ರ ರೂಪಿಸಿದೆ. ಈ ತಂಡ ಮೊದಲು ಮಕ್ಕಳ ಮಾರಾಟ ಜಾಲದ ಮಹಾದೇವಿ ಜೈನ್ ಅವರನ್ನು ಸಂಪರ್ಕಿಸಿದೆ.
    ಈ ವೇಳೆ ಆರೋಪಿ ಮಹಾದೇವಿ 1ಲಕ್ಷ 40 ಸಾವಿರ ರೂಗೆ ಮಗು ನೀಡುವುದಾಗಿ ಹಣಕ್ಕೆ ಡಿಮ್ಯಾಂಡ್ ಮಾಡಿದ್ದಳು. ಇದಕ್ಕೆ ಒಪ್ಪಿ ಬೆಳಗಾವಿಯ ರಾಮತೀರ್ಥನಗರಕ್ಕೆ ಮಗು ತರುವಂತೆ ಅಧಿಕಾರಿಗಳು ಹೇಳಿದ್ದರು.
    ಈ ವೇಳೆ ಮಗುವಿನ ಜೊತೆಗೆ ಬಂದು ಮಹಾದೇವಿ ಸಿಕ್ಕಿಬಿದ್ದಿದೆ. ಕಿಂಗ್ ಪಿನ್ ವೈದ್ಯ ಅಬ್ದಲ್ ಗಫಾರ್ ಖಾನ್ ನಿಂದ ಅರವತ್ತು ಸಾವಿರಕ್ಕೆ ಮಗು ಖರೀದಿ ಮಾಡಿದ್ದ ಮಹಾದೇವಿ ಅಲಿಯಾಸ್ ಪ್ರಿಯಾಂಕಾ ಜೈನ್, ಬಳಿಕ 1ಲಕ್ಷ 40ಸಾವಿರ ಹಣಕ್ಕೆ ಮಗು ಮಾರಾಟ ಮಾಡಲು ಯತ್ನಿಸಿ ಜೈಲು ಸೇರಿದ್ದಾರೆ.

    crime Government Karnataka News Trending Varthachakra ನ್ಯಾಯ ಮದುವೆ
    Share. Facebook Twitter Pinterest LinkedIn Tumblr Email WhatsApp
    Previous Articleಕ್ಷುಲ್ಲಕ ಕಾರಣಕ್ಕೆ ಕಾರು ಹರಿಸಿ ಕೊಲೆ.
    Next Article ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ವಿನೋದ್ ತಾವ್ಡೆ ನೇಮಕ ಸಾಧ್ಯತೆ.
    vartha chakra
    • Website

    Related Posts

    ಬಾಲಿವುಡ್ ಬೆಡಗಿ ತಮನ್ನಾ ಗೆ 6.2 ಕೋಟಿ !

    ಮೇ 22, 2025

    ಪರಮೇಶ್ವರ್ ವಿರುದ್ಧ ಇಡಿ ದಾಳಿ ಯಾಕೆ ಗೊತ್ತಾ ?

    ಮೇ 22, 2025

    ಬೆಂಗಳೂರಿಗೆ ಕುಮಾರಸ್ವಾಮಿ ಬಂಪರ್ ಕೊಡುಗೆ.

    ಮೇ 22, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಾಲಿವುಡ್ ಬೆಡಗಿ ತಮನ್ನಾ ಗೆ 6.2 ಕೋಟಿ !

    ಪರಮೇಶ್ವರ್ ವಿರುದ್ಧ ಇಡಿ ದಾಳಿ ಯಾಕೆ ಗೊತ್ತಾ ?

    ಬೆಂಗಳೂರಿಗೆ ಕುಮಾರಸ್ವಾಮಿ ಬಂಪರ್ ಕೊಡುಗೆ.

    ಅಲೋಕ್ ಕುಮಾರ್ Promotion ಗೆ ಇಲ್ಲ, ಯಾಕೆ ಗೊತ್ತಾ ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • https://boost-your-site-with-homepage-backlinks.us/a62e37ddae8fc802b4e65355a7164734-show.html ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • Philliphig ರಲ್ಲಿ ಮುನಿರತ್ನ ವಿರುದ್ಧ ಎಸ್ ಐ ಟಿ ಬೇಕು.
    • tiktok-ads-agency-account.org_AgomE ರಲ್ಲಿ ಬೆಂಗಳೂರಿನ ಚಿರತೆ ಪಡೆ ಕಾರ್ಯಾರಂಭ | Leopard Task Force
    Latest Kannada News

    ಬಾಲಿವುಡ್ ಬೆಡಗಿ ತಮನ್ನಾ ಗೆ 6.2 ಕೋಟಿ !

    ಮೇ 22, 2025

    ಪರಮೇಶ್ವರ್ ವಿರುದ್ಧ ಇಡಿ ದಾಳಿ ಯಾಕೆ ಗೊತ್ತಾ ?

    ಮೇ 22, 2025

    ಬೆಂಗಳೂರಿಗೆ ಕುಮಾರಸ್ವಾಮಿ ಬಂಪರ್ ಕೊಡುಗೆ.

    ಮೇ 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಅಂದು ಇಮ್ಮಡಿ ಪುಲಿಕೇಶಿ ಇಂದು ಸಿದ್ದು ಸರ್ಕಾರ #siddaramaiah #dkshivakumar #congress #pawankalyan #kpcc
    Subscribe