ಬೆಂಗಳೂರು,ಜು.11-ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿ ಸರಿಯಾದ ಊಟ ನಿದ್ದೆಯಿಲ್ಲದೇ ಕಂಗಾಲಾಗಿರುವ ನಟ ದರ್ಶನ್ ರನ್ನು ಅವರ ಪತ್ನಿ, ಮಗ ಸೇರಿದಂತೆ ಕುಟುಂಬಸ್ಥರು ಭೇಟಿ ಮಾಡಿದ್ದಾರೆ.ದರ್ಶನ್ ಗೆ ಪತ್ನಿ ವಿಜಯಲಕ್ಷ್ಮಿ ಧೈರ್ಯ ತುಂಬಿದರೆ, ಅಪ್ಪನ ಸ್ಥಿತಿ ಕಂಡು ಮಗ ವಿನೀಶ್ ಕಣ್ಣೀರು ಹಾಕಿದ್ದಾನೆ.
ಜೈಲಿನಲ್ಲಿರುವ ದರ್ಶನ್ ಗೆ ಬಟ್ಟೆ, ಹಣ್ಣುಗಳನ್ನು ನೀಡಿದ ಮಗ ಕಣ್ಣೀರು ಹಾಕಿದ್ದಾನೆ. ಮಗನನ್ನು ಅಪ್ಪಿಕೊಂಡು ದರ್ಶನ್ ಕೂಡ ಕಣ್ಣೀರು ಹಾಕಿ ಬಾವುಕರಾಗಿದ್ದಾರೆ.
ಪತ್ನಿಯ ಬಳಿ ಜೈಲೂಟ ಮಾಡಲು ಆಗುತ್ತಿಲ್ಲ ಎಂದು ದರ್ಶನ್ ಹೇಳಿದ್ದಾರೆ. ವಕೀಲರ ಮೂಲಕ ಕೋರ್ಟ್ನಲ್ಲಿ ಈ ಬಗ್ಗೆ ಅರ್ಜಿ ಸಲ್ಲಿಕೆ ಮಾಡಲಾಗಿದೆ ಎಂದು ದರ್ಶನ್ಗೆ ವಿಜಯಲಕ್ಷ್ಮಿ ಮಾಹಿತಿ ನೀಡಿದ್ದಾರೆ. ಸದ್ಯ ಮನೆ ಊಟ ಕೊಡುವ ಬಗ್ಗೆ ಕೋರ್ಟ್ನಲ್ಲಿ ಅರ್ಜಿ ವಿಚಾರಣೆ ನಡೆಯುತ್ತಿದೆ. ಜುಲೈ 18ರಂದು ಈ ಬಗ್ಗೆ ನಿರ್ಧಾರ ಆಗಲಿದೆ.
ಜಾಮೀನು ಪ್ರಕ್ರಿಯೆ ಬಗ್ಗೆ ಕುಟುಂಬಸ್ಥರ ಜತೆಗೆ ಚರ್ಚೆ ಮಾಡಿದ ದರ್ಶನ್ ಮಗನನ್ನು ತೊಡೆಯ ಮೇಲೆ ಕೂರಿಸಿಕೊಂಡು ಕೆಲಹೊತ್ತು ಮಾತನಾಡಿಸಿದ್ದಾರೆ. ಮಗನನ್ನು ಕಂಡು ಕೊಂಚ ನಿರಾಳವಾಗಿದ್ದಾರೆ. ಮತ್ತೆ ರಾತ್ರಿಯಾಗುತ್ತಿದ್ದಂತೆ ಮೌನಕ್ಕೆ ಶರಣಾಗಿದ್ದಾರೆ. ಒಂದು ಕಡೆ ಜಿಮ್ನಲ್ಲಿ ವರ್ಕೌಟ್ ಇಲ್ಲ, ಸರಿಯಾದ ಆಹಾರ ಕೂಡ ಇಲ್ಲ. ಇದರಿಂದ ತೂಕ ಕಳೆದುಕೊಂಡು ಮಾನಸಿಕವಾಗಿ ದರ್ಶನ್ ಕುಗ್ಗಿ ಹೋಗುತ್ತಿದ್ದಾರೆ. ಇತರ ಜೈಲು ಸಿಬ್ಬಂದಿ ಜೊತೆ ಅವರು ಬರೆಯುತ್ತಿಲ್ಲ.
ಜೈಲೂಟದಿಂದಾಗಿ ಫುಡ್ ಪಾಯಿಸನಿಂಗ್ ಹಾಗೂ ಅತಿಸಾರ ಆಗುತ್ತಿದೆ. ಮನೆಯೂಟ ತರಿಸಿಕೊಳ್ಳಲು ಅನುಮತಿ ನೀಡಬೇಕು ಎಂದು ದರ್ಶನ್ ಪರ ವಕೀಲರು ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದು,ಅದರ ವಿಚಾರಣೆ ಜು.18ರಂದು ನಡೆಯಲಿದೆ.
Previous Articleಪೊಲೀಸ್ ಬಲೆಗೆ ಬಿದ್ದ ಗಿಚ್ಚಿಗಿಲಿ ಸ್ಪರ್ಧಿ.
Next Article ಸರ್ಕಾರಿ ನೌಕರರ ಬ್ರಹ್ಮಾಂಡ ಭ್ರಷ್ಟಾಚಾರ ಪತ್ತೆ.

1 ಟಿಪ್ಪಣಿ
Нужен трафик и лиды? авигрупп SEO-оптимизация, продвижение сайтов и реклама в Яндекс Директ: приводим целевой трафик и заявки. Аудит, семантика, контент, техническое SEO, настройка и ведение рекламы. Работаем на результат — рост лидов, продаж и позиций.