Facebook Twitter Instagram
    Vartha Chakra
    • ಸುದ್ದಿ
    • ಬೆಂಗಳೂರು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ರಾಜಕೀಯ
      • ಚುನಾವಣೆ 2023
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • ಅಪರಾಧ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಠಾಧೀಶರಿಗೆ ಬಂಪರ್…
    ಸುದ್ದಿ

    ಮಠಾಧೀಶರಿಗೆ ಬಂಪರ್…

    vartha chakraBy vartha chakraಏಪ್ರಿಲ್ 11, 2022ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter Pinterest LinkedIn Tumblr Email
    Share
    Facebook Twitter LinkedIn Pinterest Email

    ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿರುವಾಗಲೆಲ್ಲಾ ವಿವಿಧ ಜಾತಿಯ ಮಠಗಳಿಗೆ ಭರಪೂರ ಕೊಡುಗೆ ನೀಡಿ ಮಠಾಧೀಶರ ಒಲೈಕೆಗೆ ಯತ್ನಿಸುವುದು ವಾಡಿಕೆ. ಪ್ರತಿ ವರ್ಷ ಬಜೆಟ್ ನಲ್ಲಿ ಮಠಗಳಿಗೆ ಅನುದಾನ ಪ್ರಕಟಿಸುವ ಪರಂಪರೆಗೆ ಮಾಜಿ ಸಿಎಂ ಯಡಿಯೂರಪ್ಪ ನಾಂದಿ ಹಾಡಿದ್ದರು.
    ಹಾಗೆಂದ ಮಾತ್ರಕ್ಕೆ ಯಡಿಯೂರಪ್ಪ ಮಾತ್ರ ಮಠ-ಮಾನ್ಯಗಳಿಗೆ ಅನುದಾನ ನೀಡಿದವರಲ್ಲ. ಸಿದ್ದರಾಮಯ್ಯ ಸೇರಿದಂತೆ ಎಲ್ಲಾ ಸಿಎಂ ಗಳು‌ ನೀಡಿದ್ದಾರೆ‌ ಆದರೆ ಇವರೆಲ್ಲಾ ನಿರ್ದಿಷ್ಟ ಮಾನದಂಡ ಅನುಸರಿಸಿ ಅನುದಾನ ಬಿಡುಗಡೆ‌ ಮಾಡುತ್ತಿದ್ದರು. ಯಡಿಯೂರಪ್ಪ ಮಾತ್ರ ಇಂತಹ ನಿಯಮಗಳ ಗೋಜಿಗೆ ಹೋಗದೆ ಜಾತಿವಾರು ಅನುದಾನ ಬಿಡುಗಡೆ ಮಾಡಿದರು.
    ನಂತರದ ಎಲ್ಲಾ ಬಿಜೆಪಿ ಸಿಎಂ ಗಳು ಇದನ್ನೇ ಪಾಲಿಸಿದರು. ಆದರೆ, ಬಸವರಾಜ ಬೊಮ್ಮಾಯಿ ಮಾತ್ರ ಇದಕ್ಕೆ ಅಪವಾದ ಎಂದು ಹೇಳಲಾಗಿತ್ತು. ಯಾಕೆಂದರೆ ತಮ್ಮ ಬಜೆಟ್ ನಲ್ಲಿ ಇಂತಹ ಅನುದಾನ ನೀಡಿರಲಿಲ್ಲ ಇದು ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಗೆ‌ ಪಾತ್ರವಾಗಿತ್ತು. ಆದರೆ ಇದೆಲ್ಲಾ ಕೆಲವು ದಿನಗಳು ಮಾತ್ರ .ಇದೀಗ ಇವರು ಕೂಡಾ ಯಡಿಯೂರಪ್ಪ ಹಾದಿ ಹಿಡಿದಿದ್ದಾರೆ.
    ಬಜೆಟ್ ಎಲ್ಲಾ ಮುಗಿದ ನಂತರ ವಿಶೇಷ ಪ್ರಕರಣವೆಂದು ಹೇಳಿ ಅನುದಾನ ಬಿಡುಗಡೆ ಮಾಡಿದ್ದಾರೆ.ಅದು ಅಷ್ಟಿಷ್ಟಲ್ಲ ಬರೋಬ್ಬರಿ 119 ಕೋಟಿ ರೂಪಾಯಿ ಹಿಂದುಳಿದ ,ದಲಿತ ಸಮಾಜದ ವಿವಿಧ ಮಠಗಳ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ರಾಜ್ಯದ 65 ಮಠಗಳ ಶಿಕ್ಷಣ ಸಂಸ್ಥೆಗಳಿಗೆ ಒಟ್ಟು 119 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಅದೇಶ ಹೊರಡಿಸಲಾಗಿದೆ. ಕಾಗಿನೆಲೆ ಮಹಾಸಂಸ್ಥಾನ, ಶಿವಯೋಗಿ ಶ್ರೀ ಸಿದ್ದರಾಮೇಶ್ವರ ಮಹಾಸಂಸ್ಥಾನ ಮಠ, ಶಿವಶರಣ ಶ್ರೀ ಮಾದಾರ ಚನ್ನಯ್ಯ ಗುರುಪೀಠ, ಜಗದ್ಗುರು ಅಖಿಲ ಕುಂಚಿಟಿಗ ಮಹಾಸಂಸ್ಥಾನ ಮಠ, ವಾಲ್ಮೀಕಿ ಗುರುಪೀಠಗಳಿಗೆ ತಲಾ 5 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ಮಾಚಿದೇವ ಮಹಾಸಂಸ್ಥಾನ ಮಠ, ಯಾದವ ಮಹಾಸಂಸ್ಥಾನ ಮಠ, ಹಡಪದ ಅಪ್ಪಣ್ಣ ಗುರುಪೀಠ, ಕುಂಬಾರ ಗುರುಪೀಠ, ಶ್ರೀ ನಾರಾಯಣ ಗುರು ಮಹಾಸಂಸ್ಥಾನ, ಶ್ರೀ ಮಹಾಲಕ್ಷ್ಮಿ ತಿಗಳರ ಮಹಾಸಂಸ್ಥಾನ ಟ್ರಸ್ಟ್, ಭಗವದ್ ರಾಮಾನುಜ ಟ್ರಸ್ಟ್, ನಿಕೇತನ ಎಜುಕೇಷನ್ ಟ್ರಸ್ಟ್, ಆನಂದಮಯ ಟ್ರಸ್ಟ್‌ಗೆ ತಲಾ 3 ಕೋಟಿ ರೂ. ನೀಡಲಾಗಿದೆ.
    ಕಾಗಿನೆಲೆ ಮಹಾಸಂಸ್ಥಾನದ ಶಾಖಾಮಠ, ವನಶ್ರೀ ಜಯದೇವ ಟ್ರಸ್ಟ್, ಛಲವಾದಿ ಗುರುಪೀಠ, ನಿಜಶರಣ ಅಂಬಿಗರ ಚೌಡಯ್ಯ ಗುರುಪೀಠ, ಮೇದಾರ ಕೇತೇಶ್ವರ ಮಠ, ಎಸ್.ಜೆ.ಎಸ್.ಮಹಾಸಂಸ್ಥಾನ, ಮುದ್ಗರ ಟ್ರಸ್ಟ್, ಶಿವಯೋಗಿ ಶ್ರೀ ಸಿದ್ದೇಶ್ವರ ಸ್ವಾಮಿ ಟ್ರಸ್ಟ್, ಹೇಮವೇಮ ಸದ್ದಾವನ ಪೀಠಕ್ಕೆ ತಲಾ 2 ಕೋಟಿ ರೂ. ಅನುದಾನ ಒದಗಿಸಲಾಗಿದೆ.
    ಜಗದ್ಗುರು ಗುರುಸಿದ್ದೇಶ್ವರ ಬೃಹನ್ಮಠ, ಬೃಂಗೇಶ್ವರ ಮಠ, ಸಿದ್ದಶ್ರೀ ಸಂಸ್ಥೆ, ಸವಿತಾ ಪೀಠ, ಸರೂರ ಮಹಾಸಂಸ್ಥಾನ ಶ್ರೀ ಜಗದ್ಗುರು ರೇವಣಸಿದ್ದೇಶ್ವರ ಗುರುಪೀಠ ಟ್ರಸ್ಟ್, ಅಮೋಘ ಸಿದ್ದೇಶ್ವರ ಮಠ ಟ್ರಸ್ಟ್, ಗುರು ಸೋಮೇಶ್ವರ ಪ್ರತಿಷ್ಠಾನ, ಅದಿಶಕ್ತಿ ಮಹಾಸಂಸ್ಥಾನ ಮಠ, ಮಹಿಳಾ ಮಠಾಧೀಶರ ಸಂಸತ್, ಜಗದ್ಗುರು ಗೌಳಿ ಗುರುಪೀಠ ಮಹಾಸಂಸ್ಥಾನ ಮಠ, ಸದ್ಗುರು ಪರಮಹಂಸ ವಿದ್ಯಾವರೇಣ್ಯ ಯೋಗೇಶ್ವರ ಪಾರಮಾರ್ಥ ವಿಶ್ವಸ್ಥ ಧಾರ್ಮಿಕ ಟ್ರಸ್ಟ್ ಸೇರಿದಂತೆ ಇತರೆ ಮಠಗಳ ಶಿಕ್ಷಣ ಸಂಸ್ಥೆಗಳಿಗೆ ತಲಾ ಒಂದು ಕೋಟಿ ರೂ. ನೀಡಿ ಸರ್ಕಾರ ಆದೇಶಿಸಿದೆ.

    #budget #cast #yediyurappa
    Share. Facebook Twitter Pinterest LinkedIn Tumblr Email
    Previous Articleಕೊಲೆ ಬೆದರಿಕೆ
    Next Article ಜ್ಞಾನೇಂದ್ರ ಖಾತೆ ಬದಲಾವಣೆ..?
    vartha chakra
    • Website

    Related Posts

    Electionಗೆ ಮುನ್ನವೇ DK ವ್ಯೂಹ ಛಿದ್ರ

    ಮಾರ್ಚ್ 21, 2023

    Facebookನಿಂದ ಮನೆಗೆ ಹೊರಟ10000 ಮಂದಿ #meta #jobs

    ಮಾರ್ಚ್ 15, 2023

    ರಾಮನಗರದಲ್ಲಿ ನಿಖಿಲ್ ಸ್ಪರ್ಧೆ Doubt! #jds #kumaraswamy #ramanagara

    ಮಾರ್ಚ್ 15, 2023

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕ್ರೀಡೆ
    • ಚುನಾವಣೆ
    • ಚುನಾವಣೆ 2023
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬೆಂಗಳೂರು
    • ಮನರಂಜನೆ
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಮಾಜ
    • ಸಮೂಹ ಶಕ್ತಿ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    BJP ಸೇರಿದ ರೋಷನ್ ಬೇಗ್! #bjp #karnataka #congressparty #elections

    ರಸ್ತೆಯಲ್ಲಿ ಬೆತ್ತಲಾಗಿ ಓಡಿದ ಸಿನಿಮಾ ನಟಿ

    Electionಗೆ ಮುನ್ನವೇ DK ವ್ಯೂಹ ಛಿದ್ರ

    BJP ಸಿಎಂ ಅಭ್ಯರ್ಥಿ ಯಾರು?

    About
    About

    We're social, connect with us:

    Facebook Twitter YouTube
    Software Training
    Recent Posts
    • BJP ಸೇರಿದ ರೋಷನ್ ಬೇಗ್! #bjp #karnataka #congressparty #elections ಮಾರ್ಚ್ 21, 2023
    • ರಸ್ತೆಯಲ್ಲಿ ಬೆತ್ತಲಾಗಿ ಓಡಿದ ಸಿನಿಮಾ ನಟಿ ಮಾರ್ಚ್ 21, 2023
    • Electionಗೆ ಮುನ್ನವೇ DK ವ್ಯೂಹ ಛಿದ್ರ ಮಾರ್ಚ್ 21, 2023
    • BJP ಸಿಎಂ ಅಭ್ಯರ್ಥಿ ಯಾರು? ಮಾರ್ಚ್ 20, 2023
    • ರಮೇಶ್ ಜಾರಕಿಹೊಳಿಗೆ BJP ಗೇಟ್ ಪಾಸ್? ಮಾರ್ಚ್ 19, 2023
    • ಆರೋಗ್ಯ ನೌಕರರ ಮೇಲೆ ESMA ಬ್ರಹ್ಮಾಸ್ರ್ತ ಮಾರ್ಚ್ 19, 2023
    • ಹಿರಿಯೂರಿನಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪೂರ್ಣಿಮಾ ಶ್ರೀನಿವಾಸ್ ಕಣಕ್ಕಿಳಿಯಲಿದ್ದಾರೆ ಮಾರ್ಚ್ 18, 2023
    • ದಾರಿ ಕಾಣದಾದ ಸಿದ್ದರಾಮಯ್ಯ #siddaramaiah #congress #kharge ಮಾರ್ಚ್ 18, 2023
    • Ola ಮತ್ತು Uber ಗೆ ಸೆಡ್ಡು ಹೊಡೆದ ನಮ್ಮ ಯಾತ್ರಿ ಮಾರ್ಚ್ 18, 2023
    • ಬಯಲಾಯ್ತು Express ಹೆದ್ದಾರಿ ‌ಬಣ್ಣ! ಮಾರ್ಚ್ 18, 2023
    Popular Posts

    BJP ಸೇರಿದ ರೋಷನ್ ಬೇಗ್! #bjp #karnataka #congressparty #elections

    ಮಾರ್ಚ್ 21, 2023

    ರಸ್ತೆಯಲ್ಲಿ ಬೆತ್ತಲಾಗಿ ಓಡಿದ ಸಿನಿಮಾ ನಟಿ

    ಮಾರ್ಚ್ 21, 2023

    Electionಗೆ ಮುನ್ನವೇ DK ವ್ಯೂಹ ಛಿದ್ರ

    ಮಾರ್ಚ್ 21, 2023
    Copyright © 2023 Vartha Chakra
    • ಸುದ್ದಿ
    • ಬೆಂಗಳೂರು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ರಾಜಕೀಯ
      • ಚುನಾವಣೆ 2023
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • ಅಪರಾಧ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    A free roll of viewpoints in a political interview.
    H Vishwanath in Bicchu Maatu #jds #congressparty #kpcc #dkshivakumar #mysore #mysuru #siddaramaiah
    Subscribe