Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಡಿಕೇರಿ ಜನರ ಭರವಸೆಯ ಬೆಳಕು, ಮಂತರ್ ಗೌಡ.
    Viral

    ಮಡಿಕೇರಿ ಜನರ ಭರವಸೆಯ ಬೆಳಕು, ಮಂತರ್ ಗೌಡ.

    vartha chakraBy vartha chakraಫೆಬ್ರವರಿ 15, 202528 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು.
    ಪ್ರಾಕೃತಿಕ ರಮಣೀಯ ಸುಂದರ ತಾಣ ಕೊಡಗು ಕರ್ನಾಟಕದ ಕಾಶ್ಮೀರ ಎಂದೇ ಪ್ರಖ್ಯಾತಿ ಪಡೆದಿದೆ. ಆತಿಥ್ಯ ಮತ್ತು ವಿಭಿನ್ನ ಸಂಸ್ಕೃತಿಗೆ ಹೆಸರಾದ ಕೊಡಗಿನ ಜನರು ರಾಜಕೀಯವಾಗಿ ಕೂಡ ಅತಿ ಹೆಚ್ಚು ಜಾಗರೂಕರಾಗಿದ್ದಾರೆ.ಈ ಜನ ತಮ್ಮ ಪ್ರತಿನಿಧಿಗಳನ್ನು ಆಯ್ಕೆ ಮಾಡುವಾಗಲು ಕೂಡ ಅತ್ಯಂತ ಎಚ್ಚರಿಕೆ ಮತ್ತು ಜಾಗರೂಕತೆಯನ್ನು ವಹಿಸುತ್ತಾರೆ.
    ಇಂಥಾ ರಾಜಕೀಯ ಜಾಣ್ಮೆಯ ಪರಿಣಾಮವಾಗಿ ಈ ಬಾರಿ ಮಡಿಕೇರಿ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿರುವ ಮಂತರ್ ಗೌಡ ತಮ್ಮ ವೈಶಿಷ್ಟ್ಯ ಪೂರ್ಣವಾದ ನಡವಳಿಕೆ, ಶಿಕ್ಷಣ, ಜನಸಾಮಾನ್ಯರ ಕುರಿತ ಕಾಳಜಿ ರಾಜಕೀಯ ಪ್ರಜ್ಞೆ, ಕೃಷಿ ವ್ಯಾಪಾರ ಪರಿಸರ ಮತ್ತು ಪ್ರವಾಸೋದ್ಯಮದ ಬಗ್ಗೆ ಇರುವ ವಿಶೇಷವಾದ ದೃಷ್ಟಿಕೋನ ಮತ್ತು ಬದ್ದತೆಯಿಂದ ಗಮನ ಸೆಳೆಯುತ್ತಾರೆ.
    ರಾಜಕೀಯ ಕುಟುಂಬದ ಹಿನ್ನೆಲೆಯಿಂದ ಬಂದ
    ಮಂತರ್ ಗೌಡ, ರೇಡಿಯೋಲಜಿ ವಿಭಾಗದಲ್ಲಿ ವೈದ್ಯಕೀಯ ಪದವಿ ಪಡೆದಿದ್ದಾರೆ. ವೈದ್ಯರಾಗಿ ಸಮಾಜ ಸೇವೆ ಮಾಡಲು ತುಡಿಯುತ್ತಿದ್ದ ಇವರನ್ನು ಸಹಜವಾಗಿ ರಾಜಕೀಯ ಕ್ಷೇತ್ರ ಆಕರ್ಷಿಸಿತು.
    ತಮ್ಮ ಕುಟುಂಬದ ರಾಜಕೀಯ ಹಿನ್ನೆಲೆ ಇದಕ್ಕೆ ಪ್ರೇರಣೆ ಎನ್ನಬಹುದು. ಕಾಂಗ್ರೆಸ್ ಪಕ್ಷದಿಂದ ತಮ್ಮ ರಾಜಕೀಯ ಜೀವನ ಆರಂಭಿಸಿದ ಇವರು ತಮ್ಮ ಸಂಘಟನಾ ಚಾತುರ್ಯದಿಂದ ಮಡಿಕೇರಿ ‌‌ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ಪಡೆಯುತ್ತಾರೆ.
    ಪಕ್ಷದ ಟಿಕೆಟ್ ಪಡೆದ ಮಂತರ್ ಗೌಡ ಆನಂತರದಲ್ಲಿ ಎಲ್ಲಾ ಹಂತದ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜನಸಾಮಾನ್ಯರೊಂದಿಗೆ ಬೆರೆಯುವ ಮೂಲಕ ತಾವೊಬ್ಬ ವಿಶ್ವಾಸ ಮೂಡಿಸುವ ನಾಯಕ ಎಂದು ಮನದಟ್ಟು ಮಾಡಿಕೊಡುತ್ತಾರೆ. ಇದರ ಪರಿಣಾಮ ಸುದೀರ್ಘ ಎರಡು ದಶಕಗಳ ನಂತರ ಮಡಿಕೇರಿಯಲ್ಲಿ ಕಾಂಗ್ರೆಸ್ ಪತಾಕೆ ಹಾರುವಂತೆ ಮಾಡಿ ವಿಧಾನಸಭೆಗೆ ಆಯ್ಕೆಯಾಗುತ್ತಾರೆ.
    ಶಾಸಕರಾಗಿ ಆಯ್ಕೆಯಾಗುತ್ತಿದ್ದಂತೆ ಆ ರಾಜಕಾರಣವನ್ನು ಸಂಪೂರ್ಣವಾಗಿ ಬದಿಗೊತ್ತಿ ಕ್ಷೇತ್ರದಲ್ಲಿ ಮನೆ ಮಗನ ರೀತಿಯಲ್ಲಿ ಎಲ್ಲರೊಳಗೊಂದಾಗಿ ಮುನ್ನಡೆಯುತ್ತಿದ್ದಾರೆ.
    ಕ್ಷೇತ್ರದ ಹಲವು ಜ್ವಲಂತ ಸಮಸ್ಯೆಗಳ ಕಡೆ ಗಮನ ಹರಿಸಿದ್ದಾರೆ ಕುಡಿಯುವ ನೀರು, ತ್ಯಾಜ್ಯ ವಿಲೇವಾರಿ, ಒಳಚರಂಡಿ, ರಸ್ತೆ, ಸುಸಜ್ಜಿತ ಆಸ್ಪತ್ರೆ ಮತ್ತು ಪರಿಸರ ಸ್ನೇಹಿ ಪ್ರವಾಸೋದ್ಯಮ ತಮ್ಮ ಆದ್ಯತೆ ಎಂದು ಈ ವಲಯದ ಅಭಿವೃದ್ಧಿಗೆ ಶ್ರಮಿಸುತ್ತಿರುವ ಇವರ ಸಂಘಟನಾ ಚಾತುರ್ಯ ಮತ್ತು ದೂರ ದೃಷ್ಟಿಗೆ ಸಾಕ್ಷಿ ಮಡಿಕೇರಿಯ ಕಾಫಿ ದಸರಾ, ಸರ್ಕಾರಿ ಆಸ್ಪತ್ರೆ, ತ್ಯಾಜ್ಯ ವಿಲೇವಾರಿ ಘಟಕ.
    ಅಭಿವೃದ್ಧಿಯಲ್ಲಿ ಎಂದಿಗೂ ರಾಜಕೀಯ ನುಸುಳಲೇಬಾರದು ಎಂದು ಬಲವಾಗಿ ಪ್ರತಿಪಾದಿಸಿ ಅನುಷ್ಠಾನಕ್ಕೆ ತರುತ್ತಿರುವ ಈ ನಾಯಕ ಮಡಿಕೇರಿ ಕ್ಷೇತ್ರದ ಪಾಲಿಗೆ ಆಜಾತಶತ್ರು ಮತ್ತು ಭರವಸೆಯ ಬೆಳಕು.

    ಕರ್ನಾಟಕ ಕಾಂಗ್ರೆಸ್ ಚುನಾವಣೆ ಬೆಂಗಳೂರು ರಾಜಕೀಯ ವ್ಯಾಪಾರ ಶಿಕ್ಷಣ ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleರಾಜಕಾರಣದಲ್ಲಿ ಪೂಜಾ ಫಲ ಫಲಿಸುತ್ತದೆಯಾ..?
    Next Article ಕಾಂಗ್ರೆಸ್ ನಾಯಕ ಅಲ್ತಾಫ್ ಗೆ ಬೆದರಿಕೆ ಹಾಕಿದವನು ಹೇಳಿದ್ದೇನು ಗೊತ್ತಾ.
    vartha chakra
    • Website

    Related Posts

    2028ರಲ್ಲಿಯೂ ಕಾಂಗ್ರೆಸ್ ಅಧಿಕಾರಕ್ಕೆ – ಸಿದ್ದರಾಮಯ್ಯ

    ಡಿಸೆಂಬರ್ 16, 2025

    482 ಎಕರೆ ಅರಣ್ಯಭೂಮಿ ಕಬಳಿಸಿದವ ಏನಾದ ಗೊತ್ತಾ?

    ಡಿಸೆಂಬರ್ 16, 2025

    ಕಸ್ತೂರಿ ರಂಗನ್ ವರದಿ ತಿರಸ್ಕಾರ

    ಡಿಸೆಂಬರ್ 16, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    2028ರಲ್ಲಿಯೂ ಕಾಂಗ್ರೆಸ್ ಅಧಿಕಾರಕ್ಕೆ – ಸಿದ್ದರಾಮಯ್ಯ

    482 ಎಕರೆ ಅರಣ್ಯಭೂಮಿ ಕಬಳಿಸಿದವ ಏನಾದ ಗೊತ್ತಾ?

    ಕಸ್ತೂರಿ ರಂಗನ್ ವರದಿ ತಿರಸ್ಕಾರ

    ಕೋರ್ಟ್ ನಲ್ಲಿ ಕಾಂಗ್ರೆಸ್ ಗೆಲುವು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • kazinoukrainy ರಲ್ಲಿ Invest Karnataka Forumಗೆ ಸಜ್ಜನ್ ಜಿಂದಾಲ್ ನೇತೃತ್ವ
    • aviator_qdEi ರಲ್ಲಿ ಉಗ್ರಂ ನೆರಳಿನಲ್ಲಿ ‌ಸಲಾರ್ | Salaar
    • kazinoukrainy ರಲ್ಲಿ ಮಾಲೂರು ಕೃಷ್ಣಯ್ಯಶೆಟ್ಟಿಗೆ ಜೈಲು ಶಿಕ್ಷೆ
    Latest Kannada News

    2028ರಲ್ಲಿಯೂ ಕಾಂಗ್ರೆಸ್ ಅಧಿಕಾರಕ್ಕೆ – ಸಿದ್ದರಾಮಯ್ಯ

    ಡಿಸೆಂಬರ್ 16, 2025

    482 ಎಕರೆ ಅರಣ್ಯಭೂಮಿ ಕಬಳಿಸಿದವ ಏನಾದ ಗೊತ್ತಾ?

    ಡಿಸೆಂಬರ್ 16, 2025

    ಕಸ್ತೂರಿ ರಂಗನ್ ವರದಿ ತಿರಸ್ಕಾರ

    ಡಿಸೆಂಬರ್ 16, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರಾಜಕಾರಣಿಗಳ ಅಚ್ಚುಮೆಚ್ಚಿನ ಜ್ಯೋತಿಷಿಗಳು ಯಾರು ಗೊತ್ತಾ #varthachakra #astrologyposts #indianpoliticians
    Subscribe