Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಾಜಿ ಮಂತ್ರಿ ಮೊಮ್ಮಗ ಕತೆ ಕಟ್ಟಿದ
    ವಿಶೇಷ ಸುದ್ದಿ

    ಮಾಜಿ ಮಂತ್ರಿ ಮೊಮ್ಮಗ ಕತೆ ಕಟ್ಟಿದ

    vartha chakraBy vartha chakraಮೇ 10, 202522 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು: ಕಾರು ತಗುಲಿದ್ದಕ್ಕೆ ಉದ್ಯಮಿಯನ್ನು ಥಳಿಸಿ ದುಬಾರಿ ಬೆಲೆಯ ಕಾರು ಹಾಗೂ ಅದರಲ್ಲಿದ್ದ ಐಷರಾಮಿ ವಸ್ತುಗಳನ್ನು ತೆಗೆದುಕೊಂಡಿರುವ ಆರೋಪದಡಿ ಮಹಿಳೆಯ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
    ಉದ್ಯಮಿ ವಿನಯ್ ಗೌಡ ಎಂಬವರು ನೀಡಿದ ದೂರಿನಡಿ ದೀಪ್ತಿ ಕಟ್ರಗಡ್ಡ ಹಾಗೂ ಇನ್ನಿತರರ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
    ಲ್ಯಾವೆಲ್ಲೆ ರಸ್ತೆಯ ಪೂರ್ವಾ ಗ್ರಾಂಡ್ ಅಪಾರ್ಟ್​​ಮೆಂಟ್​​​ನಲ್ಲಿ ವಾಸವಾಗಿರುವ ವಿನಯ್, ಮೇ 3ರಂದು ಬೆಳಗಿನ ಜಾವ 4.15ರ ಸುಮಾರಿಗೆ ತಮ್ಮ ಪೊರ್ಶೆ ಕಾರನ್ನು ಅಪಾರ್ಟ್​​ಮೆಂಟ್ ನಿಂದ ರಸ್ತೆಗೆ ರಿವರ್ಸ್ ಪಡೆಯುವಾಗ ದೀಪ್ತಿ ಎಂಬವರ ಕಾರಿಗೆ ಆಕಸ್ಮಿಕವಾಗಿ ಟಚ್ ಆಗಿದೆ.
    ಈ ಸಂಬಂಧ ಮಹಿಳೆ ಹಾಗೂ ಆಕೆಯ ಸಚಚರರು ನನಗೆ ಕೈಗಳಿಂದ ಥಳಿಸಿದ್ದಾರೆ ಎಂದು ದೂರಿನಲ್ಲಿ ವಿನಯ್ ಆರೋಪಿಸಿದ್ದಾರೆ.
    ಹಲ್ಲೆ ಬಳಿಕ 56 ಲಕ್ಷ ರೂ. ಬೆಲೆಯ ಕಾರು ಹಾಗೂ ಕಾರಿನಲ್ಲಿದ್ದ 1.50 ಲಕ್ಷ ರೂ. ನಗದು, 85 ಸಾವಿರ ರೂ. ಮೌಲ್ಯದ ಸನ್ ಗ್ಲಾಸ್, ಹಾಗೂ ಸೇರಿ ಇನ್ನಿತರ ವಸ್ತುಗಳನ್ನು ತೆಗೆದುಕೊಂಡು ಹೋಗಿದ್ದಾರೆ. ಇದೇ ವೇಳೆ ಮೊಬೈಲ್ ಕೂಡ ನಾಪತ್ತೆಯಾಗಿದೆ. ಕರೆ ಮಾಡಿ ಮೊಬೈಲ್ ನೀಡುವಂತೆ ಕೇಳಿದಾಗ, ಆರೋಪಿತೆಯು ಅಪಾರ್ಟ್​​ಮೆಂಟ್​ನ ಭದ್ರತಾ ಸಿಬ್ಬಂದಿಗೆ ನೀಡಿರುವುದಾಗಿ ಹೇಳಿದ್ದಳು.
    ತೆಗೆದುಕೊಂಡಿದ್ದ ಕಾರನ್ನು ಹಿಂತಿರುಗಿಸುವಂತೆ ಕೇಳಿದಾಗ ನನ್ನ ಕಾರಿಗೆ ಡ್ಯಾಮೇಜ್ ಮಾಡಿದ್ದು, 20 ಲಕ್ಷ ನೀಡಿದರೆ ಮಾತ್ರ ಕಾರು ಕೊಡುತ್ತೇನೆ ಎಂದು ಮಹಿಳೆ ಹೇಳಿರುವುದಾಗಿ ದೂರಿನಲ್ಲಿ ಆರೋಪಲಾಗಿದೆ.
    ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿತ ಮಹಿಳೆಗೆ ನೋಟಿಸ್ ನೀಡಿ ವಿಚಾರಣೆ ನಡೆಸಿದಾಗ, ವಿನಯ್ ಕಾರಿಗೆ ಗುದ್ದಿದ್ದು ನಿಜ. ವಾಗ್ವಾದ ಸಹ ನಡೆಸಿದ್ದೆ. ಆದರೆ ಸ್ಥಳದಿಂದ ಕಾರನ್ನು ತೆಗೆದುಕೊಂಡು ಹೋಗಿರಲಿಲ್ಲ. ಬದಲಾಗಿ ಆತನೇ ದೇವನಹಳ್ಳಿಯಲ್ಲಿರುವ ನನ್ನ ಮನೆ ಬಳಿ ಕಾರು ಪಾರ್ಕ್ ಮಾಡಿ ಸುಳ್ಳು ದೂರು ನೀಡಿದ್ದಾನೆ ಎಂದು ಹೇಳಿಕೆ ನೀಡಿದ್ದಾರೆ. ಇಬ್ಬರ ಹೇಳಿಕೆಗಳನ್ನು ಪಡೆದಿರುವ ಪೊಲೀಸರು ಕೂಲಂಕಷವಾಗಿ ಪರಿಶೀಲಿಸಿದಾಗ ಆರೋಪಿತೆ ಹೇಳಿರುವುದು ಮೇಲ್ನೋಟಕ್ಕೆ ನೈಜತೆಯಿಂದ ಕೂಡಿದೆ. ಆದರೂ ಈ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ. ದೂರುದಾರ ವ್ಯಕ್ತಿಯು ಮಾಜಿ ಸಚಿವರೊಬ್ಬರ ಮೊಮ್ಮಗನಾಗಿದ್ದಾನೆ ಎಂದು ಪೊಲೀಸ್​ ಮೂಲಗಳು ತಿಳಿಸಿವೆ.

    ಕಾರು ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleಚೀನಾ ನಂಬಿ ಕೆಟ್ಟ ಪಾಪಿ ಪಾಕಿಸ್ತಾನ..!
    Next Article ಯುದ್ದ ಆಗಬಹುದು ಹುಷಾರ್ !
    vartha chakra
    • Website

    Related Posts

    ಎಚ್ಚೆತ್ತ ರಾಜ್ಯ ಸರ್ಕಾರ

    ಡಿಸೆಂಬರ್ 12, 2025

    ಮರಣದ ಕಾರಣ ಹೇಳುವುದು ಕಡ್ಡಾಯ

    ಡಿಸೆಂಬರ್ 9, 2025

    ಭಾರತದ ಜೊತೆ ನಾಟಕ ಮಾಡುತ್ತಿದ್ದಾರಾ ಪುತಿನ್?

    ಡಿಸೆಂಬರ್ 8, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಶಕ್ತಿ ಪ್ರದರ್ಶನಕ್ಕೆ ಮುಂದಾದರಾ ಡಿಸಿಎಂ

    ಕಡ್ಡಾಯವಾಗಿ ಕನ್ನಡ ನಾಮಫಲಕ ಅಳಡಿಸದಿದ್ದರೆ ದಂಡ

    ಎಚ್ಚೆತ್ತ ರಾಜ್ಯ ಸರ್ಕಾರ

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • kypit kyrsovyu_vbKl ರಲ್ಲಿ ಸೋತ ಕಾಂಗ್ರೆಸ್ ನಾಯಕರಿಗೆ ಪಾಠ.
    • หา ผู้รับ เหมา ต่อ เติม บ้าน ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • Richardelova ರಲ್ಲಿ ಸೋತ ಕಾಂಗ್ರೆಸ್ ನಾಯಕರಿಗೆ ಪಾಠ.
    Latest Kannada News

    ಶಕ್ತಿ ಪ್ರದರ್ಶನಕ್ಕೆ ಮುಂದಾದರಾ ಡಿಸಿಎಂ

    ಡಿಸೆಂಬರ್ 13, 2025

    ಕಡ್ಡಾಯವಾಗಿ ಕನ್ನಡ ನಾಮಫಲಕ ಅಳಡಿಸದಿದ್ದರೆ ದಂಡ

    ಡಿಸೆಂಬರ್ 13, 2025

    ಎಚ್ಚೆತ್ತ ರಾಜ್ಯ ಸರ್ಕಾರ

    ಡಿಸೆಂಬರ್ 12, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    14 ಬಾರಿ ಕಚ್ಚಿದ ಹಾವು ಕನಸಲ್ಲೂ ಬಂದಿತ್ತಂತೆ! #varthachakra #snakes #mythicalcreatures #snakeencounters
    Subscribe