Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಾಜಿ ಮಂತ್ರಿ ರಾಜಣ್ಣ ಅವರ ಪ್ಲಾನ್ ಗೊತ್ತಾ ?
    ರಾಜಕೀಯ

    ಮಾಜಿ ಮಂತ್ರಿ ರಾಜಣ್ಣ ಅವರ ಪ್ಲಾನ್ ಗೊತ್ತಾ ?

    vartha chakraBy vartha chakraಆಗಷ್ಟ್ 13, 2025ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಆ.13:
    ಮತಗಳ್ಳತನ ಕುರಿತು ನೀಡಿದ ಹೇಳಿಕೆಯಿಂದ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಸಚಿವ ಸ್ಥಾನ ಕಳೆದುಕೊಂಡಿರುವ ಮಾಜಿ ಸಚಿವ ಕೆ ಎನ್ ರಾಜಣ್ಣ ಅವರು ಇದೀಗ ಶಾಸಕ ಸ್ಥಾನ ತೊರೆಯಲು ಮುಂದಾಗಿದ್ದಾರೆ.
    ತಮ್ಮ ಹೇಳಿಕೆಯನ್ನು ಅನಗತ್ಯ ವಿವಾದವನ್ನಾಗಿ ಮಾಡಿ ವ್ಯವಸ್ಥಿತ ಪಿತೂರಿ ಮತ್ತು ಷಡ್ಯಂತ್ರದ ಮೂಲಕ ತಮ್ಮನ್ನು ಮಂತ್ರಿ ಸ್ಥಾನದಿಂದ ವಜಾ ಗೊಳಿಸುವಂತೆ ಮಾಡಲಾಗಿದೆ ಎಂದು ಆಕ್ರೋಶಗೊಂಡಿರುವ ಅವರು ಇದೀಗ ಇದಕ್ಕೆ ಕಾರಣರಾದ ವ್ಯಕ್ತಿಗಳ ವಿರುದ್ಧ ಸಮರ ಘೋಷಿಸಲು ತೀರ್ಮಾನಿಸಿದ್ದಾರೆ.
    ಸಚಿವ ಸ್ಥಾನ ಕಳೆದುಕೊಂಡ ನಂತರ ಅಜ್ಞಾತ ಸ್ಥಳದಲ್ಲಿ ಕುಳಿತುಕೊಂಡಿರುವ ಅವರು ಅಲ್ಲಿಂದಲೇ ತಮ್ಮ ಹಲವು ಆಪ್ತರನ್ನು ಸಂಪರ್ಕಿಸಿ ತಮ್ಮ ಈ ಸ್ಥಿತಿಗೆ ಕಾರಣರಾದ ವ್ಯಕ್ತಿಯ ವಿರುದ್ಧ ಯಾವ ರೀತಿಯ ಹೋರಾಟ ನಡೆಸಬೇಕು ಎನ್ನುವ ಕುರಿತಂತೆ ಚರ್ಚೆ ನಡೆಸುತ್ತಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.
    ತಮ್ಮ ಹೇಳಿಕೆ ಅಪತ್ಯವಾಗಿದ್ದರೆ ಆ ಬಗ್ಗೆ ತಮ್ಮಿಂದ ಸ್ಪಷ್ಟನೆ ಕೇಳಬಹುದಿತ್ತು ನೋಟಿಸ್ ಕೊಡಬಹುದಿತ್ತು ಇಲ್ಲವೇ ರಾಜೀನಾಮೆ ಪಡೆದುಕೊಂಡು ಗೌರವಯುತವಾಗಿ ನಿರ್ಗಮಿಸುವಂತೆ ಮಾಡಬಹುದಿತ್ತು ಅದನ್ನು ಬಿಟ್ಟು ಸಚಿವ ಸ್ಥಾನದಿಂದ ಪದಚ್ಯುತಗೊಳ್ಳುವಂತೆ ಮಾಡುವ ಮೂಲಕ ಅಪಮಾನ ಮಾಡಿದ್ದಾರೆ ಹೀಗಾಗಿ ತಾವು ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತೇನೆ ಎಂದು ಹೇಳಿರುವುದಾಗಿ ಗೊತ್ತಾಗಿದೆ.
    ಸತ್ಯ ಹೇಳುವ ನೇರ ನಡೆ-ನುಡಿಯವರಿಗೆ ಕಾಂಗ್ರೆಸ್ ಪಕ್ಷದಲ್ಲಿ ಬೆಲೆಯಿಲ್ಲ, ಇಂತಹ ಕಡೆ ಮುಂದುವರೆಯಲು ಇಚ್ಛೆ ಇಲ್ಲ ಎಂದು ರಾಜಣ್ಣ ತಮ್ಮ ಆಪ್ತರ ಬಳಿ ಹೇಳಿಕೊಂಡಿದ್ದಾರೆ.ಅಷ್ಟೇ ಅಲ್ಲ ಈ ವಿಷಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೂ ತಂದಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.
    ತುಮಕೂರು ಜಿಲ್ಲಾ ಸಹಕಾರ ಬ್ಯಾಂಕ್ ಚುನಾವಣೆ ಮುಗಿಯುತ್ತಿದ್ದಂತೆ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.
    ಈ ವಿಷಯವನ್ನು ತಿಳಿದುಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜಣ್ಣ ದುಡುಕಿನಿಂದ ಯಾವುದೇ ತೀರ್ಮಾನ ತೆಗೆದುಕೊಳ್ಳದಂತೆ ಹಾಗೂ ಪಕ್ಷದಲ್ಲೇ ಉಳಿಯುವಂತೆ ಮನವೊಲಿಸಲು
    ತಮ್ಮ ಆಪ್ತ ಸಚಿವರನ್ನು ನಿಯೋಜಿಸಿದ್ದಾರೆ.
    ಸಚಿವ ಸ್ಥಾನದಿಂದ ವಜಾಗೊಳ್ಳುತ್ತಿದ್ದಂತೆ ರಾಜಣ್ಣ ತಮ್ಮ ಪುತ್ರನ ಮೂಲಕ ತಾವು ಪ್ರತಿನಿಧಿಸುವ ಮಧುಗಿರಿ ವಿಧಾನಸಭಾ ಕ್ಷೇತ್ರದ ಸದಸ್ಯತ್ವಕ್ಕೆ ರಾಜೀನಾಮೆ ಪತ್ರವನ್ನು ವಿಧಾನಸಭಾಧ್ಯಕ್ಷರಿಗೆ ತಲುಪಿಸುವಂತೆ ಕಳುಹಿಸಿದ್ದರು.
    ವಿಧಾನ ಪರಿಷತ್ ಸದಸ್ಯರೂ ಆಗಿರುವ ರಾಜಣ್ಣ ಪುತ್ರ ಆ ಪತ್ರವನ್ನು ಸಭಾಧ್ಯಕ್ಷರಿಗೆ ನೀಡದೆ, ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ, ತಮ್ಮ ತಂದೆಯ ನಿರ್ಧಾರ ಮತ್ತು ಪತ್ರವನ್ನು ತಲುಪಿಸಿದರು.
    ಪತ್ರ ಪಡೆದುಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವರಾದ ಸತೀಶ್ ಜಾರಕಿಹೊಳಿ, ಚಲುವರಾಯಸ್ವಾಮಿ ಹಾಗೂ ಡಾ.ಸುಧಾಕರ್ ಅವರನ್ನು ಕರೆಸಿಕೊಂಡು, ರಾಜಣ್ಣ ಪತ್ರದ ಬಗ್ಗೆ ಚರ್ಚೆ ನಡೆಸಿದರು.
    ನಂತರ ಪತ್ರವನ್ನು ಜಾರಕಿಹೊಳಿ ಅವರಿಗೆ ನೀಡಿ, ನೀವು ಮೂವರೂ ರಾಜಣ್ಣ ಅವರ ಮನೆಗೆ ತೆರಳಿ ಅವರ ಮನವೊಲಿಸಿ, ದುಡುಕುವುದು ಬೇಡ, ಮುಂದೆ ಬೇರೆ ಪರಿಣಾಮಗಳು ಬೀರಬಹುದು ಎಂದು ಹೇಳಿ.
    ನಾನು ಅವರ ಜೊತೆ ಮಾತನಾಡುವೆ ಎಂದು ತಿಳಿಸಿದ ನಂತರ ಸಚಿವರು, ರಾಜಣ್ಣ ಅವರನ್ನು ಭೇಟಿ ಮಾಡಿ ಮುಖ್ಯಮಂತ್ರಿ ಮಾಹಿತಿ ತಲುಪಿಸಿದರು.
    ಇದಕ್ಕೆ ಪ್ರತಿಕ್ರಿಯಿಸಿದ ರಾಜಣ್ಣ, ನನ್ನನ್ನು ಸಂಪುಟದಿಂದ ಉಚ್ಛಾಟಿಸಲು, ಆ ಹಿರಿಯ ಮಂತ್ರಿಯೇ ಕಾರಣ, ಅಂತಹವರ ಜೊತೆ ಪಕ್ಷ ಮತ್ತು ಅಧಿವೇಶನದಲ್ಲೂ ಇರಲಾರೆ, ನನಗೆ ಯಾರ ಭಯವೂ ಇಲ್ಲ. ದೆಹಲಿಯವರ ಮುಖ ನೋಡಿ ಕ್ಷೇತ್ರದಲ್ಲಿ ನನಗೆ ಮತ ಹಾಕುವುದಿಲ್ಲ, ನಮ್ಮ ಕಾರ್ಯಕರ್ತರು, ಸ್ನೇಹಿತರು ವಿಧಾನಸಭೆಗೆ ಆಯ್ಕೆ ಮಾಡಿ ಕಳುಹಿಸಿದ್ದಾರೆ ಎಂದು ಒಂದಷ್ಟು ವಿಷಯಗಳನ್ನು ಸಚಿವರ ಮುಂದಿಟ್ಟಿದ್ದಾರೆ.
    ಡಾ.ಸುಧಾಕರ್, ಕೆಲವೊಂದು ವಿಷಯ ಪ್ರಸ್ತಾಪಿಸಿ, ರಾಜಣ್ಣ ಕೋಪ ಶಮನಗೊಳಿಸಿ, ರಾಜೀನಾಮೆ ಪತ್ರ ಹಿಂದೆ ಪಡೆದುಕೊಳ್ಳುವಂತೆ ಮಾಡುವಲ್ಲಿ ಯಶಸ್ವಿಯಾದರು.
    ಇಷ್ಟಾದರೂ ರಾಜಣ್ಣ, ನನ್ನ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ, ಜಿಲ್ಲಾ ಸಹಕಾರಿ ಬ್ಯಾಂಕ್ ಚುನಾವಣೆ ನಂತರ ಜನರ ಮುಂದಯೇ ಎಲ್ಲವನ್ನೂ ಬಹಿರಂಗ ಪಡಿಸುತ್ತೇನೆ ಎಂದಿದ್ದಾರೆ ಎಂದು ಗೊತ್ತಾಗಿದೆ.

    ಕಾಂಗ್ರೆಸ್ ಚುನಾವಣೆ ತುಮಕೂರು ಬೆಂಗಳೂರು ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಕಡು ಬಡವ ಮಹಿಳೆಯರಿಗೆ ದೋಖಾ
    Next Article ರಾಜಣ್ಣ ಬೆಂಬಲಕ್ಕೆ ನಿಂತ ಶಾಸಕ
    vartha chakra
    • Website

    Related Posts

    2028ರಲ್ಲಿಯೂ ಕಾಂಗ್ರೆಸ್ ಅಧಿಕಾರಕ್ಕೆ – ಸಿದ್ದರಾಮಯ್ಯ

    ಡಿಸೆಂಬರ್ 16, 2025

    482 ಎಕರೆ ಅರಣ್ಯಭೂಮಿ ಕಬಳಿಸಿದವ ಏನಾದ ಗೊತ್ತಾ?

    ಡಿಸೆಂಬರ್ 16, 2025

    ಕಸ್ತೂರಿ ರಂಗನ್ ವರದಿ ತಿರಸ್ಕಾರ

    ಡಿಸೆಂಬರ್ 16, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಧಿವೇಶನ ಕರೆದಿರುವುದು ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು – ಡಿ.ಕೆ. ಶಿವಕುಮಾರ್

    2028ರಲ್ಲಿಯೂ ಕಾಂಗ್ರೆಸ್ ಅಧಿಕಾರಕ್ಕೆ – ಸಿದ್ದರಾಮಯ್ಯ

    482 ಎಕರೆ ಅರಣ್ಯಭೂಮಿ ಕಬಳಿಸಿದವ ಏನಾದ ಗೊತ್ತಾ?

    ಕಸ್ತೂರಿ ರಂಗನ್ ವರದಿ ತಿರಸ್ಕಾರ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MichaelTeamy ರಲ್ಲಿ May 3, 2023 51st Year Free Mass Marriage at Sri Kshetra Dharmasthala
    • ee88 ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • aviator_ynEi ರಲ್ಲಿ ಮುನಿರತ್ನ ವಿರುದ್ಧ ಎಸ್ ಐ ಟಿ ಬೇಕು.
    Latest Kannada News

    ಅಧಿವೇಶನ ಕರೆದಿರುವುದು ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು – ಡಿ.ಕೆ. ಶಿವಕುಮಾರ್

    ಡಿಸೆಂಬರ್ 16, 2025

    2028ರಲ್ಲಿಯೂ ಕಾಂಗ್ರೆಸ್ ಅಧಿಕಾರಕ್ಕೆ – ಸಿದ್ದರಾಮಯ್ಯ

    ಡಿಸೆಂಬರ್ 16, 2025

    482 ಎಕರೆ ಅರಣ್ಯಭೂಮಿ ಕಬಳಿಸಿದವ ಏನಾದ ಗೊತ್ತಾ?

    ಡಿಸೆಂಬರ್ 16, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರಾಜಕಾರಣಿಗಳ ಅಚ್ಚುಮೆಚ್ಚಿನ ಜ್ಯೋತಿಷಿಗಳು ಯಾರು ಗೊತ್ತಾ #varthachakra #astrologyposts #indianpoliticians
    Subscribe