Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಾಡಬಾರದ ಕೆಲಸ ಮಾಡಿದ ಗಂಡ.
    Trending

    ಮಾಡಬಾರದ ಕೆಲಸ ಮಾಡಿದ ಗಂಡ.

    vartha chakraBy vartha chakraಅಕ್ಟೋಬರ್ 3, 2025ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಅ.3:
    ಮನೆಯ ಬೆಡ್​ ರೂಂನಲ್ಲಿ ರಹಸ್ಯ ಕ್ಯಾಮರಾ ಅಳವಡಿಸಿ ಪತ್ನಿ ಜತೆಗಿನ ಲೈಂಗಿಕ ಕ್ರಿಯೆಯ ವಿಡಿಯೋ ಮಾಡಿ ಸ್ನೇಹಿತರಿಗೆ ಕಳುಹಿಸುತ್ತಿದ್ದ ಆರೋಪ ಮಾಡಿ ಪತಿ ವಿರುದ್ಧ ನೀಡಿದ ದೂರು ಆಧರಿಸಿ ಪುಟ್ಟೇನಹಳ್ಳಿ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.
    ಸಂತ್ರಸ್ತೆ ನೀಡಿರುವ ದೂರಿನಂತೆ, ಸೈಯದ್ ಇನಾಮುಲ್ ಜೊತೆ ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಮದುವೆಯಾಗಿದೆ. ಆದರೆ, ಆತ ಅದಾಗಲೇ ಮತ್ತೊಂದು ಮದುವೆಯಾಗಿರುವುದನ್ನು ತಿಳಿಸದೇ ಎರಡನೇ ಮದುವೆ ಮಾಡಿಕೊಂಡಿದ್ದಾನೆಂದು ಆರೋಪ ಮಾಡಲಾಗಿದೆ.
    ಆರೋಪಿ ಸಯ್ಯದ್ ದಿನನಿತ್ಯ ಪತ್ನಿಗೆ ಕಿರುಕುಳ ನೀಡುತ್ತಿದ್ದು, 19 ಮಂದಿ ಮಹಿಳೆಯರೊಂದಿಗೆ ಸಂಬಂಧ ಹೊಂದಿದ್ದೇನೆ ಎಂದು ಹೆಮ್ಮೆಪಟ್ಟು ಹೇಳಿಕೊಳ್ಳುತ್ತಿದ್ದ ಎಂದೂ ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾರೆ.
    ಮನೆಯ ಬೆಡ್​ ರೂಂನಲ್ಲಿ ಸೀಕ್ರೆಟ್ ಕ್ಯಾಮೆರಾ ಅಳವಡಿಸಿ ಪತ್ನಿ ಜತೆಗಿನ ಲೈಂಗಿಕ ಕ್ರಿಯೆಯ ದೃಶ್ಯಗಳನ್ನು ರೆಕಾರ್ಡ್ ಮಾಡುತ್ತಿದ್ದ ಆರೋಪಿ, ಆ ಖಾಸಗಿ ವಿಡಿಯೋಗಳನ್ನು ದುಬೈಯಲ್ಲಿ ವಾಸಿಸುವ ತನ್ನ ಸ್ನೇಹಿತರಿಗೆ ಶೇರ್ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.
    ಇದಲ್ಲದೆ, ಹೊರದೇಶದಲ್ಲಿರುವ ತನ್ನ ಕೆಲವು ಮಂದಿ ಸ್ನೇಹಿತರೊಂದಿಗೂ ದೈಹಿಕ ಸಂಬಂಧ ಬೆಳೆಸುವಂತೆ ಪತ್ನಿಯನ್ನು ಒತ್ತಾಯಿಸಿರುವ ಗಂಭೀರ ಆರೋಪ ಕೂಡ ದಾಖಲಾಗಿದೆ.
    ಆರೋಪಿಗೆ ವಿವಾಹದ ಸಮಯದಲ್ಲಿ ವರದಕ್ಷಿಣೆಯಾಗಿ ಯಮಹಾ ದ್ವಿ ಚಕ್ರ ವಾಹನ, 340 ಗ್ರಾಂ ತೂಕದ ಚಿನ್ನದ ಆಭರಣಗಳನ್ನು ಕೊಡಲಾಗಿತ್ತು. ಮದುವೆ ಸಮಯದಲ್ಲಿ ಆರೋಪಿಯ ದೊಡ್ಡ ತಂಗಿಯ ಗಂಡನಾದ ಅಮೀನ್ ಬೇಗ್ (ಆರೋಪಿ-2) ಎಂಬಾತನು ಕ್ಯಾಟರಿಂಗ್ ವಿಳಂಬವಾಗಿರುವ ವಿಚಾರದಲ್ಲಿ, ಹಲವಾರು ಮಂದಿ ಎದುರು ಜಗಳ ಮಾಡಿ ಪಿರ್ಯಾದಿಯ ಕುಟುಂಬ ವರ್ಗದವರಿಗೆ ಅವಮಾನ ಮಾಡಿರುತ್ತಾನೆ. ಕಳೆದ ವರ್ಷದ ಡಿಸೆಂಬರ್ ನಲ್ಲಿ ಆರೋಪಿ ಸಯ್ಯದ್, ತನಗೆ ಈಗಾಗಲೇ ಮದುವೆಯಾಗಿದ್ದು, ನೀನು 2ನೇ ಹೆಂಡತಿಯಾಗಿದ್ದಿ. ಅಲ್ಲದೇ ನನಗೆ 19 ಮಹಿಳೆಯರ ಜೊತೆ ಸಂಬಂಧವಿದೆ ಎಂಬುದಾಗಿ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾನೆ ಎಂದು ಎಫ್​ಐಆರ್​​ನಲ್ಲಿ ಉಲ್ಲೇಖಿಸಲಾಗಿದೆ.
    ಸಂತ್ರಸ್ತೆಯು ಆಕೆಯ ತಂದೆ-ತಾಯಿಯನ್ನು ಭೇಟಿ ಮಾಡದಂತೆ ನೋಡಿಕೊಂಡಿದ್ದ ಆರೋಪಿಯು, ಒಂದು ವೇಳೆ ಭೇಟಿಯಾಗಿ ತನ್ನ ಬಗ್ಗೆ ದೂರಿತ್ತರೆ ವಿಚ್ಛೇದನ ನೀಡುವುದಾಗಿ ಬೆದರಿಕೆ ಹಾಕಿದ್ದ. ಸದ್ಯ ಮಹಿಳೆಯ ದೂರಿನ ಆಧಾರದಲ್ಲಿ ಪುಟ್ಟೇನಹಳ್ಳಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದು, ಆರೋಪಿ ಪರಾರಿಯಾಗಿದ್ದಾನೆ. ಆರೋಪಿಯ ಪತ್ತೆಗೆ ಪೊಲೀಸರು ಶೋಧ ಆರಂಭಿಸಿದ್ದಾರೆ.

    Bangalore crime Karnataka News Trending Varthachakra ಕರ್ನಾಟಕ ಚಿನ್ನ ನ್ಯಾಯ ಬೆಂಗಳೂರು ಮದುವೆ ವರದಕ್ಷಿಣೆ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಶಕ್ತಿ ಯೋಜನೆಗೆ ಮತ್ತೊಂದು ಕಿರೀಟ
    Next Article ಮತಗಳ್ಳತನದ ವಿರುದ್ಧ ಹೋರಾಟಕ್ಕೆ ಕರೆ.
    vartha chakra
    • Website

    Related Posts

    ಡಿಸಿಎಂ ಸದಾಶಿವ ನಗರ ನಿವಾಸದಲ್ಲಿ ಸಿಎಂ – ಡಿಸಿಎಂ ಉಪಾಹಾರ ಸಭೆ

    ಡಿಸೆಂಬರ್ 2, 2025

    ರಾಜಕೀಯ ನಮ್ಮಪ್ಪನ ಆಸ್ತಿ ಅಲ್ಲ.

    ಡಿಸೆಂಬರ್ 2, 2025

    ಸ್ಮಾರ್ಟ್‌ ಫೋನ್‌ಗಳಿಗೆ ಸಂಚಾರ್ ಸಾಥಿ ಆ್ಯಪ್ ಕಡ್ಡಾಯ!

    ಡಿಸೆಂಬರ್ 2, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜನ ಸುಮ್ಮನಿದ್ದಾಗ ಏನಾದ್ರೂ ಮಾಡಬೇಕು ಅಂದ್ರೆ ಏನ್ ಮಾಡ್ತಾರೆ?

    ಡಿಸಿಎಂ ಸದಾಶಿವ ನಗರ ನಿವಾಸದಲ್ಲಿ ಸಿಎಂ – ಡಿಸಿಎಂ ಉಪಾಹಾರ ಸಭೆ

    ರಾಜಕೀಯ ನಮ್ಮಪ್ಪನ ಆಸ್ತಿ ಅಲ್ಲ.

    ಸ್ಮಾರ್ಟ್‌ ಫೋನ್‌ಗಳಿಗೆ ಸಂಚಾರ್ ಸಾಥಿ ಆ್ಯಪ್ ಕಡ್ಡಾಯ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • SteveAwacy ರಲ್ಲಿ May 3, 2023 51st Year Free Mass Marriage at Sri Kshetra Dharmasthala
    • Nolanmar ರಲ್ಲಿ ಅಗಲಿದ “ಕಲಾ ತಪಸ್ವಿ”
    • Charlesimith ರಲ್ಲಿ May 3, 2023 51st Year Free Mass Marriage at Sri Kshetra Dharmasthala
    Latest Kannada News

    ಜನ ಸುಮ್ಮನಿದ್ದಾಗ ಏನಾದ್ರೂ ಮಾಡಬೇಕು ಅಂದ್ರೆ ಏನ್ ಮಾಡ್ತಾರೆ?

    ಡಿಸೆಂಬರ್ 2, 2025

    ಡಿಸಿಎಂ ಸದಾಶಿವ ನಗರ ನಿವಾಸದಲ್ಲಿ ಸಿಎಂ – ಡಿಸಿಎಂ ಉಪಾಹಾರ ಸಭೆ

    ಡಿಸೆಂಬರ್ 2, 2025

    ರಾಜಕೀಯ ನಮ್ಮಪ್ಪನ ಆಸ್ತಿ ಅಲ್ಲ.

    ಡಿಸೆಂಬರ್ 2, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಲಾಟರಿ ಗೆದ್ದು 5 ಮದ್ವೆ ಆದ 'ಲೇಡಿ' ಕಣ್ಣೀರ ಕಥೆ!
    Subscribe