Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಾರ್ಷ್-ವಾರ್ನರ್ ಅಬ್ಬರಕ್ಕೆ ಮಂಕಾದ ರಾಜಸ್ಥಾನ ರಾಯಲ್ಸ್
    ಸುದ್ದಿ

    ಮಾರ್ಷ್-ವಾರ್ನರ್ ಅಬ್ಬರಕ್ಕೆ ಮಂಕಾದ ರಾಜಸ್ಥಾನ ರಾಯಲ್ಸ್

    vartha chakraBy vartha chakraಮೇ 12, 2022Updated:ಮೇ 12, 2022ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಮುಂಬಯಿ: ಇಲ್ಲಿನ ಡಿ.ವೈ. ಪಾಟೀಲ ಕ್ರೀಡಾಂಗಣದಲ್ಲಿ ಬುಧವಾರ ರಾತ್ರಿ ನಡೆದ ಟಾಟಾ ಐಪಿಎಲ್‌ನ 58ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ರಾಜಸ್ಥಾನ ರಾಯಲ್ಸ್ ತಂಡವನ್ನು 8 ವಿಕೆಟ್‌ಗಳ ಅಂತರದಿಂದ ಮಣಿಸಿದೆ. ಮಾರ್ಷ್-ವಾರ್ನರ್ ಶತಕದ ಜತೆಯಾಟದ ಮುಂದೆ ಸಂಜು ಸ್ಯಾಮ್ಸನ್ ತಂತ್ರ ಫಲಿಸಲಿಲ್ಲ.
    ಟಾಸ್ ಗೆದ್ದ ಡೆಲ್ಲಿ ಎದುರಾಳಿಯನ್ನು ಬ್ಯಾಟ್ ಮಾಡುವಂತೆ ಆಹ್ವಾನಿಸಿತು. ಆರಂಭಿಕರನ್ನು ಬೇಗನೆ ಕಳೆದುಕೊಂಡ ರಾಜಸ್ಥಾನಕ್ಕೆ ಆಸರೆಯಾಗಿದ್ದು ರವಿಚಂದ್ರ ಅಶ್ವಿನ್ (50 ರನ್, 38 ಎಸೆತ, 4 ಬೌಂಡರಿ, 2 ಸಿಕ್ಸರ್) ಮತ್ತು ದೇವದತ್ತ ಪಡಿಕ್ಕಲ್ (48 ರನ್, 30 ಎಸೆತ, 2 ಬೌಂಡರಿ, 2 ಸಿಕ್ಸರ್). ಆ ಬಳಿಕ ತಂಡವು ಮತ್ತೆ ಕುಸಿತ ಕಂಡಿದ್ದರಿಂದ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 160 ರನ್‌ಗಳ ಸಾಧಾರಣ ಮೊತ್ತವನ್ನು ಗಳಿಸಲಷ್ಟೇ ಶಕ್ತವಾಯಿತು. ಚೇತನ್ ಸಕಾರಿಯಾ, ಆನ್ರಿಚ್ ನೋರ್ಜೆ ಮತ್ತು ಮಾರ್ಷ್ ತಲಾ ಎರಡು ವಿಕೆಟ್ ಗಳಿಸಿದರು.
    ಡೆಲ್ಲಿಯ ಆರಂಭವೂ ಉತ್ತಮವಾಗಿರಲಿಲ್ಲ. ಮೊದಲ ವಿಕೆಟ್ ಶೂನ್ಯಕ್ಕೇ ಉದುರಿತು. ಬಳಿಕ ಕ್ರೀಸ್‌ಗೆ ಆಗಮಿಸಿದ ಮಿಶೆಲ್ ಮಾರ್ಷ್ ಒಂದು ಬದಿಯಲ್ಲಿ ಅಬ್ಬರಿಸುತ್ತ ಸಾಗಿದರು. ಶತಕವಂಚಿತರಾದರೂ 89 ರನ್ ಚಚ್ಚಿ, ತಂಡದ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದರು. 62 ಎಸೆತಗಳನ್ನು ಎದುರಿಸಿದ ಅವರು 5 ಬೌಂಡರಿ ಮತ್ತು 7 ಸಿಕ್ಸರ್ ಬಡಿದಟ್ಟಿದ್ದರು. ಮತ್ತೊಂದು ತುದಿಯಲ್ಲಿ ತಾಳ್ಮೆಯಿಂದ ಆಟವಾಡಿದ ಡೇವಿಡ್ ವಾರ್ನರ್ ಕೂಡ ಆಜೇಯ ಅರ್ಧ ಶತಕದೊಂದಿಗೆ (52 ರನ್, 41 ಎಸೆತ, 5 ಬೌಂಡರಿ, 1 ಸಿಕ್ಸರ್) ಗೆಲುವನ್ನು ಸಂಭ್ರಮಿಸಿದರು. ಅಲ್ಲದೆ, ಐಪಿಎಲ್‌ನ ಒಟ್ಟು 8 ಋತುಗಳಲ್ಲಿ 400ಕ್ಕಿಂತ ಹೆಚ್ಚಿನ ರನ್‌ಗಳನ್ನು ಬಾರಿಸಿದ ಸಾಧನೆಯನ್ನೂ ಮಾಡಿದರು. ಕೊನೆಗಳಿಗೆಯಲ್ಲಿ ಅಬ್ಬರಿಸಿದ ನಾಯಕ ರಿಷಭ್ ಪಂತ್ ಕೇವಲ 4 ಎಸೆತಗಳನ್ನು ಎರಡು ಸಿಕ್ಸರ್ ಸಹಿತ 13 ರನ್ ದೋಚಿದರಲ್ಲದೆ, ತಂಡವು ಕೇವಲ 18.1 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 161 ರನ್ ಗಳಿಸುವಂತೆ ಮಾಡಿದರು. ಈ ಗೆಲುವಿನೊಂದಿಗೆ ಡೆಲ್ಲಿ 12 ಪಂದ್ಯಗಳಲ್ಲಿ 12 ಅಂಕಗಳನ್ನು ಸಂಪಾದಿಸಿ, ಐದನೇ ಸ್ಥಾನದಲ್ಲಿದ್ದರೆ, ರಾಜಸ್ಥಾನ ಅಷ್ಟೇ ಸಂಖ್ಯೆಯ ಪಂದ್ಯಗಳಿಂದ 14 ಅಂಕಗಳನ್ನು ಗಳಿಸಿ ಆರ್‌ಸಿಬಿಯೊಂದಿಗೆ ಮೂರನೇ ಸ್ಥಾನವನ್ನು ಹಂಚಿಕೊಂಡಿದೆ.
    ಗುರುವಾರದ ಪಂದ್ಯದಲ್ಲಿ ಅಂಕಪಟ್ಟಿಯಲ್ಲಿ ತಳದಲ್ಲಿರುವ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ತಮ್ಮ ಪ್ರತಿಷ್ಠೆಯನ್ನು ಉಳಿಸಿಕೊಳ್ಳಲು ಹೋರಾಟ ನಡೆಸಲಿವೆ.

    delhi won the match tata ipl
    Share. Facebook Twitter Pinterest LinkedIn Tumblr Email WhatsApp
    Previous Articleಮೆಗ್ಗಾನ್ ಸ್ಥಿತಿ ಎಲ್ಲಿಗೆ ಬಂತು…??
    Next Article ಕೊಂಚ ಎಡವಿದ್ರಾ ಪರಶುರಾಮ್..??
    vartha chakra
    • Website

    Related Posts

    ಬಾಲಿವುಡ್ ಬೆಡಗಿ ತಮನ್ನಾ ಗೆ 6.2 ಕೋಟಿ !

    ಮೇ 22, 2025

    ಪರಮೇಶ್ವರ್ ವಿರುದ್ಧ ಇಡಿ ದಾಳಿ ಯಾಕೆ ಗೊತ್ತಾ ?

    ಮೇ 22, 2025

    ಬೆಂಗಳೂರಿಗೆ ಕುಮಾರಸ್ವಾಮಿ ಬಂಪರ್ ಕೊಡುಗೆ.

    ಮೇ 22, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಾಲಿವುಡ್ ಬೆಡಗಿ ತಮನ್ನಾ ಗೆ 6.2 ಕೋಟಿ !

    ಪರಮೇಶ್ವರ್ ವಿರುದ್ಧ ಇಡಿ ದಾಳಿ ಯಾಕೆ ಗೊತ್ತಾ ?

    ಬೆಂಗಳೂರಿಗೆ ಕುಮಾರಸ್ವಾಮಿ ಬಂಪರ್ ಕೊಡುಗೆ.

    ಅಲೋಕ್ ಕುಮಾರ್ Promotion ಗೆ ಇಲ್ಲ, ಯಾಕೆ ಗೊತ್ತಾ ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • https://boost-your-site-with-homepage-backlinks.us/a62e37ddae8fc802b4e65355a7164734-show.html ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • Philliphig ರಲ್ಲಿ ಮುನಿರತ್ನ ವಿರುದ್ಧ ಎಸ್ ಐ ಟಿ ಬೇಕು.
    • tiktok-ads-agency-account.org_AgomE ರಲ್ಲಿ ಬೆಂಗಳೂರಿನ ಚಿರತೆ ಪಡೆ ಕಾರ್ಯಾರಂಭ | Leopard Task Force
    Latest Kannada News

    ಬಾಲಿವುಡ್ ಬೆಡಗಿ ತಮನ್ನಾ ಗೆ 6.2 ಕೋಟಿ !

    ಮೇ 22, 2025

    ಪರಮೇಶ್ವರ್ ವಿರುದ್ಧ ಇಡಿ ದಾಳಿ ಯಾಕೆ ಗೊತ್ತಾ ?

    ಮೇ 22, 2025

    ಬೆಂಗಳೂರಿಗೆ ಕುಮಾರಸ್ವಾಮಿ ಬಂಪರ್ ಕೊಡುಗೆ.

    ಮೇ 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಅಂದು ಇಮ್ಮಡಿ ಪುಲಿಕೇಶಿ ಇಂದು ಸಿದ್ದು ಸರ್ಕಾರ #siddaramaiah #dkshivakumar #congress #pawankalyan #kpcc
    Subscribe