Facebook Twitter Instagram
    Vartha Chakra
    • ಸುದ್ದಿ
    • ಬೆಂಗಳೂರು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ರಾಜಕೀಯ
      • ಚುನಾವಣೆ 2023
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • ಅಪರಾಧ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮೀಸಲಾತಿ ಇಲ್ಲದೆ ಚುನಾವಣೆ ಬೇಡ..
    ಸುದ್ದಿ

    ಮೀಸಲಾತಿ ಇಲ್ಲದೆ ಚುನಾವಣೆ ಬೇಡ..

    vartha chakraBy vartha chakraಮೇ 11, 2022ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter Pinterest LinkedIn Tumblr Email
    Share
    Facebook Twitter LinkedIn Pinterest Email

    ಕರ್ನಾಟಕ : ರಾಜ್ಯದಲ್ಲಿ  ಸಿದ್ದವಾಗಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಆಧಾರದಲ್ಲಿ ಹಿಂದುಳಿದ ವರ್ಗಗಳಿಗೆ ರಾಜಕೀಯ ಮೀಸಲಾತಿಯನ್ನು ರೂಪಿಸಿ ಅದನ್ನು ಸುಪ್ರೀಮ್ ಕೋರ್ಟ್ ಗೆ ಸಲ್ಲಿಸಿ ಅದರ ಆಧಾರದಲ್ಲಿ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

    ಸ್ಥಳೀಯ ಸಂಸ್ಥೆ ಚುನಾವಣೆ ಕುರಿತು ಸುಪ್ರೀಮ್ ಕೋರ್ಟಿನ ಅಡಿರುವ ಆದೇಶದಿಂದ ಸೃಷ್ಟಿಯಾಗಿರುವ ಬಿಕ್ಕಟ್ಟಿಗೆ ಇದೊಂದೇ ಪರಿಹಾರ. ಈ ಆದೇಶದಿಂದ ಹಿಂದುಳಿದ ಜಾತಿಗಳಿಗೆ ಆಗಲಿರುವ ಈ ಅನ್ಯಾಯವನ್ನು ತಪ್ಪಿಸಲು ರಾಜ್ಯ ಸರ್ಕಾರ ಸರ್ವಪಕ್ಷ ಮುಖಂಡರು ಮತ್ತು ಕಾನೂನು ತಜ್ಞರ ಜೊತೆ ಸಮಾಲೋಚಿಸ ಬೇಕು ಎಂದು ಆಗ್ರಹಿಸಿದ್ದಾರೆ.

    “ಉದ್ಯೋಗ ಮತ್ತು ಶಿಕ್ಷಣಕ್ಕೆ ಸಂಬಂಧಿಸಿದ ಮೀಸಲಾತಿಯನ್ನು ರಾಜಕೀಯ ಕ್ಷೇತ್ರಕ್ಕೆ ಅನ್ವಯಿಸಲಾಗದು. ಇದಕ್ಕಾಗಿ  ಹಿಂದುಳಿದ ವರ್ಗಗಳ ಆಯೋಗದ ಮೂಲಕ  ವಿಶ್ವಾಸಾರ್ಹ ದತ್ತಾಂಶ ಆಧರಿಸಿದ ಮಾಹಿತಿಯನ್ನು ಮೂರು ಹಂತಗಳ ಪರಿಶೀಲನೆಗೊಡ್ಡಿ  ಪ್ರತ್ಯೇಕ ರಾಜಕೀಯ ಮೀಸಲಾತಿಯನ್ನು ರೂಪಿಸಬೇಕು” ಎಂದು 2010ರಲ್ಲಿಯೇ ಸುಪ್ರೀಮ್ ಕೋರ್ಟ್ ರಾಜ್ಯಗಳಿಗೆ ಆದೇಶ ನೀಡಿತ್ತು. ಅದೇ ಆದೇಶವನ್ನು ಸುಪ್ರೀಮ್ ಕೋರ್ಟ್ ಪುನರುಚ್ಚರಿಸುತ್ತಾ ಬಂದಿದೆ‌ ಹೀಗಾಗಿ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ.

    ಹಿಂದುಳಿದ ಜಾತಿಗಳಿಗೆ ಸಂಬಂಧಿಸಿದ ಪರಿಷ್ಕೃತ ರಾಜಕೀಯ ಮೀಸಲಾತಿ ತಕ್ಷಣಕ್ಕೆ ಲಭ್ಯ ಇಲ್ಲದೆ ಹೋದರೆ ಅದಕ್ಕಾಗಿ ಕಾಯದೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲು ಕ್ಷೇತ್ರಗಳನ್ನು ಹೊರತುಪಡಿಸಿ ಉಳಿದೆಲ್ಲ ಕ್ಷೇತ್ರಗಳನ್ನು ಸಾಮಾನ್ಯ ಕ್ಷೇತ್ರಗಳೆಂದು ಪರಿಗಣಿಸಿ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಬೇಕು ಎಂದು ತನ್ನ ಹಿಂದಿನ ಆದೇಶವನ್ನು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ, ಇದರಿಂದ ಹಿಂದುಳಿದ ವರ್ಗಗಳಿಗೆ ಅನ್ಯಾಯವಾಗಲಿದೆ ಎಂದು ಹೇಳಿದರು. ಸ್ಥಳೀಯ ಸಂಸ್ಥೆಗಳಲ್ಲಿನ ಹಿಂದುಳಿದ ವರ್ಗಗಳ ರಾಜಕೀಯ ಮೀಸಲಾತಿಯ ತನ್ನ ಆದೇಶ ಎಲ್ಲ ರಾಜ್ಯಗಳಿಗೆ ಅನ್ವಯಿಸಿದೆ ಎಂದು ಹೇಳುತ್ತಲೇ ಇದ್ದರೂ ರಾಜ್ಯದ ಬಿಜೆಪಿ ಸರ್ಕಾರ ಕಾನೂನು ಹೋರಾಟಕ್ಕೆ ಮುಂದಾಗದೆ ಕಾಲಹರಣ ಮಾಡುತ್ತಿರುವುದು ವಿಷಾದನೀಯ ಎಂದಿದ್ದಾರೆ.

    ರಾಜ್ಯ ಸರ್ಕಾರ ಈ ವಿಷಯವನ್ನು ಪ್ರತಿಷ್ಠೆಯಾಗಿ ಮಾಡಿಕೊಳ್ಳದೆ, ಸರ್ವಜನರ ಹಿತದ ವಿಷಯದಲ್ಲಿ ರಾಜಕೀಯ ಮಾಡಲು ಹೋಗದೆ ಕಾಂತರಾಜ್ ಆಯೋಗದ ವರದಿಯನ್ನು ಒಪ್ಪಿಕೊಳ್ಳಬೇಕು. ಅದರ ಅನ್ವಯ ಮೀಸಲಾತಿ ನಿಗಧಿ ಪಡಿಸಬೇಕು ಎಂದು ಮನವಿ ಮಾಡಿದ್ದಾರೆ.

    reservation
    Share. Facebook Twitter Pinterest LinkedIn Tumblr Email
    Previous Articleಕೆಲಸಕ್ಕೆ ಚಕ್ಕರ್ 38  ಇನ್ಸ್‌ಪೆಕ್ಟರ್ ಗಳಿಗೆ notice
    Next Article ಸೌದಿಗೆ ತೆರಳಿದ ಮುಷ್ಕಾನ್
    vartha chakra
    • Website

    Related Posts

    ಅಖಾಡದಲ್ಲಿ ಝಣ ಝಣ ಕಾಂಚಾಣ! #karnatakaelections2023 #bangalore

    ಮಾರ್ಚ್ 23, 2023

    Electionಗೆ ಮುನ್ನವೇ DK ವ್ಯೂಹ ಛಿದ್ರ

    ಮಾರ್ಚ್ 21, 2023

    Facebookನಿಂದ ಮನೆಗೆ ಹೊರಟ10000 ಮಂದಿ #meta #jobs

    ಮಾರ್ಚ್ 15, 2023

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕ್ರೀಡೆ
    • ಚುನಾವಣೆ
    • ಚುನಾವಣೆ 2023
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬೆಂಗಳೂರು
    • ಮನರಂಜನೆ
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಮಾಜ
    • ಸಮೂಹ ಶಕ್ತಿ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    Kabza ಸಿನೆಮ ನಿಜವಾದ Collection ಎಷ್ಟು ಗೊತ್ತಾ? #kabza #shriyasaran #kiccha

    Ultraviolet ಕಿರಣಗಳಿವೆ ಎಚ್ಚರ! #bangalore #skincancer

    ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಮೃತಪಟ್ಟಿದ್ದು ಹೃದಯಾಘಾತದಿಂದಲ್ಲ!

    ರಾಹುಲ್ ಗಾಂಧಿ Disqualified

    About
    About

    We're social, connect with us:

    Facebook Twitter YouTube
    Software Training
    Recent Posts
    • Kabza ಸಿನೆಮ ನಿಜವಾದ Collection ಎಷ್ಟು ಗೊತ್ತಾ? #kabza #shriyasaran #kiccha ಮಾರ್ಚ್ 26, 2023
    • Ultraviolet ಕಿರಣಗಳಿವೆ ಎಚ್ಚರ! #bangalore #skincancer ಮಾರ್ಚ್ 25, 2023
    • ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಮೃತಪಟ್ಟಿದ್ದು ಹೃದಯಾಘಾತದಿಂದಲ್ಲ! ಮಾರ್ಚ್ 24, 2023
    • ರಾಹುಲ್ ಗಾಂಧಿ Disqualified ಮಾರ್ಚ್ 24, 2023
    • ಅಖಾಡದಲ್ಲಿ ಝಣ ಝಣ ಕಾಂಚಾಣ! #karnatakaelections2023 #bangalore ಮಾರ್ಚ್ 23, 2023
    • ಉಮೇಶ್ ಕತ್ತಿ ಸೋದರನಿಗೆ Congress ಗಾಳ ಮಾರ್ಚ್ 23, 2023
    • Kumaraswamy ಸೇರು- Bhavani Revanna ಸವ್ವಾ ಸೇರು! ಮಾರ್ಚ್ 22, 2023
    • BJP ಸೇರಿದ ರೋಷನ್ ಬೇಗ್! #bjp #karnataka #congressparty #elections ಮಾರ್ಚ್ 21, 2023
    • ರಸ್ತೆಯಲ್ಲಿ ಬೆತ್ತಲಾಗಿ ಓಡಿದ ಸಿನಿಮಾ ನಟಿ ಮಾರ್ಚ್ 21, 2023
    • Electionಗೆ ಮುನ್ನವೇ DK ವ್ಯೂಹ ಛಿದ್ರ ಮಾರ್ಚ್ 21, 2023
    Popular Posts

    Kabza ಸಿನೆಮ ನಿಜವಾದ Collection ಎಷ್ಟು ಗೊತ್ತಾ? #kabza #shriyasaran #kiccha

    ಮಾರ್ಚ್ 26, 2023

    Ultraviolet ಕಿರಣಗಳಿವೆ ಎಚ್ಚರ! #bangalore #skincancer

    ಮಾರ್ಚ್ 25, 2023

    ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಮೃತಪಟ್ಟಿದ್ದು ಹೃದಯಾಘಾತದಿಂದಲ್ಲ!

    ಮಾರ್ಚ್ 24, 2023
    Copyright © 2023 Vartha Chakra
    • ಸುದ್ದಿ
    • ಬೆಂಗಳೂರು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ರಾಜಕೀಯ
      • ಚುನಾವಣೆ 2023
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • ಅಪರಾಧ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    DK ಮಾಡಿದ ಪ್ರತಿಜ್ಞೆ #dk #dkshivakumar #ramanagara #jds #mysore #congressparty #belgaum #sandalwood
    Subscribe