Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮುಡಾ ಹಗರಣ -ಕೋರ್ಟ್ ನಲ್ಲೇನಾಯಿತು ಗೊತ್ತಾ
    ರಾಜಕೀಯ

    ಮುಡಾ ಹಗರಣ -ಕೋರ್ಟ್ ನಲ್ಲೇನಾಯಿತು ಗೊತ್ತಾ

    vartha chakraBy vartha chakraಜನವರಿ 15, 20253 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜ.15-
    ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣದ ತನಿಖೆಯನ್ನು ಸಿಬಿಐಗೆ  ವರ್ಗಾಯಿಸುವಂತೆ ಆರ್ಟಿಐ ಕಾರ್ಯರಕರ್ತ ಸ್ನೇಹಮಯಿ ಕೃಷ್ಣಸಲ್ಲಿಸಿರುವ ರಿಟ್ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಏಕಸದಸ್ಯ ಪೀಠ ಇದೇ ಜ. 27ಕ್ಕೆ ಮುಂದೂಡಿದೆ.
    ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ಹಿರಿಯ ವಕೀಲ ಪ್ರೊ.ರವಿವರ್ಮ ಕುಮಾರ್ ಮತ್ತು ಮನು ಸಿಂಘ್ವಿ, ರಾಜ್ಯ ಸರ್ಕಾರದ ಪರ‌ವಾಗಿ ಕಪಿಲ್‌ ಸಿಬಲ್, ಎಜಿ ಶಶಿಕಿರಣ್ ಶೆಟ್ಟಿ ಮತ್ತು ಹಿಂದಿನ ಭೂ ಮಾಲೀಕ ದೇವರಾಜು ಪರ ದುಷ್ಯಂತ್ ದವೆ ಮತ್ತು ದೂರುದಾರ ಸ್ನೇಹಮಯಿ ಕೃಷ್ಣ ಪರ ಮಣೀಂದರ್ ಸಿಂಗ್ ಅವರು ನ್ಯಾ.ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠದ ಮುಂದೆ ವಾದ ಮಂಡಿಸಿದರು.
    ವಿಚಾರಣೆ ಆರಂಭದಲ್ಲೇ ಹೈಕೋರ್ಟ್, ಸಿಬಿಐ ತನಿಖೆಗೆ ವಹಿಸಬೇಕೇ ಅಥವಾ ಬೇಡವೇ ಎಂಬ ಬಗ್ಗೆ ವಾದ ಸೀಮಿತಗೊಳಿಸಿ ಎಂದು ಎರಡೂ ಕಡೆ ವಕೀಲರಿಗೆ ಸೂಚನೆ ನೀಡಿತು.
    ಈವರೆಗಿನ ತನಿಖೆ ವರದಿ ಸಲ್ಲಿಸಿಲ್ಲವೇಕೆ? ನಾಳೆಯೊಳಗೆ ಈವರೆಗಿನ ತನಿಖೆ ವರದಿ ಸಲ್ಲಿಸಿ ಎಂದು ಲೋಕಾಯುಕ್ತ ಪೊಲೀಸ್ ಪರ ವಕೀಲ ವೆಂಕಟೇಶ್ ಅರಬಟ್ಟಿ ಅವರಿಗೆ ಹೈಕೋರ್ಟ್  ಸೂಚಿಸಿತು.
    ಸ್ನೇಹಮಯಿ ಕೃಷ್ಣ ಪರ ಮಣೀಂದರ್ ಸಿಂಗ್ ವಾದ ಮಂಡಿಸಿ  ತನಿಖೆ ನಿಷ್ಪಕ್ಷಪಾತವಾಗಿರಬೇಕು, ಜನರಲ್ಲಿ ವಿಶ್ವಾಸ ಮೂಡಿಸುವಂತಿರಬೇಕು. ರಾಜಕಾರಣಿಗಳು ಭಾಗಿಯಾಗಿರುವಾಗಿರುವಾಗ ನಿಷ್ಪಕ್ಷಪಾತ ತನಿಖೆ ಕಷ್ಟ. ಹೀಗಾಗಿ ಸ್ವತಂತ್ರ ತನಿಖೆ ನಡೆಸುವ ಅಗತ್ಯವಿದೆ. ಮೂವರು ಸದಸ್ಯರ ಕಮಿಟಿ ತನಿಖೆ ಉಸ್ತುವಾರಿ ತೆಗೆದುಕೊಂಡಿದೆ. ರಾಜ್ಯ ಸರ್ಕಾರದಿಂದ ನೇಮಕವಾದ ಪೊಲೀಸರೇ ಇಲ್ಲಿ ತನಿಖೆ ನಡೆಸುತ್ತಾರೆ. ಲೋಕಾಯುಕ್ತ ಪೊಲೀಸರು ನಿಯೋಜನೆ ಮೇಲೆ ಬಂದಿರುತ್ತಾರೆ. ಹೀಗಾಗಿ, ನಿಷ್ಪಕ್ಷಪಾತ ತನಿಖೆ ಸಾಧ್ಯವಿಲ್ಲ. 56 ಕೋಟಿ ಮೊತ್ತದ ಸೈಟ್ಗಳನ್ನು ಅಕ್ರಮವಾಗಿ ಪಡೆದಿದ್ದಾರೆ. ಸಿಎಂ ಪತ್ನಿ ಈಗ 14 ಸೈಟ್ಗಳನ್ನು ಮಿಂಚಿನ ವೇಗದಲ್ಲಿ ಹಿಂತಿರುಗಿಸಿದ್ದಾರೆ. ರಾಜ್ಯ ಸರ್ಕಾರ ಈ ಕೇಸ್ನಿಂದ ಆರೋಪಿಗಳನ್ನು ರಕ್ಷಿಸಲು ಮುಂದಾಗಿದೆ. ಅದೇ ದಿನ ಸರ್ಕಾರ ಸೈಟ್ಗಳನ್ನು ಹಿಂಪಡೆಯಲು ಒಪ್ಪಿಗೆ ನೀಡಿದೆ ಎಂದು ನ್ಯಾಯಾಲಯದ ಗಮನ ಸೆಳೆದರು.
    ಸ್ವಯಂಪ್ರೇರಿತವಾಗಿ ಲೋಕಾಯುಕ್ತ ಮುಡಾ ಪ್ರಕರಣದ ತನಿಖೆ ನಡೆಸುತ್ತಿದೆ. ಮುಡಾದ ದಾಖಲೆಗಳನ್ನು ಸರ್ಕಾರ ರಚಿಸಿದ ಆಯೋಗ ತೆಗೆದುಕೊಂಡಿದೆ.
    ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳು 145 ಫೈಲ್ ತೆಗೆದುಕೊಂಡಿದ್ದಾರೆ. ಮೈಸೂರಿನ ಲೋಕಾಯುಕ್ತ ಡಿವೈಎಸ್‌ಪಿಯೇ ಈ ಬಗ್ಗೆ ಪತ್ರ ಬರೆದಿದ್ದಾರೆ. ಐಎಎಸ್‌ ಅಧಿಕಾರಿ ನೇತೃತ್ವದಲ್ಲಿ ದಾಖಲೆ ವಶಕ್ಕೆ ಪಡೆದಿದ್ದಾರೆ. ನಗರಾಭಿವೃದ್ಧಿ ಸಚಿವರೂ ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಈ ಫೈಲ್ಗಳು ಯಾವುದೆಂದು ಲೋಕಾಯುಕ್ತ ಡಿವೈಎಸ್‌ಪಿ ಹೇಳಿಲ್ಲ. ಹೀಗಾಗಿ, ಈ ಫೈಲ್ಗಳೂ ಇದರಲ್ಲಿ ಸೇರಿರಬಹುದು. 145 ಫೈಲ್ಗಳ ಕಥೆ ಏನಾಗಿದೆ ಎಂಬುದು ಈವರೆಗೂ ತಿಳಿದಿಲ್ಲ. ಲೋಕಾಯುಕ್ತ ಕಚೇರಿಯೂ ಈ ಫೈಲ್ ಪಡೆಯಲು ಪ್ರಯತ್ನಿಸಿಲ್ಲ ಎಂದು ಹೇಳಿದರು.
    ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸಿಎಂ ಪರ ಹಿರಿಯ ವಕೀಲ ರವಿವರ್ಮ ಕುಮಾರ್ ಅವರು  ಸಂಬಂಧವಿಲ್ಲದ ವಾದಮಂಡನೆ ಮಾಡುತ್ತಿದ್ದಾರೆಂದು ದೂರಿದರು
    ಇದೇ ವೇಳೆ ರಿಟ್ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸಿಎಂ ಪರ ವಕೀಲ ಕಪಿಲ್ ಸಿಬಲ್ ಸಮಯ ಕೋರಿದರು. ಜನವರಿ 27ಕ್ಕೆ ವಿಚಾರಣೆ ಮುಂದೂಡುವಂತೆ ಮನವಿ ಮಾಡಿದರು. ಮನವಿ ಪರಿಗಣಿಸಿ ಹೈಕೋರ್ಟ್ ವಿಚಾರಣೆಯನ್ನು ಜನವರಿ 27ಕ್ಕೆ ಮುಂದೂಡಿತು.
    ಹಾಗೇ, ಲೋಕಾಯುಕ್ತ ಎಡಿಜಿಪಿ ಇಲ್ಲಿಯವರೆಗಿನ ತನಿಖಾ ವರದಿಯನ್ನು ಮುಂದಿನ ವಿಚಾರಣೆಗೆ ಒಂದು ದಿನ ಮುನ್ನ ಸಲ್ಲಿಸಬೇಕು. ಅಲ್ಲಿಯವರೆಗೆ ಲೋಕಾಯುಕ್ತ ಪೊಲೀಸರು ತನಿಖೆ ನಡೆಸಬಹುದು ಎಂದು ನ್ಯಾಯಪೀಠ ಹೇಳಿತು.

    Verbattle
    Verbattle
    Verbattle
    ನ್ಯಾಯ ಬೆಂಗಳೂರು ಮೈ ಮೈಸೂರು ಸರ್ಕಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಭಾರತೀಯ ನೌಕಾಪಡೆ ಗೆ ಭೀಮ ಬಲ
    Next Article ಕೆಪಿಸಿಸಿ ನೂತನ ಅಧ್ಯಕ್ಷರು ಯಾರು ಗೊತ್ತಾ
    vartha chakra
    • Website

    Related Posts

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    ಜನವರಿ 22, 2026

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    ಜನವರಿ 22, 2026

    ಈಶ್ವರ ಖಂಡ್ರೆ ಅವರಿಗೆ ಹೊಸ ಜವಾಬ್ದಾರಿ

    ಜನವರಿ 22, 2026

    3 ಪ್ರತಿಕ್ರಿಯೆಗಳು

    1. vipryamitel daison_drpa on ಜನವರಿ 10, 2026 10:27 ಅಪರಾಹ್ನ

      выпрямитель dyson airstrait ht01 оригинал выпрямитель dyson airstrait ht01 оригинал .

      Reply
    2. vipryamitel daison_bipa on ಜನವರಿ 11, 2026 3:45 ಫೂರ್ವಾಹ್ನ

      выпрямитель дайсон airstrait ht01 выпрямитель дайсон airstrait ht01 .

      Reply
    3. vipryamitel daison kypit_ccPr on ಜನವರಿ 11, 2026 9:17 ಅಪರಾಹ್ನ

      выпрямитель дайсон airstrait ht01 выпрямитель дайсон airstrait ht01 .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    ಈಶ್ವರ ಖಂಡ್ರೆ ಅವರಿಗೆ ಹೊಸ ಜವಾಬ್ದಾರಿ

    ಡಿ.ಕೆ. ಸುರೇಶ್ ಚುಚ್ಚುಮಾತು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jeffreymaf ರಲ್ಲಿ ವಿದ್ಯುತ್ ತಂತಿಯಿಂದ ದುರ್ಮರಣ – ಲೋಕಾಯುಕ್ತ ತನಿಖೆ | Hope Farm Electrocution
    • Georgemen ರಲ್ಲಿ ನಾಲ್ವರಿಗೆ ಒಲಿದ ಅದೃಷ್ಟ !
    • Daviddek ರಲ್ಲಿ ಹೀಗೂ ಸುದ್ದಿಯಾದ ನಳಪಾಡ್.
    Latest Kannada News

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    ಜನವರಿ 22, 2026

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    ಜನವರಿ 22, 2026

    ಈಶ್ವರ ಖಂಡ್ರೆ ಅವರಿಗೆ ಹೊಸ ಜವಾಬ್ದಾರಿ

    ಜನವರಿ 22, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.