Facebook Twitter Instagram
    Vartha Chakra
    • ಸುದ್ದಿ
    • ಬೆಂಗಳೂರು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ರಾಜಕೀಯ
      • ಚುನಾವಣೆ 2023
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • ಅಪರಾಧ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮುನಿಶ್ ಮೌದ್ಗಿಲ್ ಸ್ವಾವಲಂಬಿ
    ಸುದ್ದಿ

    ಮುನಿಶ್ ಮೌದ್ಗಿಲ್ ಸ್ವಾವಲಂಬಿ

    vartha chakraBy vartha chakraಏಪ್ರಿಲ್ 22, 2022Updated:ಏಪ್ರಿಲ್ 22, 2022ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter Pinterest LinkedIn Tumblr Email
    Share
    Facebook Twitter LinkedIn Pinterest Email

    ಕಂದಾಯ ಇಲಾಖೆಯ ಭೂಸರ್ವೇಕ್ಷಣೆ ಮತ್ತು ನಕ್ಷೆ ಇಲಾಖೆ ಮುಖ್ಯಸ್ಥರಾಗಿ ಮೌನೀಶ್ ಮುದ್ಗೀಲ್ ನೇಮಕಗೊಂಡ ನಂತರ ಇಲಾಖೆಯಲ್ಲಿ ಹಲವು ಕ್ರಾಂತಿಕಾರಕ ಬದಲಾವಣೆಗಳಾಗಿವೆ.
    ಸಾರ್ವಜನಿಕರು, ಸರ್ವೆ, ನಕ್ಷೆ ಮೊದಲಾದ ಅಗತ್ಯ ಕೆಲಸಗಳಿಗಾಗಿ ತಿಂಗಳುಗಟ್ಟಲೆ ಕಂದಾಯ ಇಲಾಖೆಗೆ ಅಲೆಯುವ ಸ್ಥಿತಿ ಇದ್ದು,ಇದನ್ನು ಈಗ ಸಂಪೂರ್ಣ ಬದಲಾಯಿಸಲಾಗಿದೆ.
    ಆಧುನಿಕ ತಂತ್ರಜ್ಞನಾದ ನೆರವು ಪಡೆದ ಮುನಿಶ್ ಮೌದ್ಗಿಲ್, ಜನ ಸಾಮಾನ್ಯರು ತಮ್ಮ ಮನೆ ಬಾಗಿಲಲ್ಲೇ ಈ ಸೇವೆಗಳನ್ನು ಪಡೆಯುವಂತಹ ವ್ಯವಸ್ಥೆ ರೂಪಿಸಿದ್ದಾರೆ. ಈಗ ಇದರ ಸಾಲಿಗೆ ಮತ್ತೊಂದು ಸೇವೆ ಸೇರ್ಪಡೆಯಾಗಿದೆ ಅದೇ ಸ್ವಾವಲಂಬಿ..
    ಇಲ್ಲಿಯವರೆಗೆ ನಾಗರಿಕರು ಅವರ ಸ್ವಂತ ಜಮೀನಿನ ನಕ್ಷೆಗಾಗಿ ಅರ್ಜಿ ಭೂ ಮಾಪನ ಇಲಾಖೆಗೆ ಸಲ್ಲಿಸಬೇಕು ಇದಾದ ನಂತರ ಆಸ್ತಿ ಭಾಗ ಮಾಡಲು ಸರ್ವೆ ನಡೆಸಿ, ಸ್ಕೆಚ್‌ ಮಾಡಿ, ನೋಂದಣಿ ಮಾಡಿ ಪಹಣಿ ಪಡೆಯಲು ಕನಿಷ್ಠ 6 ತಿಂಗಳಿಂದ ಒಂದು ವರ್ಷ ಬೇಕಾಗುತ್ತಿದೆ.
    ಇದಕ್ಕೆ ಪ್ರಮುಖ ಕಾರಣ ಖಾಸಗಿ ಜಮೀನುಗಳಲ್ಲಿ ಸ್ಕೆಚ್‍ಗಳಿಗಾಗಿ ಸಲ್ಲಿಸುವ ಅರ್ಜಿಗಳನ್ನು ಸರ್ಕಾರಿ ಭೂಮಾಪಕರು ಅಥವ ಪರವಾನಿಗೆ ಭೂಮಾಪಕರುಗಳಿಂದ ಸಿದ್ಧಪಡಿಸಲಾಗುತ್ತದೆ. ಆದರೆ ಇಲಾಖೆಯಲ್ಲಿ ಸರ್ಕಾರಿ ಭೂಮಾಪಕರು ಮತ್ತು ಪರವಾನಿಗೆ ಭೂಮಾಪಕರ ಸಂಖ್ಯೆಯು ಸೀಮಿತವಾಗಿದೆ. ಹೀಗಾಗಿ ಕಾಲಮಿತಿಯೊಳಗೆ ಅರ್ಜಿಗಳ ವಿಲೇವಾರಿ ಸಾಧ್ಯವಾಗುತ್ತಿಲ್ಲ. ಇದರಿಂದಾಗಿ ಇಲಾಖೆಯ ವಿರುದ್ಧ ಪಕ್ಷಪಾತ, ಭ್ರಷ್ಟಾಚಾರ ಆರೋಪಗಳು ಸಾಮಾನ್ಯವಾಗಿದ್ದವು.
    ಸರ್ವೆ, ನಕ್ಷೆ, ಮತ್ತು ಹಿಸ್ಸೆಗಾಗಿ ಇಲಾಖೆಗೆ ಪ್ರತಿ ತಿಂಗಳು ಒಂದು ಲಕ್ಷಕ್ಕಿಂತ ಹೆಚ್ಚಿನ ಅರ್ಜಿಗಳು ಸ್ವೀಕೃತವಾಗುತ್ತವೆ. ಹೀಗಾಗಿ ನಾಗರಿಕರು ತಮ್ಮ ಸ್ವಂತ ಜಮೀನಿನಲ್ಲಿ ಯಾವುದೇ ರೀತಿಯ ಕ್ರಯ ಮತ್ತು ವಿಭಾಗ ಮಾಡಿಸಿಕೊಳ್ಳಲು ಅಗತ್ಯವಿರುವ ಸ್ಕೆಚ್‍ಗಾಗಿ ಹಲವಾರು ತಿಂಗಳುಗಳು ಮತ್ತು ಕೆಲವೊಮ್ಮೆ ವರ್ಷದವರೆಗೆ ಕಾಯಬೇಕಾಗುತ್ತದೆ.
    ಈ ಸಮಸ್ಯೆಗೆ ಪರಿಹಾರ ನೀಡಲು ನಾಗರಿಕರೇ ತಮ್ಮ ಜಮೀನಿಗೆ ಸ್ವಂತ ನಕ್ಷೆ ಮಾಡಿಕೊಳ್ಳಲು ಮುನಿಶ್ ಮೌದ್ಗಿಲ್ ವಿಶೇಷ ಆಸಕ್ತಿವಹಿಸಿ ರೂಪಿಸಿರುವ ಯೋಜನೆಯೇ ಸ್ವಾವಲಂಬಿ‌.
    ಎನು ಇದು ಅಂತಿರಾ.. ಭೂ ಮಾಪನ ಇಲಾಖೆ ಸ್ವಾವಲಂಬಿ’ ಹೆಸರಿನ ಆ್ಯಪ್‌ ಅಭಿವೃದ್ಧಿಪಡಿಸಿದೆ.
    ಇದರ ಮೂಲಕ ನಾಗರಿಕರೇ ತಮ್ಮ ಜಮೀನಿಗೆ ಸ್ವಂತ ನಕ್ಷೆ ಮಾಡಿಕೊಳ್ಳಬಹುದಾಗಿದೆ. 11ಇ ಸ್ಕೆಚ್, ತತ್ಕಾಲ ಪೋಡಿ ಇವುಗಳನ್ನು ಜನರು ಸ್ವಂತ ಜಮೀನಿಗೆ ತಾವೇ ಮಾಡಿಕೊಳ್ಳಲು ಅವಕಾಶ ನೀಡುತ್ತಿದೆ.ಈ ಆ್ಯಪ್‌ ನಿರ್ವಹಣೆ ಗೊತ್ತಿದ್ದರೆ ಸ್ವತಃ ತಾವೇ ರೆವಿನ್ಯೂ ಸ್ಕೆಚ್‌ ತಯಾರಿಸಬಹುದು, ಇಲ್ಲವೇ ಬಲ್ಲವರಿಂದ ಸ್ಕೆಚ್‌ ಸಿದ್ಧಪಡಿಸಿಕೊಳ್ಳಬಹುದಾಗಿದೆ.ಆ್ಯಪ್‌ ಮೂಲಕ ಅದಕ್ಕೆ ತಕ್ಕಂತೆ ಸ್ಥಳದಲ್ಲೇ ಸ್ಕೆಚ್‌ ಮಾಡಬಹುದು.
    ಇದಕ್ಕಾಗಿ ಸರ್ವೇಯರ್‌ಗಳನ್ನು ಕರೆಸಬೇಕಾಗಿಲ್ಲ. ಸ್ಕೆಚ್‌ ಸಿದ್ಧಪಡಿಸಿದ ಬಳಿಕ ಭೂದಾಖಲೆಗಳ ಕಚೇರಿಗೆ ಅಪ್‌ಲೋಡ್‌ ಮಾಡಬೇಕು.ಕಂದಾಯ ಇಲಾಖೆ ‘ ನಂತರ ನೋಂದಣಿ ಇಲಾಖೆಯಲ್ಲಿ ಆ ಸ್ಕೆಚ್‌ನ ಗಡಿಗಳಿಗೆ (ಬೌಂಡರಿ) ಅನುಗುಣವಾಗಿ ನೋಂದಣಿ ಮಾಡಲಾಗುತ್ತದೆ.
    ಒಟ್ಟಾರೆಯಾಗಿ, 11ಇ ಸ್ಕೆಚ್, ತತ್ಕಾಲ ಪೋಡಿ ಇವುಗಳನ್ನು ಜನರು ಸ್ವಂತ ಜಮೀನಿಗೆ ತಾವೇ ಮಾಡಿಕೊಳ್ಳಲು ಅವಕಾಶ ನೀಡಿರುವುರಿಂದ ಸರ್ವೇ ವಿಳಂಬವಾಗಿ, ಸಾರ್ವಜನಿಕರಿಗೆ ಆಗುತ್ತಿದ್ದ ಸಮಸ್ಯೆ ನಿವಾರಣೆಯಾಗುವ ಮೂಲಕ ಇಲಾಖೆ ಜನಸ್ನೇಹಿಯಾಗಿ‌ ಪರಿವರ್ತನೆಯಾಗಿದೆ.

    #munishmoudgil #survey
    Share. Facebook Twitter Pinterest LinkedIn Tumblr Email
    Previous Articleಕೋರ್ಟ್ ಆದೇಶ ಪಾಲಿಸಿ
    Next Article ಜೇಮ್ಸ್ ರೀ-ಎಂಟ್ರಿ
    vartha chakra
    • Website

    Related Posts

    Electionಗೆ ಮುನ್ನವೇ DK ವ್ಯೂಹ ಛಿದ್ರ

    ಮಾರ್ಚ್ 21, 2023

    Facebookನಿಂದ ಮನೆಗೆ ಹೊರಟ10000 ಮಂದಿ #meta #jobs

    ಮಾರ್ಚ್ 15, 2023

    ರಾಮನಗರದಲ್ಲಿ ನಿಖಿಲ್ ಸ್ಪರ್ಧೆ Doubt! #jds #kumaraswamy #ramanagara

    ಮಾರ್ಚ್ 15, 2023

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕ್ರೀಡೆ
    • ಚುನಾವಣೆ
    • ಚುನಾವಣೆ 2023
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬೆಂಗಳೂರು
    • ಮನರಂಜನೆ
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಮಾಜ
    • ಸಮೂಹ ಶಕ್ತಿ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    BJP ಸೇರಿದ ರೋಷನ್ ಬೇಗ್! #bjp #karnataka #congressparty #elections

    ರಸ್ತೆಯಲ್ಲಿ ಬೆತ್ತಲಾಗಿ ಓಡಿದ ಸಿನಿಮಾ ನಟಿ

    Electionಗೆ ಮುನ್ನವೇ DK ವ್ಯೂಹ ಛಿದ್ರ

    BJP ಸಿಎಂ ಅಭ್ಯರ್ಥಿ ಯಾರು?

    About
    About

    We're social, connect with us:

    Facebook Twitter YouTube
    Software Training
    Recent Posts
    • BJP ಸೇರಿದ ರೋಷನ್ ಬೇಗ್! #bjp #karnataka #congressparty #elections ಮಾರ್ಚ್ 21, 2023
    • ರಸ್ತೆಯಲ್ಲಿ ಬೆತ್ತಲಾಗಿ ಓಡಿದ ಸಿನಿಮಾ ನಟಿ ಮಾರ್ಚ್ 21, 2023
    • Electionಗೆ ಮುನ್ನವೇ DK ವ್ಯೂಹ ಛಿದ್ರ ಮಾರ್ಚ್ 21, 2023
    • BJP ಸಿಎಂ ಅಭ್ಯರ್ಥಿ ಯಾರು? ಮಾರ್ಚ್ 20, 2023
    • ರಮೇಶ್ ಜಾರಕಿಹೊಳಿಗೆ BJP ಗೇಟ್ ಪಾಸ್? ಮಾರ್ಚ್ 19, 2023
    • ಆರೋಗ್ಯ ನೌಕರರ ಮೇಲೆ ESMA ಬ್ರಹ್ಮಾಸ್ರ್ತ ಮಾರ್ಚ್ 19, 2023
    • ಹಿರಿಯೂರಿನಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪೂರ್ಣಿಮಾ ಶ್ರೀನಿವಾಸ್ ಕಣಕ್ಕಿಳಿಯಲಿದ್ದಾರೆ ಮಾರ್ಚ್ 18, 2023
    • ದಾರಿ ಕಾಣದಾದ ಸಿದ್ದರಾಮಯ್ಯ #siddaramaiah #congress #kharge ಮಾರ್ಚ್ 18, 2023
    • Ola ಮತ್ತು Uber ಗೆ ಸೆಡ್ಡು ಹೊಡೆದ ನಮ್ಮ ಯಾತ್ರಿ ಮಾರ್ಚ್ 18, 2023
    • ಬಯಲಾಯ್ತು Express ಹೆದ್ದಾರಿ ‌ಬಣ್ಣ! ಮಾರ್ಚ್ 18, 2023
    Popular Posts

    BJP ಸೇರಿದ ರೋಷನ್ ಬೇಗ್! #bjp #karnataka #congressparty #elections

    ಮಾರ್ಚ್ 21, 2023

    ರಸ್ತೆಯಲ್ಲಿ ಬೆತ್ತಲಾಗಿ ಓಡಿದ ಸಿನಿಮಾ ನಟಿ

    ಮಾರ್ಚ್ 21, 2023

    Electionಗೆ ಮುನ್ನವೇ DK ವ್ಯೂಹ ಛಿದ್ರ

    ಮಾರ್ಚ್ 21, 2023
    Copyright © 2023 Vartha Chakra
    • ಸುದ್ದಿ
    • ಬೆಂಗಳೂರು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ರಾಜಕೀಯ
      • ಚುನಾವಣೆ 2023
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • ಅಪರಾಧ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    A free roll of viewpoints in a political interview.
    H Vishwanath in Bicchu Maatu #jds #congressparty #kpcc #dkshivakumar #mysore #mysuru #siddaramaiah
    Subscribe