ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರೊಚ್ಚು.
    Trending

    ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರೊಚ್ಚು.

    vartha chakraBy vartha chakraಜೂನ್ 17, 20242 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.17:
    ಡೀಸೆಲ್‌ ಮತ್ತು ಪೆಟ್ರೋಲ್‌ ಮೇಲಿನ ಮಾರಾಟ ತೆರಿಗೆಯನ್ನು ಹೆಚ್ಚಳ ಮಾಡಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ರಾಜ್ಯಾದ್ಯಂತ ಬೃಹತ್‌ ಪ್ರತಿಭಟನೆ ನಡೆಸಿ,ಕೂಡಲೇ ದರ ಹೆಚ್ಚಳ ವಾಪಸ್ ಪಡೆಯಬೇಕೆಂದು ಆಗ್ರಹಿಸಿದರು
    ಬೆಂಗಳೂರು, ಬೆಳಗಾವಿ, ತುಮಕೂರು ಶಿವಮೊಗ್ಗ,
    ಮಂಡ್ಯ, ದಕ್ಷಿಣ ಕನ್ನಡ, ದಾವಣಗೆರೆ, ರಾಯಚೂರು, ಕೊಪ್ಪಳ, ಹುಬ್ಬಳ್ಳಿ-ಧಾರವಾಡ, ಹಾವೇರಿ ಸೇರಿದಂತೆ ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ವಿವಿಧ ಮೋರ್ಚಾಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ರಾಜ್ಯ ಸರ್ಕಾರದ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿದರು.
    ಕೆಲವು ಕಡೆ ಕಾರಿಗೆ ಹಗ್ಗ ಕಟ್ಟಿ ಎಳೆದರೆ ಇನ್ನು ಕೆಲವು ಕಡೆ ಎತ್ತಿನ ಗಾಡಿ ಮೆರವಣಿಗೆ, ಶವಯಾತ್ರೆ, ತೆಂಗಿನಕಾಯಿ ಚಿಪ್ಪು, ಕರಪತ್ರ ಹಿಡಿದುಕೊಂಡು ವಿನೂತನವಾಗಿ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರ ಜನವಿರೋಧಿ, ರೈತ ವಿರೋಧಿ ಎಂದು ಕಿರಿಕಾರಿದರು.
    ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌.ಅಶೋಕ್‌,ಮುಖಂಡರಾದ ಸಿ.ಟಿ.ರವಿ, ಭೈರತಿ ಬಸವರಾಜ್‌ ಸೇರಿದಂತೆ ಅನೇಕರು ಭಾಗವಹಿಸಿದ್ದರು.
    ಎಚ್ಚರಿಕೆ:
    ಈ ವೇಳೆ ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ
    ಅಧಿಕಾರಕ್ಕೆ ಬಂದ ಮೇಲೆ ಜನ ಸಾಮಾನ್ಯರ ಸಂಕಷ್ಟ ಹೆಚ್ಚಾಗಿದೆ. ಅವೈಜ್ಞಾನಿಕವಾಗಿ ಪೆಟ್ರೋಲ್, ಡೀಸೆಲ್‌ ದರ ಹೆಚ್ಚಳ ಮಾಡಲಾಗಿದೆ ಎಂದು ಆಪಾದಿಸಿದರು.
    ಈ ಹೆಚ್ಚಳವನ್ನು ಕೂಡಲೆ ವಾಪಸ್ ಪಡೆಯಬೇಕು
    ಮುಂದಿನ ವಾರ ನಾವು ಮತ್ತು ಜೆಡಿಎಸ್‌‍ನವರು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ರಸ್ತೆ ತಡೆ ನಡೆಸಲಿದ್ದೇವೆ. ಬೆಲೆ ಹಿಂತೆಗೆದುಕೊಳ್ಳುವವರೆಗೂ ನಮ ಹೋರಾಟ ಪ್ರತಿಭಟನೆಯನ್ನು ನಿಲ್ಲಿಸುವುದಿಲ್ಲ. ನಮ ಹೋರಾಟ ಉಗ್ರ ಸ್ವರೂಪ ಪಡೆಯುತ್ತದೆ ಎಂದು ಎಚ್ಚರಿಸಿದರು.
    ರೈತರು, ಬಡವರ ಬಗ್ಗೆ ಕಾಳಜಿ ಇಲ್ಲದ ಸರ್ಕಾರ ಗ್ಯಾರಂಟಿ ಮೂಲಕ ಜನರಿಗೆ ಬೆಲೆ ಏರಿಕೆಯ ಗ್ಯಾರಂಟಿ ಕೊಡಲು ಹೊರಟಿದೆ. ಒಬ್ಬ ಅನುಭವಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಲೋಕಸಭೆ ಚುನಾವಣೆಯಲ್ಲಿ ಸೋತಿದ್ದೇವೆ ಎಂಬ ಕಾರಣಕ್ಕೆ ಜನರಿಗೆ ಬೆಲೆ ಏರಿಕೆ ಮಾಡಿದ್ದಾರೆ. ಇದು ಜನ ವಿರೋಧಿ ಸರ್ಕಾರವಲ್ಲವೇ ಎಂದು ಪ್ರಶ್ನಿಸಿದರು.
    ವಿಧಾನಸೌಧ ಒತ್ತೆ:
    ಪ್ರತಿಪಕ್ಷ ನಾಯಕ ಆರ್.ಅಶೋಕ್ ಮಾತನಾಡಿ,
    ಆದಷ್ಟು ಬೇಗ ಕಾಂಗ್ರೆಸ್‌‍ ಸರ್ಕಾರ ಅಧಿಕಾರದಿಂದ ತೊಲಗದಿದ್ದರೆ ಮುಂದಿನ ಬಜೆಟ್‌ ಮಂಡನೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಧಾನಸೌಧವನ್ನೇ ಅಡ ಇಡಲು ಹಿಂದೆಮುಂದೆ ನೋಡುವುದಿಲ್ಲ ಎಂದು ಟೀಕಿಸಿದರು.
    ಈಗಾಗಲೇ ಕಾರ್ಪೋರೇಷನ್‌ ಕಟ್ಟಡಗಳು , ವಾರ್ಡ್‌ ಕಚೇರಿ ಅಡ ಇಟ್ಟು ಬ್ಯಾಂಕ್‌ನಿಂದ ಸಾಲ ಪಡೆಯಲು ಇಟ್ಟಿದ್ದಾರೆ. ಇದೇ ಪ್ರವೃತ್ತಿ ಮುಂದುವರೆದರೆ ಸಿಎಂ ಸಿದ್ದರಾಮಯ್ಯನವರು ವಿಧಾನಸೌಧವನ್ನು ಅಡ ಇಡಲು ಹಿಂದೆಮುಂದೆ ನೋಡುವುದಿಲ್ಲ ಎಂದು ಆತಂಕ ವ್ಯಕ್ತಪಡಿಸಿದರು.
    ನಾವು ಅಂದು ಆಡಳಿತದಲ್ಲಿದ್ದಾಗ ಒಂದು ರೂ. ಬೆಲೆ ಹೆಚ್ಚಳ ಮಾಡಿದ್ದಕ್ಕೆ ಸರ್ಕಾರಕ್ಕೆ ಮಾನ ಮರ್ಯಾದೆ ಇದೆಯೇ ಎಂದು ಪ್ರಶ್ನಿಸಿದ್ದರು. ಈಗ ಪೆಟ್ರೋಲ್‌ ದರವನ್ನು 3 ರೂ. 50 ಪೈಸೆ ಹಾಗೂ ಡೀಸೆಲ್‌ ದರವನ್ನು 3 ರೂ.ಗೆ ಏರಿಕೆ ಮಾಡಿದ್ದಾರೆ. ಹಾಗಾದರೆ ನಿಮ ಸರ್ಕಾರಕ್ಕೆ ಮಾನಮರ್ಯಾದೆ ಇದೆಯೇ ಎಂದು ತರಾಟೆಗೆ ತೆಗೆದುಕೊಂಡರು.
    ತುಮಕೂರಿನಲ್ಲಿ ಭದ್ರಾ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಶಾಸಕ ಜ್ಯೋತಿ ಗಣೇಶ್‌ ನೇತೃತ್ವದಲ್ಲಿ ಭದ್ರಮ ವೃತ್ತದಿಂದ ಕನಕ ವೃತ್ತದವರೆಗೆ ಪ್ರತಿಭಟನಾ ಮೆರಣಿವಣಿಗೆ ನಡೆಸಲಾಯಿತು. ಶಾಸಕ ಜ್ಯೋತಿ ಗಣೇಶ್‌ ಪ್ರತಿಭಟನೆಗೆ ಸೈಕಲ್‌ ಏರಿ ಬಂದಿದ್ದು, ವಿಶೇಷವಾಗಿತ್ತು.
    ದಕ್ಷಿಣಕನ್ನಡದಲ್ಲಿ ಅಣುಕು ಶವಯಾತ್ರೆ ನಡೆಸಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ಗ್ಯಾರಂಟಿಗಳಿಗೆ ಹಣ ಹೊಂದಿಸಲು ಸಾಧ್ಯವಾಗದ ಸರ್ಕಾರ ಜನರ ಜೇಬಿಗೆ ದರದ ಬರೆಯನ್ನು ಎಳೆದಿದೆ. ಬೇರೆ ರಾಜ್ಯಗಳಲ್ಲಿ ಅಷ್ಟಿತ್ತು, ಇಷ್ಟಿತ್ತು ಎನ್ನುವ ಬದಲು ಮೊದಲು ನೀವು ಕಡಿಮೆ ಮಾಡಿ ಎಂದು ಸವಾಲು ಹಾಕಿದರು.

    Verbattle
    Verbattle
    Verbattle
    Bangalore BJP Congress Government Karnataka News petrol bunk petroleum Politics Trending Varthachakra ಉಗ್ರ ಕಾಂಗ್ರೆಸ್ ಚುನಾವಣೆ ಜೆಡಿಎಸ್ ತುಮಕೂರು ಧಾರವಾಡ ಸಿದ್ದರಾಮಯ್ಯ ಹುಬ್ಬಳ್ಳಿ
    Share. Facebook Twitter Pinterest LinkedIn Tumblr Email WhatsApp
    Previous Articleಪೆಟ್ರೋಲ್ ಡೀಸೆಲ್ ಬೆಲೆ ರೂ.3 ಹೆಚ್ಚಳ.
    Next Article ಜನರಿಗೆ ತೊಂದರೆಯಾಗದಂತೆ ತೆರಿಗೆ ಹಾಕುತ್ತಾರಂತೆ.
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Ghxeuu ರಲ್ಲಿ ಸಾಹಿತಿ ಕಲಾವಿದರಿಂದ ಭರ್ಜರಿ ಲಾಬಿ
    • Jamesheipt ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • Matthewjam ರಲ್ಲಿ ISRO ಕಿರೀಟಕ್ಕೆ ಮತ್ತೊಂದು ಗರಿ!
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.