Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿಧಾನಸಭೆಯಲ್ಲಿ ಗದ್ದಲ- ಕೋಲಾಹಲ
    ರಾಜ್ಯ

    ವಿಧಾನಸಭೆಯಲ್ಲಿ ಗದ್ದಲ- ಕೋಲಾಹಲ

    vartha chakraBy vartha chakraಸೆಪ್ಟೆಂಬರ್ 16, 2022Updated:ಸೆಪ್ಟೆಂಬರ್ 16, 2022ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಸೆ.15- ರಾಜ್ಯಾದ್ಯಂತ ಭಾರೀ ವಿವಾದ ಸೃಷ್ಟಿಸಿರುವ ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣ ವಿಧಾನಸಭೆಯಲ್ಲಿ ಪ್ರತಿಧ್ವನಿಸಿ ಆಡಳಿತ ಮತ್ತು ಪ್ರತಿಪಕ್ಷ ಸದಸ್ಯರ ನಡುವೆ ವಾಗ್ವಾದ, ಚಕಮಕಿ ಹಾಗೂ ಸವಾಲು,ಪ್ರತಿ ಸವಾಲಿಗೆ ವೇದಿಕೆಯಾಯಿತು.
    ಈ ಕುರಿತಂತೆ ನಿಲುವಳಿ ಸೂಚನೆ ಮಂಡಿಸಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಇದೊಂದು ಅತ್ಯಂತ ಗಂಭೀರವಾದ ವಿಷಯ. ಹಿರಿಯ ಪೊಲೀಸ್ ಅಧಿಕಾರಿಗಳೇ ಹಗರಣದಲ್ಲಿ ಭಾಗಿಯಾಗಿ ಜೈಲಿಗೆ ಹೋಗಿದ್ದಾರೆ. ಅನೇಕರ ಮೇಲೆ ಭ್ರಷ್ಟಾಚಾರದ ಆರೋಪಗಳು ಕೇಳಿಬಂದಿದೆ. ಹೀಗಾಗಿ ಚರ್ಚೆಗೆ ಅವಕಾಶ ಕೊಡಬೇಕೆಂದು ವಾದ ಮಂಡಿಸಿದರು.
    ಈಹಗರಣ ಸಾಮಾನ್ಯ ವಿಷಯಲ್ಲ. 545 ಹುದ್ದೆಗಳಿಗೆ ಸಾವಿರಾರು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು, ಅನೇಕರು ನೇಮಕಾತಿ ಹೊಂದಿದ್ದರು. ಆದರೆ ಏಕಾಏಕಿ ಹಗರಣ ನಡೆದಿದೆ ಎಂಬ ಒಂದೇ ಕಾರಣಕ್ಕೆ ಇಡೀ ನೇಮಕಾತಿ ಪ್ರಕ್ರಿಯೆ ರದ್ದುಪಡಿಸಲಾಗಿದೆ ಹೀಗಾಗಿ ಚರ್ಚೆಗೆ ಅವಕಾಶ ಕೊಡಿ ಎಂದು ಸಭಾಧ್ಯಕ್ಷರಿಗೆ ಮನವಿ ಮಾಡಿದರು.
    ಇದಕ್ಕೆ ತಕರಾರು ಎತ್ತಿದ ಕಾನೂನು ಸಚಿವ ಮಧುಸ್ವಾಮಿ, ಕೆಲವು ನಿಯಮಗಳನ್ನು ಓದಿ, ತನಿಖೆ ನಡೆಯುತ್ತಿರುವ ಈ ಹಂತದಲ್ಲಿ ಸದನದಲ್ಲಿಈ ವಿಷಯ ಚರ್ಚೆಗೆ ಕೊಡುವುದು ಸಮಂಜಸವಲ್ಲ. ನಿಲುವಳಿ ಸೂಚನೆಯಡಿ ಚರ್ಚೆ ಮಾಡಬೇಕಾದರೆ ಕೆಲವು ನೀತಿ ನಿಯಮಗಳಿರುತ್ತವೆ. ಪಟ್ಟು ಹಿಡಿಯುವುದು ಸದನಕ್ಕೆ ಶೋಭೆ ತರುವುದಿಲ್ಲ ಎಂದರು.
    ಇದನ್ನು ವಿರೋಧಿಸಿದ ಪ್ರತಿಪಕ್ಷ ಸದಸ್ಯರು ಚರ್ಚೆ ನಡೆದರೆ ಕೆಲವರು ಸಿಟ್ಟುಗೇಳಬಹುದೆಂಬ ಆತಂಕದಿಂದ ಸರ್ಕಾರ ಪಲಾಯನ ಮಾಡುತ್ತಿದೆ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದರೇ ಆಡಳಿತ ಪಕ್ಷದ ಸದಸ್ಯರು ಎದ್ದು ನಿಂತು
    ಹಗರಣವನ್ನು ಹೊರತಂದಿದ್ದೇ ನಮ್ಮ ಸರ್ಕಾರ. ನೀವು ಎಲ್ಲವನ್ನು ಮುಚ್ಚಿ ಹಾಕಿದ್ದೀರಿ ಇದರ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ತಿರುಗೇಟು ನೀಡಿದರು.ಇದರಿಂದ ಸದನದಲ್ಲಿ ಗದ್ದಲ, ಆರೋಪ-ಪ್ರತ್ಯಾರೋಪಗಳು ನಡೆದು ಕೋಲಾಹಲ ಉಂಟಾಗಿ ಯಾರು ಏನು ಹೇಳುತ್ತಿದ್ದಾರೆ ಎಂಬುದೇ ತಿಳಿಯದಾಯಿತು.
    ಇದರ ನಡುವೆಯೇ ಮಾತನಾಡಿದ ಮಾಧುಸ್ವಾಮಿ ಇತಿಹಾಸದಲ್ಲೇ ಮೊದಲ ಬಾರಿಗೆ ನಮ್ಮ ಸರ್ಕಾರ ಎಡಿಜಿಪಿ ದರ್ಜೆಯ ಅಧಿಕಾರಿಗಳನ್ನು ಬಂಧಿಸಿ ಜೈಲಿಗೆ ಹಾಕಿದೆ. ಸಿಐಡಿ ತನಿಖಾ ತಂಡಕ್ಕೆ ಮುಕ್ತವಾಗಿ ತನಿಖೆ ನಡೆಸಲು ಬಿಟ್ಟಿದ್ದೇವೆ. ಈ ಹಗರಣ ಹೊರಬಂದಿದ್ದೇ ನಮ್ಮ ಸರ್ಕಾರದಿಂದಾಗಿ ಇದರಲ್ಲಿ ಇವರೇನು ಪ್ರಶಂಸೆ ಗಿಟ್ಟಿಸಿಕೊಳ್ಳುವುದು ಎಂದು ತಿರುಗೇಟು ನೀಡಿದರು.
    ಇಂತಹ ಅಕ್ರಮಗಳಲ್ಲಿ ಯಾರು ಭಾಗಿಯಾಗಿದ್ದಾರೋ ಅವರೆಲ್ಲರಿಗೂ ತಕ್ಕ ಶಿಕ್ಷೆಯಾಗಬೇಕು. 2006ರಿಂದ ಏನೇನು ಆಗಿದೆಯೋ ಎಲ್ಲವೂ ಬಯಲಾಗಲಿದೆ ಎಂದರು.
    ಇದು ಸಿದ್ದರಾಮಯ್ಯ ಅವರನ್ನು ಕೆರಳಿಸಿತುಇದಕ್ಕೆ ನಾವು ಹೆದರುವುದಿಲ್ಲ. 40 ವರ್ಷದಿಂದ ಈ ಸದನದಲ್ಲಿ ನಾನೂ ಇದ್ದೇನೆ. ರಾಜಕೀಯ ಭಾಷಣ ಮಾಡಲು ನನಗೂ ಬರುತ್ತದೆ 2006ರಿಂದ ಹಿಡಿದು ಇಲ್ಲಿಯವರೆಗೆ ಯಾವ್ಯಾವ ಇಲಾಖೆಯಲ್ಲಿ ಏನೇನು ಆಗಿದೆಯೋ ಎಲ್ಲವೂ ತನಿಖೆ ನಡೆಸಿ ಅಗತ್ಯವಿದ್ದರೆ ಹೈಕೋರ್ಟ್ ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಸಿ ನಾವು ಹೆದರುವುದಿಲ್ಲ ಎಂದು ಗುಡುಗಿದರು.
    ಈ ಹಂತದಲ್ಲಿ ಮಧ್ಯ ಪ್ರವೇಶಿಸಿದ ಸಭಾಧ್ಯಕ್ಷ ಕಾಗೇರಿ ಬೇರೊಂದು ನಿಯಮಾವಳಿ ಅನ್ವಯ ಈ ಬಗ್ಗೆ ಚರ್ಚೆಗೆ ಅವಕಾಶ ನೀಡುವುದಾಗಿ ಭರವಸೆ ನೀಡುತ್ತಿದ್ದಂತೆ ಪ್ರಕರಣಕ್ಕೆ ತೆರೆಬಿತ್ತು.

    Verbattle
    Verbattle
    Verbattle
    ಕಾನೂನು ನ್ಯಾಯ ರಾಜಕೀಯ ವಿದ್ಯಾರ್ಥಿ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleನಕಲಿ‌ ವಾಚ್ ಮಾರುತ್ತಿದ್ದ ವಂಚಕ
    Next Article ಹೀಗೂ ಮಾಡ್ತಾರೆ ಸರ್ವರ್ ಹ್ಯಾಕ್
    vartha chakra
    • Website

    Related Posts

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    ಫೆಬ್ರವರಿ 10, 2026

    ನಮ್ಮ ಮೆಟ್ರೋ ದರ ಏರಿಕೆ ತಡೆಹಿಡಿದಿದ್ದು ರಾಜ್ಯ ಸರ್ಕಾರ; ಕೇಂದ್ರದ ಪತ್ರಕ್ಕೆ ಬೆಲೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 10, 2026

    ರಷ್ಯಾ ಅಧ್ಯಕ್ಷ ಪುತಿನ್ ಸುತ್ತ ಲೈಂಗಿಕ ಬ್ಲ್ಯಾಕ್‌ಮೇಲ್ ತಂತ್ರದ ಹುತ್ತ: ಏನಿದು ಹನಿ ಟ್ರ್ಯಾಪ್?

    ಫೆಬ್ರವರಿ 10, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    ನಮ್ಮ ಮೆಟ್ರೋ ದರ ಏರಿಕೆ ತಡೆಹಿಡಿದಿದ್ದು ರಾಜ್ಯ ಸರ್ಕಾರ; ಕೇಂದ್ರದ ಪತ್ರಕ್ಕೆ ಬೆಲೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

    ರಷ್ಯಾ ಅಧ್ಯಕ್ಷ ಪುತಿನ್ ಸುತ್ತ ಲೈಂಗಿಕ ಬ್ಲ್ಯಾಕ್‌ಮೇಲ್ ತಂತ್ರದ ಹುತ್ತ: ಏನಿದು ಹನಿ ಟ್ರ್ಯಾಪ್?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MauriceDup ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • Nlyovk ರಲ್ಲಿ ಚುರುಕಾದ ನಕ್ಸಲರು.
    • Glennhof ರಲ್ಲಿ ಕೋರ್ಟ್ ನಲ್ಲಿ ಕಾಂಗ್ರೆಸ್ ಗೆಲುವು
    Latest Kannada News

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಫೆಬ್ರವರಿ 10, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    ಫೆಬ್ರವರಿ 10, 2026

    ನಮ್ಮ ಮೆಟ್ರೋ ದರ ಏರಿಕೆ ತಡೆಹಿಡಿದಿದ್ದು ರಾಜ್ಯ ಸರ್ಕಾರ; ಕೇಂದ್ರದ ಪತ್ರಕ್ಕೆ ಬೆಲೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 10, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.