ಬೆಂಗಳೂರು : ದೇವನಹಳ್ಳಿ ಬಳಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿಷ್ಠಾಪನೆ ಆಗಲಿರುವ 108 ಅಡಿ ಎತ್ತರದ ಕೆಂಪೇಗೌಡರ ಕಂಚಿನ ಪ್ರತಿಮೆಯ ಭಾಗವಾದ 4 ಸಾವಿರ ಕಿಲೋ ತೂಕದ ಖಡ್ಗವು ದೆಹಲಿಯಿಂದ ಸೋಮವಾರ ಬೆಂಗಳೂರು ತಲುಪಿದೆ. ವಿಶೇಷ ಟ್ರಕ್ನಲ್ಲಿ ಬಂದ ಈ ಖಡ್ಗವನ್ನು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಖಡ್ಗಕ್ಕೆ ಸಾಂಪ್ರದಾಯಿಕ ಶಕ್ತಿಪೂಜೆ ನೆರವೇರಿಸಲಾಯಿತು. ‘ಕೆಂಪೇಗೌಡರ ಸ್ಮರಣಾರ್ಥ ಕೆಐಎನಲ್ಲಿ 23 ಎಕರೆ ಜಾಗದಲ್ಲಿ ಪಾರಂಪರಿಕ ಪಾರ್ಕ್ ಅಸ್ತಿತ್ವಕ್ಕೆ ಬರಲಿದ್ದು, ಕಾಮಗಾರಿ ಭರದಿಂದ ಸಾಗುತ್ತಿವೆ. ಇಲ್ಲಿ ತಲೆಯೆತ್ತಲಿರುವ ಕೆಂಪೇಗೌಡರ ಪ್ರತಿಮೆಗೆ ₹ 85 ಕೋಟಿ ವಿನಿಯೋಗಿಸಲಾಗುತ್ತಿದೆ. ನೋಯಿಡಾದ ಶಿಲ್ಪಿ ರಾಮ್ ವಾನಜಿ ಸುತರ್ ಈ ಪ್ರತಿಮೆ ಮಾಡಿಕೊಡುತ್ತಿದ್ದಾರೆ’ ಎಂದು ಅಶ್ವತ್ಥನಾರಾಯಣ ತಿಳಿಸಿದರು. ‘ಕೆಂಪೇಗೌಡರು ಕೈಯಲ್ಲಿ ಹಿಡಿದಿರುವ ಕತ್ತಿಯು (ಖಡ್ಗ) ಕ್ಷಾತ್ರಬಲವನ್ನು ಪ್ರತಿನಿಧಿಸುತ್ತಿದ್ದು, ನವಭಾರತಕ್ಕೊಂದು ಸಂಕೇತವಾಗಿದೆ. ವಿಮಾನ ನಿಲ್ದಾಣದ ಮೂಲಕ ಹೋಗುವವರು ಮತ್ತು ಇಲ್ಲಿ ಬಂದಿಳಿಯುವವರಿಗೆ ಈ ಪ್ರತಿಮೆಯ ನೋಟ ಒಂದು ದಿವ್ಯ ಅನುಭೂತಿ ಮೂಡಿಸುವಂತಿರಬೇಕು ಎನ್ನುವುದು ಸರ್ಕಾರದ ಉದ್ದೇಶ’ ಎಂದರು.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022
