ಬೆಂಗಳೂರು, ಜು.4:
ರಾಜ್ಯ ಸರ್ಕಾರ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಪರಸ್ಪರ ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ಸಿಎಂ ಮತ್ತು ಡಿಸಿಎಂ ಕಾರ್ಯಕರ್ತರೊಂದಿಗೆ ಸಮಾಜ ನಡೆಸಲು ಮುಂದಾಗಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರ ಹಾಗೂ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಕೆಪಿಸಿಸಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರನ್ನು ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕಾಂಗ್ರೆಸ್ ಕಚೇರಿಯಲ್ಲಿ ಜುಲೈ 6 ರಂದು ಶನಿವಾರ ಮಧ್ಯಾಹ್ನ 3 ರಿಂದ ಸಂಜೆ 5 ಗಂಟೆವರೆಗೆ ಭೇಟಿ ಮಾಡಲಿದ್ದಾರೆ.
ಈ ವೇಳೆ ಸಂಘಟನೆಯ ಕುರಿತು ಚರ್ಚೆ ಮತ್ತು
ಅವರ ಕುಂದುಕೊರತೆ ಹಾಗೂ ಅಹವಾಲುಗಳನ್ನು ಆಲಿಸಲಿದ್ದಾರೆ.
ಸಿಎಂ ಹಾಗೂ ಡಿಸಿಎಂ ಅವರನ್ನು ಭೇಟಿ ಮಾಡಲು ಬಯಸುವವರು ಮೊಬೈಲ್ ಸಂಖ್ಯೆ 7899116899 ಅನ್ನು ಸಂಪರ್ಕಿಸಿ, ತಮ್ಮ ಹೆಸರು, ಪಕ್ಷದಲ್ಲಿನ ಹುದ್ದೆ ವಿವರಗಳ ಸಮೇತ ನೋಂದಾಯಿಸಿಕೊಳ್ಳಬೇಕು. ಮೊದಲು ಬಂದವರಿಗೆ ಮೊದಲಭೇಟಿ ಆದ್ಯತೆ.
ಪದಾಧಿಕಾರಿಗಳು ಹಾಗೂ ಕಾರ್ಯಕರ್ತರಿಗೆ ಸೀಮಿತವಾಗಿ ಏರ್ಪಡಿಸಿರುವ ಭೇಟಿ ಇದಾಗಿದ್ದು, ಶಾಸಕರು ಸೇರಿದಂತೆ ಬೇರೆ ಯಾರೂ ಆಗಮಿಸುವಂತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ
Previous Articleನ್ಯಾಯಮೂರ್ತಿ ಭಕ್ತವತ್ಸಲ ವರದಿ ತಿರಸ್ಕಾರ.
Next Article ಡೆಂಗ್ಯೂ,ಜೀಕಾ ನಿಯಂತ್ರಣಕ್ಕೆ ದಿನೇಶ್ ಗುಂಡೂರಾವ್ ಸೂಚನೆ.

2 ಪ್ರತಿಕ್ರಿಯೆಗಳು
Если вы хотите повысить безопасность и удобство маневрирования, рекомендуем камера заднего вида на грузовик.
Выбор камеры заднего вида зависит от множества параметров, включая качество изображения и наличие дополнительных функций.
Для обеспечения максимальной безопасности на дороге рекомендуем приобрести камера заднего вида для грузовика.
Маневрировать грузовиком становится значительно удобнее благодаря дополнительному обзору.