Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಿಗರೇಟ್ ಬೀಡಿ ಸೇದುವವರಿಗೆ ಹೊಸ ನಿಯಮ ಜಾರಿಗೆ ಮುಂದಾದ ಬಿಬಿಎಂಪಿ.
    ಆರೋಗ್ಯ

    ಸಿಗರೇಟ್ ಬೀಡಿ ಸೇದುವವರಿಗೆ ಹೊಸ ನಿಯಮ ಜಾರಿಗೆ ಮುಂದಾದ ಬಿಬಿಎಂಪಿ.

    vartha chakraBy vartha chakraಅಕ್ಟೋಬರ್ 1, 202428 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಅ. 01: ಬೆಂಗಳೂರಿನಲ್ಲಿ ಧೂಮಪಾನಿಗಳು ಎಲ್ಲೆಂದರಲ್ಲಿ ಸೇದಿ ಬಿಸಾಕುತಿದ್ದ ಸಿಗರೇಟ್, ಬೀಡಿ ತುಂಡುಗಳಿಂದ ಉಂಟಾಗುತ್ತಿದ್ದ ಪರಿಸರ ಹಾನಿಯನ್ನು ತಡೆಯಲು ಬಿಬಿಎಂಪಿ ಇದೀಗ ಮಹತ್ವದ ಕ್ರಮಕ್ಕೆ ಮುಂದಾಗಿದ್ದು, ನಗರದಾದ್ಯಂತ ಸಿಗರೇಟ್ ಹಾಗೂ ಬೀಡಿ ತುಂಡುಗಳನ್ನು ಬಿಸಾಡುವುದಕ್ಕೆಂದೇ ಪ್ರತ್ಯೇಕ ಬುಟ್ಟಿಗಳನ್ನು (ಬಿನ್ಗಳನ್ನು) ಅಳವಡಿಸಲು ಮುಂದಾಗಿದೆ.
    ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯು 2022ರ ನವೆಂಬರ್ನಲ್ಲೇ ಸಿಗರೇಟ್ ಮತ್ತು ಬೀಡಿ ತುಂಡುಗಳ ವೈಜ್ಞಾನಿಕ ವಿಲೇವಾರಿಗೆ ಮಾರ್ಗಸೂಚಿ ರೂಪಿಸಿ ಬಿಡುಗಡೆ ಮಾಡಿತ್ತು. ಆದರೆ, ಬೆಂಗಳೂರು ನಗರದಲ್ಲಿ ಮಾರ್ಗಸೂಚಿ ಇದುವರೆಗೂ ಜಾರಿಯಾಗಿರಲಿಲ್ಲ. ಹೀಗಾಗಿ ಇದೀಗ ಬಿಬಿಎಂಪಿ ಮಹತ್ವದ ಕ್ರಮಕ್ಕೆ ಮುಂದಾಗಿದೆ.
    ಬೆಂಗಳೂರಿನಲ್ಲಿ ಪ್ರತಿದಿನ ಸಾವಿರಾರು ಸಿಗರೇಟ್ ತುಂಡುಗಳನ್ನು ಎಲ್ಲೆಂದರಲ್ಲಿ ವಿಲೇವಾರಿ ಮಾಡುತ್ತಿರುವುದರಿಂದ ಅವುಗಳಲ್ಲಿನ ಹಾನಿಕಾರಕ ರಾಸಾಯನಿಕಗಳು ಚರಂಡಿಗಳು,ಅಂತರ್ಜಲ,ಮಣ್ಣು ಮತ್ತು ಪರಿಸರವನ್ನು ಕಲುಷಿತಗೊಳಿಸುತ್ತಿವೆ. ಹೀಗಾಗಿ ಸಿಗರೇಟ್ ತುಂಡುಗಳಿಂದಾಗುವ ಅನಾಹುತಗಳನ್ನು ತಡೆಯಲು ಬಿಬಿಎಂಪಿಯು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಮತ್ತು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಮಾರ್ಗಸೂಚಿಯಂತೆ ತುಂಡುಗಳ ಸಂಗ್ರಹಕ್ಕೆ ಯೋಜನೆ ರೂಪಿಸಿದ್ದು ನಗರದಲ್ಲಿ ಸಿಗರೇಟ್ ತುಂಡುಗಳನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಲು ಮುಂದಾಗಿದೆ.
    ಯೋಜನೆಯ ಭಾಗವಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಪ್ರಮುಖ ಸಿಗರೇಟ್ ತಯಾರಕ ‘ಐಟಿಸಿ’ ಸಹಯೋಗದೊಂದಿಗೆ ಸಿಗರೇಟ್ ತುಂಡುಗಳ ಸಂಗ್ರಹಕ್ಕಾಗಿ ನಗರದ ಹಾಟ್ ಸ್ಪಾಟ್ಗಳಲ್ಲಿ ಪ್ರತ್ಯೇಕ ಡಸ್ಟ್ಬಿನ್ಗಳನ್ನು ಇರಿಸಲಿದೆ ಎಂದು ಅಗತ್ಯ ಮೂಲಗಳು ತಿಳಿಸಿದ್ದು, ಸಿಗರೇಟ್ ಹಾಗೂ ಬೀಡಿಯ ತುಂಡುಗಳನ್ನು ತ್ಯಾಜ್ಯದಿಂದ ಇಂಧನ ಉತ್ಪಾದನೆ ಅಥವಾ ಸಹ-ಸಂಸ್ಕರಣೆಯಂತಹ ವಿಧಾನಗಳ ಮೂಲಕ ಮರುಬಳಕೆ ಮಾಡಲಾಗುತ್ತದೆ ಎಂದು ತಿಳಿಸಿವೆ.
    ಆರಂಭಿಕವಾಗಿ ಬೆಂಗಳೂರಿನ ಎರಡು ವಾರ್ಡ್ಗಳಲ್ಲಿ ಪ್ರಾಯೋಗಿಕವಾಗಿ ತುಂಡುಗಳ ವಿಲೇವಾರಿಗಾಗಿ ಮೈಕ್ರೋ ಯೋಜನೆ ಕೈಗೊಳ್ಳುವಂತೆ ಐಟಿಸಿಗೆ ಪತ್ರವನ್ನು ಬಿಬಿಎಂಪಿ ಬರೆದಿದೆ.
    ಸಿಗರೇಟ್ ಹಾಗೂ ಬೀಡಿಯ ತುಂಡುಗಳನ್ನು ಮರುಬಳಕೆ ಮಾಡುವ ಜವಾಬ್ದಾರಿ ತಯಾರಕರ ಮೇಲಿದ್ದು ಸಭೆಯಲ್ಲಿ ಸಮ್ಮತಿಸಿದಂತೆ ಸಿಗರೇಟ್ ತುಂಡುಗಳ ವಿಲೇವಾರಿಗೆ ಕಂಪನಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು. ಇದಕ್ಕೆ ತಯಾರಕ ಕಂಪನಿಗಳು ಸಮ್ಮತಿ ಸೂಚಿಸಿವೇ.ಆದರೂ ಯೋಜನೆ ಆರಂಭಿಸಲು ಐಟಿಸಿ ವಿಫಲವಾದಲ್ಲಿ ಕಂಪನಿ ವಿರುದ್ಧ ಕ್ರಮ ಕೈಗೊಳ್ಳಲು ಶಿಫಾರಸು ಮಾಡಲಾಗುವುದು ಎಂದು ಪತ್ರದಲ್ಲಿ ಬಿಬಿಎಂಪಿ ಎಚ್ಚರಿಕೆಯನ್ನೂ ನೀಡಿದೆ.

    ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಸಿದ್ದರಾಮಯ್ಯ ಅವರಿಗೆ ED ಉರುಳು .
    Next Article ಬಾಲಿವುಡ್ ನ ಹಿರಿಯ ನಟ ಮಿಥುನ್ ಚಕ್ರವರ್ತಿಗೆ ಒಲಿದ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ.
    vartha chakra
    • Website

    Related Posts

    ದರ್ಶನ್‌ಗೆ ದುಡ್ಡು ಎಲ್ಲಿಂದ ಬಂತು?

    ಡಿಸೆಂಬರ್ 5, 2025

    ಹೀಗೂ ಒಂದು ಆರತಕ್ಷತೆ.

    ಡಿಸೆಂಬರ್ 5, 2025

    ಇಂಡಿಗೋ ವಿಮಾನಯಾನ ರದ್ದು-ಪ್ರಯಾಣಿಕರ ಪರದಾಟ

    ಡಿಸೆಂಬರ್ 5, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೆ.ಎನ್ ಶಾಂತಕುಮಾರ್ ಯಾಕೆ ಗೆಲ್ಲಬೇಕು ಗೊತ್ತಾ?

    ಶನಿವಾರವೂ 400ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು

    ಬೇಸ್ತು ಬಿದ್ದು ಪರಾರಿಯಾದ ಪತಿರಾಯ!

    ದರ್ಶನ್‌ಗೆ ದುಡ್ಡು ಎಲ್ಲಿಂದ ಬಂತು?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • promoulsl ರಲ್ಲಿ ಇನ್ನು ಮುಂದೆ ಜಾಲತಾಣ Koo ಇರುವುದಿಲ್ಲ.
    • gpsites.win ರಲ್ಲಿ ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.
    • Scotthem ರಲ್ಲಿ November 19ಕ್ಕೆ Air India ದಲ್ಲಿ ಪ್ರಯಾಣಿಸಬಾರದಂತೆ
    Latest Kannada News

    ಕೆ.ಎನ್ ಶಾಂತಕುಮಾರ್ ಯಾಕೆ ಗೆಲ್ಲಬೇಕು ಗೊತ್ತಾ?

    ಡಿಸೆಂಬರ್ 6, 2025

    ಶನಿವಾರವೂ 400ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು

    ಡಿಸೆಂಬರ್ 6, 2025

    ಬೇಸ್ತು ಬಿದ್ದು ಪರಾರಿಯಾದ ಪತಿರಾಯ!

    ಡಿಸೆಂಬರ್ 6, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಬೆಂಗಳೂರಲ್ಲಿ ಮನೆ ಕಟ್ಟೋಕೆ ಏನೇನ್ ರೂಲ್ಸ್ #varthachakra #buildingahouse #gba #bbmp #bangalorerealestate
    Subscribe