ಬೆಂಗಳೂರು,ಏ.9:
ಎರಡನೇ ಅವಧಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಎರಡು ವರ್ಷ ಪೂರ್ಣಗೊಳಿಸುತ್ತಿರುವ ಸಮಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಗಂಭೀರ ಸ್ವರೂಪದ ಆರೋಪವೊಂದು ಕೇಳಿ ಬಂದಿದೆ.
ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಅಧಿಕಾರ ದುರ್ಬಳಕೆ ಮಾಡಿಕೊಂಡು ರಾಮ್ಗಢ್ ಮಿನರಲ್ಸ್ ಸೇರಿದಂತೆ 8 ಗಣಿ ಗುತ್ತಿಗೆಗಳ ನವೀಕರಣಕ್ಕೆ ಅವರು 500 ಕೋಟಿ ಕಿಕ್ಬ್ಯಾಕ್ ಪಡೆದಿದ್ದಾರೆ ಎಂದು ಆರೋಪಿಸಿ ರಾಜ್ಯಪಾಲರಿಗೆ ದೂರು ನೀಡಲಾಗಿದೆ.
ಸಾಮಾಜಿಕ ಕಾರ್ಯಕರ್ತ ರಾಮಮೂರ್ತಿ ಗೌಡ ಎಂಬುವರು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರಿಗೆ ದೂರು ಸಲ್ಲಿಸಿ,ವಿಚಾರಣೆಗೆ ಅನುಮತಿ ನೀಡಬೇಕೆಂದು ಕೋರಿದ್ದಾರೆ.
ರಾಮಗಢ್ ಮಿನರಲ್ಸ್ ಸೇರಿದಂತೆ ಒಟ್ಟು 8 ಗಣಿ ಗುತ್ತಿಗೆಗಳ ನವೀಕರಣಕ್ಕೆ ಅಧಿಕಾರ ದುರುಪಯೋಗಪಡಿಸಿಕೊಂಡು ಸಿದ್ದರಾಮಯ್ಯ ಅವರು 500 ಕೋಟಿ ಕಿಕ್ಬ್ಯಾಕ್ ಪಡೆದಿದ್ದಾರೆ. ಇದರಿಂದ ರಾಜ್ಯದ ಬೊಕ್ಕಸಕ್ಕೆ 5 ಸಾವಿರ ಕೋಟಿಗೂ ಹೆಚ್ಚು ನಷ್ಟ ಉಂಟಾಗಿದೆ ಎಂದು ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ.
ಈ ಹಿಂದೆ 2014-15ರ ಸಂದರ್ಭದಲ್ಲಿ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯನವರು 8 ಗಣಿ ಗುತ್ತಿಗೆಗಳಿಗೆ ತಾರ್ಕಿಕವಾಗಿ ನವೀಕರಣ ನೀಡಿದ್ದ ಅನುಮೋದನೆ ಹಾಗೂ ಲೋಕಾಯುಕ್ತ ಸಂಸ್ಥೆಗೆ ಸಲ್ಲಿಸಿರುವ ಅಫಿಡೆವಿಟ್ನಲ್ಲಿ ಸಿದ್ದರಾಮಯ್ಯ ಆಸ್ತಿ ಏರಿಕೆಯಾಗಿರುವುದರ ಬಗ್ಗೆ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಗಣಿ ಗುತ್ತಿಗೆ ನವೀಕರಣಕ್ಕೂ ಮುನ್ನ ಸಿದ್ದರಾಮಯ್ಯನವರ ಆದಾಯದಲ್ಲಿ ಏರಿಕೆಯಾಗಿರಲಿಲ್ಲ. 2023ರ ವಿಧಾನಸಭೆ ಚುನಾವಣೆ ವೇಳೆ ಅವರ ಕುಟುಂಬದ ಸದಸ್ಯರ ಸ್ಥಿರ-ಚರಾಸ್ತಿಗಳಲ್ಲೂ ಏರಿಕೆಯಾಗಿದೆ. ಏಕಾಏಕಿ ಆದಾಯ ಹೆಚ್ಚಳವಾಗಿರುವುದಕ್ಕೆ ಕಿಕ್ಬ್ಯಾಕ್ ಕಾರಣ. ಹೀಗಾಗಿ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಬೇಕೆಂದು ಕೋರಿದ್ದಾರೆ.
ಎಂಎಂಡಿಆರ್ ಕಾಯ್ದೆಯ ಸೆಕ್ಷನ್ 10ಎ 10ಎ(2)(ಬಿ), ಸೆಕ್ಷನ್ 10 ಎ(2)(ಸಿ) ಕಾಯ್ದೆ 2015ರ ಪ್ರಕಾರ ಗಣಿಯನ್ನು ಹರಾಜು ಹಾಕಬೇಕೆ ಹೊರತು ನವೀಕರಣ ಮಾಡಲು ಅವಕಾಶವಿಲ್ಲ ಎಂಬುದನ್ನು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಗಣಿಯನ್ನು ಹರಾಜು ಹಾಕಿದ್ದರೆ ಒಂದು ಗಣಿಯಿಂದ 500 ಕೋಟಿ ಆದಾಯ ಸರ್ಕಾರಕ್ಕೆ ಬರುತ್ತಿತ್ತು. ಒಟ್ಟು 8 ಗಣಿ ಕಂಪನಿಗಳನ್ನು ನವೀಕರಣ ಮಾಡಿದ್ದರಿಂದ 4 ಸಾವಿರ ಕೋಟಿ ಬೊಕ್ಕಸಕ್ಕೆ ನಷ್ಟವಾಗಿದೆ. ಅದೇ ರೀತಿ ಹರಾಜು ಪ್ರಕ್ರಿಯೆ ನಡೆದಿದ್ದರೆ ರಾಜಧನ ರೂಪದಲ್ಲಿ 600 ಕೋಟಿ ಸಂಗ್ರಹವಾಗುತ್ತಿತ್ತು. ಇಲ್ಲಿ ಮುಖ್ಯಮಂತ್ರಿಗಳೇ 500 ಕೋಟಿ ಕಿಕ್ಬ್ಯಾಕ್ ಪಡೆದಿರುವುದರಿಂದ ಬೊಕ್ಕಸಕ್ಕೆ ಹೊಡೆತ ಬಿದ್ದಿದೆ ಎಂದು ಹೇಳಿದ್ದಾರೆ.
ತುಮಕೂರು ಮಿನರಲ್ಸ್ 161.86 ಎಕರೆ , ಎಸ್ಕೋ 46.55 2 ರಾಮ್ಗಢ್ (ಡಾಲ್ಕಿಯ) 828.6 ಎಕರೆ, ಕರ್ನಾಟಕ ಲಿಂಸ್ಕೋ 40.47 ಎಕರೆ, ಕೆಂಎಂಎಂಐ (ಕಾರಿಗನೂರು ಮಿನರಲ್ಸ್ ) 498.57 ಎಕರೆ, (ಬಿಬಿಎಚ್) 259.52 ಎಕರೆ, ಎಂ ಉಪೇಂದ್ರನ್ ಮೈನ್ಸ್ 112.3 ಎಕರೆ, ಜಯರಾಮ್ ಮಿನರಲ್ಸ್ ಗೆ 29.35 ಎಕರೆ ಗಣಿ ಗುತ್ತಿಗೆ ನವೀಕರಿಸಲಾಗಿದೆ.
ಈ ಎಂಟುಗಣಿ ಗುತ್ತಿಗೆಗಳಿಗೆ ನವೀಕರಣಕ್ಕೆ ತಾತ್ವಿಕ ಅನುಮೋದನೆ ಅಗತ್ಯವೇ ಇರಲಿಲ್ಲ. ಗಣಿ ಗುತ್ತಿಗೆ ನವೀಕರಣ ಪ್ರಕ್ರಿಯೆಗಳಿಗೆ ಸಂಬಂಧಿಸಿದಂತೆ ಕಂಪನಿಗಳು ಸಕ್ಷಮ ಪ್ರಾಧಿಕಾರಗಳಾದ ಅರಣ್ಯ ಇಲಾಖೆ ಮತ್ತು ಐಬಿಎಂಗೆ ಮನವಿ ನೀಡಬೇಕಿತ್ತು.
ಕಬ್ಬಿಣದ ಅದಿರಿನ ಗಣಿಗಳನ್ನು ಹರಾಜಿನ ಮೂಲಕ ಹಂಚಿಕೆ ಮಾಡಬೇಕು ಎಂದು ಕೇಂದ್ರ ಸರ್ಕಾರ ಮತ್ತು ಸುಪ್ರೀಂಕೋರ್ಟ್ ಹೇಳಿತ್ತು. ಕೇಂದ್ರ ಸರ್ಕಾರವು ಸುಗ್ರೀವಾಜ್ಞೆ ಮೂಲಕ ಗಣಿ ಮತ್ತು ಖನಿಜ (ಅಭಿವೃದ್ಧಿ ಮತ್ತು ನಿಯಂತ್ರಣ) ಕಾಯ್ದೆಗೆ ಜನವರಿ 12ರಂದು ತಿದ್ದುಪಡಿ ತಂದಿತ್ತು. ಗಣಿ ಗುತ್ತಿಗೆ ನವೀಕರಣಕ್ಕೆ ಸಂಬಂಧಿಸಿದಂತೆ ಸಮಿತಿಯ ಉನ್ನತಾಧಿಕಾರ ಮಾರ್ಗಸೂಚಿಗಳನ್ನು ಹೊರಡಿಸಿತ್ತು. ಇದನ್ನು ಉಲ್ಲಂಘಿಸಿ 2,386 ಎಕರೆ ಭೂಮಿಯನ್ನು ಈ ಕಂಪನಿಗಳಿಗೆ ಹಂಚಿಕೆ ಮಾಡಲಾಗಿದೆ ಎಂದು ದೂರಿನಲ್ಲಿ ವಿವರಿಸಿದ್ದಾರೆ
ಈ ಗಂಭೀರ ಸ್ವರೂಪದ ಆರೋಪಗಳ ಹಿನ್ನೆಲೆಯಲ್ಲಿ
ಸಿದ್ದರಾಮಯ್ಯ ವಿರುದ್ಧ ಭ್ರಷ್ಟಾಚಾರ ಕಾಯ್ದೆ 1998ರ ಕಾಯ್ದೆ ಸೆಕ್ಷನ್ 7, 9, 11, 12 ಮತ್ತು 15 ಹಾಗೂ ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 59, 61, 42, 201, 227, 228, 229, 239, 314, 316/3, 318/1, 319, 322, 324/2, 324(3), 335, 336, 338 ಹಾಗೂ 340ರಡಿ ವಿಚಾರಣೆಗೆ ಪೂರ್ವಾನುಮತಿ ನೀಡಬೇಕೆಂದು ಕೋರಿದ್ದಾರೆ.
ಈ ಸಂಬಂಧ ದೂರುದಾರರ ಜೊತೆ ರಾಜ್ಯಪಾಲರು ಸುದೀರ್ಘವಾಗಿ ಚರ್ಚೆ ನಡೆಸಿದ್ದಾರೆ. ಆ ನಂತರ ದೂರಿನ ಮೇಲೆ ಸಹಿ ಮಾಡಿ ಕಾನೂನು ವಿಭಾಗದ ಅಭಿಪ್ರಾಯಕ್ಕೆ ಕಳುಹಿಸಿದ್ದಾರೆ. ಸಾಲಿಸಿಟರ್ ಜನರಲ್ ಬಳಿ ಚರ್ಚೆ ನಡೆಸಿ ತೀರ್ಮಾನ ಮಾಡುವುದಾಗಿ ರಾಜ್ಯಪಾಲರು ದೂರುದಾರರಿಗೆ ಭರವಸೆ ನೀಡಿದ್ದಾರೆ

1 ಟಿಪ್ಪಣಿ
Нужен трафик и лиды? авигрупп SEO-оптимизация, продвижение сайтов и реклама в Яндекс Директ: приводим целевой трафик и заявки. Аудит, семантика, контент, техническое SEO, настройка и ведение рекламы. Работаем на результат — рост лидов, продаж и позиций.