Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸುಂದರಿ ಜಾಲಕ್ಕೆ ಬಲಿಯಾದ ಇರಾನ್.
    ಅಂತಾರಾಷ್ಟ್ರೀಯ

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    vartha chakraBy vartha chakraಜೂನ್ 24, 2025ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಈ ಸ್ಟೋರಿ ನೋಡಿ..ಇದು ಯಾವುದೇ ಜೇಮ್ಸ್ ಬಾಂಡ್ ಸಿನಿಮಾದ ಕತೆಯಂತೆ ಅನ್ನಿಸಿದರೂ ಅಚ್ಚರಿಯಲ್ಲ, ಆದರೆ ಇದು ಸತ್ಯ ಕತೆ.
    ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಸಂಘಟಿತ ದಾಳಿಯಿಂದ ಇರಾನ್ ತತ್ತರಗೊಂಡಿದೆ. ಇರಾನ್ ಪರಮಾಣು ಶಸ್ತ್ರಾಸ್ತ್ರ ಹೊಂದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ನಡೆದಿರುವ ಈ ದಾಳಿ ತೈಲ ರಾಷ್ಟ್ರವನ್ನು ತತ್ತರಿಸಿರುವಂತೆ ಮಾಡಿದೆ. ಈ ದಾಳಿ ಇಷ್ಟೊಂದು ಸಂಘಟನಾತ್ಮಕವಾಗಿ ನಡೆದು ತೈಲ ರಾಷ್ಟ್ರದ ಬೆನ್ನೆಲುಬು ಮುರಿಯುವಂತೆ ಮಾಡಲು ಸಾಧ್ಯವಾಗಿದ್ದು ಮಹಿಳೆಯೊಬ್ಬಳ ಕಾರಣದಿಂದ ಎಂಬ ಸತ್ಯ ಇದೀಗ ಬೆಳಕಿಗೆ ಬಂದಿದೆ.
    ಆ ಮಹಿಳೆ ನಡೆಸಿದ ಅತ್ಯಂತ ವ್ಯವಸ್ಥಿತ ಗೂಢಚರ್ಯೆ ಮತ್ತು ಮಾಹಿತಿ ಸಂಗ್ರಹದ ಪರಿಣಾಮವಾಗಿ ದೈತ್ಯ ತೈಲ ರಾಷ್ಟ್ರ ಇರಾನ್ ಎಂದು ಅಪಾರ ಪ್ರಮಾಣದ ಸಾವು ನೋವು ಮಾತ್ರವಲ್ಲದೆ ದೊಡ್ಡ ಆರ್ಥಿಕ ನಷ್ಟವನ್ನು ಕೂಡ ಅನುಭವಿಸುವಂತಾಗಿದೆ.
    ಇಂತಹ ಒಂದು ದುರಂತಕ್ಕೆ ಕಾರಣವಾಗಿದ್ದು ಕ್ಯಾಥರಿನ್ ಪೆರೆಜ್ ಶಕ್ದಮ್ ಎಂಬ ಮಹಿಳೆ.
    ಈಕೆ ಮೂಲತಃ ಫ್ರಾನ್ಸ್ ನವಳು. ಈಕೆ ಫ್ರಾನ್ಸ್ ನ ಯಹೂದಿ ಕುಟುಂಬದವಳು. ಲಂಡನ್ ವಿವಿಯಲ್ಲಿ ಆರ್ಥಿಕ ಮತ್ತು ಸಂವಹನ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದು ವೃತ್ತಿಯಲ್ಲಿ ಪತ್ರಕರ್ತೆ ಹಾಗೂ ರಾಜಕೀಯ ವಿಶ್ಲೇಷಣಕಾರಳಾಗಿ ಕೆಲಸ ಮಾಡುತ್ತಿದ್ದಳು.
    ನೋಡಲು ಅತ್ಯಂತ ಸುಂದರಿಯಿಗಿದ್ದ ಈಕೆ ತನ್ನ ಆಕರ್ಷಕ ಮಾತುಗಾರಿಕೆಯಿಂದ ಎಂತವರ ಗಮನವನ್ನು ಸೆಳೆಯುತ್ತಿದ್ದಳು ಈಕೆಯನ್ನು ಎರಡು ವರ್ಷದ ಹಿಂದೆ ಸಂಪರ್ಕಿಸಿದ ಇಸ್ರೇಲ್ ನ ಪರಿಣಿತರು ಆಕೆಗೆ ಗೂಢಚರ್ಯೆ ಕುರಿತಂತೆ ತರಬೇತಿಯನ್ನು ನೀಡಿದರು ಅರ್ಥ ಇಲ್ಲ ಅಪಾರ ಪ್ರಮಾಣದ ಹಣವನ್ನು ಕೂಡ ಕೊಟ್ಟರು.
    ಮೊಸಾದ್ ನಿಂದ ತರಬೇತಿ ಪಡೆದು ಪತ್ರಕರ್ತೆಯ ಸೋಗಿನಲ್ಲಿ ಇರಾನ್ ಪ್ರವೇಶಿಸಿದ ಈಕೆ ಮೊದಲಿಗೆ ಇಸ್ಲಾಂ ಧರ್ಮದ ಬಗ್ಗೆ ಅತಿಯಾದ ಆಸಕ್ತಿ ತೋರಿಸಿದಳು.
    ಇರಾನ್ ಮಹಿಳೆಯರ ಮೂಲಕ ಇಸ್ಲಾಂ ಬಗ್ಗೆ ಮಾಹಿತಿ ತಿಳಿದುಕೊಳ್ಳುತ್ತಲೇ ಶಿಯಾ ಧರ್ಮಕ್ಕೆ ಮತಾಂತರವಾದಳು. ಈ ಮೂಲಕ ಎಲ್ಲರ ವಿಶ್ವಾಸ ಗಳಿಸಿದ ಈಕೆ, ಇರಾನ್ ನ ಕೆಲವು ಪ್ರಭಾವಿ ಕುಟುಂಬಗಳಿಗೆ ಅತ್ಯಂತ ಆಪ್ತರಾದರು ಆ ಬಳಿಕ ಇರಾನ್ ನ ಉನ್ನತಾಧಿಕಾರಿಗಳ ಪರಿಚಯ ಮಾಡಿಕೊಂಡಳು.
    ಪತ್ರಕರ್ತೆ, ಬರಹಗಾರ್ತಿಯಾಗಿ ಇರಾನ್ ಪರಮೋಚ್ಛ ನಾಯಕ ಖಮೈನಿ ನಿರ್ಧಾರಗಳನ್ನು ಸಮರ್ಥಿಸಿಕೊಳ್ಳುವಂತೆ ಅನೇಕ ಲೇಖನ ಮತ್ತು ವರದಿಗಳನ್ನು ಬರೆದು ಎಲ್ಲರನ್ನೂ ನಂಬಿಸಿದ್ದಳು.
    ಇದೇ ಕಾರಣಕ್ಕೆ ಈಕೆ ಸೇನೆಯ ಉನ್ನತ ಕಮಾಂಡರ್ ಗಳನ್ನು, ಅಧಿಕಾರಿಗಳನ್ನು ಸುಲಭವಾಗಿ ಭೇಟಿ ಮಾಡಲು ಸಾಧ್ಯವಾಯಿತು. ಸಾಮಾನ್ಯರು ಪ್ರವೇಶಿಸದ ಸ್ಥಳಗಳಿಗೂ ಈಕೆಗೆ ಹೋಗಲು ಸಾಧ್ಯವಾಗುತ್ತಿತ್ತು.
    ಈ ರೀತಿ ಅತ್ಯಂತ ಪ್ರಮುಖ ಸ್ಥಳಗಳಿಗೆ ತೆರಳುತ್ತಿದ್ದ ಈಕೆ ಅಲ್ಲಿ ನೆಲೆಸಿದ್ದವರು ಅಲ್ಲಿನ ಭದ್ರತೆ ಇತ್ಯಾದಿ ಹಲವಾರು ವಿಷಯಗಳ ಬಗ್ಗೆ ಯಾರಿಗೂ ತಿಳಿಯದಂತೆ ಫೋಟೋ ಮತ್ತು ಮಾಹಿತಿಗಳನ್ನು ಸಂಗ್ರಹಿಸಿ ಅದನ್ನು ಇಸ್ರೇಲ್ ಗೆ ರವಾನಿಸುತ್ತಿದ್ದಳು. ಈ ಮೂಲಕ ಇರಾನ್ ಸೇನೆಯ ಹಲವಾರು ಮಾಹಿತಿಗಳು ಇಸ್ರೇಲ್ ನ ಪಾಲಾದವು.
    ಇದರಿಂದಾಗಿ ಸೇನೆಯ ಉನ್ನತ ಕಮಾಂಡರ್ ಗಳನ್ನು ಇಸ್ರೇಲ್ ಸುಲಭವಾಗಿ ಹೊಡೆದು ಹಾಕಲು ಸಾಧ್ಯವಾಯಿತು. ಇಸ್ರೇಲ್ ಇಷ್ಟು ನಿಖರವಾಗಿ ತಮ್ಮ ಸೇನಾಧಿಕಾರಿಗಳು, ನೆಲೆಗಳನ್ನು ಪತ್ತೆ ಮಾಡಿ ದಾಳಿ ನಡೆಸುತ್ತಿದ್ದರಿಂದ ಅನುಮಾನಗೊಂಡು ಇರಾನ್ ಗುಪ್ತಚರ ಸಂಸ್ಥೆ ತನಿಖೆ ನಡೆಸಿತು. ಆಗ ಈ ಮಹಿಳೆ ಬಗ್ಗೆ ಅವರಿಗೆ ತಿಳಿದುಬಂದಿದೆ. ಆದರೆ ಆಕೆಯನ್ನು ಬಂಧಿಸಬೇಕು ಎನ್ನುವಷ್ಟರಲ್ಲಿ ಕಣ್ಮರೆಯಾಗಿದ್ದಾಳೆ. ಆಕೆ ಎಲ್ಲಿದ್ದಾಳೆ ಎಂಬ ಮಾಹಿತಿ ಈಗ ಯಾರಿಗೂ ಇಲ್ಲ.

    ಧರ್ಮ ಮೈ ರಾಜಕೀಯ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.
    Next Article ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !
    vartha chakra
    • Website

    Related Posts

    ಕುತೂಹಲ ಮೂಡಿಸಿದ ಸಿಎಂ, ಡಿಸಿಎಂ ದೆಹಲಿ ಯಾತ್ರೆ

    ಜುಲೈ 7, 2025

    ಡಿಕೆ ಶಿವಕುಮಾರ್ ಬಗ್ಗೆ ರಂಭಾಪುರಿ ಶ್ರೀಗಳ ಹೇಳಿದ್ದೇನು ಗೊತ್ತೆ?

    ಜುಲೈ 7, 2025

    CM ಮತ್ತುDCM ಬಂಡೆಯಂತೆ ಇದ್ದಾರಂತೆ

    ಜೂನ್ 30, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಡಿ ಬಾಸ್ ಗ್ಯಾಂಗ್ ನಂತೆ ಯುವಕನ ಮೇಲೆ ಹಲ್ಲೆ !

    ರಾಜ್ಯ ಕಾಂಗ್ರೆಸ್ ನಲ್ಲಿ ಏನಾಗುತ್ತಿದೆ ?

    ಕುತೂಹಲ ಮೂಡಿಸಿದ ಸಿಎಂ, ಡಿಸಿಎಂ ದೆಹಲಿ ಯಾತ್ರೆ

    ಹೃದಯಾಘಾತಕ್ಕೆ ಕಾರಣ ಪತ್ತೆ ಹಚ್ಚಿದ ತಜ್ಞರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • k27et ರಲ್ಲಿ ಅರಣ್ಯಾಧಿಕಾರಿಗಳಿಗೆ ಸಚಿವ ಖಂಡ್ರೆ ಕೊಟ್ಟ ಸೂಚನೆ | Eshwar Khandre
    • tjg0o ರಲ್ಲಿ 2000 ಶಾಲೆ ಅಭಿವೃದ್ಧಿಗೆ ಪಣ.
    • eqea2 ರಲ್ಲಿ ಇದೆಂತಹ ದೊಡ್ಡ ಅಕ್ರಮ ನೋಡಿ.
    Latest Kannada News

    ಡಿ ಬಾಸ್ ಗ್ಯಾಂಗ್ ನಂತೆ ಯುವಕನ ಮೇಲೆ ಹಲ್ಲೆ !

    ಜುಲೈ 7, 2025

    ರಾಜ್ಯ ಕಾಂಗ್ರೆಸ್ ನಲ್ಲಿ ಏನಾಗುತ್ತಿದೆ ?

    ಜುಲೈ 7, 2025

    ಕುತೂಹಲ ಮೂಡಿಸಿದ ಸಿಎಂ, ಡಿಸಿಎಂ ದೆಹಲಿ ಯಾತ್ರೆ

    ಜುಲೈ 7, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಕಪಾಳಕ್ಕೆ ಬಾರಿಸಿದ ಬಿಜೆಪಿ ಶಾಸಕ ! #bjp #viralvideo #news #kannadanews #varthachakra #slapping #
    Subscribe