Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅತಿಯಾದ ವೇಗದಲ್ಲಿ ಕಾರು ಚಲಾಯಿಸಿದರೆ ಅಷ್ಟೇ..
    Trending

    ಅತಿಯಾದ ವೇಗದಲ್ಲಿ ಕಾರು ಚಲಾಯಿಸಿದರೆ ಅಷ್ಟೇ..

    vartha chakraBy vartha chakraಆಗಷ್ಟ್ 2, 202471 ಪ್ರತಿಕ್ರಿಯೆಗಳು4 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಆ.1-

    ಹೆಚ್ಚುತ್ತಿರುವ ಅಪಘಾತ ಪ್ರಕರಣಗಳಿಗೆ ಕಡಿವಾಣ ಹಾಕಲು ಮುಂದಾಗಿರುವ ಸಂಚಾರಿ ಪೊಲೀಸರು ಇದೀಗ ವಾಹನಗಳ ವೇಗ ಮಿತಿಯ ಬಗ್ಗೆ ಗಮನ ಹರಿಸಿದ್ದಾರೆ. ಅತಿಯಾದ ವೇಗದಿಂದ ವಾಹನ ಚಲಾಯಿಸುವುದು ಅಪಘಾತಗಳಿಗೆ ಕಾರಣ ಎಂಬ ವರದಿಗಳ ಹಿನ್ನೆಲೆಯಲ್ಲಿ ವಾಹನಗಳ ವೇಗಮಿತಿ ಗಂಟಗೆ 130 ಕಿ‌.ಮೀ.ಗೆ ಮಿತಿಗೊಳಿಸಿದ್ದಾರೆ.

    ಇನ್ನು ಮುಂದೆ ಗಂಟೆಗೆ 130 ಕಿ.ಮೀ.ಗಿಂತ ವೇಗವಾಗಿ ಸಂಚರಿಸುವ ಎಲ್ಲಾ ವಿಧದ ವಾಹನ ಚಾಲನೆಗೆ ದಂಡ ಜೊತೆಗೆ ವಾಹನ ಚಾಲಕರ ವಿರುದ್ಧ ಎಫ್ಐಆರ್ ದಾಖಲಿಸಲಾಗುತ್ತದೆ.

    ವಾಹನಗಳ ವೇಗ ಮಿತಿಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಈ ಕ್ರಮ ಕೈಗೊಳ್ಳಲಾಗುತ್ತಿದೆ.ಇನ್ನು ಮುಂದೆ ರಾಜ್ಯಾದ್ಯಂತ ಗಂಟೆಗೆ 130 ಕಿ.ಮೀ ವೇಗದಲ್ಲಿ ವಾಹನ ಚಲಾಯಿಸುವ ವಾಹನ ಚಾಲಕರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ – 281 (ಅತಿವೇಗ ಹಾಗೂ ನಿರ್ಲಕ್ಷ್ಯತನದಿಂದ ವಾಹನ ಚಾಲನೆ) ಆರೋಪದಡಿ ಎಫ್ಐಆರ್ ದಾಖಲಿಸಲಿದ್ದಾರೆ.

    ಕಳೆದ 2022ರಲ್ಲಿ ರಾಜ್ಯದಲ್ಲಿ ಸಂಭವಿಸಿದ್ದ 90 ಪ್ರತಿಶತ ಗಂಭೀರ ಅಪಘಾತ ಪ್ರಕರಣಗಳಿಗೆ ಅತಿವೇಗದ ವಾಹನ ಚಾಲನೆ ಕಾರಣ ಎಂಬ ಅಂಶ ಬಯಲಾಗಿತ್ತು. ಅಲ್ಲದೆ ಇತ್ತೀಚೆಗೆ ಬೆಂಗಳೂರಿನ ನೈಸ್ ರಸ್ತೆಯಲ್ಲಿ ಸಂಭವಿಸಿದ್ದ ಅಪಘಾತದಲ್ಲಿ ಕಾರಿನಲ್ಲಿದ್ದ ಚಾಲಕ ಸಹಿತ ಮೂವರು ಸಾವನ್ನಪ್ಪಿದ್ದರು.

    ಇದಕ್ಕೆ ಕಾರಿನ ಚಾಲಕ ಗಂಟೆಗೆ 160 ಕಿ.ಮೀ ವೇಗದಲ್ಲಿ ಕಾರು ಚಲಾಯಿಸಿರುವುದರಿಂದ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿರುವುದು ಕಂಡು ಬಂದಿತ್ತು.

    ಹೀಗಾಗಿ ಇನ್ನು ಮುಂದೆ ವೇಗ ಮಿತಿಯ ನಿಯಮ ಉಲ್ಲಂಘಿಸುವವರಿಗೆ 1 ಸಾವಿರ ರೂ. ದಂಡ ಅಥವಾ 6 ತಿಂಗಳವರೆಗೆ ಸಜೆ ಅಥವಾ ಎರಡನ್ನೂ ವಿಧಿಸಬಹುದಾಗಿದೆ ಎಂದು ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ(ಎಡಿಜಿಪಿ) ಅಲೋಕ್ ಕುಮಾರ್ ತಿಳಿಸಿದ್ದಾರೆ.

    ರಾಜ್ಯದಲ್ಲಿ ಬಹುತೇಕ ಅಪಘಾತ ಪ್ರಕರಣಗಳಿಗೆ ವಾಹನಗಳ ವೇಗ ಕಾರಣವಾಗುತ್ತಿರುವುದರಿಂದ ಈ ನಿರ್ಧಾರಕ್ಕೆ ಬರಲಾಗಿದೆ. ಸಾಮಾನ್ಯವಾಗಿ ಯಾವುದೇ ವಾಹನದ ವೇಗ ಗಂಟೆಗೆ 120 ಕಿ.ಮೀ ಮೀರಿದ ಬಳಿಕ ಅಪಾಯಕಾರಿಯಾಗಬಹುದು. ರಾಜ್ಯದಲ್ಲಿ ಈ ನಿಯಮ ಉಲ್ಲಂಘನೆ ಆಗುತ್ತಿರುವುದರಿಂದ ಆಗಸ್ಟ್ 1 ರಿಂದ ವೇಗ ಮಿತಿ ಮೀರುವ ಎಲ್ಲಾ ವಿಧದ ವಾಹನಗಳ ಚಾಲಕ/ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲು ನಿರ್ಧರಿಸಲಾಗಿದೆ ಎಂದರು.

    ಈಗಾಗಲೇ ನಗರ ಹಾಗೂ ಜಿಲ್ಲೆಗಳ ಪೊಲೀಸ್ ಸಿಬ್ಬಂದಿಗಳಿಗೆ ಈ ಬಗ್ಗೆ ಸೂಚಿಸಲಾಗಿದೆ. ಅದರನ್ವಯ ವೇಗದ ಮಿತಿ ಮೀರುವವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗುತ್ತದೆ. ಮೊದಲ ಬಾರಿಗೆ ಪ್ರಕರಣ ದಾಖಲಿಸಿಕೊಂಡು ದಂಡ ವಿಧಿಸಲಾಗುತ್ತದೆ. ಎರಡು ಅಥವಾ ಮೂರಕ್ಕಿಂತಲೂ ಹೆಚ್ಚು ಬಾರಿ ನಿಯಮ ಉಲ್ಲಂಘನೆ ಪುನರಾವರ್ತನೆಯಾದರೆ ನ್ಯಾಯಾಂಗ ಬಂಧನವಾಗುವ ಸಾಧ್ಯತೆಯೂ ಇರಲಿದೆ” ಎಂದು ವಿವರಿಸಿದರು.

    ಸವಾಲುಗಳೇನು:

    ನೂತನ ನಿಯಮ ಅನುಷ್ಠಾನಕ್ಕೆ ಇರುವ ಕೆಲ ಸವಾಲುಗಳ ಕುರಿತು ಇದೇ ಸಂದರ್ಭದಲ್ಲಿ ಪ್ರತಿಕ್ರಿಯಿಸಿದ ಅಲೋಕ್ ಕುಮಾರ್, ”ಬೆಂಗಳೂರು – ಮೈಸೂರು ರಸ್ತೆ, ಏರ್‌ಪೋರ್ಟ್ ರಸ್ತೆ ಸೇರಿದಂತೆ ಕೆಲವು ರಸ್ತೆಗಳಲ್ಲಿ ರಾತ್ರಿ ವೇಳೆ ವೇಗ ಮಿತಿ ಮೀರುವವರ ವಿರುದ್ಧ ಅತ್ಯಾಧುನಿಕ ಕ್ಯಾಮರಾಗಳ ಸಹಾಯದಿಂದ ಪ್ರಕರಣ ದಾಖಲಿಸಿಕೊಳ್ಳಬಹುದು ಎಂದರು.

    ಅತಿಯಾದ ವೇಗದಲ್ಲಿ ಕಾರು ಚಲಾಯಿಸಿದರೆ ಅಷ್ಟೇ..

     

    ಬೆಂಗಳೂರು,ಆ.1-
    ಹೆಚ್ಚುತ್ತಿರುವ ಅಪಘಾತ ಪ್ರಕರಣಗಳಿಗೆ ಕಡಿವಾಣ ಹಾಕಲು ಮುಂದಾಗಿರುವ ಸಂಚಾರಿ ಪೊಲೀಸರು ಇದೀಗ ವಾಹನಗಳ ವೇಗ ಮಿತಿಯ ಬಗ್ಗೆ ಗಮನ ಹರಿಸಿದ್ದಾರೆ. ಅತಿಯಾದ ವೇಗದಿಂದ ವಾಹನ ಚಲಾಯಿಸುವುದು ಅಪಘಾತಗಳಿಗೆ ಕಾರಣ ಎಂಬ ವರದಿಗಳ ಹಿನ್ನೆಲೆಯಲ್ಲಿ ವಾಹನಗಳ ವೇಗಮಿತಿ ಗಂಟಗೆ 130 ಕಿ‌.ಮೀ.ಗೆ ಮಿತಿಗೊಳಿಸಿದ್ದಾರೆ.
    ಇನ್ನು ಮುಂದೆ ಗಂಟೆಗೆ 130 ಕಿ.ಮೀ.ಗಿಂತ ವೇಗವಾಗಿ ಸಂಚರಿಸುವ ಎಲ್ಲಾ ವಿಧದ ವಾಹನ ಚಾಲನೆಗೆ ದಂಡ ಜೊತೆಗೆ ವಾಹನ ಚಾಲಕರ ವಿರುದ್ಧ ಎಫ್ಐಆರ್ ದಾಖಲಿಸಲಾಗುತ್ತದೆ.
    ವಾಹನಗಳ ವೇಗ ಮಿತಿಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಈ ಕ್ರಮ ಕೈಗೊಳ್ಳಲಾಗುತ್ತಿದೆ.ಇನ್ನು ಮುಂದೆ ರಾಜ್ಯಾದ್ಯಂತ ಗಂಟೆಗೆ 130 ಕಿ.ಮೀ ವೇಗದಲ್ಲಿ ವಾಹನ ಚಲಾಯಿಸುವ ವಾಹನ ಚಾಲಕರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ – 281 (ಅತಿವೇಗ ಹಾಗೂ ನಿರ್ಲಕ್ಷ್ಯತನದಿಂದ ವಾಹನ ಚಾಲನೆ) ಆರೋಪದಡಿ ಎಫ್ಐಆರ್ ದಾಖಲಿಸಲಿದ್ದಾರೆ.
    ಕಳೆದ 2022ರಲ್ಲಿ ರಾಜ್ಯದಲ್ಲಿ ಸಂಭವಿಸಿದ್ದ 90 ಪ್ರತಿಶತ ಗಂಭೀರ ಅಪಘಾತ ಪ್ರಕರಣಗಳಿಗೆ ಅತಿವೇಗದ ವಾಹನ ಚಾಲನೆ ಕಾರಣ ಎಂಬ ಅಂಶ ಬಯಲಾಗಿತ್ತು. ಅಲ್ಲದೆ ಇತ್ತೀಚೆಗೆ ಬೆಂಗಳೂರಿನ ನೈಸ್ ರಸ್ತೆಯಲ್ಲಿ ಸಂಭವಿಸಿದ್ದ ಅಪಘಾತದಲ್ಲಿ ಕಾರಿನಲ್ಲಿದ್ದ ಚಾಲಕ ಸಹಿತ ಮೂವರು ಸಾವನ್ನಪ್ಪಿದ್ದರು.
    ಇದಕ್ಕೆ ಕಾರಿನ ಚಾಲಕ ಗಂಟೆಗೆ 160 ಕಿ.ಮೀ ವೇಗದಲ್ಲಿ ಕಾರು ಚಲಾಯಿಸಿರುವುದರಿಂದ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿರುವುದು ಕಂಡು ಬಂದಿತ್ತು.
    ಹೀಗಾಗಿ ಇನ್ನು ಮುಂದೆ ವೇಗ ಮಿತಿಯ ನಿಯಮ ಉಲ್ಲಂಘಿಸುವವರಿಗೆ 1 ಸಾವಿರ ರೂ. ದಂಡ ಅಥವಾ 6 ತಿಂಗಳವರೆಗೆ ಸಜೆ ಅಥವಾ ಎರಡನ್ನೂ ವಿಧಿಸಬಹುದಾಗಿದೆ ಎಂದು ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ(ಎಡಿಜಿಪಿ) ಅಲೋಕ್ ಕುಮಾರ್ ತಿಳಿಸಿದ್ದಾರೆ.
    ರಾಜ್ಯದಲ್ಲಿ ಬಹುತೇಕ ಅಪಘಾತ ಪ್ರಕರಣಗಳಿಗೆ ವಾಹನಗಳ ವೇಗ ಕಾರಣವಾಗುತ್ತಿರುವುದರಿಂದ ಈ ನಿರ್ಧಾರಕ್ಕೆ ಬರಲಾಗಿದೆ. ಸಾಮಾನ್ಯವಾಗಿ ಯಾವುದೇ ವಾಹನದ ವೇಗ ಗಂಟೆಗೆ 120 ಕಿ.ಮೀ ಮೀರಿದ ಬಳಿಕ ಅಪಾಯಕಾರಿಯಾಗಬಹುದು. ರಾಜ್ಯದಲ್ಲಿ ಈ ನಿಯಮ ಉಲ್ಲಂಘನೆ ಆಗುತ್ತಿರುವುದರಿಂದ ಆಗಸ್ಟ್ 1 ರಿಂದ ವೇಗ ಮಿತಿ ಮೀರುವ ಎಲ್ಲಾ ವಿಧದ ವಾಹನಗಳ ಚಾಲಕ/ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲು ನಿರ್ಧರಿಸಲಾಗಿದೆ ಎಂದರು.
    ಈಗಾಗಲೇ ನಗರ ಹಾಗೂ ಜಿಲ್ಲೆಗಳ ಪೊಲೀಸ್ ಸಿಬ್ಬಂದಿಗಳಿಗೆ ಈ ಬಗ್ಗೆ ಸೂಚಿಸಲಾಗಿದೆ. ಅದರನ್ವಯ ವೇಗದ ಮಿತಿ ಮೀರುವವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗುತ್ತದೆ. ಮೊದಲ ಬಾರಿಗೆ ಪ್ರಕರಣ ದಾಖಲಿಸಿಕೊಂಡು ದಂಡ ವಿಧಿಸಲಾಗುತ್ತದೆ. ಎರಡು ಅಥವಾ ಮೂರಕ್ಕಿಂತಲೂ ಹೆಚ್ಚು ಬಾರಿ ನಿಯಮ ಉಲ್ಲಂಘನೆ ಪುನರಾವರ್ತನೆಯಾದರೆ ನ್ಯಾಯಾಂಗ ಬಂಧನವಾಗುವ ಸಾಧ್ಯತೆಯೂ ಇರಲಿದೆ” ಎಂದು ವಿವರಿಸಿದರು.
    ಸವಾಲುಗಳೇನು:
    ನೂತನ ನಿಯಮ ಅನುಷ್ಠಾನಕ್ಕೆ ಇರುವ ಕೆಲ ಸವಾಲುಗಳ ಕುರಿತು ಇದೇ ಸಂದರ್ಭದಲ್ಲಿ ಪ್ರತಿಕ್ರಿಯಿಸಿದ ಅಲೋಕ್ ಕುಮಾರ್, ”ಬೆಂಗಳೂರು – ಮೈಸೂರು ರಸ್ತೆ, ಏರ್‌ಪೋರ್ಟ್ ರಸ್ತೆ ಸೇರಿದಂತೆ ಕೆಲವು ರಸ್ತೆಗಳಲ್ಲಿ ರಾತ್ರಿ ವೇಳೆ ವೇಗ ಮಿತಿ ಮೀರುವವರ ವಿರುದ್ಧ ಅತ್ಯಾಧುನಿಕ ಕ್ಯಾಮರಾಗಳ ಸಹಾಯದಿಂದ ಪ್ರಕರಣ ದಾಖಲಿಸಿಕೊಳ್ಳಬಹುದು ಎಂದರು.
    ಇನ್ನೂ ಕೆಲವು ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಪೂರ್ಣವಾಗಿ ಕ್ಯಾಮೆರಾಗಳ ವ್ಯವಸ್ಥೆ ಇಲ್ಲ. ಅಂಥಹ ರಸ್ತೆಗಳಲ್ಲಿ ಹಗಲಿನಲ್ಲಿ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸುವ ಮೂಲಕ ವೇಗ ಮಿತಿ ಮೀರುವವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಬಹುದು. ಅದೇ ರಾತ್ರಿ ಸಂದರ್ಭದಲ್ಲಿ ಸಿಬ್ಬಂದಿಗಳನ್ನು ನಿಯೋಜಿಸುವುದೂ ಸಹ ಕಷ್ಟ ಸಾಧ್ಯವಾಗುವುದರಿಂದ ಸ್ವಲ್ಪ ಸವಾಲು ಎನಿಸಬಹುದು‌. ಆದರೂ ಸಹ ಸಾಧ್ಯವಾದಷ್ಟು ವಾಹನಗಳ ವೇಗಕ್ಕೆ ಕಡಿವಾಣ ಹಾಕಲು ಪೊಲೀಸರ ಪ್ರಯತ್ನ ನಿರಂತರವಾಗಿರಲಿದೆ” ಎಂದು ತಿಳಿಸಿದರು.

    ಇನ್ನೂ ಕೆಲವು ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಪೂರ್ಣವಾಗಿ ಕ್ಯಾಮೆರಾಗಳ ವ್ಯವಸ್ಥೆ ಇಲ್ಲ. ಅಂಥಹ ರಸ್ತೆಗಳಲ್ಲಿ ಹಗಲಿನಲ್ಲಿ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸುವ ಮೂಲಕ ವೇಗ ಮಿತಿ ಮೀರುವವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಬಹುದು. ಅದೇ ರಾತ್ರಿ ಸಂದರ್ಭದಲ್ಲಿ ಸಿಬ್ಬಂದಿಗಳನ್ನು ನಿಯೋಜಿಸುವುದೂ ಸಹ ಕಷ್ಟ ಸಾಧ್ಯವಾಗುವುದರಿಂದ ಸ್ವಲ್ಪ ಸವಾಲು ಎನಿಸಬಹುದು‌. ಆದರೂ ಸಹ ಸಾಧ್ಯವಾದಷ್ಟು ವಾಹನಗಳ ವೇಗಕ್ಕೆ ಕಡಿವಾಣ ಹಾಕಲು ಪೊಲೀಸರ ಪ್ರಯತ್ನ ನಿರಂತರವಾಗಿರಲಿದೆ” ಎಂದು ತಿಳಿಸಿದರು.

    Bangalore Congress Government Karnataka News Politics Trending Varthachakra ಅಪಘಾತ ಕಾಂಗ್ರೆಸ್ ಕಾನೂನು ಕಾರು ಚುನಾವಣೆ ನಿಯಮ ಉಲ್ಲಂಘನೆ ನ್ಯಾಯ ಮೈಸೂರು ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleವಿಜಯೇಂದ್ರ ಕಿವಿ ಹಿಂಡಿದ ಅಮಿತ್ ಶಾ.
    Next Article ರಾಜ್ಯದಲ್ಲಿ ಇನ್ನೂ 6ದಿನ ಭಾರಿ ಮಳೆ.
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • jaya9 app ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • izzapoyatulavucky ರಲ್ಲಿ ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    • slot blogs network ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    CSK ವಿರುದ್ಧ ಸಿಡಿದೆದ್ದ ಜಡೇಜಾ #varthachakra #csk #jadeja #dhoni #sanjusamson #viralvideo #facts #ipl
    Subscribe