Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅರಣ್ಯ ಒತ್ತುವರಿ ತಡೆಗೆ Setallite ನೆರವು.
    Trending

    ಅರಣ್ಯ ಒತ್ತುವರಿ ತಡೆಗೆ Setallite ನೆರವು.

    vartha chakraBy vartha chakraಜೂನ್ 28, 2024ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜೂ.27:
    ರಾಜ್ಯದ ಅರಣ್ಯ ಸಂಪತ್ತಿನ ಸಂರಕ್ಷಣೆ ಮತ್ತು ಅರಣ್ಯ ಒತ್ತುವರಿಯನ್ನು ಪರಿಣಾಮಕಾರಿಯಾಗಿ ತಡೆಯಲು ಅತ್ಯಾಧುನಿಕ ತಂತ್ರಜ್ಞಾನದ ಬಳಕೆಯ ಅಗತ್ಯವಿದ್ದು,ಇದಕ್ಕಾಗಿ ಉಪಗ್ರಹ ಆಧಾರಿತ ಎಚ್ಚರಿಕೆ ರವಾನೆ ವ್ಯವಸ್ಥೆ ರೂಪಿಸುವಂತೆ ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ.
    ಅರಣ್ಯ ಭೂಮಿ ಒತ್ತುವರಿ ತಡೆ ಮತ್ತು ವೃಕ್ಷ ಸಂರಕ್ಷಣೆ ಕುರಿತು ನಡೆದ ಉನ್ನತಾಧಿಕಾರಿಗಳ
    ಸಭೆಯಲ್ಲಿ ಸಚಿವರು ಈ ಸೂಚನೆ ನೀಡಿದರು.
    ಈಗಾಗಲೇ ಅಕ್ಷಾಂಶ ಮತ್ತು ರೇಖಾಂಶದ ಆಧಾರದ ಮೇಲೆ ಜಿಯೋ ರೆಫರೆನ್ಸ್ ಮೂಲಕ ರಾಜ್ಯದ ಅರಣ್ಯ ಪ್ರದೇಶದ ಗಡಿಗಳನ್ನು ಗುರುತಿಸಲಾಗಿದ್ದು, ಈ ದತ್ತಾಂಶವನ್ನು ಕರ್ನಾಟಕ ರಾಜ್ಯ ದೂರಸಂವೇದಿ ಅನ್ವಯಿಕ ಕೇಂದ್ರ (KSRSAC)ಗೆ ನೀಡಿ, ಮರಗಳ ಕಡಿತಲೆ ಮತ್ತು ಭೂ ಒತ್ತುವರಿಯ ಕುರಿತಂತೆ ಸಕಾಲಿಕ (ಕಾಲಕಾಲಕ್ಕೆ) ಎಚ್ಚರಿಕೆ ನೀಡುವ ವ್ಯವಸ್ಥೆಯೊಂದನ್ನು ಆದಷ್ಟು ಶೀಘ್ರ ರೂಪಿಸಲು ಹೇಳಿದ್ದಾರೆ.
    ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡರೆ ಇಸ್ರೋದ ರಾಷ್ಟ್ರೀಯ ದೂರ ಸಂವೇದಿ ಕೇಂದ್ರ (ಎನ್.ಆರ್.ಎಸ್.ಸಿ.)ಗೆ ಮಾಹಿತಿ ಬರುತ್ತದೆ, ಅಲ್ಲಿಂದ ಭಾರತೀಯ ಅರಣ್ಯ ಸರ್ವೇಕ್ಷಣಾ ಇಲಾಖೆ (ಎನ್.ಆರ್.ಎಸ್.ಸಿ.)ಗೆ ಮಾಹಿತಿ ರವಾನೆ ಆಗಿ ತದನಂತರ ಸಂಬಂಧಿತ ಅರಣ್ಯ ವಲಯದ ಸಿಬ್ಬಂದಿಗೆ ಎಚ್ಚರಿಕೆ ಹೋಗಲು ಇರುವ ವ್ಯವಸ್ಥೆಯ ಮಾದರಿಯಲ್ಲಿಯೇ ಮರಗಳ ಅಕ್ರಮ ಕಡಿತಲೆ ಮತ್ತು ಅರಣ್ಯ ಭೂಮಿ ಒತ್ತುವರಿಗೂ ಒಂದು ಎಚ್ಚರಿಕೆ ರವಾನೆ ವ್ಯವಸ್ಥೆ ಕಲ್ಪಿಸಿ ಎಂದು ತಿಳಿಸಿದರು.
    ವಲಯ ಅರಣ್ಯಾಧಿಕಾರಿಗಳ ಮಟ್ಟದಲ್ಲಿ ಅರಣ್ಯ ಒತ್ತುವರಿಯ ಮತ್ತು ಅರಣ್ಯ ಹಕ್ಕು ಕಾಯಿದೆಯ ಅರ್ಜಿಗಳ ಕುರಿತಂತೆ ಸಂಪೂರ್ಣ ಮಾಹಿತಿಯ ದತ್ತಾಂಶವನ್ನು ಸಿದ್ಧಪಡಿಸಿ, ನ್ಯಾಯಾಲಯದಲ್ಲಿರುವ ಪ್ರಕರಣಗಳಿಗೆ ಸಕಾಲದಲ್ಲಿ ಆಕ್ಷೇಪಣೆ ಸಲ್ಲಿಸಿ ಇವುಗಳ ಇತ್ಯರ್ಥಕ್ಕೆ ಕ್ರಮವಹಿಸುವಂತೆ ಸೂಚಿಸಿದರು.
    ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳ ಮಟ್ಟದಲ್ಲಿ ಬಾಕಿ ಇರುವ ಎಲ್ಲ 64ಎ ಪ್ರಕರಣಗಳನ್ನು ಮತ್ತು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ಮುಂದಿರುವ ಮೇಲ್ಮನವಿಗಳನ್ನು ಕಾಲಮಿತಿಯಲ್ಲಿ ಅಂದರೆ ಒಂದು ವರ್ಷದೊಳಗೆ ಇತ್ಯರ್ಥಪಡಿಸುವಂತೆ ಸೂಚನೆ ನೀಡಿದರು.
    ಅದೇ ರೀತಿ, ಸೆಕ್ಷನ್ 4 ಪ್ರಕರಣಗಳಲ್ಲಿ ಅರಣ್ಯ ವ್ಯವಸ್ಥಾಪನಾಧಿಕಾರಿಗಳು (ಎಫ್.ಎಸ್.ಓ.)ಗಳಿಗೂ ಕಾಲಮಿತಿಯಲ್ಲಿ ಈ ಪ್ರಕರಣಗಳನ್ನು ಇತ್ಯರ್ಥಪಡಿಸಿ ಅರಣ್ಯ ಇಲಾಖೆಯ ಮೇಲೆ ಇರುವ ಪ್ರಕರಣಗಳ ಹೊರೆಯನ್ನು ತಗ್ಗಿಸಲು ಸೂಚಿಸಿದರು.

    Verbattle
    Verbattle
    Verbattle
    Bangalore forest forest department Government Karnataka News Politics Trending Varthachakra ಕಾನೂನು ತಂತ್ರಜ್ಞಾನ ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous ArticleDrugs ಪತ್ತೆಗೆ ಶ್ವಾನದಳ ಬಳಕೆ.
    Next Article ಸಿದ್ದರಾಮಯ್ಯ ಅಧಿಕಾರ ಹಸ್ತಾಂತರಕ್ಕೆ ಸಿದ್ಧ.
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Cliftondef ರಲ್ಲಿ ಗಂಗೆಯಲ್ಲಿ ಮೆಡಲ್ ವಿಸರ್ಜನೆ
    • Cliftondef ರಲ್ಲಿ ಮುನಿಸಿಕೊಂಡ G. Parameshwara ಮತ್ತು M.B.Patil
    • Georgemen ರಲ್ಲಿ ಅಧಿಕಾರ ಹಂಚಿಕೆ ಒಪ್ಪಂದ ಆಗಿಲ್ಲವೇ..?
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.