ಹರಿಯಾಣ, ಅಕ್ಟೋಬರ್ -17 ರಂದು ಹರಿಯಾಣದ ಪಂಚಕುಲದಲ್ಲಿ ಹೊಸ ಬಿಜೆಪಿ ಸರ್ಕಾರದ ವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ಪಕ್ಷವು ತಿಳಿಸಿದೆ. ಪ್ರಧಾನಿ ನರೇಂದ್ರ ಮೋದಿ, ಹಿರಿಯ ಬಿಜೆಪಿ ನಾಯಕರು ಮತ್ತು ಇತರ ಕೆಲವು ರಾಜ್ಯಗಳ ಮುಖ್ಯಮಂತ್ರಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಪಂಚಕುಲ ಸೆಕ್ಟರ್ 5ರ ದಸರಾ ಮೈದಾನದಲ್ಲಿ ಬೆಳಗ್ಗೆ 10 ಗಂಟೆಗೆ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ.
ಬಿಜೆಪಿ ಇನ್ನೂ ತಮ್ಮ ಮುಖ್ಯಮಂತ್ರಿ ಆಯ್ಕೆಯನ್ನು ಘೋಷಿಸಿಲ್ಲ, ಆದರೆ ವರದಿಯ ಪ್ರಕಾರ ಪಕ್ಷವು ನಯಾಬ್ ಸಿಂಗ್ ಸೈನಿ ಅವರನ್ನೇ ಸಿಎಂ ಮಾಡಲಿದೆ ಎಂದು ಹೇಳುತ್ತದೆ.
2024ರ ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 48 ಸ್ಥಾನಗಳನ್ನು ಗಳಿಸಿ ಗೆಲುವು ಸಾಧಿಸಿತ್ತು. ಕಾಂಗ್ರೆಸ್ 37 ಸ್ಥಾನಗಳನ್ನು ಪಡೆದಿದ್ದು, ಬಿಜೆಪಿಗಿಂತ 11 ಸ್ಥಾನ ಕಡಿಮೆಯಾಗಿದೆ. ಜನತಾ ಜನನಾಯಕ ಪಕ್ಷ (ಜೆಜೆಪಿ) ಮತ್ತು ಆಮ್ ಆದ್ಮಿ ಪಕ್ಷ (ಎಎಪಿ) ಹೀನಾಯವಾಗಿ ಸೋತಿವೆ ಮತ್ತು ಐಎನ್ಎಲ್ಡಿ ಕೇವಲ ಎರಡು ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದು ಬಿಜೆಪಿ 10 ವರ್ಷಗಳ ಆಡಳಿತ-ವಿರೋಧಿ ಅಲೆ ಮತ್ತು ಎಕ್ಸಿಟ್ ಪೋಲ್ ಭವಿಷ್ಯವನ್ನು ತಲೆಕೆಳಗಾಗಿಸಿವೆ.

1 ಟಿಪ್ಪಣಿ
Mostbet te dГЎ o start perfeito: bГґnus 125% + 250 free spins – https://mostbetpt.pro/ , Mostbet te espera com portas abertas e emoГ§Гµes sem fim .