ಬೆಂಗಳೂರು: ರಸ್ತೆಯಲ್ಲಿ ಸಂಚರಿಸುವಾಗ ನಿರಂತರವಾಗಿ ಹಾರ್ನ್ ಮಾಡಿ ಸಂದೇಶ ರವಾನಿಸಿದರೂ ಆಂಬ್ಯುಲೆನ್ಸ್ಗೆ ದಾರಿ ಬಿಡದೆ, ಮೊಂಡಾಟ ತೋರಿದ್ದ ಆರೋಪಿ ಆಟೋ ಚಾಲಕನನ್ನು ಬೆಳ್ಳಂದೂರು ಸಂಚಾರ ಪೊಲೀಸರು ಬಂಧಿಸಿ, ಠಾಣಾ ಜಾಮೀನಿನ ಮೇರೆಗೆ ಬಿಡುಗಡೆ ಮಾಡಿದ್ದಾರೆ.
ಕೂಡ್ಲು ವಾಸಿ ಪರಮೇಶ್ ಬಂಧಿತನಾಗಿದ್ದ ಆಟೋ ಚಾಲಕ. ಈತ ನೆರೆಮನೆಯ ವ್ಯಕ್ತಿಯೋರ್ವರಿಂದ ಆಟೋ ಪಡೆದು ಜ.21ರಂದು ಹರಳೂರು ಮಾರ್ಗವಾಗಿ ಚಲಾಯಿಸುತ್ತಿದ್ದ. ಈ ವೇಳೆ ಹಿಂಬದಿಯಿಂದ ಸೈರನ್ ಮೊಳಗಿಸಿ ಆಂಬ್ಯುಲೆನ್ಸ್ ಬಂದರೂ ಚಾಲಕ ದಾರಿ ಬಿಟ್ಟಿರಲಿಲ್ಲ. ತುರ್ತಾಗಿ ಆಸ್ಪತ್ರೆಗೆ ಹೋಗಬೇಕಾಗಿದ್ದರಿಂದ ದಾರಿ ಮಾಡಿಕೊಡುವಂತೆ ವಾಯ್ಸ್ ಸಂದೇಶ ಮೂಲಕ ತಿಳಿಸಿದರೂ ಕ್ಯಾರೆ ಅನ್ನದೆ ಆಟೊ ಚಾಲನೆ ಮುಂದುವರೆಸಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಅದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಗಮನಿಸಿದ ಬೆಳ್ಳಂದೂರು ಟ್ರಾಫಿಕ್ ಪೊಲೀಸರು ಆಟೋ ನೋಂದಣಿ ಸಂಖ್ಯೆ ಆಧರಿಸಿ ಚಾಲಕನನ್ನು ಬಂಧಿಸಿ ಠಾಣಾ ಜಾಮೀನಿನ ಮೇರೆಗೆ ಬಿಡುಗಡೆ ಮಾಡಿದ್ದಾರೆ. ಅಲ್ಲದೆ, ಲೈಸೆನ್ಸ್ ರದ್ದು ಕೋರಿ ಆರ್ಟಿಓಗೆ ಶಿಫಾರಸು ಮಾಡಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
49 ವರ್ಷದ ಆಟೋ ಚಾಲಕ ಪರಮೇಶ್, ನನಗೆ ಬಿಪಿ ಶುಗರ್ ಇದ್ದು, ಹಿಂಬದಿಯಿಂದ ಆ್ಯಂಬುಲೆನ್ಸ್ ಬರುತ್ತಿರುವುದು ಗೊತ್ತಾಗಿರಲಿಲ್ಲ ಎಂದು ಪೊಲೀಸರ ಮುಂದೆ ಸಮಜಾಯಿಷಿ ನೀಡಿದ್ದ ಎಂದು ತಿಳಿದುಬಂದಿದೆ.
Previous Articleಲಾಯರ್ ಜಗದೀಶ್ ಅರೆಸ್ಟ್.
Next Article ಸಿಸೇರಿಯನ್ ಗೆ ಮುಗಿ ಬೀಳುತ್ತಿರುವ ಗರ್ಭಿಣಿಯರು
6 ಪ್ರತಿಕ್ರಿಯೆಗಳು
clomid prices in south africa clomid order can i purchase cheap clomiphene online cost cheap clomiphene prices can i buy cheap clomid pill can you buy clomid without insurance clomiphene costo
The reconditeness in this tune is exceptional.
This is the tolerant of enter I find helpful.
amoxicillin cheap – buy ipratropium generic order ipratropium 100mcg without prescription
order azithromycin 500mg generic – buy bystolic 20mg for sale buy generic bystolic 5mg
oral augmentin – at bio info ampicillin cost