Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಎಸ್.ಎಂ.ಕೃಷ್ಣ ಎಂಬ ಅಜಾತಶತ್ರು.
    Trending

    ಎಸ್.ಎಂ.ಕೃಷ್ಣ ಎಂಬ ಅಜಾತಶತ್ರು.

    vartha chakraBy vartha chakraಡಿಸೆಂಬರ್ 10, 20244 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಡಿ.10-
    ನಾಡು ಕಂಡ ಶ್ರೇಷ್ಠ ಮುತ್ಸದ್ಧಿ,ಮಾಜಿ ಮುಖ್ಯಮಂತ್ರಿ, ಅಪರೂಪದ ನಾಯಕ, ಹಿರಿಯ ರಾಜಕಾರಣಿ ಎಸ್.ಎಂ‌.ಕೃಷ್ಣ ಇಹಲೋಕ ಯಾತ್ರೆ ಮುಗಿಸಿದ್ದಾರೆ.
    ಬೆಂಗಳೂರಿನ ಸದಾಶಿವನಗರದ ಸ್ವಗೃಹದಲ್ಲಿ ನಿಧನರಾದ ಅವರಿಗೆ 93 ವರ್ಷ ವಯಸ್ಸಾಗಿತ್ತು.
    ಅವರ ನಿಧನದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮೂರು ದಿನಗಳ ಶೋಕಾಚರಣೆಯನ್ನು ಘೋಷಿಸಿದೆ. ಮೃತರ ಗೌರವಾರ್ಥ ನಾಳೆ ಸರ್ಕಾರಿ ರಜೆ ಘೋಷಿಸಲಾಗಿದೆ.
    ಮೃತರ ಅಂತ್ಯಕ್ರಿಯೆಯನ್ನು ಬುಧವಾರ ಅವರ ಹುಟ್ಟುರಾದ ಮಂಡ್ಯ ಜಿಲ್ಲೆಯಲ್ಲಿ ಸಕಲ ಸರ್ಕಾರಿ ಗೌವರಗಳೊಂದಿಗೆ ನೆರವೇರಿಸಲಾಗುವುದು’ ಎಂದು ರಾಜ್ಯ ಸರ್ಕಾರದ ಪ್ರಕಟಣೆಯಲ್ಲಿ ತಿಳಿಸಿದೆ.
    1932 ಮೇ.1ರಂದು ಮಲ್ಲಯ್ಯ ಮತ್ತು ತಾಯಮ್ಮ ದಂಪತಿಯ ಮಗನಾಗಿ ಮದ್ದೂರು ತಾಲೂಕು ಸೋಮನಹಳ್ಳಿಯಲ್ಲಿ ಜನಿಸಿದ ಎಸ್.ಎಂ‌.ಕೃಷ್ಣ
    ಸೋಮನಹಳ್ಳಿ ಪ್ರಾಥಮಿಕ ಶಿಕ್ಷಣ, ಮೈಸೂರಿನ ರಾಮಕೃಷ್ಣ ಆಶ್ರಮದಲ್ಲಿ ಪ್ರೌಢಶಿಕ್ಷಣ, ಯುವರಾಜ ಕಾಲೇಜಿನಲ್ಲಿ ಪಿಯುಸಿ ಶಿಕ್ಷಣ ಹಾಗೂ ಮಹಾರಾಜ ಕಾಲೇಜಿನಲ್ಲಿ ಕಾನೂನು ಪದವಿ ಶಿಕ್ಷಣ, ಅಮೆರಿಕಾದ ಡಲ್ಲಾಸ್‌ನ ಸೌಥರ್ನ್ ಮೆತಡಿಸ್ಟ್ ಹಾಗೂ ಜಾರ್ಜ್ ವಾಷಿಂಗ್ಟನ್ ವಿವಿಯಲ್ಲಿ ಉನ್ನತ ವ್ಯಾಸಂಗ ಮಾಡಿದ್ದರು.
    1962ರಲ್ಲಿ ಮದ್ದೂರು ವಿಧಾನಸಭಾ ಕ್ಷೇತ್ರದಿಂದ ಪ್ರಜಾ ಸೋಷಿಯಲಿಸ್ಟ್ ಪಾರ್ಟಿಯಿಂದ ಚುನಾವಣಾ ರಾಜಕೀಯ ಆರಂಭ, ಮೊದಲ ಚುನಾವಣೆಯಲ್ಲಿ ಗೆಲುವು‌ ಕಂಡ ಎಸ್.ಎಂ‌.ಕೃಷ್ಣ, 1967 ರ ವಿಧಾನಸಭಾ ಚುನಾವಣೆಯಲ್ಲಿ ಸೋಲುತ್ತಾರೆ.
    1968ರ ಮಂಡ್ಯ ಲೋಕಸಭಾ ಉಪಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸುವ ಮೂಲಕ ರಾಷ್ಟ್ರ ರಾಜಕಾರಣದಲ್ಲಿ ತಮ್ಮ ಛಾಪು ಮೂಡಿಸಿದರು. 1971ರಲ್ಲಿ ಸಂಸದರಾಗಿ ಮರು ಆಯ್ಕೆಯಾದ ಇವರನ್ನು ಅಂದಿನ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರು ಸಂಸತ್ ಸದಸ್ಯತ್ವಕ್ಕೆ ರಾಜೀನಾಮೆ ಕೊಡಿಸಿ ರಾಜ್ಯದಲ್ಲಿ ಸಚಿವರನ್ನಾಗಿ ಮಾಡುತ್ತಾರೆ. ಇದರಿಂದಾಗಿ ಅವರು ವಿಧಾನ ಪರಿಷತ್ ಸದಸ್ಯರಾಗಿ ನೇಮಕಗೊಳ್ಳುತ್ತಾರೆ.
    ಮತ್ತೆ 1980ರಲ್ಲಿ ಲೋಕಸಭೆಗೆ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಆಯ್ಕೆಯಾಗುತ್ತಾರೆ. ಮೂರನೇ ಬಾರಿಗೆ ಎಂಪಿಯಾದ ಅವರಿಗೆ ಕೇಂದ್ರ ಹಣಕಾಸು ಸಚಿವರಾಗುವ ಅವಕಾಶ ಲಭಿಸಿತು.
    1984ರ ಲೋಕಸಭಾ ಚುನಾವಣೆಯಲ್ಲಿ ಪರಾಭವಗೊಂಡ ಇವರು 1989ರಲ್ಲಿ ಮದ್ದೂರು ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದು ಗೆದ್ದು ಉಪ ಮುಖ್ಯಮಂತ್ರಿ ಹಾಗೂ ಸ್ಪೀಕರ್ ಹುದ್ದೆ ಅಲಂಕರಿಸುತ್ತಾರೆ.
    1994ರ ವಿಧಾನಸಭೆ ಚುನಾವಣೆಯಲ್ಲಿ ಪರಾಜಯ ಹೊಂದಿದ ಎಸ್ ಎಂ ಕೃಷ್ಣ, 1996ರಲ್ಲಿ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾದರು ಬಳಿಕ ರಾಜ್ಯಸಭಾ ಸದಸ್ಯರಾಗಿ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕಗೊಳ್ಳುತ್ತಾರೆ.
    ಇವರ ನಾಯಕತ್ವದಲ್ಲಿ ಕಾಂಗ್ರೆಸ್ 1999ರಲ್ಲಿ ಗೆಲುವು ಸಾಧಿಸುತ್ತದೆ.ಬಳಿಕ ರಾಜ್ಯದ ಸಿಎಂ ಆಗಿ ಅಧಿಕಾರ ಸ್ವೀಕಾರ ಮಾಡುತ್ತಾರೆ. 2004ರ ವಿಧಾನಸಭೆ ಚುನಾವಣೆಯಲ್ಲಿ ಬೆಂಗಳೂರು ಚಾಮರಾಜಪೇಟೆಯಿಂದ ಸ್ಪರ್ಧಿಸಿ ಗೆಲುವು‌ ಸಾಧಿಸುತ್ತಾರೆ.
    ಪಕ್ಷಕ್ಕೆ ಇವರು ನೀಡಿದ ಕೊಡುಗೆ ಗಮನಿಸಿದ ಹೈಕಮಾಂಡ್ 2004 ರಿಂದ 2008ರವರೆಗೆ ಮಹಾರಾಷ್ಟ್ರದ ರಾಜ್ಯಪಾಲರಾಗಿ ಸೇವೆ ಸಲ್ಲಿಸುವ ಅವಕಾಶ ಕಲ್ಪಿಸುತ್ತದೆ.
    2010ರಲ್ಲಿ ಮತ್ತೆ ಸಕ್ರಿಯ ರಾಜಕಾರಣ ಪ್ರವೇಶಿಸುವ ಅವರಿಗೆ ಕಾಂಗ್ರೆಸ್ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಲು ಅವಕಾಶ ನೀಡುತ್ತದೆ. ಆನಂತರ ಡಾ.ಮನ್‌ಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರದಲ್ಲಿ ಕೇಂದ್ರ ವಿದೇಶಾಂಗ ಸಚಿವರಾಗಿ ಕಾರ್ಯ ನಿರ್ವಹಿಸುತ್ತಾರೆ.
    2017ರಲ್ಲಿ ಕಾಂಗ್ರೆಸ್ ತ್ಯಜಿಸಿ ಬಿಜೆಪಿ ಸೇರ್ಪಡೆ‌ಯಾಗುವ ಅವರು,ಕೆಲ ತಿಂಗಳಲ್ಲೇ ಸಕ್ರಿಯ ರಾಜಕಾರಣಕ್ಕೆ ನಿವೃತ್ತಿ ಘೋಷಣೆ ಮಾಡಿದರು.

    ಕಾಂಗ್ರೆಸ್ ಕಾನೂನು ಚುನಾವಣೆ ಬಿಜೆಪಿ ಬೆಂಗಳೂರು ಮೈ ರಾಜಕೀಯ ರಾಜ್ಯಪಾಲ ವಾಷಿಂಗ್ಟನ್ ಶಿಕ್ಷಣ ಸರ್ಕಾರ ಸಂಸತ್
    Share. Facebook Twitter Pinterest LinkedIn Tumblr Email WhatsApp
    Previous Articleಸಮಚಿತ್ತದ ಮಾರ್ಗದರ್ಶಿ ಕಳೆದುಕೊಂಡ ಶಿವಕುಮಾರ್.
    Next Article ಭ್ರಷ್ಟ ಅಧಿಕಾರಿಗಳ ಬೆವರು ಹರಿಸಿದ ಲೋಕಾಯುಕ್ತ.
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    4 ಪ್ರತಿಕ್ರಿಯೆಗಳು

    1. afap4 on ಜೂನ್ 5, 2025 3:53 ಅಪರಾಹ್ನ

      can i buy cheap clomiphene price clomid rx order generic clomiphene without a prescription buying clomiphene tablets where buy generic clomiphene without prescription clomid generic brand where buy clomid no prescription

      Reply
    2. metronidazole tablet on ಜೂನ್ 11, 2025 6:29 ಫೂರ್ವಾಹ್ನ

      This website absolutely has all of the information and facts I needed adjacent to this thesis and didn’t know who to ask.

      Reply
    3. sx6p2 on ಜೂನ್ 21, 2025 12:49 ಅಪರಾಹ್ನ

      amoxicillin tablet – order amoxicillin pill order combivent 100 mcg online

      Reply
    4. 105up on ಜೂನ್ 23, 2025 3:49 ಅಪರಾಹ್ನ

      order azithromycin sale – azithromycin canada buy generic bystolic 20mg

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • WilliamRip ರಲ್ಲಿ ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.
    • klining_moskva_mqmi ರಲ್ಲಿ ಅಧಿಕಾರ ಹಂಚಿಕೆ ಸೂತ್ರ ಬಹಿರಂಗಪಡಿಸಿದ ತನ್ವೀರ್ ಸೇಠ್.
    • klining_moskva_ztmi ರಲ್ಲಿ ಭ್ರೂಣ ಹತ್ಯೆ ಮಾಡುತ್ತಿದ್ದ ವೈದ್ಯ ಬಂಧನ | Feoticide
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe