ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಒಂದೂವರೆ ಸಾವಿರ ಕೋಟಿ ಮೌಲ್ಯದ ಅರಣ್ಯ ಒತ್ತುವರಿ ತೆರವು.
    ಕಾನೂನು

    ಒಂದೂವರೆ ಸಾವಿರ ಕೋಟಿ ಮೌಲ್ಯದ ಅರಣ್ಯ ಒತ್ತುವರಿ ತೆರವು.

    vartha chakraBy vartha chakraಮೇ 28, 20242 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮೇ 28:
    ಕರ್ನಾಟಕ ಅರಣ್ಯ ಇಲಾಖೆ ತನಗೆ ನೀಡಲಾದ ವಾರ್ಷಿಕ ಅನುದಾನವನ್ನು ಸಮರ್ಥವಾಗಿ ಬಳಸಿಕೊಂಡಿರುವುದೇ ಅಲ್ಲದೆ, ರಾಜ್ಯದ ಅರಣ್ಯ ವಲಯ ವ್ಯಾಪ್ತಿಯ ಜೊತೆಗೆ ತನ್ನ ಆದಾಯವನ್ನೂ ಹೆಚ್ಚಿಸಿಕೊಂಡಿದೆ ಎಂದು ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2019-20ರ ಸಾಲಿನಲ್ಲಿದ್ದ ಅರಣ್ಯ ಇಲಾಖೆಯ ರಾಜಸ್ವ ಸಂಗ್ರಹಣೆ 263.41 ಕೋಟಿಯಿಂದ 2023-24ರ ಸಾಲಿನಲ್ಲಿ 417.84 ಕೋಟಿ ರೂ.ಗೆ ಹೆಚ್ಚಳವಾಗಿದೆ.
    2023-24ನೇ ಸಾಲಿನಲ್ಲಿ ಅಧಿಸೂಚಿತ ಕಾಯ್ದಿಟ್ಟ ಅರಣ್ಯ (ಸೆಕ್ಷನ್ 17) ವ್ಯಾಪ್ತಿ 3395.73 ಹೆಕ್ಟೇರ್ ಅಂದರೆ ಸುಮಾರು 8300 ಎಕರೆಯಷ್ಟು ಹೆಚ್ಚಳವಾಗಿದ್ದರೆ, ರಕ್ಷಿತ ಅರಣ್ಯ ಪ್ರದೇಶ (ಸೆಕ್ಷನ್ 33) 184.52 ಹೆಕ್ಟೇರ್ ಅಂದರೆ 456 ಎಕರೆ ಹೆಚ್ಚಳವಾಗಿದೆ ಎಂದರು.
    ರಾಜ್ಯದಲ್ಲಿ ಸುಮಾರು 2 ಲಕ್ಷ ಎಕರೆ ಅರಣ್ಯ ಭೂಮಿ ಒತ್ತುವರಿಯಾಗಿದ್ದು, 3 ಎಕರೆಗಿಂತಲೂ ಕಡಿಮೆ ಭೂಮಿ ಮಾತ್ರ ಇರುವ ಬಡ ರೈತರಿಗೆ ತೊಂದರೆ ಆಗದ ರೀತಿಯಲ್ಲಿ ಹಾಗೂ 3 ಎಕರೆಗಿಂತಲೂ ಹೆಚ್ಚು ಅರಣ್ಯ ಒತ್ತುವರಿ ಮಾಡಿರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗಿದೆ.
    ಕಳೆದ ಒಂದು ವರ್ಷದ ಅವಧಿಯಲ್ಲಿ ರಾಜ್ಯದಲ್ಲಿ 371 ಪ್ರಕರಣಗಳಲ್ಲಿ ಸುಮಾರು 2602.30 ಎಕರೆ ಒತ್ತುವರಿ ತೆರವುಗೊಳಿಸಲಾಗಿದೆ. ತೆರವು ಮಾಡಲಾದ ಅರಣ್ಯ ಭೂಮಿಯ ಮಾರುಕಟ್ಟೆ ಮೌಲ್ಯ ಸುಮಾರು 1500 ಕೋಟಿ ರೂ. ಆಗುತ್ತದೆ ಎಂದರು.
    ಕೋಲಾರದಲ್ಲಿ ಅತಿ ಹೆಚ್ಚು 1392.41ಎಕರೆ ಒತ್ತುವರಿ ತೆರವು ಮಾಡಲಾಗಿದೆ. ಮಡಿಕೇರಿಯಲ್ಲಿ 5ಎಕರೆ 50ಗುಂಟೆ, ಬೆಂಗಳೂರಿನ ಕೊತ್ತನೂರಿನಲ್ಲಿ 17 ಎಕರೆ ಅರಣ್ಯ ಭೂಮಿ ಒತ್ತುವರಿ ತೆರವು ಮಾಡಿಸಲಾಗಿದ್ದು, ಇದರ ಮಾರುಕಟ್ಟೆ ಮೌಲ್ಯ ಸುಮಾರು 500 ಕೋಟಿ ರೂ.ಗೂ ಅಧಿಕ ಎಂದು ತಿಳಿಸಿದರು.
    5 ಕೋಟಿ ಸಸಿ:
    ಕಳೆದ ವರ್ಷ ವಿಶ್ವ ಪರಿಸರ ದಿನದಂದು ಘೋಷಿಸಿದಂತೆ 5ಕೋಟಿ 40ಲಕ್ಷ ಸಸಿಗಳನ್ನು ರಾಜ್ಯದಾದ್ಯಂತ ನೆಡಲಾಗಿದ್ದು, ಇವುಗಳ ಪೈಕಿ ಎಷ್ಟು ಬದುಕುಳಿದಿವೆ ಎಂದು ತಿಳಿಯಲು ಆಡಿಟ್ ಮಾಡಿ 3 ತಿಂಗಳೊಳಗೆ ವರದಿ ನೀಡುವಂತೆ ಸೂಚಿಸಲಾಗಿದೆ. ಈ ಸಾಲಿನಲ್ಲಿ ಸಸಿ ನೆಡುವ ಕಾರ್ಯಕ್ರಮಕ್ಕಾಗಿ ಹೆಚ್ಚುವರಿಯಾಗಿ 100 ಕೋಟಿ ರೂ. ಅನುದಾನ ನೀಡಲಾಗುತ್ತಿದೆ ಎಂದರು.
    ಖಾಲಿ ಹುದ್ದೆಗಳ ಭರ್ತಿ:
    ಅರಣ್ಯಇಲಾಖೆಯಲ್ಲಿ ಸುಮಾರು 6 ಸಾವಿರ ಹುದ್ದೆಗಳು ಖಾಲಿ ಇದ್ದು, ಇವುಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ. ಈಗಾಗಲೇ ಅರಣ್ಯ ವೀಕ್ಷಕರ 310 ಹುದ್ದೆಗಳ ನೇಮಕಾತಿಗೆ ಆಯ್ಕೆ ಪ್ರಕ್ರಿಯೆ ಪಾರದರ್ಶಕವಾಗಿ ಪೂರ್ಣವಾಗಿದ್ದು, ನೀತಿ ಸಂಹಿತೆ ತೆರವಾದ ಬಳಿಕ ನೇಮಕಾತಿ ಪತ್ರಗಳನ್ನು ವಿತರಿಸಲಾಗುವುದು ಎಂದು ಈಶ್ವರ ಖಂಡ್ರೆ ತಿಳಿಸಿದರು.
    ಇದರ ಜೊತೆಗೆ 540 ಅರಣ್ಯ ರಕ್ಷಕರ ಹುದ್ದೆಗಳಿಗೆ ನೇರ ನೇಮಕಾತಿ ಪ್ರಕ್ರಿಯೆ ಪ್ರಗತಿಯಲ್ಲಿದೆ. ಜೊತೆಗೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಹಣಕಾಸು ಇಲಾಖೆಯ ಪೂರ್ವಾನುಮತಿಯ ಅವಶ್ಯಕತೆ ಇಲ. ಹೀಗಾಗಿ ಈ ಭಾಗದಲ್ಲಿ ಖಾಲಿ ಇರುವ 10 ವಲಯ ಅರಣ್ಯಅಧಿಕಾರಿ ಹುದ್ದೆಗಳ ನೇರ ನೇಮಕಾತಿಗೆ ಶೀಘ್ರ ಲಿಖಿತ ಪರೀಕ್ಷೆ ನಡೆಸಲು ಸೂಚಿಸಲಾಗಿದೆ ಎಂದರು.
    ಉಪ ವಲಯ ಅರಣ್ಯಾಧಿಕಾರಿ ಕಂ ಮೋಜಿಣಿದಾರರ 143 ಹುದ್ದೆ, 45 ದ್ವಿತೀಯ ದರ್ಜೆ ಹಾಯಕರು ಮತ್ತು 18 ಪ್ರಥಮ ದರ್ಜೆ ಸಹಾಯಕರು ಸೇರಿದಂತೆ ವಿವಿಧ ವೃಂದದ ಖಾಲಿ ಹುದ್ದೆಗಳ ನೇಮಕಾತಿಗೂ ಕರಡು ಪ್ರಸ್ತಾವನೆ ಸಿದ್ಧಗೊಂಡಿದೆ ಎಂದು ಅರಣ್ಯ ಸಚಿವರು ವಿವರಿಸಿದರು.
    ಗುತ್ತಿಗೆ ಭೂಮಿ ವಶಕ್ಕೆ ಕ್ರಮ:
    ಕೊಡಗು, ಚಾಮರಾಜನಗರ, ಮೈಸೂರು ಭಾಗದಲ್ಲಿ ಸುಮಾರು 7500 ಎಕರೆ ಅರಣ್ಯ ಭೂಮಿಯನ್ನು ವಿವಿಧ ಕಂಪನಿಗಳಿಗೆ ಬ್ರಿಟಿಷರ ಕಾಲದಲ್ಲಿ ಗುತ್ತಿಗೆ ನೀಡಲಾಗಿದ್ದು, ಈ ಕಂಪನಿಗಳಿಂದ ಸುಮಾರು 2 ಸಾವಿರ ಕೋಟಿ ರೂ. ಬಾಕಿ ಬರಬೇಕಿದೆ. ಈ ಹಿನ್ನೆಲೆಯಲ್ಲಿ ಅವಧಿ ಮುಗಿದ ಭೂಮಿ ಮರು ಪಡೆಯಲು ಕ್ರಮ ವಹಿಸಲಾಗಿದೆ ಎಂದು ಅರಣ್ಯ ಸಚಿವರು ತಿಳಿಸಿದರು.

    Verbattle
    Verbattle
    Verbattle
    Government Karnataka ಕಾನೂನು ನ್ಯಾಯ ಮೈಸೂರು
    Share. Facebook Twitter Pinterest LinkedIn Tumblr Email WhatsApp
    Previous Articleಕೊಪ್ಪಳವನ್ನು ಬೆಚ್ಚಿ ಬೀಳಿಸಿದ ಸಾವು.
    Next Article ಕಾಂಗ್ರೆಸ್ ಪಕ್ಷದವರು ಭ್ರಷ್ಟಾಚಾರದ ಪಿತಾಮಹರೆಂದು ರುಜುವಾತು- ಬಿ.ವೈ.ವಿಜಯೇಂದ್ರ
    vartha chakra
    • Website

    Related Posts

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MostBet_rh8 ರಲ್ಲಿ ಇಡಿ ತನಿಖೆಗಳ ಅಸಲಿಯತ್ತು ಬಯಲು: 193 ಪ್ರಕರಣಗಳಲ್ಲಿ ಶಿಕ್ಷೆಯಾಗಿದ್ದು ಕೇವಲ ಇಬ್ಬರಿಗೆ!
    • Aradabet_ly7 ರಲ್ಲಿ ಇಡಿ ತನಿಖೆಗಳ ಅಸಲಿಯತ್ತು ಬಯಲು: 193 ಪ್ರಕರಣಗಳಲ್ಲಿ ಶಿಕ್ಷೆಯಾಗಿದ್ದು ಕೇವಲ ಇಬ್ಬರಿಗೆ!
    • Michaelbom ರಲ್ಲಿ BJP ವಿರುದ್ಧ ಪ್ರತಿಪಕ್ಷಗಳ ಶಕ್ತಿ ಪ್ರದರ್ಶನಕ್ಕೆ ವೇದಿಕೆ
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.