Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಮೀಷನರ್ ನೈಟ್ ರೌಂಡ್ಸ್
    Viral

    ಕಮೀಷನರ್ ನೈಟ್ ರೌಂಡ್ಸ್

    vartha chakraBy vartha chakraಜನವರಿ 20, 2025ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜ.19-
    ಬೀದರ್‌ನಲ್ಲಿ ಎಟಿಎಂ ಲೂಟಿ ಹಾಗೂ ಮಂಗಳೂರಿನ ಬ್ಯಾಂಕ್ ದರೋಡೆ  ಬೆನ್ನಲ್ಲೇ ಬೆಚ್ಚಿ ಬಿದ್ದಿರುವ ನಗರದ ಜನತೆಯ ಭಯ ಹೋಗಲಾಡಿಸಿ ಸುರಕ್ಷತೆ ಸಂದೇಶ ಸಾರಲು ಪೊಲೀಸ್ ಆಯುಕ್ತರು ಸೇರಿದಂತೆ ಬೆಂಗಳೂರು ನಗರದ ಎಲ್ಲ ಹಿರಿಯ ಅಧಿಕಾರಿಗಳು ಶನಿವಾರ ರಾತ್ರಿ ವಿಶೇಷ ಗಸ್ತು ನಡೆಸಿದ್ದಾರೆ.
    ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ್ ನೇತೃತ್ವದಲ್ಲಿ ಮಧ್ಯರಾತ್ರಿ 1 ಗಂಟೆಯಿಂದ ನಸುಕಿನ 4 ಗಂಟೆವರೆಗೆ ಗಸ್ತು ನಡೆಸಿದ್ದಾರೆ.
    ಹೆಚ್ಚುವರಿ ಆಯುಕ್ತರಾದ ವಿಕಾಸ್‌ ಕುಮಾರ್‌ ವಿಕಾಸ್, ಚಂದ್ರಗುಪ್ತ, ಜಂಟಿ ಆಯುಕ್ತರಾದ ಬಿ.ರಮೇಶ್, ಎಂ.ಎನ್.ಅನುಚೇತ್ ಸೇರಿ ಎಲ್ಲ ಡಿಸಿಪಿಗಳು ಗಸ್ತು ವಿನಲ್ಲಿ ಭಾಗಿಯಾದ್ದರು.
    ಪ್ರತಿ ಅಧಿಕಾರಿಗಳು ಪ್ರತ್ಯೇಕವಾಗಿ ಒಂದೊಂದು ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ಪಹರೆ ನಡೆಸಿದರು.
    ಸದಾಶಿವನಗರ ಠಾಣಾ ವ್ಯಾಪ್ತಿಯಲ್ಲಿ ಕಮೀಷನರ್‌ ದಯಾನಂದ್, ಕೆಂಗೇರಿ ಠಾಣೆ ವ್ಯಾಪ್ತಿಯಲ್ಲಿ ಹೆಚ್ಚುವರಿ ಆಯುಕ್ತ ಡಾ. ಚಂದ್ರಗುಪ್ತ, ಅಶೋಕ ನಗರ ಠಾಣಾ ಸರಹದ್ದಿನಲ್ಲಿ ಹೆಚ್ಚುವರಿ ಆಯುಕ್ತ ವಿಕಾಸ್ ಕುಮಾರ್‌ವಿಕಾಸ್, ಹೆಬ್ಬಾಳ ಠಾಣೆ ವ್ಯಾಪ್ತಿಯಲ್ಲಿ ಜಂಟಿ ಆಯುಕ್ತ ಅನುಚೇತ್, ಅಮೃತಹಳ್ಳಿಯಲ್ಲಿ ರಮೇಶ್, ಬಾಣಸವಾಡಿಯಲ್ಲಿ ಪೂರ್ವ ವಿಭಾಗದ ಡಿಸಿಪಿ ಡಿ.ದೇವರಾಜ್, ಹಲಸೂರು ಗೇಟ್‌ನಲ್ಲಿ ಕೇಂದ್ರ ವಿಭಾಗದ ಡಿಸಿಪಿ ಎಚ್.ಟಿ.ಶೇಖರ್, ಬಸವೇಶ್ವರ ನಗರ ಠಾಣೆ ವ್ಯಾಪ್ತಿಯಲ್ಲಿ ಪಶ್ಚಿಮ ವಿಭಾಗದ ಡಿಸಿಪಿ ಎಸ್.ಗಿರೀಶ್, ಪೀಣ್ಯ ಠಾಣೆ ಸರಹದ್ದಿನಲ್ಲಿ ಉತ್ತರ ವಿಭಾಗದ ಡಿಸಿಪಿ ಸೈದುಲ ಅಡಾವತ್, ಹುಳಿಮಾವು ಠಾಣೆ ಭಾಗದಲ್ಲಿ ಆಗೇಯ ವಿಭಾಗದ ಡಿಸಿಪಿ ಸಾರಾ ಫಾತಿಮಾ ಹಾಗೂ ಯಲಹಂಕ ಠಾಣಾ ವ್ಯಾಪ್ತಿಯಲ್ಲಿ ಉತ್ತರ ವಿಭಾಗದ(ಸಂಚಾರ) ಡಿಸಿಪಿ ಸಿರಿಗೌರಿ ಅವರು ರಾತ್ರಿ 1 ಗಂಟೆಯಿಂದ ಗಸ್ತು ನಡೆಸಿದ್ದಾರೆ.
    ಇತ್ತೀಚೆಗೆ ರಾಜ್ಯದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಹಿನ್ನೆಲೆಯಲ್ಲಿ ಬಿ.ದಯಾನಂದ್ ಅವರು ವಿಶೇಷ ಗಸ್ತು ನಡೆಸಿ ಜನರಲ್ಲಿನ ಆತಂಕ ನಿವಾರಿಸಿ ಪೊಲೀಸರಲ್ಲಿಯೂ ದಕ್ಷತೆ ಹೆಚ್ಚಿಸಿದ್ದಾರೆ .
    ಗಣ್ಯರ ಏರಿಯಾದಲ್ಲಿ ಸುತ್ತಾಟ:
    ಡಿಸಿಎಂ ಡಿ.ಕೆ.ಶಿವಕುಮಾರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಗೃಹ ಸಚಿವ ಜಿ.ಪರಮೇಶ್ವರ, ಸಚಿವರಾದ ಸತೀಶ್ ಜಾರಕಿಹೊಳಿ, ಎಂ.ಬಿ.ಪಾಟೀಲ್, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸೇರಿ ಅತೀ ಹೆಚ್ಚು ಗಣ್ಯರು ಇರುವ ಸದಾಶಿವನಗರ, ಡಾಲರ್ಸ್ ಕಾಲೋನಿಗಳಲ್ಲಿ ನಗರ ಪೊಲೀಸರು ರಾತ್ರಿ ಗಸ್ತು ನಡೆಸಿದರು.
    ಈ ವೇಳೆ ರಸ್ತೆಯಲ್ಲಿ ಭೇಟಿಯಾದ ಜನರ ಜತೆಗೆ ಮಾತುಕತೆ ನಡೆಸಿದ ಪೊಲೀಸರು ಭದ್ರತೆ ಕುರಿತು ಚರ್ಚಿಸಿದರು. ಅಲ್ಲದೇ, ಸಮಸ್ಯೆಗಳನ್ನು ಆಲಿಸಿ ಸ್ಪಂದಿಸಿದರು. ನಗರ ಪೊಲೀಸ್‌ ಆಯುಕ್ತ ದಯಾನಂದ್ ಅವರು ತಾವೇ ವಾಹನ ಚಾಲನೆ ಮಾಡಿದ್ದು ವಿಶೇಷವಾಗಿತ್ತು.

    ಬೆಂಗಳೂರು ಯಡಿಯೂರಪ್ಪ
    Share. Facebook Twitter Pinterest LinkedIn Tumblr Email WhatsApp
    Previous Articleಅಪರೂಪದ ತೋಳದ ಮರಿಗಳು
    Next Article ಹೀಗೂ ನಡೆಯಲಿದೆ ವಂಚನೆ
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 1win suretli qeydiyyat ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • narkologiyakrasnodarvucky ರಲ್ಲಿ ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    • Richardspimi ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ ಹೊಸ ಮನೆಗೂ ಸಿಕ್ಕಿಲ್ಲ ವಿದ್ಯುತ್ ಸಂಪರ್ಕ #varthachakra #cmhouse #siddaramaiah #mysore #electricity
    Subscribe