Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾಂಗ್ರೆಸ್- ಬಿಜೆಪಿ 50:50ಸಮಾವೇಶ..!
    Trending

    ಕಾಂಗ್ರೆಸ್- ಬಿಜೆಪಿ 50:50ಸಮಾವೇಶ..!

    vartha chakraBy vartha chakraಆಗಷ್ಟ್ 8, 202435 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಮೈಸೂರು,ಆ.8:
    ರಾಜ್ಯದ ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ನಡೆಯುತ್ತಿರುವ ಎರಡು ರಾಜಕೀಯ ವಿದ್ಯಮಾನಗಳು ದೇಶದ ಗಮನ ಸೆಳೆಯುತ್ತಿವೆ
    ನಿವೇಶನ ಹಂಚಿಕೆ ಅಕ್ರಮ ಆರೋಪದಲ್ಲಿ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಮತ್ತು ಜೆಡಿಎಸ್ ಬೆಂಗಳೂರಿನಿಂದ ಮೈಸೂರಿನವರೆಗೆ ಪಾದಯಾತ್ರೆ ನಡೆಸುತ್ತಿದ್ದು ಶನಿವಾರ ಮೈಸೂರಿನಲ್ಲಿ ಬೃಹತ್ ಸಮಾವೇಶದ ಮೂಲಕ ಪಾದಯಾತ್ರೆ ಅಂತ್ಯಗೊಳಿಸುತ್ತಿದ್ದಾರೆ
    ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ಜನಾಂದೋಲನ ಯಾತ್ರೆ ಡೀತಿದ್ದು ನಡೆಸುತ್ತಿದ್ದು ನಾಳೆ ಮೈಸೂರಿನಲ್ಲಿ ಬೃಹತ್ ಸಮಾವೇಶ ಕನ್ನಡತಿ ಕೇಂದ್ರ ಸರಕಾರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ಮತ್ತು ಹಿಂದಿನ ಬಿಜೆಪಿ ಸರ್ಕಾರದ ಅಕ್ರಮಗಳ ಬಗ್ಗೆ ಜನರಿಗೆ ತಿಳಿಸುತ್ತಿದ್ದಾರೆ.
    ಎರಡು ದಿನದ ಅಂತರದಲ್ಲಿ ಎರಡು ಸಮಾವೇಶಗಳು ನಡೆಯುತ್ತಿರುವುದು ಕುತೂಹಲ ಮೂಡಿಸಿದೆ ಎರಡು ಸಮಾವೇಶಗಳು ಮೈಸೂರಿನ
    ಮಹಾರಾಜ ಕಾಲೇಜು ಮೈದಾನದ ಒಂದೇ ವೇದಿಕೆಯಲ್ಲಿ ನಡೆಯುತ್ತಿರುವುದು ಗಮನಾರ್ಹ.
    ಆಗಸ್ಟ್ 9ರಂದು ಕಾಂಗ್ರೆಸ್ ಜನಾಂದೋಲನ ಮತ್ತು ಆಗಸ್ಟ್ 10ರಂದು ‘ಮೈಸೂರು ಚಲೋ’ ಪಾದಯಾತ್ರೆಯ ಸಮಾರೋಪ ಸಮಾವೇಶ ನಡೆಯುತ್ತಿರುವುದು, ಪೆಂಡಾಲ್‌ ಗುತ್ತಿಗೆ ಪಡೆದಿರುವವರ ಪೀಕಲಾಟಕ್ಕೆ ಕಾರಣವಾಗಿದೆ.
    ಈ ಮೈದಾನದಲ್ಲಿ ವೇದಿಕೆ ಸಿದ್ಧಪಡಿಸಿ ಪೆಂಡಾಲ್‌ ಹಾಕಿಕೊಡುವಂತೆ ಕಾಂಗ್ರೆಸ್‌ನವರು ಶರೀಫ್ ಎಂಬ ಗುತ್ತಿಗೆದಾರರಿಗೆ ತಿಳಿಸಿದ್ದರು.
    ಇದಾದ ಬಳಿಕ ಬಿಜೆಪಿಯವರು ಅವರನ್ನು ಸಂಪರ್ಕಿಸಿ, ನಾವೂ ಮರುದಿನ ಅಲ್ಲೇ ಸಮಾವೇಶ ನಡೆಸುತ್ತೇವೆ; ಅದೇ ಪೆಂಡಾಲ್‌ ಹಾಗೂ ವೇದಿಕೆ ಬಿಟ್ಟುಕೊಡಿ’ ಎಂದು ಕೇಳಿಕೊಂಡಿದ್ದರು. ಇದರಿಂದ ಪೆಂಡಾಲ್ ಗುತ್ತಿಗೆದಾರ ಅತ್ಯಂತ ಸಂತೋಷಪಟ್ಟಿದ್ದರು ಕಾರಣ ಒಂದು ಬಾರಿ ಹಾಕಿದ ಪೆಂಡಾಲ್ ನಲ್ಲಿ ಎರಡು ಕಾರ್ಯಕ್ರಮ ನಡೆಯುತ್ತಿದ್ದು ಇಬ್ಬರೂ ಕೂಡ ಹಣ ನೀಡಲಿದ್ದಾರೆ ಹೀಗಾಗಿ ಇದರಿಂದ ತಮಗೆ ಕೊಂಚ ಹೆಚ್ಚಿನ ಪ್ರಮಾಣದ ಲಾಭ ಬರಲಿದೆ ಎಂದು ನಿರೀಕ್ಷಿಸಿದ್ದರು
    ಆದರೆ, ಈಗ ಎರಡೂ ಪಕ್ಷದವರು ಸಂಪೂರ್ಣ ವೆಚ್ಚ ಕೊಡಲು ನಿರಾಕರಿಸುತ್ತಿದ್ದಾರೆ. ಅವರ ಬಳಿಯೂ ಹಣ ಪಡೆದುಕೊಳ್ಳುತ್ತೀರಲ್ಲಾ, ನಾವೇಕೆ ಸಂಪೂರ್ಣ ವೆಚ್ಚ ಕೊಡಬೇಕು ಎಂದು ಎರಡು ಪಕ್ಷದವರೂ ಗುತ್ತಿಗೆದಾರರನ್ನು ಕೇಳುತ್ತಿದ್ದಾರೆ.
    ಒಟ್ಟಾರೆ ಪೆಂಡಾಲ್ ನಿರ್ಮಾಣಕ್ಕೆ ತಗುಲುವ ವೆಚ್ಚ, ಕುರ್ಚಿ ಧ್ವನಿ ಬರಬೇಕಾ ಎಲ್ಇಡಿ ಪರದೆ ಎಲ್ಲದಕ್ಕೂ ಒಟ್ಟಾರೆ ಮೊತ್ತ ನಿಗದಿಪಡಿಸಿ ಶೇಕಡ 50ರಷ್ಟು ನಮ್ಮಿಂದ ಪಡೆಯಿರಿ ಉಳಿದ ಐವತ್ತರಷ್ಟು ಅವರಿಂದ ಪಡೆಯಿರಿ ಎಂದು ಎರಡು ಪಕ್ಷಗಳ ಸಂಘಟಕರು ಹೇಳುತ್ತಿರುವುದರಿಂದ ಗುತ್ತಿಗೆದಾರ ಸಂಕಷ್ಟಕ್ಕೆ ಸಿಲುಕಿದ್ದಾರೆ.
    ಪೆಂಡಾಲ್‌ ಮಾತ್ರವೇ ಆಗಿದ್ದರೆ ಹೊಂದಾಣಿಕೆ ಮಾಡಿಕೊಳ್ಳಬಹುದಿತ್ತು. ಆದರೆ, ಧ್ವನಿವರ್ಧಕಗಳು, ವಿದ್ಯುತ್‌ ದೀಪಗಳ ವ್ಯವಸ್ಥೆ, ಫ್ಯಾನ್‌ಗಳು, ಜನರೇಟರ್‌, ಎಲ್‌ಇಡಿ ಪರದೆಗಳು, ಎಲ್‌ಇಡಿ ಟಿವಿಗಳು ಮೊದಲಾದವುಗಳನ್ನು ನಾನು ಬೇರೆಯವರಿಂದ ಬಾಡಿಗೆಗೆ ಪಡೆದುಕೊಂಡಿದ್ದೇನೆ. ಅರ್ಧ ಬಾಡಿಗೆಗೆ ಅವರು ಒಪ್ಪುವುದಿಲ್ಲ. ಆದ್ದರಿಂದ ಗರಿಷ್ಠ ವೆಚ್ಚ ಭರಿಸುವಂತೆ ಎರಡೂ ಪಕ್ಷದವರಿಗೆ ಕೋರಿಕೊಂಡಿದ್ದೇನೆ, ಏನು ಮಾಡುತ್ತಾರೋ ನೋಡಬೇಕು ಎನ್ನುತ್ತಾರೆ ಗುತ್ತಿಗೆದಾರ

    Bangalore BJP Congress Government Karnataka News Politics Trending Varthachakra ಇಡಿ ಕನ್ನಡತಿ ಕಾಂಗ್ರೆಸ್ ಕಾನೂನು ಕಾಲೇಜು ಜೆಡಿಎಸ್ ನ್ಯಾಯ ಮೈಸೂರು ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಮತ್ತೊಂದು ಪಾದಯಾತ್ರೆಗೆ ಸಜ್ಜಾಗುತ್ತಿರುವ ಬಿಜೆಪಿ.
    Next Article ವಾಹನಗಳ ಮೇಲೆ ಲೇಸರ್ ಗನ್ ಕಣ್ಣು..
    vartha chakra
    • Website

    Related Posts

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಡಿಸೆಂಬರ್ 22, 2025

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    ಡಿಸೆಂಬರ್ 22, 2025

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ಡಿಸೆಂಬರ್ 22, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • rylonnie shtori na plastikovie okna s elektroprivodom_jzSn ರಲ್ಲಿ ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    • 1win_gvma ರಲ್ಲಿ ಮಹಾರಾಷ್ಟ್ರ ಸರ್ಕಾರ ಪತನ ಹೊಂದುವುದು ನಿಶ್ಚಿತ.
    • DonaldUlcer ರಲ್ಲಿ ಬುಡುಬುಡಿಕೆ ಆಡಿಸುತ್ತಾ ಹಣ, ಒಡವೆ ದೋಚಿದ | Budbudike
    Latest Kannada News

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಡಿಸೆಂಬರ್ 22, 2025

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    ಡಿಸೆಂಬರ್ 22, 2025

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ಡಿಸೆಂಬರ್ 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್.#varthachakra #mallikarjunkharge #siddaramaiah #dkshivakumar
    Subscribe