ಕಾಂಗ್ರೆಸ್ ಸತ್ಯಶೋಧನಾ ಸಮಿತಿ.
ಬೆಂಗಳೂರು,ಆ.14:
ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಗೆ ರಾಜ್ಯದಲ್ಲಿ ಹಿನ್ನಡೆಗೆ ಕಾರಣವಾದ ಅಂಶಗಳನ್ನು ಪತ್ತೆ ಹಚ್ಚಲು ಮುಂದಾಗಿರುವ ಹೈಕಮಾಂಡ್ ಇದೀಗ ಇದಕ್ಕೆ ಕಾರಣರಾದವರ ವಿರುದ್ಧ ಕ್ರಮಕ್ಕೆ ಮುಂದಾಗಿದೆ.
ಲೋಕಸಭೆ ಚುನಾವಣೆಗೂ ಮೊದಲು ಕನಿಷ್ಠ 19 ಕ್ಷೇತ್ರದಲ್ಲಿ ಗೆಲುವು ಸಾಧಿಸಲೇಬೇಕು ಎಂದು ಪಣತೊಟ್ಟಿದ್ದ ಹೈಕಮಾಂಡ್ ಇದಕ್ಕಾಗಿ ರಾಜ್ಯದ ಹಲವು ಸಚಿವರಿಗೆ ಗುರಿ ನೀಡಿತ್ತು. ಅಷ್ಟೇ ಅಲ್ಲದೆ ಇದನ್ನು ಸಾಧಿಸಲು ವಿಫಲವಾಗುವವರ ವಿರುದ್ಧ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ನೀಡಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಅಂತಹ ಸಚಿವರ ತೆರೆದಂಡಕ್ಕೆ ಮುಂದಾಗಿದೆ.
ಪಕ್ಷ ಸಂಘಟನೆ ಮತ್ತು ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಪಕ್ಷದ ತಯಾರಿ ಕುರಿತಂತೆ ದೆಹಲಿಯಲ್ಲಿ ನಡೆದ ಹೈಕಮಾಂಡ್ ಸಭೆಯಲ್ಲಿ ಪಾಲ್ಗೊಂಡ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ವರಿಷ್ಠರು ಈ ಬಗ್ಗೆ ಸ್ಪಷ್ಟ ಸೂಚನೆ ರವಾನಿಸಿದ್ದಾರೆ ಈ ಹಿನ್ನೆಲೆಯಲ್ಲಿ ಶಿವಕುಮಾರ್ ಸತ್ಯಶೋಧನಾ ಸಮಿತಿ ರಚಿಸಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಹಿನ್ನಡೆಗೆ ಕಾರಣವಾದ ಅಂಶಗಳನ್ನು ಪತ್ತೆಹಚ್ಚಲು ವಿಭಾಗವಾರು 5 ಸತ್ಯಶೋಧನಾ ಸಮಿತಿಗಳನ್ನು ರಚನೆ ಮಾಡಲಾಗಿದೆ. ಈ ಸಮಿತಿ ಎಲ್ಲಾ ಆಯಾಮಗಳಲ್ಲೂ ಅಧ್ಯಯನ ನಡೆಸಿ ತನ್ನ ವಿಸ್ತೃತ ವರದಿಯನ್ನು ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಸೂಚನೆ ನೀಡಿದ್ದಾರೆ.
5 ಪ್ರತಿಕ್ರಿಯೆಗಳು
where can i buy cheap clomid without dr prescription cost of generic clomiphene prices can i get generic clomiphene without a prescription where can i buy clomid tablets can i get cheap clomiphene tablets how to buy generic clomiphene no prescription where can i get generic clomiphene without prescription
I’ll certainly return to read more.
This website positively has all of the low-down and facts I needed to this participant and didn’t know who to ask.
inderal 20mg for sale – propranolol cheap buy methotrexate 5mg generic
buy amoxicillin sale – combivent 100mcg without prescription ipratropium uk