Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾಮಗಾರಿ ಟೆಂಡರ್ – ದಾರಿತಪ್ಪಿಸುತ್ತಿರುವ Congress
    ರಾಜಕೀಯ

    ಕಾಮಗಾರಿ ಟೆಂಡರ್ – ದಾರಿತಪ್ಪಿಸುತ್ತಿರುವ Congress

    vartha chakraBy vartha chakraಫೆಬ್ರವರಿ 15, 2023228 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು.

    ‘ರಾಜ್ಯದ ವಿವಿಧ ಕಾಮಗಾರಿಗಳ ಗುತ್ತಿಗೆ ವಿಚಾರವಾಗಿ Congress ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದು, ಗುತ್ತಿಗೆದಾರರಿಗೆ ಪರೋಕ್ಷವಾಗಿ ಬೆದರಿಕೆ ಹಾಕುತ್ತಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಆಪಾದಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಯಾವ ಗುತ್ತಿಗೆದಾರರನ್ನೂ ನೀಡಬೇಡಿ. ಮುಂದೆ ಅಧಿಕಾರಕ್ಕೆ ಬಂದು ತನಿಖೆ ಮಾಡಿಸುತ್ತೇವೆ ಎಂದು ಧಮಕಿ ಹಾಕುತ್ತಿದ್ದಾರೆ. ಇದರ ಅರ್ಥ ಏನೆಂದರೆ ಅಧಿಕಾರಕ್ಕೆ ಬಂದರೆ ಸುಲಿಗೆ ಮಾಡಲು ಬರುತ್ತಿದ್ದಾರೆ ಎನ್ನುವುದು ಬಹಳ ಸ್ಪಷ್ಟವಾಗಿದೆ’ ಎಂದು ದೂರಿದರು.

    ‘Congress ನವರು ಅವರ ಅಜೆಂಡಾ ಅವರೇ ಹೇಳಿಕೊಂಡಿದ್ದಾರೆ. ಇವರು ನಮ್ಮ ವಿರುದ್ಧ ಮಾಡಿದ್ದ ಶೇ 40 ಕಮಿಷನ್ ಆರೋಪ ಯಾವುದೂ ನಿರೂಪಿತವಾಗಿಲ್ಲ. ನ್ಯಾಯಾಲಯದಲ್ಲಿ ದಾಖಲೆಗಳನ್ನು ಕೊಡುವುದಾಗಿ ಹೇಳಿದ್ದು ಇನ್ನೂ ಕೊಟ್ಟಿಲ್ಲ. ಅವರು ಎಲ್ಲಿ ಬೇಕಾದರೂ ನಿರ್ದಿಷ್ಟ ಪ್ರಕರಣ ದಾಖಲು ಮಾಡಿದರೆ ತನಿಖೆಯಾಗುತ್ತದೆ. ಅದನ್ನು ಮಾಡುವುದು ಬಿಟ್ಟು ಗಾಳಿಯಲ್ಲಿ ಗುಂಡು ಹೊಡೆದರೆ ಏನೂ ಪ್ರಯೋಜನವಿಲ್ಲ’ ಎಂದರು.

    ‘ಕಾಂಗ್ರೆಸ್ ನವರ ಹಿಂದಿನ ಹಗರಣಗಳ ಬಗ್ಗೆ ಲೋಕಾಯುಕ್ತ (Lokayukta) ತನಿಖೆ ನಡೆಯುತ್ತಿದೆ. ಅವರ ಮೇಲಿರುವ ಆರೋಪಗಳಿಗೆ ಉತ್ತರ ಕೊಡಲಿ. ಅವರ ಕಾಲದಲ್ಲಿ ಆಗಿರುವ ಟೆಂಡರ್ ಹಗರಣಗಳ ಬಗ್ಗೆ ಉತ್ತರ ಕೊಡಲಿ’ ಎಂದು ಸವಾಲು ಹಾಕಿದರು. ‘ಗೂಳಿಹಟ್ಟಿ ಶೇಖರ್ (Gulihatti D Shekhar) ಅವರು ಸಾಮಾನ್ಯವಾಗಿ ಪತ್ರ ಬರೆದಿದ್ದಾರೆ. ನಾವು ಅವರಿಗೆ ಪತ್ರ ಮುಖೇನ ಉತ್ತರಿಸಿದ್ದು, ನಿರ್ದಿಷ್ಟ ಪ್ರಕರಣವಿದ್ದರೆ ನೀಡಲಿ, ತನಿಖೆ ಮಾಡುತ್ತೇವೆ ಎಂದು ಕೇಳುತ್ತಿದ್ದೇವೆ. ನಿನ್ನೆ ಸದನದಲ್ಲಿಯೂ ಸ್ಪಷ್ಟವಾಗಿ ಕೇಳಿದ್ದೇವೆ. ಯಾವುದಾದರೂ ಅಧಿಕಾರಿ ಯಾವುದೇ ಹಂತದಲ್ಲಿ ಭ್ರಷ್ಟಾಚಾರ ಮಾಡಿದ್ದರೆ ತನಿಖೆ ಮಾಡುತ್ತೇವೆ ಎನ್ನುವುದು ನಮ್ಮ ನಿಲುವಾಗಿದೆ. ಇದ್ಯಾವುದೂ ನೀಡದೆ, ಕೇವಲ ಹೇಳಿಕೆ ನೀಡಿದರೆ ಆಗುವುದಿಲ್ಲ’ ಎಂದು ಹೇಳಿದರು

    ‘ಕಾಂಗ್ರೆಸ್ 5 ವರ್ಷ ಆಡಳಿತ ಮಾಡಿದೆ. ಅವರೂ ಟೆಂಡರ್ ಕರೆದಿದ್ದಾರೆ. ನಾವು ಬಂದ ನಂತರ ಟೆಂಡರ್ ಪರಿಶೀಲನಾ ಸಮಿತಿಯನ್ನು ನ್ಯಾಯಮೂರ್ತಿಗಳ ನೇತೃತ್ವದಲ್ಲಿ ನೇಮಕ ಮಾಡಿದ್ದೇವೆ. ಟೆಂಡರ್ ಪರಿಶೀಲನೆಯಾಗುತ್ತದೆ ಹಾಗೂ ಇಡೀ ಪ್ರಕ್ರಿಯೆ ಪಾರದರ್ಶಕವಾಗಿದೆ. ಯಾರು ಬೇಕಾದರೂ ದೂರು ನೀಡಬಹುದಾಗಿದೆ. ಡಿ.ಕೆ.ಶಿವಕುಮಾರ್ (DK Shivakumar) ಅವರು ನೀರಾವರಿ ಸಚಿವರಿದ್ದಾಗ ಟೆಂಡರ್ ಪರಿಶೀಲನಾ ಸಮಿತಿಯನ್ನು ತೆಗೆದುಹಾಕಿದ್ದರು. ಟಿ. ಎ. ಸಿ ಯನ್ನೂ ತೆಗೆದುಹಾಕಿದ್ದರು. ನಿಗಮದಲ್ಲಿ ಎರಡು ಹಂತದ ಪರಿಶೀಲನೆಯನ್ನು ತೆಗೆದವರು ಅವರು, ಭ್ರಷ್ಟಾಚಾರಕ್ಕೆ ರಹದಾರಿ ಮಾಡಿಕೊಂಡಿದ್ದರು. ನಾವು ಬಂದ ನಂತರ ಅದನ್ನು ಪುನ: ಸ್ಥಾಪನೆ ಮಾಡಿದ್ದೇವೆ. ಹೀಗಾಗಿ ಅವರಿಗೆ ಯಾವುದೇ ನೈತಿಕ ಹಕ್ಕಿಲ್ಲ’ ಎಂದರು.

    #bangalore #BJP #Congress #dkshivakumar #politics #tender basavaraj bommai Congress DK. Shivakumar Gulihatti D Shekar lokayukta m shiva ಕಾಂಗ್ರೆಸ್ ನ್ಯಾಯ ಬೊಮ್ಮಾಯಿ
    Share. Facebook Twitter Pinterest LinkedIn Tumblr Email WhatsApp
    Previous ArticleMarch 1 ರಿಂದ BJP ರಥಯಾತ್ರೆ
    Next Article ತಲೆ ತಿರುಕರು ಹೀಗೆ ಮಾತನಾಡುವುದು – Yediyurappa
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    ಅಕ್ಟೋಬರ್ 4, 2025

    ಜಾತಿ ಸಮೀಕ್ಷೆಯಲ್ಲಿ ಡಿಸಿಎಂ ಕೊಟ್ಟ ವಿವರ ಗೊತ್ತಾ.

    ಅಕ್ಟೋಬರ್ 4, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • video sex việt nam không che ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • overseas pharmacies ರಲ್ಲಿ ಗಾಯಾಳು ಡಿಸಿಪಿ ಸೈದುಲ್ ಮಾಡಿದ ಕೆಲಸ ಗೊತ್ತಾ ?
    • 1xbet ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    CSK ವಿರುದ್ಧ ಸಿಡಿದೆದ್ದ ಜಡೇಜಾ #varthachakra #csk #jadeja #dhoni #sanjusamson #viralvideo #facts #ipl
    Subscribe