Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಇಲ್ಲ -ಯಾಕೆ ಗೊತ್ತಾ?
    ರಾಜಕೀಯ

    ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಇಲ್ಲ -ಯಾಕೆ ಗೊತ್ತಾ?

    vartha chakraBy vartha chakraಫೆಬ್ರವರಿ 20, 2025ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಫೆ.20:
    ಪಕ್ಷದಲ್ಲಿ ಒಬ್ಬರಿಗೆ ಒಂದೇ ಹುದ್ದೆ ಎಂಬ ತತ್ವಕ್ಕೆ ಅನುಸಾರವಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಮುಕ್ತಗೊಳಿಸುವಂತೆ ಬೇಡಿಕೆ ಸಲ್ಲಿಸಿದ್ದ ಹಲವು ನಾಯಕರಿಗೆ ಹೈಕಮಾಂಡ್ ನಿರ್ಧಾರ ನಿರಾಸೆ ಮೂಡಿಸಿದೆ.
    ಈ ಹಿಂದೆ ಡಿಕೆ ಶಿವಕುಮಾರ್ ಅವರು ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದಾಗ ತಾವು ಲೋಕಸಭೆ ಚುನಾವಣೆ ಮುಗಿಯುವವರೆಗೆ ಪಕ್ಷದ ಅಧ್ಯಕ್ಷರಾಗಿ ಮುಂದುವರೆಯುತ್ತೇನೆ ಎಂದು ಹೇಳಿದ್ದರು ಇದೀಗ ಲೋಕಸಭೆ ಚುನಾವಣೆ ಮುಗಿದು ಆರು ತಿಂಗಳು ಪೂರ್ಣಗೊಂಡಿದೆ. ಹೀಗಾಗಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಬೇರೆಯವರನ್ನು ನೇಮಕ ಮಾಡಬೇಕು ಎಂಬ ಆಗ್ರಹ ಕೇಳಿ ಬಂದಿತ್ತು.
    ಪ್ರಮುಖವಾಗಿ ಮಂತ್ರಿಗಳಾದ ಸತೀಶ ಜಾರಕಿಹೊಳಿ ಕೆ ಎನ್ ರಾಜಣ್ಣ ಮತ್ತು ಜಿ ಪರಮೇಶ್ವರ್ ಅವರು ವರಿಷ್ಠರನ್ನು ಭೇಟಿ ಮಾಡಿ ತಕ್ಷಣವೇ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಬೇರೆಯವರನ್ನು ನೇಮಕ ಮಾಡಬೇಕು ಎಂದು ಮನವಿ ಮಾಡಿದ್ದರು.
    ಈ ಬೆಳವಣಿಗೆಗಳ ನಡುವೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪಕ್ಷ ಸಂಘಟನಾತ್ಮಕವಾಗಿ ಹಲವಾರು ಬದಲಾವಣೆಗಳನ್ನು ಮಾಡುತ್ತಿದ್ದು ಇನ್ನೊಂದೆರಡು ವಾರದಲ್ಲಿ ಹಲವು ರಾಜ್ಯಗಳ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಮಾಡಲಾಗುವುದು ಎಂದು ಹೇಳಿದ್ದರು. ಇದು ಡಿಕೆ ಶಿವಕುಮಾರ್ ಅವರ ಬದಲಾವಣೆಗೆ ಆಗ್ರಹಿಸುತ್ತಿದ್ದ ನಾಯಕರಲ್ಲಿ ಹೊಸ ಭರವಸೆ ಮೂಡಿಸಿತ್ತು.
    ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರದಲ್ಲಿ ಒಟ್ಟು ಇನ್ನೂ ಬಿಗಿಗೊಳಿಸಲು ಈ ಬಣ ತೀರ್ಮಾನಿಸಿತ್ತು. ಇದರ ಪರಿಣಾಮ ಮಂತ್ರಿ ಕೆ.ಎನ್.ರಾಜಣ್ಣ ಅವರಂತೂ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ತಮ್ಮನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ನೇಮಕ ಮಾಡಿದರೆ ಮಂತ್ರಿ ಸ್ಥಾನ ತೊರೆಯುವುದಾಗಿ ಹೇಳಿದ್ದರು.
    ಈ ಬೆಳವಣಿಗೆಗಳನ್ನು ಗಮನಿಸಿದಾಗ ಸದ್ಯದಲ್ಲೇ ಕೆಪಿಸಿಸಿಗೆ ನೂತನ ಸಾರಥಿ ಬರಲಿದ್ದಾರೆ ಎಂದು ನಿರೀಕ್ಷಿಸಲಾಗಿತ್ತು ಆದರೆ ಈಗ ಹೈಕಮಾಂಡ್ ತೆಗೆದುಕೊಂಡಿರುವ ತೀರ್ಮಾನ ಎಲ್ಲಾ ನಿರೀಕ್ಷೆಗಳನ್ನು ಹುಸಿಗೊಳಿಸಿದೆ.
    ಬರುವ ಜೂನ್ ಜುಲೈ ಬೆಳಗ್ಗೆ ರಾಜ್ಯದ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸೇರಿದಂತೆ ವಿವಿಧ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಯಲಿದೆ ಈ ಚುನಾವಣೆಗೆ ಈಗಾಗಲೇ ಪ್ರದೇಶ ಕಾಂಗ್ರೆಸ್ ತಯಾರಿ ಆರಂಭಿಸಿದ್ದು ಸಂಭಾವ್ಯ ಅಭ್ಯರ್ಥಿಗಳ ಹುಡುಕಾಟದಲ್ಲಿ ನಿರಂತರವಾಗಿದೆ.
    ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಪೂರ್ಣ ಪ್ರಮಾಣದಲ್ಲಿ ಈ ಚಟುವಟಿಕೆಯಲ್ಲಿ ತೊಡಗಿದ್ದಾರೆ ಇಂತಹ ಸಮಯದಲ್ಲಿ ಅಧ್ಯಕ್ಷರ ಬದಲಾವಣೆ ಅನಗತ್ಯ ಗೊಂದಲಕ್ಕೆ ಕಾರಣವಾಗಲಿದೆ ಇದು ಚುನಾವಣೆಯ ಮೇಲೆ ಪರಿಣಾಮ ಬೀರಲಿದೆ ಎಂಬ ವರದಿಗಳು ಹೈಕಮಾಂಡ್ ಅಂಗಳ ತಲುಪಿವೆ.
    ಈ ಹಿನ್ನೆಲೆಯಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆ ಮುಗಿಯುವವರೆಗೆ ಡಿಕೆ ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಬದಲಾಯಿಸದಿರಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.
    ಕೆಪಿಸಿಸಿ ಅಧ್ಯಕ್ಷ ಬದಲಾವಣೆ ಮತ್ತು ವಿಧಾನ ಪರಿಷತ್ ನಾಮಕರಣ ಸದಸ್ಯರ ನೇಮಕ ಕುರಿತಂತೆ ಪಕ್ಷದ ಸಂಘಟನೆ ಕಾರ್ಯದರ್ಶಿ ವೇಣುಗೋಪಾಲ್ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ ಅವರನ್ನು ದೆಹಲಿಯಲ್ಲಿ ಗೃಹ ಮಂತ್ರಿ ಪರಮೇಶ್ವರ್ ಭೇಟಿ ಮಾಡಿದ್ದಾರೆ. ಈ ವೇಳೆ ಡಿಕೆ ಶಿವಕುಮಾರ್ ಅವರನ್ನು ಬದಲಾಯಿಸದಿರುವ ಹೈಕಮಾಂಡ್ ನಿರ್ಧಾರವನ್ನು ಇವರಿಗೆ ತಿಳಿಸಿದ್ದಾರೆ ಎಂದು ಉನ್ನತ ಮೂಲಗಳು ಸ್ಪಷ್ಟಪಡಿಸಿವೆ.

    ಕಾಂಗ್ರೆಸ್ ಚುನಾವಣೆ ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleಸೂಪರ್ ಸ್ಟಾರ್ ರಜನಿಕಾಂತ್ ಜೊತೆ ಹ್ಯಾಟ್ರಿಕ್ ಹೀರೋ
    Next Article ಖೈದಿಗಳಿಗೂ ಪುಣ್ಯ ಸ್ನಾನ
    vartha chakra
    • Website

    Related Posts

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    ಮೇ 30, 2025

    Honey trap ಪ್ರಕರಣ ಏನಾಯ್ತು ಗೊತ್ತಾ ?

    ಮೇ 30, 2025

    ವಿಧಾನ ಪರಿಷತ್ ಸದಸ್ಯರಿಗೆ ಬಿಸಿ ಮುಟ್ಟಿಸಿದ ಹೈಕಮಾಂಡ್.

    ಮೇ 29, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    Honey trap ಪ್ರಕರಣ ಏನಾಯ್ತು ಗೊತ್ತಾ ?

    ಜನಾರ್ದನ ರೆಡ್ಡಿ ಕೇಸ್ ವಿಚಾರಣೆಗೆ ಜಡ್ಜ್ ಯಾರೂ ರೆಡಿ ಇಲ್ಲ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • side effects of sandoz bupropion sr 150 mg ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • Corticosteroids Drugs Names ರಲ್ಲಿ ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !
    • nohu90.careers ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    Latest Kannada News

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    ಮೇ 31, 2025

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    ಮೇ 30, 2025

    Honey trap ಪ್ರಕರಣ ಏನಾಯ್ತು ಗೊತ್ತಾ ?

    ಮೇ 30, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಚಿವ ಖಂಡ್ರೆ ಮನೆ ಬಳಿಯೇ ಕಾರ್ ಗಾಜು ಒಡೆದು 2 ಲಕ್ಷ ಕಳವು!
    Subscribe