Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೇಂದ್ರ ಆರೋಗ್ಯ ಮಂತ್ರಿಗೆ ದಿನೇಶ್ ಗುಂಡೂರಾವ್ ಪತ್ರ
    ಸುದ್ದಿ

    ಕೇಂದ್ರ ಆರೋಗ್ಯ ಮಂತ್ರಿಗೆ ದಿನೇಶ್ ಗುಂಡೂರಾವ್ ಪತ್ರ

    vartha chakraBy vartha chakraಆಗಷ್ಟ್ 7, 2025ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಆ.6:
    ರಾಜ್ಯದಲ್ಲಿ ಜನ ಔಷಧಿ ಕೇಂದ್ರಗಳನ್ನು ಮುಚ್ಚಲಾಗುತ್ತಿದೆ ಎಂಬ ವಿವಾದದ ಕುರಿತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ ನೀಡಿ ಕೇಂದ್ರ ಆರೋಗ್ಯ ಸಚಿವ ಜೆ.ಪಿ ನಡ್ಡಾ ಅವರಿಗೆ ಪತ್ರ ಬರೆದಿದ್ದಾರೆ.
    ಇದರಲ್ಲಿ ರಾಜ್ಯದಲ್ಲಿ ಯಾವುದೇ ಜನ ಔಷಧಿ
    ಕೇಂದ್ರಗಳನ್ನು ಮುಚ್ಚಿಸಿಲ್ಲ ಬದಲಾಗಿ ಸರ್ಕಾರಿ ಆಸ್ಪತ್ರೆ ಆವರಣಗಳಲ್ಲಿ ಮಾತ್ರ ನಿರ್ಬಂಧಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.
    ಸರ್ಕಾರಿ ಆಸ್ಪತ್ರೆಗಳಲ್ಲಿ ಜನಸಾಮಾನ್ಯರಿಗೆ ಉಚಿತ ಔಷಧಿಗಳನ್ನು ನಿರಾಕರಿಸುವ ಯಾವುದೇ ಸಾಧ್ಯತೆಗಳನ್ನು ತಡೆಯುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ
    ದೇಶದಲ್ಲಿಯೇ ಕರ್ನಾಟಕದಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಔಷಧಿ ಕೇಂದ್ರಗಳಿವೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
    ಕರ್ನಾಟಕದಲ್ಲಿ ಜನ ಔಷಧಿ ಕೇಂದ್ರಗಳನ್ನು ಮುಚ್ಚಲಾಗುತ್ತಿದೆ ಎಂಬ ಕುರಿತು ಕೇಂದ್ರ ಆರೋಗ್ಯ ಸಚಿವ ನಡ್ಡಾ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು ಇದಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಉತ್ತರ ನೀಡಿದ್ದಾರೆ
    ಸಾರ್ವಜನಿಕರಿಗೆ ಕೈಗೆಟಕುವ ದರದಲ್ಲಿ ಗುಣಮಟ್ಟದ ಔಷಧಿಗಳು ಲಭ್ಯವಾಗುವಂತೆ ಮಾಡುವ ನಿಮ್ಮ ಕಾಳಜಿಯನ್ನು ನಾನು ಶ್ಲಾಘಿಸುತ್ತೇನೆ.‌ ಕರ್ನಾಟಕ ಸರ್ಕಾರವು ಎಲ್ಲಾ ಸರ್ಕಾರಿ ಆರೋಗ್ಯ ಸಂಸ್ಥೆಗಳಲ್ಲಿ ಅಗತ್ಯ ಔಷಧಗಳ ಪಟ್ಟಿಯ ಪ್ರಕಾರ ಎಲ್ಲಾ ಅಗತ್ಯ ಔಷಧಿಗಳನ್ನು ಉಚಿತವಾಗಿ ಪೂರೈಸುತ್ತಿದೆ ಎಂಬುದನ್ನು ನಾನು ಗೌರವಪೂರ್ವಕವಾಗಿ ಸ್ಪಷ್ಟಪಡಿಸಲು ಬಯಸುತ್ತೇನೆ ಎಂದು ತಮ್ಮ ಪತ್ರದಲ್ಲಿ ವಿವರಿಸಿದ್ದಾರೆ.
    ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ರೋಗಿಗಳನ್ನು ಔಷಧಿಗಳನ್ನು ಖರೀದಿಸಲು ವಾಣಿಜ್ಯ ಮಳಿಗೆಗಳಿಗೆ ಕಳುಹಿಸುವ ಮತ್ತು ಅವರಿಗೆ ಉಚಿತವಾಗಿ ಪೂರೈಸಲಾಗುವ ಔಷಧಿಗಳನ್ನು ನಿರಾಕರಿಸುವ ಯಾವುದೇ ಸಾಧ್ಯತೆಗಳನ್ನು ತಡೆಯುವ ಉದ್ದೇಶದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
    ಔಷಧಾಲಯಗಳಿಂದ ಔಷಧಿಗಳನ್ನು ಖರೀದಿಸಲು ರೋಗಿಗಳು ಭರಿಸುವ ವೆಚ್ಚವನ್ನು ಕಡಿಮೆ ಮಾಡುವುದು ಸರ್ಕಾರದ ನಿರ್ಧಾರವಾಗಿದೆ. ಇದು ಸರ್ಕಾರಿ ಆಸ್ಪತ್ರೆಗಳಲ್ಲಿ ಆರೋಗ್ಯ ಸೇವೆಗಳನ್ನು ಪಡೆಯುವ ಬಡ ಮತ್ತು ಹಿಂದುಳಿದ ರೋಗಿಗಳಿಗೆ ಅನುಕೂಲಕರವಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.
    ರಾಜ್ಯದಲ್ಲಿ 1417 ಜನೌಷಧಿ ಕೇಂದ್ರಗಳಲ್ಲಿ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ 184 ಜನೌಷಧಿ ಕೇಂದ್ರಗಳಿವೆ. ಉಳಿದವು ಸರ್ಕಾರಿ ಆಸ್ಪತ್ರೆಗಳ ಆವರಣದ ಹೊರಗೆ ಕಾರ್ಯನಿರ್ವಹಿಸುತ್ತಿವೆ. ಮತ್ತು ನಾಗರಿಕರು ತಮ್ಮ ಆಯ್ಕೆಯಂತೆ ಖಾಸಗಿ ವಲಯದಲ್ಲಿ ಅವುಗಳನ್ನು ಪ್ರವೇಶಿಸಲು ಸ್ವತಂತ್ರರಾಗಿದ್ದಾರೆ ಎಂದು ಹೇಳಿದ್ದಾರೆ
    ಕರ್ನಾಟಕದಲ್ಲಿ ಎಲ್ಲಾ ನಾಗರಿಕರಿಗೆ ಕೈಗೆಟುಕುವ ಮತ್ತು ಗುಣಮಟ್ಟದ ಆರೋಗ್ಯ ಸೇವೆಗಳು ಲಭ್ಯವಾಗುವಂತೆ ಮಾಡಲು ನಾವು ಬದ್ಧರಾಗಿದ್ದೇವೆ ಮತ್ತು ಸಾರ್ವಜನಿಕ ವ್ಯವಸ್ಥೆಯಲ್ಲಿ ನಮ್ಮ ಪೂರೈಕೆ ಸರಪಳಿ, ಲಭ್ಯತೆ ಮತ್ತು ಔಷಧಿಗಳ ವೈಜ್ಞಾನಿಕ ಬಳಕೆಯನ್ನು ನಿರಂತರವಾಗಿ ಬಲಪಡಿಸುತ್ತಿದ್ದೇವೆ. ಸಾರ್ವಜನಿಕ ಆರೋಗ್ಯದ ಕುರಿತಾದ ನಿಮ್ಮ ಕಾಳಜಿಯನ್ನು ನಾವು ಸಂಪೂರ್ಣವಾಗಿ ಗೌರವಿಸುತ್ತೇವೆ ಮತ್ತು ಜನರ ಒಳಿತಿಗಾಗಿ ನಮ್ಮ ಸಮಾನ ಬದ್ಧತೆಯನ್ನು ಮತ್ತೆ ಸ್ಪಷ್ಟಪಡಿಸುತ್ತೇವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

    ಆರೋಗ್ಯ ಕರ್ನಾಟಕ ಬೆಂಗಳೂರು ವಾಣಿಜ್ಯ ಸರ್ಕಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಬಿಜೆಪಿ ಮುಖಂಡನ ಹಂತಕರು ಅರೆಸ್ಟ್ !
    Next Article ಮದರಸಾದ ಮೌಲ್ವಿಗಳಿಗೆ ಕನ್ನಡ ಕಲಿಕೆ
    vartha chakra
    • Website

    Related Posts

    ಕಾಮುಕ ಯೋಗಗುರು ಅರೆಸ್ಟ್.

    ಸೆಪ್ಟೆಂಬರ್ 18, 2025

    ಡಿ.ಕೆ. ಶಿವಕುಮಾರ್ ಕೊಟ್ಟ ಟಾರ್ಗೆಟ್.

    ಸೆಪ್ಟೆಂಬರ್ 18, 2025

    ಇವರಿಗೆ ಬೆಂಗಳೂರು ಬೇಡವಂತೆ.

    ಸೆಪ್ಟೆಂಬರ್ 18, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಂಗ್ಲೆ ಗುಡ್ಡ ರಹಸ್ಯದ ಬೆನ್ನು ಹತ್ತಿದ ಪೊಲೀಸ್.

    ಕಾಮುಕ ಯೋಗಗುರು ಅರೆಸ್ಟ್.

    ಡಿ.ಕೆ. ಶಿವಕುಮಾರ್ ಕೊಟ್ಟ ಟಾರ್ಗೆಟ್.

    ಇವರಿಗೆ ಬೆಂಗಳೂರು ಬೇಡವಂತೆ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • dizainerskie kashpo_jaEt ರಲ್ಲಿ AMAZON ಪಾರ್ಸೆಲ್ ನಲ್ಲಿ ಬಂದಿದ್ದು ನೋಡಿ ಬೆಚ್ಚಿದ ದಂಪತಿ.
    • backlink building ರಲ್ಲಿ ಕಾಂಗ್ರೆಸ್ ಮುಗ್ಗರಿಸಿದರೆ ಸುರ್ಜೆವಾಲಾ ಹೊಣೆ! Congress
    • Seo Backlinks ರಲ್ಲಿ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಬಿಟ್ಟಿದ್ದು ಯಾಕೆ ಗೊತ್ತಾ? | Jagadish Shettar
    Latest Kannada News

    ಬಂಗ್ಲೆ ಗುಡ್ಡ ರಹಸ್ಯದ ಬೆನ್ನು ಹತ್ತಿದ ಪೊಲೀಸ್.

    ಸೆಪ್ಟೆಂಬರ್ 18, 2025

    ಕಾಮುಕ ಯೋಗಗುರು ಅರೆಸ್ಟ್.

    ಸೆಪ್ಟೆಂಬರ್ 18, 2025

    ಡಿ.ಕೆ. ಶಿವಕುಮಾರ್ ಕೊಟ್ಟ ಟಾರ್ಗೆಟ್.

    ಸೆಪ್ಟೆಂಬರ್ 18, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    9ನೇ ಕ್ಲಾಸ್ ವಿದ್ಯಾರ್ಥಿ ಬ್ಯಾಗಿನಲ್ಲಿ ಕಾಂಡೊಮ್, ಸಿಗರೇಟ್, ಆಲ್ಕೋಹಾಲ್ #varthachakra#medicalcheckup #parents
    Subscribe