Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೈದಿ ನಂಬರ್‌ 18197
    ಸುದ್ದಿ

    ಕೈದಿ ನಂಬರ್‌ 18197

    vartha chakraBy vartha chakraಮೇ 8, 2022Updated:ಮೇ 8, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಮೇ.8- ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ‌ ಎಸಗಿ ಬಂಧಿತನಾಗಿರುವ ಡಿವೈಎಸ್ಪಿ ‌ಮಲ್ಲಿಕಾರ್ಜುನ್ ಸಾಲಿ ಅವರು ಇದೀಗ ವಿಚಾರಣಾಧೀನ ಕೈದಿ ನಂಬರ್‌ 18197!
    ಡಿವೈಎಸ್ಪಿ ‌ಮಲ್ಲಿಕಾರ್ಜುನ್ ಸಾಲಿ ಜತೆ ಸಿಪಿಐ ಆನಂದ‌ ಮೇತ್ರಿ ಅವರನ್ನೂ ಬಂಧನಕ್ಕೆ ಒಳಪಡಿಸಲಾಗಿದ್ದು, ಎಲ್ಲರಿಗೂ ಇದೀಗ ಕೈದಿ ನಂಬರ್‌ ನೀಡಲಾಗಿದೆ. ಇಷ್ಟು ದಿನ ಈ ಇಬ್ಬರು ಅಧಿಕಾರಿಗಳು ಆರೋಪಿಗಳಿಗೆ ಜೈಲಿಗೆ ಕಳುಹಿಸಿ ಖೈದಿ‌ ನಂಬರ್ ಕೊಡಸ್ತಿದ್ದರು. ಆದರೆ ಇದೀಗ ಅಕ್ರಮದಲ್ಲಿ ಭಾಗಿಯಾಗಿ ತಾವೇ ಕೈದಿ ನಂಬರ್ ಪಡೆಯುವ ಪರಿಸ್ಥಿತಿ ಬಂದಿದೆ.
    ಬೆರಳಚ್ಚು ವಿಭಾಗದ ಇನ್ಸಪೇಕ್ಟರ್ ಆನಂದ್ ಮೇತ್ರಿ ವಿಚಾರಣಾಧಿನ ಕೈದಿ ನಂಬರ್ 18196 ಹಾಗೂ ರಾಯಚೂರು ಜಿಲ್ಲೆಯ ಲಿಂಗಸೂಗುರು ಡಿವೈಎಸ್ಪಿ ಮಲ್ಲಿಕಾರ್ಜುನ್ ಸಾಲಿ ವಿಚಾರಣಾಧಿನ ಕೈದಿ ನಂಬರ್ 18197.
    ಅಕ್ರಮ ನೇಮಕಾತಿಯಲ್ಲಿ ನಾಲ್ಕು ಅಭ್ಯರ್ಥಿಗಳನ್ನು ಆರ್ ಡಿ ಪಾಟೀಲ್‌ಗೆ ನೀಡಿರುವ ಆರೋಪ ಸಿಪಿಐ ಆನಂದ್ ಮೇತ್ರಿ ಅವರ ಮೇಲಿದೆ. ಅಲ್ಲದೆ ಜ್ಞಾನ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪರೀಕ್ಷೆಯಲ್ಲಿ ಮೇಲ್ವಿಚಾರಕರಾಗಿ ಅಕ್ರಮ ಎಸಗಿದ್ದರು.
    ಅಕ್ರಮದ ಮಾಹಿತಿ ಪಡೆದು ಬ್ಲ್ಯಾಕ್ ಮೇಲ್ ಮಾಡಿ ಕಿಂಗ್‌ಪಿನ್‌ಗಳಿಂದ ಹತ್ತು ಲಕ್ಷ ಹಣ ಪಡೆದಿರುವ ಆರೋಪ ಲಿಂಗಸೂಗರು ಡಿವೈಎಸ್ಪಿ ಮಲ್ಲಿಕಾರ್ಜುನ್ ಸಾಲಿ ಅವರ ಮೇಲಿದೆ. ಇಬ್ಬರು ಬಂಧಿತ ಪೊಲೀಸ್ ಅಧಿಕಾರಗಳಿಗೆ ಹಗಲು ರಾತ್ರಿ ವಿಚಾರಣೆ ನಡೆಸುತ್ತಿದ್ದಾರೆ.
    ಈ ನಡುವೆ ಕಿಂಗ್‌ಪಿನ್ ಆರ್.ಡಿ‌. ಪಾಟೀಲ್‌ಗೆ ಸಿಐಡಿ ಶಾಕ್ ಕೊಟ್ಟಿದೆ. ಆರ್.ಡಿ.ಪಿಗೆ ಸೇರಿದ ಬ್ಯಾಂಕ್ ಅಕೌಂಟ್​ಗಳನ್ನು ಅಮಾನತು ಮಾಡಲಾಗಿದೆ. ಆಕ್ಸಿಸ್ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ ಸೇರಿದಂತೆ ಇತರೆ ಬ್ಯಾಂಕ್​ಗಳಲ್ಲಿರುವ ಖಾತೆಗಳನ್ನ ಸಿಐಡಿ ಅಧಿಕಾರಿಗಳು ಫ್ರೀಜ್ ಮಾಡಿದ್ದಾರೆ.
    ಪಿಎಸ್​ಐ ನೇಮಕಾತಿ ಪರೀಕ್ಷೆಯ ಕಿಂಗ್​ಪಿನ್ ಆರ್. ಡಿ. ಪಾಟೀಲ್ ಅಕ್ರಮದಿಂದ ಕೋಟಿ ಕೋಟಿ ಆಸ್ತಿ ಸಂಪಾದಿಸಿರುವ ಆರೋಪ ಕೇಳಿ ಬಂದ ಕಾರಣ ಅಕೌಂಟ್ ಫ್ರೀಜ್​ ಮಾಡಲಾಗಿದೆ. ಈತ ತನ್ನ ಆಪ್ತರ ಹೆಸರಿನಲ್ಲೂ ಬೇನಾಮಿ ಆಸ್ತಿ ಮಾಡಿರೋ ಶಂಕೆ ಇದೆ. ಈ ನಿಟ್ಟಿನಲ್ಲೂ ಸಿಐಡಿ ತಂಡ ತನಿಖೆ ಕೈಗೊಂಡಿದೆ. ಆರ್.ಡಿ. ಪಾಟೀಲ್ ಸಿಐಡಿ ಕಸ್ಟಡಿ ಸಮಯಾವಕಾಶ ಮುಕ್ತಾಯವಾಗಿದೆ. ಈ ಹಿನ್ನೆಲೆಯಲ್ಲಿ ಮತ್ತೆ ಎರಡು ದಿನಗಳ ಕಾಲ ಸಿಐಡಿ, ಕಸ್ಟಡಿ ವಿಸ್ತರಣೆ ಮಾಡಿ ವಶಕ್ಕೆ ಪಡೆದಿದೆ.

    Share. Facebook Twitter Pinterest LinkedIn Tumblr Email WhatsApp
    Previous Articleಕೆಲಸದ ಅವಧಿಯಲ್ಲಿ ನಿದ್ರೆ ಮಾಡಿ
    Next Article ಯುದ್ಧ ಮಾಡಲು ರಷ್ಯಾಕ್ಕೆ ಪ್ರತಿದಿನ 7000 ಕೋಟಿ ರೂಪಾಯಿ ಬೇಕು
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    ಅಕ್ಟೋಬರ್ 4, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • promokxsl ರಲ್ಲಿ ಬಾಬಾ ಸಿದ್ಧಿಕ್ಕಿ ಹತ್ಯೆ ನಂತರ, ಸಲ್ಮಾನ್‌ ಖಾನ್ ಹತ್ಯೆ ಮಾಡಲು ಟಾರ್ಗೆಟ್ ಮಾಡುತ್ತಿರುವ ಬಿಷ್ಣೋಯ್‌ ಗ್ಯಾಂಗ್!
    • promogmsl ರಲ್ಲಿ ಬಾಬಾ ಸಿದ್ಧಿಕ್ಕಿ ಹತ್ಯೆ ನಂತರ, ಸಲ್ಮಾನ್‌ ಖಾನ್ ಹತ್ಯೆ ಮಾಡಲು ಟಾರ್ಗೆಟ್ ಮಾಡುತ್ತಿರುವ ಬಿಷ್ಣೋಯ್‌ ಗ್ಯಾಂಗ್!
    • JeremyPah ರಲ್ಲಿ ಅತಿವೇಗವಾಗಿ ಕಾರು ಓಡಿಸಿದರೆ ಏನಾಗುತ್ತೆ ಗೊತ್ತಾ.
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    CSK ವಿರುದ್ಧ ಸಿಡಿದೆದ್ದ ಜಡೇಜಾ #varthachakra #csk #jadeja #dhoni #sanjusamson #viralvideo #facts #ipl
    Subscribe