ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ತಳಗವಾರ-ಮುತ್ತುಗದಹಳ್ಳಿ ಗ್ರಾಮಗಳ ಮಧ್ಯೆ ನಡೆದಿದೆ.
ಸಿದ್ದಪ್ಪ(19), ಸಂಜಯ್(22) ಮೃತ ಕಾರ್ಮಿಕರಾಗಿದ್ದಾರೆ.ಗಂಭೀರ ಗಾಯಗೊಂಡ
ಮತ್ತೊಬ್ಬ ಕಾರ್ಮಿಕ ಪರ್ವೇಜ್ ನನ್ನು ಕೋಲಾರದ ಎಸ್.ಎನ್.ಆರ್ ಆಸ್ಪತ್ರೆಗೆ ದಾಖಲಿಸಿದ್ದು ಆತನ ಸ್ಥಿತಿ ಚಿಂತಾಜನಕವಾಗಿದೆ.
ಚಿಂತಾಮಣಿ -ಶಿಡ್ಲಘಟ್ಟ ತಾಲೂಕಿನಲ್ಲಿ 11ಕೆವಿ ಲೈನ್ ಹಳೇ ತಂತಿ ತೆಗೆದು ಹೊಸ ತಂತಿ ಅಳವಡಿಸುವಾಗ ವಿದ್ಯುತ್ ಪ್ರವಹಿಸಿ ಇಬ್ಬರು ಕೂಲಿ ಕಾರ್ಮಿಕರು ಮೃತಪಟ್ಟಿದ್ದಾರೆ. ಗುತ್ತಿಗೆದಾರರ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ಆರೋಪ ಮಾಡಿದ್ದಾರೆ.
ತುಮಕೂರು ಮೂಲದ ರಾಜಾ ಎಲೆಕ್ಟ್ರಿಕಲ್ ಗಂಗರಾಜ ಎಂಬುವರಿಗೆ ಸೇರಿದ 50 ಕೋಟಿ ರೂ ಮೊತ್ತದ ಗುತ್ತಿಗೆ ಕಾಮಗಾರಿ ಇದಾಗಿದ್ದು ಕೂಲಿ ಕಾರ್ಮಿಕರಿಗೆ ಯಾವುದೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದೇ ಇದ್ದುದ್ದೇ ದುರಂತ ಕಾರಣ ಎನ್ನಲಾಗಿದೆ. ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.