Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜಾಮೀನು ಪಡೆದುಕೊಂಡ ಸಿಎಂ ಮತ್ತು ಡಿಸಿಎಂ.
    Trending

    ಜಾಮೀನು ಪಡೆದುಕೊಂಡ ಸಿಎಂ ಮತ್ತು ಡಿಸಿಎಂ.

    vartha chakraBy vartha chakraಜೂನ್ 1, 20241 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.1-
    ಹಿಂದಿನ ಬಿಜೆಪಿ ಸರ್ಕಾರ ವಿರುದ್ಧ 40 ಪರ್ಸೆಂಟ್ ಕಮಿಷನ್ ಮಾಡಿದ ಆರೋಪ ಹಾಗೂ ಈ ಕುರಿತು ಸುಳ್ಳು ಜಾಹೀರಾತು ನೀಡಿ ಬಿಜೆಪಿ ವರ್ಚಸ್ಸಿಗೆ ಧಕ್ಕೆ ತಂದ ಆರೋಪದಡಿ ದಾಖಲಿಸಲಾಗಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಖುದ್ದು ಹಾಜರಾಗಿ ಜಾಮೀನು ಪಡೆದುಕೊಂಡರು.
    ಬಿಜೆಪಿಯ ರಾಜ್ಯ ಘಟಕದ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಬಿ.ಎಸ್‌.ಕೇಶವಪ್ರಸಾದ್‌ ಈ ಸಂಬಂಧ ಸಲ್ಲಿಸಿರುವ ಖಾಸಗಿ ದೂರನ್ನು ‘ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯ’ದ 42ನೇ ಎಸಿಎಂಎಂ ಕೋರ್ಟ್‌ ವಿಚಾರಣೆಗೆ ಅಂಗೀರಿಸಿತ್ತು. ಈ ಹಿನ್ನೆಲೆಯಲ್ಲಿ ಆರೋಪಿಗಳಿಗೆ ಸಮನ್ಸ್ ಜಾರಿಗೊಳಿಸಲಾಗಿತ್ತು.
    ಪ್ರಕರಣದಲ್ಲಿ ಎ1 ಕೆಪಿಸಿಸಿ, ಎ2 ಡಿಕೆ ಶಿವಕುಮಾರ್, ಎ3 ಆರೋಪಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಎ4 ಆರೋಪಿಯಾಗಿ ರಾಹುಲ್ ಗಾಂಧಿ ಅವರನ್ನು ಹೆಸರಿಸಲಾಗಿದೆ.ಐಪಿಸಿ ಸೆಕ್ಷನ್ 499 ಹಾಗೂ 500 ಅಡಿಯಲ್ಲಿ ಖಾಸಗಿ ದೂರು ದಾಖಲಾಗಿದೆ.
    ಈ ಹಿನ್ನೆಲೆಯಲ್ಲಿ ಕೋರ್ಟ್ ಆರೋಪಿಗಳ ಖುದ್ದು ಹಾಜರಿಗೆ ಸಮನ್ಸ್ ನೀಡಿತ್ತು.ಅದರಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿಚಾರಣೆಗೆ ಆಗಮಿಸಿ ಕೋರ್ಟ್ನಲ್ಲಿ ಕೈಮುಗಿದು ಕೈ ಕಟ್ಟಿ ನಿಂತರು. ಈ ವೇಳೆ ಹಾಜರಿರುವವರು ಯಾರು ಎಂದು ನ್ಯಾಯಾಧೀಶರು ಕೇಳಿದ್ದು 2 ಮತ್ತು 3ನೇ ಆರೋಪಿ, ಸಿಎಂ,ಡಿಸಿಎಂ ಹಾಜರಾಗಿದ್ದಾರೆ. ಆದರೆ ರಾಹುಲ್ ಗಾಂಧಿ ಮುಂದಿನ ವಿಚಾರಣೆಗೆ ಹಾಜರಾಗುತ್ತಾರೆ ಹಾಜರಾತಿಯಿಂದ ವಿನಾಯಿತಿ ಕೊಡಿ ಎಂದು ವಕೀಲರು ಮನವಿ ಮಾಡಿದರು.
    ಇಂಡಿಯಾ ಒಕ್ಕೂಟದ ಸಭೆಯಿದೆ. ಹೀಗಾಗಿ ರಾಹುಲ್ ಗಾಂಧಿ ಹಾಜರಿಯಿಂದ ವಿನಾಯಿತಿ ಕೋರಿ ರಾಹುಲ್ ಗಾಂಧಿ ಪರ ನಿಶಿತ್ ಕುಮಾರ್ ಶೆಟ್ಟಿ ಮನವಿ ಮಾಡಿದರು. ಕೋರ್ಟ್  ಮುಂದೆ ಎಲ್ಲರೂ ಸಮಾನರು. ರಾಹುಲ್ ಗಾಂಧಿ ಇಂದು ಹಾಜರಾಗುವುದಾಗಿ ಹೇಳಿದ್ದರು. ಹಾಜರಾಗುವುದು ರಾಹುಲ್ ಗಾಂಧಿ ಕರ್ತವ್ಯ. ಚುನಾವಣೆ ನೆಪ ಹೇಳಿ ಗೈರು ಹಾಜರಾಗುವಂತಿಲ್ಲ ಎಂದು ಬಿಜೆಪಿ ಪರ ವಕೀಲ ವಿನೋದ್ ಕುಮಾರ್ ವಾದ ಮಾಡಿದರು
    ವಿಚಾರಣೆ ವೇಳೆ ರಾಹುಲ್ ಗಾಂಧಿ ಪರ ಹಾಜರಾಗಿದ್ದ ಹೈಕೋರ್ಟ್ ವಕೀಲ ನಿಶಿತ್ ಶೆಟ್ಟಿ, ಅರ್ಜಿದಾರರ ಹಾಜರಿಗೆ ವಿನಾಯ್ತಿ ಕೋರಿದರು. ಇದಕ್ಕೆ ನ್ಯಾಯಾಧೀಶರು ಅಸಮಾಧಾನ ವ್ಯಕ್ತಪಡಿಸಿದರು.
    ಉಳಿದ ಆರೋಪಿಗಳ ಹಾಜರಿಯನ್ನು ದಾಖಲಿಸಿಕೊಂಡ ನ್ಯಾಯಾಧೀಶರು ನಗದು ಶ್ಯೂರಿಟಿ ಆಧಾರದಲ್ಲಿ ಜಾಮೀನು ಮಂಜೂರು ಮಾಡಿದರು. ಬಾಂಡ್ ಪತ್ರಗಳಿಗೆ ಸಹಿ ಹಾಕಿದ ನಂತರ ಇಬ್ಬರೂ ಕೆಲ ಹೊತ್ತು ಕೋರ್ಟ್ ಹಾಲ್ ನ ಹೊರಗಡೆಯ ಬೆಂಚ್ ನಲ್ಲಿ ಕುಳಿತು ಸ್ನೇಹಿತರನ್ನು ಮಾತನಾಡಿಸಿ ಅಲ್ಲಿಂದ ತೆರಳಿದರು.

    Verbattle
    Verbattle
    Verbattle
    Bangalore Congress Government Karnataka News Politics Trending ಕಾಂಗ್ರೆಸ್ ಚುನಾವಣೆ ನ್ಯಾಯ ರಾಜಕೀಯ ರಾಹುಲ್ ಗಾಂಧಿ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleವಾಲ್ಮೀಕಿ ನಿಗಮದ ಅಕ್ರಮದ ಬೆನ್ನು ಹತ್ತಿದ ಎಸ್ಐಟಿ.
    Next Article ಪ್ರಜ್ವಲ್ ಗೆ ವಿಡಿಯೋದಲ್ಲಿರೋರು ಯಾರು ಗೊತ್ತಿಲ್ಲವಂತೆ.
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    1 ಟಿಪ್ಪಣಿ

    1. Uqkfsi on ಫೆಬ್ರವರಿ 12, 2026 11:53 ಅಪರಾಹ್ನ

      mgm grand betting betmgm-play mgm gambling

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Qpehmo ರಲ್ಲಿ ಪ್ರಧಾನಿ ಸವಾರಿಯಿಂದಾಗಿ ಸಂತ್ರಸ್ತರಾದ ಸಾಮಾನ್ಯ ಜನ| Modi
    • Glennhof ರಲ್ಲಿ ಬಳ್ಳಾರಿ ಎಸ್. ಪಿ. Suspend ಆಗಿದ್ದು ಯಾಕೆ ಗೊತ್ತಾ?
    • LinwoodGah ರಲ್ಲಿ ಕನ್ನಡ ನಾಮಫಲಕಕ್ಕಾಗಿ ಹೋರಾಟ | Kannada Rakshana Vedike
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.