Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಡಿಕೆಗೆ ಯಾಕೆ ಹೀಗೆ ಮಾಡಿದ್ರು..?
    Viral

    ಡಿಕೆಗೆ ಯಾಕೆ ಹೀಗೆ ಮಾಡಿದ್ರು..?

    vartha chakraBy vartha chakraಫೆಬ್ರವರಿ 27, 2025ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಕೊಯಮತ್ತೂರು.
    ಇಶಾ ಫೌಂಡೇಶನ್‌ ಸಂಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್‌ ನೇತೃತ್ವದಲ್ಲಿ ಕೊಯಮತ್ತೂರಿನ ಇಶಾ ಕೇಂದ್ರದಲ್ಲಿ ನಡೆದ ಮಹಾಶಿವರಾತ್ರಿ ಆಚರಣೆ ಇದೀಗ ದೊಡ್ಡ ಪ್ರಮಾಣದಲ್ಲಿ ಸುದ್ದಿ ಮಾಡುತ್ತಿದೆ.
    ಮಹಾಶಿವರಾತ್ರಿಯಂದು ಪರಶಿವನ ಆರಾಧನೆ, ಜಾಗರಣೆ ಮೊದಲಾದ ದೈವಿಕ ಕೈಂಕರ್ಯಗಳಿಂದಾಗಿ ಅಥವಾ ಈ ಧಾರ್ಮಿಕ ಮೇಳದಲ್ಲಿ ಪಾಲ್ಗೊಂಡು ಸಂಭ್ರಮಿಸಿದ ವಿದೇಶಿಯರ ಕಾರಣಕ್ಕಾಗಿ ಇದು ಸುದ್ದಿಯಾಗುತ್ತಿಲ್ಲ. ಬದಲಿಗೆ ಇಶಾ ಫೌಂಡೇಶನ್‌ ಸಂಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್‌ ಕಾಂಗ್ರೆಸಿನ ಪ್ರಭಾವಿ ನಾಯಕ ಹಾಗೂ ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಮುಂದೆ ಕೂರಿಸಿಕೊಂಡು ಕಾಂಗ್ರೆಸ್ ಪಕ್ಷ ಮತ್ತು ಈ ಹಿಂದಿನ ಕಾಂಗ್ರೆಸ್ ನೇತೃತ್ವದ ಆಡಳಿತದ ಬಗ್ಗೆ ಟೀಕೆ ಮಾಡುತ್ತಾ ಕೇಂದ್ರದ ಬಿಜೆಪಿ ನೇತೃತ್ವದ ಎನ್ ಡಿ ಎ ಸರ್ಕಾರವನ್ನು ಹಾಡಿ ಹೊಗಳಿದ್ದಕ್ಕಾಗಿ ಸುದ್ದಿಯಾಗಿದ್ದಾರೆ.
    ಇಶಾ ಫೌಂಡೇಶನ್‌ ಸಂಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್‌ ತಮ್ಮ ಮನೆಗೆ ಬಂದು ಆಹ್ವಾನ ನೀಡಿದರು ಹಾಗೂ ಇದೊಂದು ಧಾರ್ಮಿಕ ಕಾರ್ಯಕ್ರಮ ಎಂಬ ಕಾರಣಕ್ಕೆ ಇದರಲ್ಲಿ ಪಾಲ್ಗೊಳ್ಳುತ್ತಿದ್ದೇನೆ ಎಂದು ಸಮರ್ಥನೆ ನೀಡಿ ಸಮಾರಂಭಕ್ಕೆ ಹಾಜರಾದ ಡಿಕೆ ಶಿವಕುಮಾರ್ ಇದೀಗ ಸ್ವಪಕ್ಷಯರಿಂದಲೇ ಮುಜುಗರ ಅನುಭವಿಸುವಂತಾಗಿದೆ.
    ಬಿಜೆಪಿಯ ಪ್ರಭಾವಿ ನಾಯಕ ಹಾಗೂ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ, ಕೇಂದ್ರ ವಾರ್ತಾ ಮತ್ತು ಪ್ರಸಾರ ಮಂತ್ರಿ ಎಲ್. ಮುರುಗನ್ ಪಂಜಾಬ್ ಮತ್ತು ಒಡಿಶಾ ರಾಜ್ಯಗಳ ರಾಜ್ಯಪಾಲರು ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಬಿಜೆಪಿ ನಾಯಕ ಹಾಗೂ ಮಾಜಿ ಮಂತ್ರಿ ವೇಲುಮಣಿ ಅವರ ಜೊತೆ ಡಿಕೆ ಶಿವಕುಮಾರ್ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
    ಮತ್ತು ಒಂದು ಆಶ್ಚರ್ಯಕರ ಸಂಗತಿ ಎಂದರೆ ಡಿಕೆ ಶಿವಕುಮಾರ್ ಅವರಿಗೆ ಯಾರೇ ಆಗಲಿ ಕಾಂಗ್ರೆಸ್ ಪಕ್ಷವನ್ನು ಟೀಕಿಸಿದರೆ ಆಗುವುದಿಲ್ಲ ಕಾಂಗ್ರೆಸ್ ಪಕ್ಷ ಮತ್ತು ಅದರ ನಾಯಕತ್ವವನ್ನು ಟೀಕಿಸುವ ವ್ಯಕ್ತಿ ಎಷ್ಟೇ ದೊಡ್ಡವರಾಗಿದ್ದರೂ ಲೆಕ್ಕಿಸದೆ ಅವರ ವಿರುದ್ಧ ಮುಗಿ ಬೀಳುವುದಕ್ಕೆ ಡಿಕೆ ಶಿವಕುಮಾರ್ ಹೆಸರುವಾಸಿ ಇವರ ಈ ನಡವಳಿಕೆಯಿಂದಾಗಿ ಹಲವು ಸಮಸ್ಯೆಗಳನ್ನು ಎದುರಿಸಿದ್ದಾರೆ.
    ಇಂತಹ ಡಿಕೆ ಶಿವಕುಮಾರ್ ಇಶಾ ಫೌಂಡೇಶನ್ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕರಾದ ಜೊತೆ ಪಾಲ್ಗೊಂಡು ಅಚ್ಚರಿ ಮೂಡಿಸಿದರು ಮಾತ್ರವಲ್ಲ ಆ ಕಾರ್ಯಕ್ರಮದಲ್ಲಿ ಇಶಾ ಫೌಂಡೇಶನ್ ಮುಖ್ಯಸ್ಥ ಜಗ್ಗಿ ವಾಸುದೇವ್ ಕಾಂಗ್ರೆಸ್ ಪಕ್ಷ ಮತ್ತು ಅದರ ನಾಯಕತ್ವವನ್ನು ವಾಚಾಮಗೋಚರವಾಗಿ ನಿಂದಿಸಿದರೂ ಡಿಕೆ ಶಿವಕುಮಾರ್ ತುಟಿ ಪಿಟಿಕ್ ಎನ್ನುವುದು ಕುಳಿತಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.
    ಶಿವರಾತ್ರಿ ಸಮಾರಂಭದಲ್ಲಿ ಧಾರ್ಮಿಕ ಪ್ರವಚನ ನೀಡಲಿದ್ದಾರೆ ಎಂದು ಭಾವಿಸಿದ್ದ ಜಗ್ಗಿ ವಾಸುದೇವ್ ಎಲ್ಲರ ನಿರೀಕ್ಷೆ ಹುಸಿಗೊಳಿಸಿ ರಾಜಕೀಯ ಭಾಷಣ ಮಾಡಿದರು.
    ಸಭಿಕರ ಸಾಲಿನಲ್ಲಿ ಕುಳಿತಿದ್ದ ಡಿಕೆ ಶಿವಕುಮಾರ್ ಅವರನ್ನು ನೋಡುತ್ತಲೇ, ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವವನ್ನು ಶ್ಲಾಘಿಸಿ ಕಾಂಗ್ರೆಸ್ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.
    ಕಳೆದ ಹತ್ತು ವರ್ಷಗಳ ಹಿಂದೆ ದೇಶದಲ್ಲಿ ಅಭದ್ರತೆಯ ವಾತಾವರಣ ಇತ್ತು. ಎಲ್ಲೆಂದರಲ್ಲಿ ಬಾಂಬ್ ಸ್ಫೋಟಿಸಿ ಉಗ್ರಗಾಮಿಗಳು ಅಟ್ಟಹಾಸ ಮೆರೆಯುತ್ತಿದ್ದರು. ಇಂತಹ ದುಷ್ಕೃತ್ಯಗಳಿಗೆ ಕಡಿವಾಣ ಆಗಿದ್ದು ಪ್ರಧಾನಿ ಮೋದಿ ಮತ್ತು ಗೃಹ ಮಂತ್ರಿ ಅಮಿತ್ ಶಾ ಅವರ ಸಮರ್ಥ ನಾಯಕತ್ವ ಎಂದು ಬಣ್ಣಿಸಿದರು.
    ತಮ್ಮ ಭಾಷಣದುದ್ದಕ್ಕೂ ಬಿಜೆಪಿ ಮತ್ತು ಕೇಂದ್ರ ಸರ್ಕಾರವನ್ನು ಹಾಡಿ ಹೊಗಳಿದ ಜಗ್ಗಿ ವಾಸುದೇವ್ ಅಪ್ಪಿ ತಪ್ಪಿಯೂ ಡಿಕೆ ಶಿವಕುಮಾರ್ ಅವರ ಬಗ್ಗೆ ಚಕಾರ ಎತ್ತಲಿಲ್ಲ ತಮ್ಮ ಮುಂದೆಯೇ ತಮ್ಮ ಪಕ್ಷದ ಸಿದ್ಧಾಂತ ಮತ್ತು ನಾಯಕತ್ವದ ಬಗ್ಗೆ ವ್ಯಾಪಕ ಟೀಕೆ ಮಾಡಿದರೂ ಮೌನವಾಗಿ ಕೇಳುತ್ತಾ ಜಾಗರಣೆ ಮಾಡಿದ ಡಿಕೆ ಶಿವಕುಮಾರ್ ಅವರ ನಡೆ ಇದೀಗ ಎಲ್ಲೆಡೆ ಆಶ್ಚರ್ಯ ಮೂಡಿಸಿದೆ.

    ಉಗ್ರ ಕರ್ನಾಟಕ ಕಾಂಗ್ರೆಸ್ ತಮಿಳುನಾಡು ಧಾರ್ಮಿಕ ನರೇಂದ್ರ ಮೋದಿ ಬಿಜೆಪಿ ರಾಜಕೀಯ ರಾಜ್ಯಪಾಲ ಸದ್ಗುರು ಸರ್ಕಾರ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಕುಮಾರಸ್ವಾಮಿ ಗೆ ಖೆಡ್ಡಾ
    Next Article ಚಲಿಸುತ್ತಿರುವ ಬೈಕ್ ಮೇಲೆ ಸರಸ
    vartha chakra
    • Website

    Related Posts

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    ಮೇ 31, 2025

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    ಮೇ 30, 2025

    Honey trap ಪ್ರಕರಣ ಏನಾಯ್ತು ಗೊತ್ತಾ ?

    ಮೇ 30, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    Honey trap ಪ್ರಕರಣ ಏನಾಯ್ತು ಗೊತ್ತಾ ?

    ಜನಾರ್ದನ ರೆಡ್ಡಿ ಕೇಸ್ ವಿಚಾರಣೆಗೆ ಜಡ್ಜ್ ಯಾರೂ ರೆಡಿ ಇಲ್ಲ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • damski_komplekti_rbMa ರಲ್ಲಿ ಬನಶಂಕರಿ ಠಾಣೆಯಲ್ಲಿ ಉದಯನಿಧಿ ವಿರುದ್ಧ ಪ್ರಕರಣ | Udayanidhi Stalin
    • damski_komplekti_lcMa ರಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ವಿನೋದ್ ತಾವ್ಡೆ ನೇಮಕ ಸಾಧ್ಯತೆ.
    • vapedal ರಲ್ಲಿ ಶುರುವಾಯಿತು ರಾಜ್ಯಪಾಲರು ಮತ್ತು ಸರ್ಕಾರದ ಸಂಘರ್ಷ
    Latest Kannada News

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    ಮೇ 31, 2025

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    ಮೇ 30, 2025

    Honey trap ಪ್ರಕರಣ ಏನಾಯ್ತು ಗೊತ್ತಾ ?

    ಮೇ 30, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಚಿವ ಖಂಡ್ರೆ ಮನೆ ಬಳಿಯೇ ಕಾರ್ ಗಾಜು ಒಡೆದು 2 ಲಕ್ಷ ಕಳವು!
    Subscribe