Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದಕ್ಷ ಪೊಲೀಸ್ ಅಧಿಕಾರಿಯಾಗಿದ್ದ ಗರುಡಾಚಾರ್ ಅಸ್ತಂಗತ
    Viral

    ದಕ್ಷ ಪೊಲೀಸ್ ಅಧಿಕಾರಿಯಾಗಿದ್ದ ಗರುಡಾಚಾರ್ ಅಸ್ತಂಗತ

    vartha chakraBy vartha chakraಮಾರ್ಚ್ 28, 20254 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಮಾ.28-
    ಮಹಾ ನಗರ ಬೆಂಗಳೂರಿನ ಸಂಚಾರ ದಟ್ಟಣೆ ಕಡಿಮೆ ಮಾಡುವ ದೃಷ್ಟಿಯಿಂದ ಟ್ರಾಫಿಕ್ ಸಿಗ್ನಲ್
    ಪರಿಚಯಿಸುವ ಮೂಲಕ ರಾಜ್ಯದ ಜನರ ಗಮನ ಸೆಳೆದಿದ್ದ ನಿವೃತ್ತ ಪೊಲೀಸ್ ಅಧಿಕಾರಿ ಬಿ.ಎನ್. ಗರುಡಾಚಾರ್ ನಿಧನ ಹೊಂದಿದ್ದಾರೆ.
    ಪೊಲೀಸ್ ಇಲಾಖೆಯಲ್ಲಿ ಎಸ್ ಪಿ ಯಿಂದ ಹಿಡಿದ ರಾಜ್ಯ ಪೊಲೀಸ್ ಮುಖ್ಯಸ್ಥರವರೆಗೆ ಸುದೀರ್ಘ ಸೇವೆ ಸಲ್ಲಿಸಿದ ದಕ್ಷತೆ ಪ್ರಾಮಾಣಿಕತೆಗೆ ಹೆಸರಾಗಿದ್ದ ಗರುಡಾಚಾರ್ ಅವರಿಗೆ 96 ವರ್ಷ ವಯಸ್ಸಾಗಿತ್ತು.
    ಬಸವನಗುಡಿಯ ಮನೆಯಲ್ಲಿ ಮುಂಜಾನೆ 3ರ ವೇಳೆ ವಯೋ ಸಹಜ ಸಾವು ಕಂಡಿರುವ ಗರುಡಾಚಾರ್ ಅಂತ್ಯಕ್ರಿಯೆಯು ನಾಳೆ ಸಂಜೆ 4 ಗಂಟೆಗೆ ವಿಲ್ಸನ್ ಗಾರ್ಡನ್ ಚಿತಾಗಾರದಲ್ಲಿ ನೆರವೇರಿಸಲು ಕುಟುಂಬ ವರ್ಗದವರು ತೀರ್ಮಾನಿಸಿದ್ದಾರೆ.
    ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬಿಂಡಿಗನವಿಲೆಯ ಕೃಷಿ ಕುಟುಂಬದಲ್ಲಿ 1929ರಲ್ಲಿ ಹುಟ್ಟಿದ ಬಿ.ಎನ್. ಗರುಡಾಚಾರ್, ಬಾಲ್ಯದಿಂದಲೂ ಅತ್ಯಂತ ಕಷ್ಟದಲ್ಲಿಯೇ ಜೀವನ ಸಾಗಿಸಿದರು ಹಳ್ಳಿಯ ಕೂಲಿ ಮಠದಲ್ಲಿ ವಿದ್ಯಾಭ್ಯಾಸ ಆರಂಭಿಸಿದ ಬಾಲಕ ಗರುಡಾಚಾರ್, ಗೊರೂರು, ಹಾಸನ, ಮೈಸೂರುಗಳಲ್ಲಿ ಅಲೆದಾಡಿ, ಅವರಿವರ ಮನೆಯಲ್ಲಿ ಆಶ್ರಯ ಪಡೆದು, ವಾರಾನ್ನ ಉಂಡು ಎಂ.ಎ. ಸ್ನಾತಕೋತ್ತರ ಪದವಿ ಪಡೆದರು.
    ಮೊದಲಿಗೆ ಸರ್ವೇಯರ್, ನಂತರ ಅಬಕಾರಿ ಇನ್ಸ್‌ಪೆಕ್ಟರ್ ಕೆಲಸಕ್ಕೆ ಸೇರಿ 1953ರಲ್ಲಿ ಐಪಿಎಸ್ ಪಾಸ್ ಮಾಡಿ  ಮೊದಲಿಗರೆನಿಸಿಕೊಂಡು ತಿರುವನ್ವೇಲಿಯಲ್ಲಿ ಅಸಿಸ್ಟೆಂಟ್ ಪೊಲೀಸ್ ಕಮಿಷನರ್ ಹುದ್ದೆ ಅಲಂಕರಿಸಿದರು. ನಂತರ ರಾಜ್ಯದ ಸೇವೆಗೆ ಬಂದ ಗುರುಡಾಚಾರ್‌ಗೆ, ಬಿಂಡಿಗನವಿಲೆಯ ಬಡತನ, ಹಸಿವು, ಅವಮಾನ, ಹಿಂಜರಿಕೆ, ಮುಗ್ಧತೆ, ಪ್ರಾಮಾಣಿಕತೆ ಎಲ್ಲವೂ ಬೆನ್ನಿಗಿದ್ದವು. ಅವುಗಳ ಅಗಾಧ ಅನುಭವ ಅವರನ್ನು ಸಮಾಜದಲ್ಲಿ ಉನ್ನತ ಸ್ಥಾನಕ್ಕೇರುವಲ್ಲಿ ಪ್ರಶಸ್ತಿ, ಪುರಸ್ಕಾರ, ಪ್ರಶಂಸೆ ಪಡೆಯುವಲ್ಲಿ ಉದ್ದಕ್ಕೂ ಸಹಕರಿಸಿದ್ದವು.
    ಪೊಲೀಸ್ ವೃತ್ತಿಯಲ್ಲಿ ಶಿಸ್ತು ಮತ್ತು ದಕ್ಷತೆಯಿಂದ ಕಾರ್ಯ ನಿರ್ವಹಿಸಿದ ಗರುಡಾಚಾರ್ ಬಹಳ ಬೇಗ ಉನ್ನತ ಸ್ಥಾನಗಳನ್ನು ಅಲಂಕರಿಸಿ, ಅಧಿಕಾರಸ್ಥ ರಾಜಕಾರಣಿಗಳ ಕಣ್ಣಿಗೆ ಬಿದ್ದಿದ್ದರು. ಕೊಪ್ಪಳ, ಹುಮ್ನಾಬಾದ್, ತುಮಕೂರು, ಬಳ್ಳಾರಿ, ಬೆಂಗಳೂರು ಜಿಲ್ಲಾ ಎಸ್ಪಿಯಾಗಿ ಉತ್ತಮ ಸೇವೆ ಸಲ್ಲಿಸಿ ಹೆಸರಾಗಿದ್ದರು.
    ಬಿ.ಎನ್ ಗರುಡಾಚಾರ್ ಅವರು 1963ರಲ್ಲಿ  ನಗರದ ಸಂಚಾರ ಪೊಲೀಸ್ ಉಪ ಆಯುಕ್ತರಾಗಿದ್ದರು, ಆ ಸಮಯದಲ್ಲಿ ಕಾರ್ಪೊರೇಷನ್ ವೃತ್ತದಲ್ಲಿ ನಗರದ ಮೊದಲ ಟ್ರಾಫಿಕ್ ಸಿಗ್ನಲ್ ಪ್ರಾರಂಭಿಸಿದ್ದರು. ಈ ಐತಿಹಾಸಿಕ ಘಟನೆಯ ಸವಿನೆನಪಿಗಾಗಿ, ಈ ಘಟನೆಯನ್ನು ಹೆಸರಿಸುವ ಕಲ್ಲನ್ನು 2021ರ ಮಾರ್ಚ್ ನಲ್ಲಿ ಖುದ್ದು ಗರುಡಾಚಾರ್ ಅವರೇ ಅನಾವರಣಗೊಳಿಸಿದರು.
    ಖಡಕ್ ಅಧಿಕಾರಿ ಎಂದೇ ಹೆಸರು ಪಡೆದ ಗರುಡಾಚಾರ್ ವೀರೇಂದ್ರ ಪಾಟೀಲ್, ದೇವರಾಜ ಅರಸು, ಗುಂಡೂರಾವ್, ಹೆಗಡೆಯವರೊಂದಿಗೆ ನಿಕಟಸಂಪರ್ಕವನ್ನಿಟ್ಟುಕೊಂಡಿದ್ದರು.
    1975ರ ತುರ್ತು ಪರಿಸ್ಥಿತಿಯಲ್ಲಿ ಇಂಟಲಿಜೆನ್ಸ್ ಐಜಿಯಾಗಿ, ರಾಷ್ಟ್ರಮಟ್ಟದ ರಾಜಕೀಯ ನಾಯಕರನ್ನು ಬಂಧಿಸಿ, ಜೈಲಿಗೆ ಹಾಕುವ ಮೂಲಕ ರಾಷ್ಟ್ರವ್ಯಾಪಿ ಸುದ್ದಿಯಾಗಿದ್ದರು.
    ದೇವರಾಜ ಅರಸರನ್ನು 1962ರಿಂದ ಬಲ್ಲವರಾಗಿದ್ದು, ಅವರು ಮುಖ್ಯಮಂತ್ರಿಯಾಗಿದ್ದಾಗ, ನಗರ ಪೊಲೀಸ್ ಕಮಿಷನರ್ ಆಗಿ ನೇಮಕಗೊಂಡು, ನಾಲ್ಕು ವರ್ಷಗಳ ಕಾಲ ಕಮಿಷನರ್ ಹುದ್ದೆಯಲ್ಲಿದ್ದು, ಪ್ರತಿದಿನ ಅರಸು ಅವರೊಂದಿಗೆ ಮುಖಾಮುಖಿಯಾಗುತ್ತಿದ್ದರು.
    ನಗರ ಪೊಲೀಸ್ ಕಮಿಷನರ್ ಆಗಿ (4 ವರ್ಷ 2 ತಿಂಗಳು), ಪೊಲೀಸ್ ಡಿಜಿ/ಐಜಿಪಿಯಾಗಿ (3 ವರ್ಷ 8 ತಿಂಗಳು) ಸೇವೆ ಸಲ್ಲಿಸಿದ ಕೀರ್ತಿ ಗರುಡಾಚಾರ್ ಅವರಿಗೆ ಸಲ್ಲುತ್ತದೆ.
    ಪೊಲೀಸ್ ಇಲಾಖೆಯಲ್ಲಿ ಸುದೀರ್ಘವಾಗಿ ಸೇವೆ ಸಲ್ಲಿಸಿದ ಇವರ ದಕ್ಷತೆ ಮತ್ತು ಪ್ರಾಮಾಣಿಕತೆಗೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ವಿವಿಧ ಪುರಸ್ಕಾರಗಳನ್ನು ನೀಡಿ ಗೌರವಿಸಿದೆ.
    90ರ ಹರೆಯದಲ್ಲೂ ಗುರುಡಾಚಾರ್, ಪುತ್ರ ಶಾಸಕ ಉದಯ್ ಗರುಡಾಚಾರ್ ಅವರ ಪ್ರತಿಷ್ಠಿತ ಗರುಡಾ ಮಾಲ್‌ನಲ್ಲಿ, ಏಳನೆ ಮಹಡಿಯಲ್ಲಿ ಯುವಕರನ್ನೂ ನಾಚಿಸುವ ಲವಲವಿಕೆಯಿಂದ ಕಾರ್ಯ ನಿರ್ವಹಿಸುತ್ತಿದ್ದರು.

    ತುಮಕೂರು ಬೆಂಗಳೂರು ಮೈ ಮೈಸೂರು ರಾಜಕೀಯ ವಿದ್ಯಾ ಸರ್ಕಾರ ಸುದ್ದಿ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಸಿಕ್ಕಿಬಿದ್ದ ಚಿನ್ನದ ವ್ಯಾಪಾರಿ
    Next Article ಶಾಸಕನ ಹತ್ಯೆಗೆ 70 ಲಕ್ಷ ಸುಫಾರಿ
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    4 ಪ್ರತಿಕ್ರಿಯೆಗಳು

    1. hotl4 on ಜೂನ್ 8, 2025 12:03 ಫೂರ್ವಾಹ್ನ

      buy generic clomiphene no prescription acquista clomid online cost generic clomid without a prescription where can i buy generic clomid without dr prescription can i get clomid online clomid tablets uses in urdu where can i buy clomiphene without prescription

      Reply
    2. will flagyl treat a yeast infection on ಜೂನ್ 11, 2025 6:26 ಅಪರಾಹ್ನ

      This is the gentle of literature I rightly appreciate.

      Reply
    3. EdwardNic on ಜೂನ್ 16, 2025 9:57 ಅಪರಾಹ್ನ

      ¡Saludos, entusiastas del riesgo !
      Casino online extranjero con verificaciГіn simple – https://www.casinosextranjerosenespana.es/# casino online extranjero
      ¡Que vivas increíbles giros exitosos !

      Reply
    4. 97rds on ಜೂನ್ 19, 2025 5:39 ಫೂರ್ವಾಹ್ನ

      buy inderal 10mg online – methotrexate medication order methotrexate 10mg online cheap

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • rtzox ರಲ್ಲಿ ಆಟೋ ಚಾಲಕ ಅರೆಸ್ಟ್ ಯಾಕೆ ಗೊತ್ತಾ
    • Jeremyinfet ರಲ್ಲಿ ಇನ್ನು ಮುಂದೆ ಜಾಲತಾಣ Koo ಇರುವುದಿಲ್ಲ.
    • w7yev ರಲ್ಲಿ ತೇಜಸ್ವಿ ಸೂರ್ಯ ಯಡವಟ್ಟು ಮಾಡಿಕೊಂಡ್ರಾ? | Tejasvi Surya
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe