Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದೋಸ್ತಿಗಳ ವಿರುದ್ಧ ಕುಮಾರಣ್ಣ ಗರಂ.
    Trending

    ದೋಸ್ತಿಗಳ ವಿರುದ್ಧ ಕುಮಾರಣ್ಣ ಗರಂ.

    vartha chakraBy vartha chakraಜುಲೈ 31, 202432 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜು.31:
    ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ಮತ್ತು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಕರ್ಮಕಾಂಡದ ವಿರುದ್ಧ ಜನಾಂದೋಲನಕ್ಕೆ ಬೆಂಗಳೂರಿನಿಂದ ಮೈಸೂರಿಗೆ‌ ಪಾದಯಾತ್ರೆ ನಡೆಸಲು ತೀರ್ಮಾನಿಸಿರುವ ಬೆನ್ನಲ್ಲೇ ಬಿಜೆಪಿ ಮತ್ತು ಜೆಡಿಎಸ್ ನಡುವಿನ ಬಿಕ್ಕಟ್ಟು ಬಹಿರಂಗಗೊಂಡಿದೆ.
    ರಾಜ್ಯ ಬಿಜೆಪಿ ನಾಯಕರ ಕಾರ್ಯವೈಖರಿ ಬಗ್ಗೆ ಆರಂಭದಿಂದಲೂ ಅಸಮಾಧಾನ ಹೊಂದಿರುವ ಕೇಂದ್ರ ಮಂತ್ರಿ ಕುಮಾರಸ್ವಾಮಿ ಇದೀಗ ರಾಜ್ಯ ನಾಯಕರ ಕಾರ್ಯ ವೈಖರಿ ಬಗ್ಗೆ ಬಹಿರಂಗವಾಗಿಯೇ ಆಕ್ರೋಶ ಹೊರಹಾಕಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು
    ಹಾಸನದ ಬೀದಿಯಲ್ಲಿ ಪೆನ್‌ಡ್ರೈವ್‌ ಹಂಚಲು ಯಾರು ಕಾರಣ. ಅಂಥವರನ್ನು ಜೊತೆಯಲ್ಲಿ ಕೂರಿಸಿಕೊಂಡು ನಮನ್ನು ಸಭೆಗೆ ಕರೆಯುತ್ತಾರೆ. ನಮ ಕುಟುಂಬಕ್ಕೆ ವಿಷ ಹಾಕಿದವರನ್ನು ಸಭೆಗೆ ಕೂರಿಸಿಕೊಳ್ಳುತ್ತಾರೆ ಎಂದು ರಾಜ್ಯ ಬಿಜೆಪಿ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
    ಬಿಜೆಪಿಯವರು ಪಾದಯಾತ್ರೆ ಮಾಡಬೇಕೆಂಬ ನಿರ್ಧಾರ ಮಾಡಿದ್ದಾರೆ. ನಮಗೆ ಮಾಹಿತಿಗಾಗಿ ಹೇಳಿದ್ದಾರೆ ಅಷ್ಟೇ. ಪಾದಯಾತ್ರೆ ವಿಚಾರದಲ್ಲಿ ಸರಿಯಾದ ರೀತಿ ನಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದ ಮೇಲೆ ನಾವು ಏಕೆ ಬೆಂಬಲ ಕೊಡಬೇಕೆಂದು ಪ್ರಶ್ನಿಸಿದರು.
    ಪಾದಯಾತ್ರೆ ಕಾರ್ಯಕ್ರಮದ ಮುಖ್ಯಸ್ಥರಾಗಿ ಮಾಜಿ ಶಾಸಕ ಪ್ರೀತಂ ಗೌಡರನ್ನು ಬಿಂಬಿಸಲಾಗುತ್ತಿದೆ. ಆ ಪ್ರೀತಂಗೌಡ ಯಾರು? ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಕುಟುಂಬ ಸರ್ವನಾಶ ಮಾಡಲು ಹೊರಟವರನ್ನು ಸಭೆಗೆ ಕರೆದು ಕೂರಿಸುತ್ತಾರೆ. ನನ್ನನ್ನು ಆಹ್ವಾನಿಸುತ್ತಾರೆ. ನನಗೂ ಸಹಿಸಿಕೊಳ್ಳಲು ಇತಿಮಿತಿ ಇದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
    ಬೆಂಗಳೂರಿನಿಂದ ಮೈಸೂರಿನವರೆಗೆ ನಮ ಶಕ್ತಿ ಪ್ರಬಲವಾಗಿದೆ. ರಾಜಕಾರಣವೇ ಬೇರೆ, ಚುನಾವಣೆ ಬಂದಾಗ ಒಟ್ಟಿಗೆ ಹೋಗುವುದು ಬೇರೆ. ಆದರೆ ಇಂತಹ ಹೋರಾಟದ ವಿಚಾರದಲ್ಲಿ ವಿಶ್ವಾಸಕ್ಕೆ ಪಡೆಯದಿರುವುದು ಮನಸ್ಸಿಗೆ ತುಂಬ ನೋವಾಗಿದೆ
    ಬಿಜೆಪಿ ನಾಯಕರು ತೀರ್ಮಾನ ತೆಗೆದುಕೊಂಡು ಹೋರಾಟ ಮಾಡುತ್ತಿದ್ದಾರೆ. ಆದರೆ ನಾವು ಪಾದಯಾತ್ರೆಗೆ ಸೂಕ್ತ ಸಂದರ್ಭವಲ್ಲ ಎಂದು ಹಿಂದೆ ಸರಿದಿದ್ದೇವೆ. ನಮಗೆ ಜನರ ಸಮಸ್ಯೆ ಬಗೆಹರಿಸುವುದು ಮುಖ್ಯ ಎಂದು ಹೇಳಿದರು
    ರಾಜ್ಯದಲ್ಲಿ ಅತಿವೃಷ್ಟಿ, ಪ್ರವಾಹದಿಂದ ಜನರು ತತ್ತರಿಸಿ ಹೋಗಿದ್ದಾರೆ. ಒಂದು ಕುಟುಂಬವನ್ನು ಮುಂದಿಟ್ಟುಕೊಂಡು ಪಾದಯಾತ್ರೆ ಮಾಡುವುದು ಬೇಡ. ಈ ಸಂದರ್ಭದಲ್ಲಿ ಜನರ ನೋವಿಗೆ ಅವರ ಭಾವನೆಗಳಿಗೆ ಸ್ಪಂದಿಸುವ ಕೆಲಸವಾಗಬೇಕು. ಕೇವಲ ರಾಜಕೀಯವೇ ಮುಖ್ಯವಲ್ಲ.ಉತ್ತರ ಕರ್ನಾಟಕದ ನೂರಾರು ಗ್ರಾಮಗಳು ಜಲಾವೃತ್ತವಾಗಿದೆ. ಹಲವು ಕುಟುಂಬಗಳು ಬೀದಿಗೆ ಬಂದಿವೆ. ಇಂತಹ ಸಮಯದಲ್ಲಿ ಪಾದಯಾತ್ರೆ ಸೂಕ್ತವಲ್ಲ. ಹೀಗಾಗಿ ನಿನ್ನೆ ಕೋರ್‌ ಕಮಿಟಿ ಸಭೆಯಲ್ಲಿ ಪಾದಯಾತ್ರೆಯಲ್ಲಿ ಭಾಗಿಯಾಗದಿರಲು ನಿರ್ಧಾರ ತೆಗೆದುಕೊಂಡಿದ್ದಾರೆ‌ ಎಂದು ವಿವರಿಸಿದರು.

    Bangalore BJP BJP-JDS Government JDS Karnataka News Politics Trending Varthachakra ಕಾನೂನು ಚುನಾವಣೆ ಜೆಡಿಎಸ್ ದೇವೇಗೌಡ ನ್ಯಾಯ ಮೈಸೂರು ರಾಜಕೀಯ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleವಯನಾಡ್ ಗೆ ತೆರಳಿದ ಸಂತೋಷ್ ಲಾಡ್.
    Next Article ವಿಜಯೇಂದ್ರ ಕಿವಿ ಹಿಂಡಿದ ಅಮಿತ್ ಶಾ.
    vartha chakra
    • Website

    Related Posts

    ಎಚ್ಚೆತ್ತ ರಾಜ್ಯ ಸರ್ಕಾರ

    ಡಿಸೆಂಬರ್ 12, 2025

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    ಡಿಸೆಂಬರ್ 12, 2025

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    ಡಿಸೆಂಬರ್ 12, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಚ್ಚೆತ್ತ ರಾಜ್ಯ ಸರ್ಕಾರ

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    ಜಗತ್ತಿನ ಅತಿ ದೊಡ್ಡ ರಾಷ್ಟ್ರಧ್ವಜ ಅನಾವರಣ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RichardMiz ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • kypit kyrsovyu_vqPi ರಲ್ಲಿ ರೇಣುಕಾಚಾರ್ಯ ಅವರಿಗೆ ಬೇಸರವಾಗಿದೆಯಂತೆ | MP Renukacharya
    • QThomasAlkargo ರಲ್ಲಿ ಸಿಎಂ ವಿರುದ್ಧ ರಾಜ್ಯಪಾಲರ ಸಮರ.
    Latest Kannada News

    ಎಚ್ಚೆತ್ತ ರಾಜ್ಯ ಸರ್ಕಾರ

    ಡಿಸೆಂಬರ್ 12, 2025

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    ಡಿಸೆಂಬರ್ 12, 2025

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    ಡಿಸೆಂಬರ್ 12, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ ವಿಮಾನಯಾನ ಬಳಕೆಗೆ 47 ಕೋಟಿ ಖರ್ಚು #varthachakra #siddaramaiah #helicopter #airtravel #costs #news
    Subscribe