Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಧರ್ಮಸ್ಥಳದಲ್ಲಿ ಎರಡು ಅಸ್ತಿ ಪಂಜರ ಪತ್ತೆ !
    ಸುದ್ದಿ

    ಧರ್ಮಸ್ಥಳದಲ್ಲಿ ಎರಡು ಅಸ್ತಿ ಪಂಜರ ಪತ್ತೆ !

    vartha chakraBy vartha chakraಜುಲೈ 31, 2025ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಮಂಗಳೂರು,ಜು.31-ಧರ್ಮಸ್ಥಳದ ಅಸಹಜ ಸಾವುಗಳ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳಿಗೆ ದೂರುದಾರ ಗುರುತಿಸಿದ್ದ 6ನೇ ಪಾಯಿಂಟ್‌ನಲ್ಲಿ ಎರಡು ಅಸ್ಥಿಪಂಜರಗಳು ಪತ್ತೆಯಾಗಿದೆ.
    ಕಳೆದ ಮೂರು ದಿನಗಳಿಂದ ಶವಗಳ ಪತ್ತೆಗೆ ಅಗೆಯುವ ಕಾರ್ಯ ನಡೆಯುತ್ತಿದ್ದು,ನಿನ್ನೆ ಸಂಜೆಯವರೆಗೆ ಯಾವುದೇ ಮೃತದೇಹದ ಗುರುತು ಪತ್ತೆಯಾಗಿರಲಿಲ್ಲ.
    ಆದರೆ ದೂರುದಾರ ಗುರುತಿಸಿದ ಸ್ಥಳಗಳ 6ನೇ ಪಾಯಿಂಟ್‌ನಲ್ಲಿ 15 ಕಾರ್ಮಿಕರಿಂದ ಉತ್ಖನನ ನಡೆಯುತ್ತಿದ್ದು, ಎರಡು ಅಸ್ಥಿಪಂಜರಗಳು ಪತ್ತೆಯಾಗಿದೆ.
    ಅಸ್ಥಿಪಂಜರದ ದೇಹದ ಪೂರ್ತಿ ಭಾಗಗಳು ಸಿಕ್ಕಿಲ್ಲ, ಕೆಲವು ಭಾಗಗಳು ಮಾತ್ರ ಸಿಕ್ಕಿದ್ದು, ಇನ್ನೂ ಆಳಕ್ಕೆ ತೆಗೆದು ಹುಡುಕಾಟ ನಡೆಸಲಾಗುತ್ತಿದೆ. ಇನ್ನೂ ಇದರ ಬಳಿಕ 7 ಹಾಗೂ 8ನೇ ಪಾಯಿಂಟ್‌ನಲ್ಲಿ ಉತ್ಖನನ ಕಾರ್ಯ ನಡೆಸುವ ಸಾಧ್ಯತೆಗಳಿವೆ. ದೂರುದಾರ ನಿನ್ನೆ ಗುರುತಿಸಿರುವ ಪಾಯಿಂಟ್ ನಂಬರ್ 2 ರಿಂದ 5ರವರೆಗೆ 4 ರಿಂದ 6 ಅಡಿ ಮಣ್ಣು ಅಗೆಯಲಾಗಿದೆ. ಈ ವೇಳೆ ಶವಗಳನ್ನು ಹೂತಿರುವ ಯಾವುದೇ ಕುರುಹುಗಳು ಪತ್ತೆಯಾಗಿರಲಿಲ್ಲ.
    ಇನ್ನು ದೂರುದಾರ ಗುರುತಿಸಿರುವ ಪಾಯಿಂಟ್ ನಂಬರ್ 13ರತ್ತ ಎಲ್ಲರ ಚಿತ್ತ ನೆಟ್ಟಿದೆ. ಅಲ್ಲಿ ಹಲವಾರು ಶವಗಳನ್ನು ಹೂತಿರುವುದಾಗಿ ದೂರುದಾರ ಹೇಳಿದ್ದಾರೆ. ಈ ಪಾಯಿಂಟ್ ನೇತ್ರಾವತಿ ಸ್ನಾನಘಟ್ಟದ ಸಮೀಪದ ಬಯಲಿನಲ್ಲಿದ್ದು, ಇಲ್ಲಿ ಇಂದು ಶೋಧ ನಡೆಸಲಾಗುತ್ತಿದೆ.
    ಆರನೇ ಪಾಯಿಂಟ್‌ನಲ್ಲಿ ಶೋಧ ಕಾರ್ಯ ಮುಂದುವರೆದಿದೆ. ಕಾರ್ಮಿಕರು ಮತ್ತಷ್ಟು ಮೂಳೆಗಳನ್ನು ಹುಡುಕಲು ಮಣ್ಣು ಹೊರಗೆ ಹಾಕುತ್ತಿದ್ದಾರೆ. ಕಾರ್ಮಿಕರು ಈಗಾಗಲೇ ನಾಲ್ಕು ಅಡಿ ಅಗೆದಿದ್ದಾರೆ. ಗುಂಡಿಯ ಮಣ್ಣನ್ನು ಫಾರೆನ್ಸಿಕ್‌ ಪರಿಶೀಲನೆ ಮಾಡಿದ್ದಾರೆ.
    ಪತ್ತೆಯಾಗಿರುವ ಅಸ್ಥಿಪಂಜರಗಳನ್ನು ಸಂಗ್ರಹಿಸಿ ಪರಿಶೀಲನೆ ನಡೆಸಿದ ಬಳಿಕ ಅವುಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯದ ಪರೀಕ್ಷೆಗೆ ಕಳುಹಿಸಲು ಎಸ್​ಐಟಿ ಅಧಿಕಾರಿಗಳು ಸಿದ್ಧತೆ ಕೈಗೊಂಡಿದ್ದಾರೆ. ಅಸ್ಥಿಪಂಜರ ದೊರೆತ ಸ್ಥಳಕ್ಕೆ ಎಸ್‌ ಐಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಆಗಮಿಸಿ ಮಾಹಿತಿಯನ್ನು ಪಡೆದಿದ್ದಾರೆ.
    ಧರ್ಮಸ್ಥಳದ ನೇತ್ರಾವತಿ ಘಾಟ್ ಬಳಿಯ ಕಾಡುಪ್ರದೇಶದಲ್ಲಿ 1998 ರಿಂದ 2014ರವರೆಗೆ ನೂರಾರು ಮಹಿಳೆಯರು ಮತ್ತು ಮಕ್ಕಳ ಶವಗಳನ್ನು ಹೂತಿಟ್ಟಿದ್ದೇನೆ ಎಂದು ಸ್ವಚ್ಛತಾ ಕಾರ್ಮಿಕ ಅನಾಮಿ ವ್ಯಕ್ತಿ ಆರೋಪಿಸಿದ್ದ. ಈ ಶವಗಳು ಅತ್ಯಾಚಾರ ಮತ್ತು ಕೊಲೆಗೆ ಸಂಬಂಧಿಸಿದವು ಎಂದು ದೂರುದಾರ ತಿಳಿಸಿದ್ದು, ಈ ಆರೋಪದಿಂದ ರಾಜ್ಯಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿತ್ತು. ರಾಜ್ಯ ಸರ್ಕಾರವು ಜುಲೈ 19, 2025 ರಂದು ಆಂತರಿಕ ಭದ್ರತಾ ವಿಭಾಗದ ಡಿಜಿಪಿ ಡಾ. ಪ್ರಣವ್ ಮೊಹಂತಿ ನೇತೃತ್ವದಲ್ಲಿ ಎಸ್‌ಐಟಿಯನ್ನು ರಚಿಸಿತ್ತು

    ಕೊಲೆ ಧರ್ಮ ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?
    Next Article ಆಲ್ ಖೈದಾ ಲೇಡಿಯ ಭಯಾನಕ ನಂಟು.
    vartha chakra
    • Website

    Related Posts

    C.M.ಭಯೋತ್ಪಾದಕ ಕೃತ್ಯ ಎಂದ ಘಟನೆ ಯಾವುದು ಗೊತ್ತಾ ?

    ಆಗಷ್ಟ್ 1, 2025

    ಬೆಂಗಳೂರಿನ PUB ಮತ್ತು Bar ಗಳ‌ ಲೈಸೆನ್ಸ್ ರದ್ದಾಗಲಿದೆಯಾ.?

    ಆಗಷ್ಟ್ 1, 2025

    ಬೆಂಗಳೂರಿನಲ್ಲಿ ಅಡಗಿದ್ದ ಆಲ್ ಖೈದಾ ನಾಯಕಿ

    ಜುಲೈ 31, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    C.M.ಭಯೋತ್ಪಾದಕ ಕೃತ್ಯ ಎಂದ ಘಟನೆ ಯಾವುದು ಗೊತ್ತಾ ?

    ಬೆಂಗಳೂರಿನ PUB ಮತ್ತು Bar ಗಳ‌ ಲೈಸೆನ್ಸ್ ರದ್ದಾಗಲಿದೆಯಾ.?

    ಬೆಂಗಳೂರಿನಲ್ಲಿ ಅಡಗಿದ್ದ ಆಲ್ ಖೈದಾ ನಾಯಕಿ

    ಆಲ್ ಖೈದಾ ಲೇಡಿಯ ಭಯಾನಕ ನಂಟು.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RichardEndum ರಲ್ಲಿ ಕುಡಿದು ಮಾಡಿದ ರಂಪಾಟ.
    • JesseRek ರಲ್ಲಿ ಲೆಕ್ಕಾಚಾರದೊಂದಿಗೆ ಮುನುಗ್ಗುತ್ತಿರುವ CK ರಾಮಮೂರ್ತಿ | CK Ramamurthy
    • presskurs-411 ರಲ್ಲಿ ಹೆದರಿದ ತೇಜಸ್ವಿ ಸೂರ್ಯ..?
    Latest Kannada News

    C.M.ಭಯೋತ್ಪಾದಕ ಕೃತ್ಯ ಎಂದ ಘಟನೆ ಯಾವುದು ಗೊತ್ತಾ ?

    ಆಗಷ್ಟ್ 1, 2025

    ಬೆಂಗಳೂರಿನ PUB ಮತ್ತು Bar ಗಳ‌ ಲೈಸೆನ್ಸ್ ರದ್ದಾಗಲಿದೆಯಾ.?

    ಆಗಷ್ಟ್ 1, 2025

    ಬೆಂಗಳೂರಿನಲ್ಲಿ ಅಡಗಿದ್ದ ಆಲ್ ಖೈದಾ ನಾಯಕಿ

    ಜುಲೈ 31, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಇಂದಿರಾ ಹಿಂದಿಕ್ಕಿದ ಮೋದಿ #narendramodi #indiragandhipm #bjp #india #modi #amitshah #rahulgandhi
    Subscribe