Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಧರ್ಮಸ್ಥಳದಲ್ಲಿ ಎರಡು ಅಸ್ತಿ ಪಂಜರ ಪತ್ತೆ !
    ಸುದ್ದಿ

    ಧರ್ಮಸ್ಥಳದಲ್ಲಿ ಎರಡು ಅಸ್ತಿ ಪಂಜರ ಪತ್ತೆ !

    vartha chakraBy vartha chakraಜುಲೈ 31, 2025ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮಂಗಳೂರು,ಜು.31-ಧರ್ಮಸ್ಥಳದ ಅಸಹಜ ಸಾವುಗಳ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳಿಗೆ ದೂರುದಾರ ಗುರುತಿಸಿದ್ದ 6ನೇ ಪಾಯಿಂಟ್‌ನಲ್ಲಿ ಎರಡು ಅಸ್ಥಿಪಂಜರಗಳು ಪತ್ತೆಯಾಗಿದೆ.
    ಕಳೆದ ಮೂರು ದಿನಗಳಿಂದ ಶವಗಳ ಪತ್ತೆಗೆ ಅಗೆಯುವ ಕಾರ್ಯ ನಡೆಯುತ್ತಿದ್ದು,ನಿನ್ನೆ ಸಂಜೆಯವರೆಗೆ ಯಾವುದೇ ಮೃತದೇಹದ ಗುರುತು ಪತ್ತೆಯಾಗಿರಲಿಲ್ಲ.
    ಆದರೆ ದೂರುದಾರ ಗುರುತಿಸಿದ ಸ್ಥಳಗಳ 6ನೇ ಪಾಯಿಂಟ್‌ನಲ್ಲಿ 15 ಕಾರ್ಮಿಕರಿಂದ ಉತ್ಖನನ ನಡೆಯುತ್ತಿದ್ದು, ಎರಡು ಅಸ್ಥಿಪಂಜರಗಳು ಪತ್ತೆಯಾಗಿದೆ.
    ಅಸ್ಥಿಪಂಜರದ ದೇಹದ ಪೂರ್ತಿ ಭಾಗಗಳು ಸಿಕ್ಕಿಲ್ಲ, ಕೆಲವು ಭಾಗಗಳು ಮಾತ್ರ ಸಿಕ್ಕಿದ್ದು, ಇನ್ನೂ ಆಳಕ್ಕೆ ತೆಗೆದು ಹುಡುಕಾಟ ನಡೆಸಲಾಗುತ್ತಿದೆ. ಇನ್ನೂ ಇದರ ಬಳಿಕ 7 ಹಾಗೂ 8ನೇ ಪಾಯಿಂಟ್‌ನಲ್ಲಿ ಉತ್ಖನನ ಕಾರ್ಯ ನಡೆಸುವ ಸಾಧ್ಯತೆಗಳಿವೆ. ದೂರುದಾರ ನಿನ್ನೆ ಗುರುತಿಸಿರುವ ಪಾಯಿಂಟ್ ನಂಬರ್ 2 ರಿಂದ 5ರವರೆಗೆ 4 ರಿಂದ 6 ಅಡಿ ಮಣ್ಣು ಅಗೆಯಲಾಗಿದೆ. ಈ ವೇಳೆ ಶವಗಳನ್ನು ಹೂತಿರುವ ಯಾವುದೇ ಕುರುಹುಗಳು ಪತ್ತೆಯಾಗಿರಲಿಲ್ಲ.
    ಇನ್ನು ದೂರುದಾರ ಗುರುತಿಸಿರುವ ಪಾಯಿಂಟ್ ನಂಬರ್ 13ರತ್ತ ಎಲ್ಲರ ಚಿತ್ತ ನೆಟ್ಟಿದೆ. ಅಲ್ಲಿ ಹಲವಾರು ಶವಗಳನ್ನು ಹೂತಿರುವುದಾಗಿ ದೂರುದಾರ ಹೇಳಿದ್ದಾರೆ. ಈ ಪಾಯಿಂಟ್ ನೇತ್ರಾವತಿ ಸ್ನಾನಘಟ್ಟದ ಸಮೀಪದ ಬಯಲಿನಲ್ಲಿದ್ದು, ಇಲ್ಲಿ ಇಂದು ಶೋಧ ನಡೆಸಲಾಗುತ್ತಿದೆ.
    ಆರನೇ ಪಾಯಿಂಟ್‌ನಲ್ಲಿ ಶೋಧ ಕಾರ್ಯ ಮುಂದುವರೆದಿದೆ. ಕಾರ್ಮಿಕರು ಮತ್ತಷ್ಟು ಮೂಳೆಗಳನ್ನು ಹುಡುಕಲು ಮಣ್ಣು ಹೊರಗೆ ಹಾಕುತ್ತಿದ್ದಾರೆ. ಕಾರ್ಮಿಕರು ಈಗಾಗಲೇ ನಾಲ್ಕು ಅಡಿ ಅಗೆದಿದ್ದಾರೆ. ಗುಂಡಿಯ ಮಣ್ಣನ್ನು ಫಾರೆನ್ಸಿಕ್‌ ಪರಿಶೀಲನೆ ಮಾಡಿದ್ದಾರೆ.
    ಪತ್ತೆಯಾಗಿರುವ ಅಸ್ಥಿಪಂಜರಗಳನ್ನು ಸಂಗ್ರಹಿಸಿ ಪರಿಶೀಲನೆ ನಡೆಸಿದ ಬಳಿಕ ಅವುಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯದ ಪರೀಕ್ಷೆಗೆ ಕಳುಹಿಸಲು ಎಸ್​ಐಟಿ ಅಧಿಕಾರಿಗಳು ಸಿದ್ಧತೆ ಕೈಗೊಂಡಿದ್ದಾರೆ. ಅಸ್ಥಿಪಂಜರ ದೊರೆತ ಸ್ಥಳಕ್ಕೆ ಎಸ್‌ ಐಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಆಗಮಿಸಿ ಮಾಹಿತಿಯನ್ನು ಪಡೆದಿದ್ದಾರೆ.
    ಧರ್ಮಸ್ಥಳದ ನೇತ್ರಾವತಿ ಘಾಟ್ ಬಳಿಯ ಕಾಡುಪ್ರದೇಶದಲ್ಲಿ 1998 ರಿಂದ 2014ರವರೆಗೆ ನೂರಾರು ಮಹಿಳೆಯರು ಮತ್ತು ಮಕ್ಕಳ ಶವಗಳನ್ನು ಹೂತಿಟ್ಟಿದ್ದೇನೆ ಎಂದು ಸ್ವಚ್ಛತಾ ಕಾರ್ಮಿಕ ಅನಾಮಿ ವ್ಯಕ್ತಿ ಆರೋಪಿಸಿದ್ದ. ಈ ಶವಗಳು ಅತ್ಯಾಚಾರ ಮತ್ತು ಕೊಲೆಗೆ ಸಂಬಂಧಿಸಿದವು ಎಂದು ದೂರುದಾರ ತಿಳಿಸಿದ್ದು, ಈ ಆರೋಪದಿಂದ ರಾಜ್ಯಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿತ್ತು. ರಾಜ್ಯ ಸರ್ಕಾರವು ಜುಲೈ 19, 2025 ರಂದು ಆಂತರಿಕ ಭದ್ರತಾ ವಿಭಾಗದ ಡಿಜಿಪಿ ಡಾ. ಪ್ರಣವ್ ಮೊಹಂತಿ ನೇತೃತ್ವದಲ್ಲಿ ಎಸ್‌ಐಟಿಯನ್ನು ರಚಿಸಿತ್ತು

    Verbattle
    Verbattle
    Verbattle
    ಕೊಲೆ ಧರ್ಮ ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?
    Next Article ಆಲ್ ಖೈದಾ ಲೇಡಿಯ ಭಯಾನಕ ನಂಟು.
    vartha chakra
    • Website

    Related Posts

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಫೆಬ್ರವರಿ 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn ರಲ್ಲಿ ರಾಮೋತ್ಸವಕ್ಕೆ ಸಜ್ಜಾದ ಮುಸ್ಲಿಂ ಶಾಸಕ | Ramotsava
    • Tracymix ರಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿ ಹುಟ್ಟುಹಬ್ಬ.
    • LeonardReawn ರಲ್ಲಿ ಪರಪ್ಪನ ಅಗ್ರಹಾರದಲ್ಲಿ ಉಗ್ರ ಚಟುವಟಿಕೆ
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಫೆಬ್ರವರಿ 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಫೆಬ್ರವರಿ 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.