Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    Trending

    ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.

    vartha chakraBy vartha chakraಸೆಪ್ಟೆಂಬರ್ 15, 2025ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಸೆ.
    ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವು ಹಾಗೂ ಹೆಣಗಳ ಹೂತ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ(ಎಸ್ ಐಟಿ) ಧರ್ಮಸ್ಥಳ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮೃತದೇಹಗಳ ಅಂತ್ಯಕ್ರಿಯೆ ನಡೆಸಿರುವ ದಾಖಲೆಗಳತ್ತ ಗಮನ ಕೇಂದ್ರೀಕರಿಸಿ ತನಿಖೆ ತೀವ್ರಗೊಳಿಸಿದೆ.
    ಧರ್ಮಸ್ಥಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಶವಗಳ ಅಂತ್ಯಕ್ರಿಯೆಯಲ್ಲಿ ಅಕ್ರಮ ಎಸಗಲಾಗಿದೆ. ಹೆಣಗಳನ್ನು ಹೂತು ಹಾಕಲು ಫೋರ್ಜರಿ ದಾಖಲೆ ಸೃಷ್ಟಿಸಲಾಗಿದೆ ಎಂದು ಹೋರಾಟಗಾರ ಗಿರೀಶ್ ಮಟ್ಟಣ್ಣನವರ್ ಆರೋಪಿಸಿ,ಎಸ್ಐಟಿ ಕಚೇರಿಗೆ ದಾಖಲೆಗಳನ್ನೂ ಸಲ್ಲಿಸಿದ್ದರು.
    ಹೀಗಾಗಿ ಪಂಚಾಯತಿಯಲ್ಲಿರುವ ದಫನ್ ದಾಖಲೆಗಳ ಆಳವಾದ ಪರಿಶೀಲನೆಗೆ ಎಸ್ಐಟಿ ಮುಂದಾಗಿದೆ. ಪ್ರತಿನಿತ್ಯ ಧರ್ಮಸ್ಥಳ ಪಂಚಾಯತಿಯಿಂದ ದಾಖಲೆಗಳನ್ನು ತರಿಸಿಕೊಳ್ಳುತ್ತಿರುವ ಎಸ್ಐಟಿ, ಶವ ಹೂತು ಹಾಕಿದ ವಿವರ, ಯುಡಿಆರ್, ರಶೀದಿಗಳ ಮಾಹಿತಿ ಸಂಗ್ರಹ ಮಾಡುತ್ತಿದೆ.
    1987 ರಿಂದ 2025 ರವರೆಗಿನ ಎಲ್ಲಾ ದಾಖಲೆಗಳನ್ನು ಸಂಗ್ರಹಿಸಿರುವ ಎಸ್ಐಟಿ, ಮಟ್ಟಣ್ಣನವರ್ ಕೊಟ್ಟ ದಾಖಲೆ ಹಾಗೂ ಪಂಚಾಯತ್ ಮೂಲ ದಾಖಲೆಗಳ ಪರಿಶೀಲನೆ ಮಾಡುತ್ತಿದೆ. ಶವ ದಫನ್ ದಾಖಲೆಗಳಲ್ಲಿ ಸಹಿ ಹಾಕಿರುವ ವ್ಯಕ್ತಿಗಳಿಗೂ ವಿಚಾರಣೆ ಬಿಸಿ ತಟ್ಟಲು ಶುರುವಾಗಿದೆ. ಮಾಜಿ ಅಧ್ಯಕ್ಷರು, ಪಿಡಿಓ, ಸಿಬ್ಬಂದಿಗಳನ್ನು ಪ್ರತಿ ನಿತ್ಯ ವಿಚಾರಣೆಗೆ ಒಳಪಡಿಸಲಾಗುತ್ತಿದೆ. ಈ ಮೂಲಕ ಧರ್ಮಸ್ಥಳ ಬುರುಡೆ ಕೇಸ್ನ ಎಲ್ಲಾ ಆರೋಪಗಳಿಗೆ ಸ್ಪಷ್ಟತೆ ಕೊಡಲು ಎಸ್ಐಟಿ ಮುಂದಾಗಿದೆ.
    ಎಸ್ಐಟಿ ಶೋಧ:
    ಬುರುಡೆ ಪ್ರಕರಣ ಸಂಬಂಧ ಬಂಗ್ಲೆಗುಡ್ಡ ರಹಸ್ಯ ಬಯಲು ಮಾಡಲು ಎಸ್ಐಟಿ ಅಧಿಕಾರಿಗಳು ಪಣತೊಟ್ಟಿದ್ದು, ಗೋಪ್ಯವಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ನಿನ್ನೆ ಸಂಜೆ ವೇಳೆ ಮತ್ತೆ ಬಂಗ್ಲೆಗುಡ್ಡದಲ್ಲಿ ಎಸ್ಐಟಿ ಅಧಿಕಾರಿಗಳು ಹಿರಿಯ ಅಧಿಕಾರಿ‌ ಸೈಮನ್ ನೇತೃತ್ವದಲ್ಲಿ ಶೋಧ ಕಾರ್ಯ ನಡೆಯುತ್ತಿದ್ದು, ಸೌಜನ್ಯ ಮಾವ ವಿಠಲ ಗೌಡ ಹೇಳಿಕೆಯ ಸತ್ಯಾಸತ್ಯತೆ ತಿಳಿಯಲು ‌ಈ ಕ್ರಮ ಕೈಗೊಳ್ಳಲಾಗಿದೆ.
    ವಿಠಲ ಗೌಡ ಹೇಳಿದ್ದೇನು:
    ವಿಡಿಯೋ ಒಂದನ್ನು ಬಿಡುಗಡೆ ಮಾಡಿದ್ದ ವಿಠಲ ಗೌಡ, ಬಂಗ್ಲಗುಡ್ಡೆಗೆ ಎರಡು ಸಲ ಸ್ಥಳ ಮಹಜರಿಗೆ ನನ್ನನ್ನು ಕರೆದುಕೊಂಡು ಹೋಗಿದ್ದು, ಅಲ್ಲಿ ಮೂರು ಮನುಷ್ಯರ ಅಸ್ಥಿಪಂಜರಗಳು ಸಿಕ್ಕಿವೆ. ಹತ್ತಿರ ಹತ್ತಿರ ಹತ್ತು ಅಡಿಗಳ ಜಾಗದಲ್ಲಿ ಅವುಗಳು ಸಿಕ್ಕಿವೆ. ಎರಡನೇ ಬಾರಿಗೆ ಸ್ಥಳ ಮಹಜರಿಗೆ ಹೋದಾಗ ಹೆಣಗಳ ರಾಶಿ ಸಿಕ್ಕಿದೆ. ಕಣ್ಣಿಗೆ ಕಂಡದ್ದು 5 ಹೆಣಗಳು. ಸಣ್ಣ ಮಗುವಿ‌ನ ಎಲುಬು ಇರುವುದು ಗೋಚರ ಆಗತ್ತು ಎಂದು ಹೇಳಿಕೊಂಡಿದ್ದರು.
    ತಿಮರೋಡಿ ಮತ್ತೆ ದೂರು:
    ಈ ನಡುವೆ ಇವುಗಳೆಲ್ಲ ಅಸಹಜ ಸಾವುಗಳಾಗಿವೆ. ಹೀಗಾಗಿ ಇವುಗಳನ್ನುಕೊಲೆ ಪ್ರಕರಣಗಳಾಗಿ ಪರಿಗಣಿಸಿ ಎಫ್ಐಆರ್ ದಾಖಲಿಸುವಂತೆ ಮಹೇಶ್ ಶೆಟ್ಟಿ ತಿಮರೋಡಿ ಎಸ್ಐಟಿಗೆ ಮನವಿ ಮಾಡಿದ್ದಾರೆ. 2006ರಿಂದ 2010 ರವರೆಗೆ ಧರ್ಮಸ್ಥಳದ ವಸತಿ ಗೃಹಗಳಲ್ಲಿ ಅನೇಕ‌ ಸಂಶಯಾಸ್ಪದ ಸಾವುಗಳು ಸಂಭವಿಸಿವೆ. ಧರ್ಮಸ್ಥಳದ ಗಾಯತ್ರಿ, ಶರಾವತಿ, ವೈಶಾಲಿ ವಸತಿಗೃಹದಲ್ಲಿ ಈ ಸಾವುಗಳು ಸಂಭವಿಸಿವೆ. ಆದರೆ, ಅಪರಿಚಿತ ಶವಗಳನ್ನು ಬೇಕೆಂದೇ ಅನಾಥ ಶವಗಳೆಂದು ಘೋಷಿಸಲಾಗಿದೆ. ತಕ್ಷಣವೇ ಗ್ರಾಮ ಪಂಚಾಯತ್ ಮುಖಾಂತರ ಸಮಾಧಿ ಮಾಡಲಾಗಿದೆ. ಇವುಗಳು ಎಲ್ಲಾ ದೃಷ್ಟಿಯಿಂದ ಸಂಭಾವ್ಯ ಕೊಲೆ ಪ್ರಕರಣಗಳೆಂದು ಶಂಕೆ ಮೂಡುತ್ತದೆ ಎಂದು ತಿಮರೋಡಿ ನೀಡಿದ ದೂರಿನಲ್ಲಿ ಉಲ್ಲೇಖಿಸಲಾಗಿದೆ.
    ಅತಿಥಿ ಗೃಹದಲ್ಲಿ ವ್ಯಕ್ತಿಯ ಮಾಹಿತಿ, ದಾಖಲೆಗಳನ್ನು ಪಡೆದಿರುತ್ತಾರೆ‌. ಆದರೆ, ಅಥಿತಿಗಳ ವಿವರಗಳನ್ನು ಉದ್ದೇಶಪೂರ್ವಕವಾಗಿ ಮುಚ್ಚಿಡಲಾಗಿದೆ. ಅಥವಾ ದಾಖಲೆಗಳನ್ನು ನಾಶಪಡಿಸಿರುವ ಗಂಭೀರ ಅನುಮಾನವಿದೆ. ಹೀಗಾಗಿ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತನಿಖೆ ಮಾಡಬೇಕೆಂದು ತಿಮರೋಡಿ ‌ಮನವಿ ಮಾಡಿದ್ದಾರೆ. ದೂರು ಅರ್ಜಿಯಲ್ಲಿ ನಾಲ್ಕು ಪ್ರತ್ಯೇಕ ಯುಡಿಆರ್ ಪ್ರಕರಣಗಳ ಬಗ್ಗೆ ಉಲ್ಲೇಖಿಸಲಾಗಿದ್ದು, ಈ ಬಗ್ಗೆ ಆರ್ಟಿಐನಿಂದ ಪಡೆದ ದಾಖಲೆಗಳನ್ನು ಸಹ ಸಲ್ಲಿಕೆ ಮಾಡಲಾಗಿದೆ

    Bangalore crime Government Karnataka Trending Varthachakra ಅಪರಾಧ ಸುದ್ದಿ ಕರ್ನಾಟಕ ಕಾನೂನು ಕೊಲೆ ಧರ್ಮ ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleವಿರೇಂದ್ರ(ಪಪ್ಪಿ) ಮೋಸದಾಟ.
    Next Article ಜಗ್ಗಿ ವಾಸುದೇವ್ ಹೆಸರಲ್ಲಿ ಮೋಸದ ಬಲೆ.
    vartha chakra
    • Website

    Related Posts

    ಬಂಗ್ಲೆ ಗುಡ್ಡ ರಹಸ್ಯದ ಬೆನ್ನು ಹತ್ತಿದ ಪೊಲೀಸ್.

    ಸೆಪ್ಟೆಂಬರ್ 18, 2025

    ಕಾಮುಕ ಯೋಗಗುರು ಅರೆಸ್ಟ್.

    ಸೆಪ್ಟೆಂಬರ್ 18, 2025

    ಡಿ.ಕೆ. ಶಿವಕುಮಾರ್ ಕೊಟ್ಟ ಟಾರ್ಗೆಟ್.

    ಸೆಪ್ಟೆಂಬರ್ 18, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಂಗ್ಲೆ ಗುಡ್ಡ ರಹಸ್ಯದ ಬೆನ್ನು ಹತ್ತಿದ ಪೊಲೀಸ್.

    ಕಾಮುಕ ಯೋಗಗುರು ಅರೆಸ್ಟ್.

    ಡಿ.ಕೆ. ಶಿವಕುಮಾರ್ ಕೊಟ್ಟ ಟಾರ್ಗೆಟ್.

    ಇವರಿಗೆ ಬೆಂಗಳೂರು ಬೇಡವಂತೆ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • prague-drugs-151 ರಲ್ಲಿ ಅರಣ್ಯ ಇಲಾಖೆಗೆ ಸಾವಿರಾರು ಬಾಕಿ ಉಳಿಸಿಕೊಂಡ ಪ್ರತಿಷ್ಠಿತ ಕಂಪನಿಗಳು | Forest Dept
    • prague-drugs-4 ರಲ್ಲಿ ಕುಂಭಮೇಳದಲ್ಲಿ ಕಿನ್ನರ ಕಲರವ
    • prague-drugs-829 ರಲ್ಲಿ ಶಕ್ತಿ ಪ್ರದರ್ಶನಕ್ಕೆ ಸಜ್ಜಾದ ಈಶ್ವರಪ್ಪ.
    Latest Kannada News

    ಬಂಗ್ಲೆ ಗುಡ್ಡ ರಹಸ್ಯದ ಬೆನ್ನು ಹತ್ತಿದ ಪೊಲೀಸ್.

    ಸೆಪ್ಟೆಂಬರ್ 18, 2025

    ಕಾಮುಕ ಯೋಗಗುರು ಅರೆಸ್ಟ್.

    ಸೆಪ್ಟೆಂಬರ್ 18, 2025

    ಡಿ.ಕೆ. ಶಿವಕುಮಾರ್ ಕೊಟ್ಟ ಟಾರ್ಗೆಟ್.

    ಸೆಪ್ಟೆಂಬರ್ 18, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    9ನೇ ಕ್ಲಾಸ್ ವಿದ್ಯಾರ್ಥಿ ಬ್ಯಾಗಿನಲ್ಲಿ ಕಾಂಡೊಮ್, ಸಿಗರೇಟ್, ಆಲ್ಕೋಹಾಲ್ #varthachakra#medicalcheckup #parents
    Subscribe