Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಕ್ಸಲರು ಶರಣಾಗಲು ಸಿದ್ಧರಾಗಿದ್ದಾರೆ
    Viral

    ನಕ್ಸಲರು ಶರಣಾಗಲು ಸಿದ್ಧರಾಗಿದ್ದಾರೆ

    vartha chakraBy vartha chakraಜನವರಿ 7, 20251,216 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಚಿಕ್ಕಮಗಳೂರು: ಕರ್ನಾಟಕ ಸೇರಿದಂತೆ ಕೇರಳ, ಆಂಧ್ರಕ್ಕೆ ಬೇಕಾಗಿರುವ ಮೋಸ್ಟ್​ ವಾಂಟೆಡ್​​ ಎನಿಸಿರುವ ಆರು​ ಮಂದಿ ನಕ್ಸಲರು ಜಿಲ್ಲಾಡಳಿತ ಮುಂದೆ ಶರಣಾಗತಿಗೆ ನಿರ್ಧರಿಸಿದ್ದಾರೆ.
    ಕರ್ನಾಟಕ ನಕ್ಸಲ್ ತುಂಗಾ ದಳದ ನಾಯಕಿ ಮುಂಡಗಾರು ಲತಾ, ಸುಂದರಿ, ವನಜಾಕ್ಷಿ, ದಕ್ಷಿಣ ಭಾರತದ ಮೋಸ್ಟ್ ವಾಂಟೆಡ್​​​ ನಕ್ಸಲ್ ಜೀಶ, ಆಂಧ್ರ ಪ್ರದೇಶದ ಕೆ.ವಸಂತ, ಮಾರೆಪ್ಪ ಅರೋಲಿ ಶರಣಾಗತಿಗೆ ಮುಂದಾಗಿದ್ದಾರೆ.
    ಶರಣಾಗತಿಗೆ ಮುಂದಾಗಿರುವುದನ್ನು 6 ಮಂದಿ ನಕ್ಸಲರು ಶಾಂತಿಗಾಗಿ ನಾಗರಿಕ ವೇದಿಕೆಗೆ ಪತ್ರ ಬರೆದಿದ್ದಾರೆ.ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ನಾಗರಿಕ ವೇದಿಕೆಯ ಸದಸ್ಯರು ಚರ್ಚಿಸಿದ್ದಾರೆ. ಕಳೆದ 3 ತಿಂಗಳಿನಿಂದ ಚಿಕ್ಕಮಗಳೂರು, ಉಡುಪಿ ಭಾಗದಲ್ಲಿ ನಕ್ಸಲ್ ಚಟುವಟಿಕೆಗಳು ಕಂಡುಬಂದಿದ್ದವು.
    ಶರಣಾಗತಿ ಮುಂದಾಗಿರುವ ನಕ್ಸಲರು 7 ಬೇಡಿಕೆಗಳನ್ನು ರಾಜ್ಯ ಸರ್ಕಾರದ ಮುಂದಿಟ್ಟಿದ್ದಾರೆ.
    ನಕ್ಸಲರು ಮುಖ್ಯವಾಹಿನಿಗೆ ಬರುವ ಪ್ರಕ್ರಿಯೆಯು ಘನತೆಯುತವಾಗಿ ನಡೆಯಬೇಕು ಹಾಗೂ ಅವರ ಆತ್ಮಗೌರವಕ್ಕೆ ಯಾವುದೇ ಧಕ್ಕೆಯಾಗಬಾರದು. ಹೋರಾಟದ ಮಾರ್ಗವನ್ನು ಬದಲಾಯಿಸಿ, ಪ್ರಜಾತಾಂತ್ರಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಯಾವುದೇ ರೀತಿಯ ತಡೆಯಾಗದಂತೆ ಬಯಸಿದ್ದಾರೆಂದು ತಿಳಿಸಿದ್ದಾರೆ
    ನಕ್ಸಲೀಯರು ಹೊರಬಂದ ನಂತರ ಜೈಲುಗಳಲ್ಲಿ ಕೊಳೆಯುವ ಸ್ಥಿತಿ ಎದುರಾಗಬಾರದು,ಯಾವುದೇ ಸಂಬಂಧವಿಲ್ಲದ ಕೆಲ ಪ್ರಕರಣಗಳಲ್ಲಿ ಅವರ ಹೆಸರುಗಳನ್ನು ಸೇರಿಸಿದ್ದು, ಈ ಪ್ರಕರಣಗಳ ಜಾಲದಿಂದ ಮುಕ್ತಿಸಿಗಬೇಕು ಹಾಗೂ ಮುಖ್ಯವಾಹಿನಿಗೆ ಬಂದ ಬಳಿಕ ಶೀಘ್ರ ಜಾಮೀನಿನ ಮೇಲೆ ಹೊರಬರಲು ಸಹಕರಿಸುವಂತೆ ಬೇಡಿಕೆ ಇಡಲಾಗಿದೆ.
    ಎಲ್ಲ ಮೊಕದ್ದಮೆಗಳನ್ನು ಒಂದೇ ನ್ಯಾಯಾಲಯದಡಿಯಲ್ಲಿ ತಂದು ತ್ವರಿತ ವಿಚಾರಣೆ ಮಾಡುವಂತೆ ಕೋರಿದ್ದಾರೆ.
    ಅವರಿಗೆ ಆರ್ಥಿಕ ನೆರವು ಒದಗಿಸುವ ಜವಾಬ್ದಾರಿಯನ್ನು ಸರ್ಕಾರವೇ ವಹಿಸಿಕೊಳ್ಳಬೇಕು ಹಾಗೂ ಹೊರಬಂದ ನಂತರ ಅವರ ಜೀವನಕ್ಕೆ ದಾರಿ ಏನು ಎಂಬ ಬಗ್ಗೆ ಸ್ಪಷ್ಟನೆ ಕೇಳಿದ್ದಾರೆ.
    ಈಗಾಗಲೇ ಮುಖ್ಯವಾಹಿನಿಗೆ ಬಂದಂತಹ ಹಲವರ ಬದುಕು ಅತಂತ್ರವಾಗಿದೆ. ಅವರ ಕೇಸ್​ಗಳ ಇತ್ಯರ್ಥಕ್ಕೆ ಹಾಗೂ ಬದುಕಿನ ಭದ್ರತೆಗೆ ತಕ್ಷಣ ಕ್ರಮಕೈಗೊಳ್ಳಬೇಕು ಹಾಗೂ ಬೇರೆ ಬೇರೆ ಜೈಲುಗಳಲ್ಲಿರುವ ಸಂಗಾತಿಗಳಿಗೆ ಕೂಡ ಈ ಪ್ಯಾಕೇಜ್ ಅನ್ವಯವಾಗುವಂತೆ ಮಾಡಿ. ಅವರ ಬಿಡುಗಡೆಗೆ ಸಹಕರಿಸುವಂತೆ ಬೇಡಿಕೆ ಇಡಲಾಗಿದೆ.
    ಈ ಎಲ್ಲ ವಿಚಾರಗಳಲ್ಲಿ ಕರ್ನಾಟಕ, ಕೇರಳ, ತಮಿಳುನಾಡು 3 ರಾಜ್ಯಗಳ ನಿಲುವು ಒಂದೇಯಾಗಿರುತ್ತದಾ ಎಂದು ಸ್ಪಷ್ಟತೆ ಕೋರಿದ್ದಾರೆ.ವಿಕ್ರಮ್ ಗೌಡರ ಎನ್ ಕೌಂಟರ್ ಕುರಿತು ನ್ಯಾಯಾಂಗ ತನಿಖೆ ನಡೆಸುವಂತೆ ಕೋರಲಾಗಿದೆ.
    ಇತ್ತೀಚೆಗೆ ಉಡುಪಿ ಜಿಲ್ಲೆಯ ಕಬ್ಬಿನಾಲೆ ಅರಣ್ಯದ ಪೀತಬೈಲು ಪ್ರದೇಶದಲ್ಲಿ ಎನ್‌ಕೌಂಟರ್ ಆಗಿತ್ತು. ಎರಡು ದಶಕದಿಂದಲೂ ತಲೆಮರೆಸಿಕೊಂಡು ಓಡಾಡುತ್ತಿದ್ದ ನಕ್ಸಲ್‌ ನಾಯಕ ವಿಕ್ರಂಗೌಡ ಎನ್‌ಕೌಂಟರ್‌ಗೆ ಬಲಿ ಆಗಿದ್ದ.
    ಬಳಿಕ ಸಿಎಂ ಸಿದ್ದರಾಮಯ್ಯ ನಕ್ಸಲೀಯರಿಗೆ ಶರಣಾಗುವಂತೆ ಕರೆ ನೀಡಿ ರಾಜ್ಯದ ಎಲ್ಲಾ ನಕ್ಸಲೀಯರು ಮುಖ್ಯವಾಹಿನಿಗೆ ಬರಲು ನಮ್ಮ ಸರ್ಕಾರವು ಬಯಸುತ್ತದೆ. ನಕ್ಸಲೀಯರು ಪ್ರಜಾತಾಂತ್ರಿಕತೆಯ ಮುಖ್ಯವಾಹಿನಿಗೆ ಬರಬೇಕೆಂದು ಹೇಳಿದ್ದರು.
    ಅಲ್ಲದೆ ಶರಣಾದ ನಕ್ಸಲೀಯರಿಗೆ ಹಂತ ಹಂತವಾಗಿ ಆರ್ಥಿಕ ನೆರವು, ಪ್ರೋತ್ಸಾಹ ಧನ, ಕೌಶಲ್ಯ ತರಬೇತಿಗಳು ನೀಡುವುದಲ್ಲದೆ ಅವರ ಪುನರ್ವಸತಿಗೂ ಸಹ ಎಲ್ಲ ಕ್ರಮಗಳನ್ನು ಸಹಾನುಭೂತಿಯಿಂದ ಹಾಗೂ ಆದ್ಯತೆ ಮೇರೆಗೆ ಪರಿಗಣಿಸಲು ಕ್ರಮವಹಿಸಲಾಗುವುದು. ಅವರ ಮೇಲಿನ ಮೊಕದ್ದಮೆ, ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಗೊಳಿಸಲು ಸರ್ಕಾರದಿಂದ ಕ್ರಮ ಕೈಗೊಳ್ಳಲಾಗುವುದೆಂದು ಎಂದು ಭರವಸೆ ನೀಡಿದ್ದರು.

    ಉಡುಪಿ ಕರ್ನಾಟಕ ತಮಿಳುನಾಡು ನ್ಯಾಯ ಸರ್ಕಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಅಕ್ರಮದ ಸಾಕ್ಷಿ ಮಂಗಮಾಯ.
    Next Article ಅವಿವಾಹಿತರಿಗೆ ಹೋಟೆಲ್ ರೂಂ ಇಲ್ಲ
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • EdwinSig ರಲ್ಲಿ ಸೋತ ಕಾಂಗ್ರೆಸ್ ನಾಯಕರಿಗೆ ಪಾಠ.
    • ElliottAlods ರಲ್ಲಿ Boeing – ದೋಷಯುಕ್ತ ವಿಮಾನಗಳಿಂದಾಗಿ ಕುಖ್ಯಾತಿ!
    • Lune Finvex Review ರಲ್ಲಿ ಜನಾರ್ದನ ರೆಡ್ಡಿ ಕೇಸ್ ವಿಚಾರಣೆಗೆ ಜಡ್ಜ್ ಯಾರೂ ರೆಡಿ ಇಲ್ಲ.
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    CSK ವಿರುದ್ಧ ಸಿಡಿದೆದ್ದ ಜಡೇಜಾ #varthachakra #csk #jadeja #dhoni #sanjusamson #viralvideo #facts #ipl
    Subscribe